Homeರಾಷ್ಟ್ರೀಯನದಿ ನೀರು ಕುಡಿದ ಕೆಲವೇ ದಿನಗಳಲ್ಲಿ ಹೊಟ್ಟೆ ಸೋಂಕಿನಿಂದ ಆಸ್ಪತ್ರೆಗೆ ದಾಖಲಾದ ಪಂಜಾಬ್ ಸಿಎಂ

ನದಿ ನೀರು ಕುಡಿದ ಕೆಲವೇ ದಿನಗಳಲ್ಲಿ ಹೊಟ್ಟೆ ಸೋಂಕಿನಿಂದ ಆಸ್ಪತ್ರೆಗೆ ದಾಖಲಾದ ಪಂಜಾಬ್ ಸಿಎಂ

- Advertisement -
- Advertisement -

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಹೊಟ್ಟೆಯ ಸೋಂಕಿನಿಂದ ದೆಹಲಿಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ನಡುವೆ ಅವರು ಕುಲುಷಿತ ನೀರನ್ನು ಕುಡಿದ್ದರಿಂದ ಅನಾರೋಗ್ಯಕ್ಕೆ ಈಡಾಗಿದ್ದಾರೆ ಎಂದು ಆರೋಪಗಳನ್ನು ಮಾಡಲಾಗಿದ್ದು, ಅವರು ನದಿಯೊಂದರಿಂದ ನೀರು ಕುಡಿಯುತ್ತಿರುವ ವಿಡಿಯೊ ವೈರಲ್ ಆಗಿದೆ.

ನದಿಯ ನೀರನ್ನು ಲೋಟವೊಂದರಲ್ಲಿ ಎತ್ತಿ ಕುಡಿಯುಯತ್ತಿರುವ ವೀಡಿಯೊವನ್ನು ಆಮ್ ಆದ್ಮಿ ಪಾರ್ಟಿ ಪಂಜಾಬ್ ಟ್ವೀಟ್ ಮಾಡಿದೆ. ಅದರಲ್ಲಿ ಬೆಂಬಲಿಗರ ಜಯಘೋಷಗಳ ನಡುವೆ ಮುಖ್ಯಮಂತ್ರಿ ಮಾನ್‌ ಅವರು ನದಿಯಿಂದ ಒಂದು ಲೋಟ ನೀರನ್ನು ಕುಡಿಯುತ್ತಿರುವುದು ಕಾಣಬಹುದಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆದರೆ ಅವರ ಪಕ್ಷದ ನಾಯಕರು, ಮುಖ್ಯಮಂತ್ರಿ ನದಿಯ ನೀರು ಕುಡಿಯುತ್ತಿರುವುದಕ್ಕೂ, ಅವರ ಆರೋಗ್ಯದ ತೊಂದರೆಗೂ ಯಾವುದೇ ಸಂಬಂಧ ಇಲ್ಲ ಎಂದು ಹೇಳಿದ್ದಾರೆ. ಅವರು ಆಸ್ಪತ್ರೆಗೆ ರೆಗ್ಯುಲರ್‌‌ ತಪಾಸಣೆಗೆಂದು ಹೋಗಿದ್ದರು ಎಂದು ಅವರು ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ಪಂಜಾಬ್‌: ಉದ್ಯಾನದಲ್ಲಿದ್ದ ಗಾಂಧಿ ಪ್ರತಿಮೆ ಧ್ವಂಸ

ಎಎಪಿಯ ಪಂಜಾಬ್ ಘಟಕವು ಮಾಡಿದ ವೀಡಿಯೊದಲ್ಲಿ,“ಗುರು ನಾನಕ್ ಸಾಹಿಬ್ ಅವರು ಪಾದ ಇಟ್ಟ ನಾಡು ಸುಲ್ತಾನಪುರ ಲೋಧಿಯಲ್ಲಿ ಸಿಎಂ ಭಗವಂತಮಾನ್‌ ಪವಿತ್ರ ನೀರು ಕುಡಿಯುತ್ತಿದ್ದಾರೆ. ರಾಜ್ಯಸಭಾ ಸದಸ್ಯ ಸಂತ ಸಿಚೆವಾಲ್ ಅವರು ಪವಿತ್ರ ಸ್ಥಳವನ್ನು ಸ್ವಚ್ಛಗೊಳಿಸುವ ಕಾರ್ಯವನ್ನು ಕೈಗೊಂಡಿದ್ದಾರೆ” ಎಂದು ಬರೆದಿದೆ.

ವಿವಾದಿತ ವಿಡಿಯೋ ಕಳೆದ ಭಾನುವಾರದ್ದಾಗಿದ್ದು, ಮುಖ್ಯಮಂತ್ರಿ ಮಾನ್ ಅವರು ಖ್ಯಾತ ಪರಿಸರವಾದಿ, ರಾಜ್ಯಸಭಾ ಸಂಸದ ಬಾಬಾ ಬಲ್ಬೀರ್ ಸಿಂಗ್ ಸೀಚೆವಾಲ್ ಅವರು ಆಯೋಜಿಸಿದ್ದ ಕಾಳಿಬೀನ್ ನದಿಯ ಸ್ವಚ್ಛತೆಯ 22 ನೇ ವಾರ್ಷಿಕೋತ್ಸವದಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ: ಬಿಜೆಪಿ ಸೇರಲಿರುವ ಪಂಜಾಬ್‌ ಮಾಜಿ ಸಿಎಂ ಅಮರಿಂದರ್‌ ಸಿಂಗ್‌!

ಪಂಜಾಬ್‌ನ ಸುಲ್ತಾನ್‌ಪುರ ಲೋಧಿಯಲ್ಲಿರುವ ಈ ನದಿಯು ಸಿಖ್ಖರಿಗೆ ಪವಿತ್ರವಾಗಿದ್ದು, ಅಲ್ಲಿ ಮುಖ್ಯಮಂತ್ರಿ ನದಿಯ ನೀರನ್ನು ಕುಡಿದಿದ್ದರು. ನದಿಗೆ ಪಟ್ಟಣಗಳು ​​ಮತ್ತು ಹಳ್ಳಿಗಳ ಚರಂಡಿಯ ತ್ಯಾಜ್ಯಗಳು ಸೇರುತ್ತದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಈ ನೀರನ್ನು ಪಂಜಾಬ್ ಮುಖ್ಯಮಂತ್ರಿ ಯಾವುದೇ ಹಿಂಜರಿಕೆಯಿಲ್ಲದೆ ಕುಡಿದಿದ್ದರು.

ಇದಾಗಿ ಕೆಲವು ದಿನಗಳ ನಂತರ ಮುಖ್ಯಮಂತ್ರಿ ಮಾನ್ ಅವರು ದೆಹಲಿಯ ಅಪೋಲೋ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ನದಿಗಳು ಮತ್ತು ಚರಂಡಿಗಳನ್ನು ಸ್ವಚ್ಛಗೊಳಿಸಲು ರಾಜ್ಯಾದ್ಯಂತ ಅಭಿಯಾನವನ್ನು ಪ್ರಾರಂಭಿಸುವುದಾಗಿ ಪಂಜಾಬ್ ಘೋಷಿಸಿದೆ.

ಕಾಳಿಬೀನ್ ನದಿಯನ್ನು ಸ್ವಚ್ಛಗೊಳಿಸಲು ಸಂತ ಬಾಬಾ ಬಲ್ಬೀರ್ ಸಿಂಗ್ ಸೀಚೆವಾಲ್ ಮಾಡಿದ ಪ್ರಯತ್ನಗಳನ್ನು ಶ್ಲಾಘಿಸಿದ ಮುಖ್ಯಮಂತ್ರಿ, ಸುಮಾರು 22 ವರ್ಷಗಳ ಹಿಂದೆ ತೆಗೆದುಕೊಂಡ ಐತಿಹಾಸಿಕ ಉಪಕ್ರಮವು ಗುರುನಾನಕ್ ದೇವ್ ಅವರು ಸ್ನಾನ ಮಾಡುತ್ತಿದ್ದ ಪವಿತ್ರ ನದಿಯನ್ನು ಸ್ವಚ್ಛಗೊಳಿಸುವಲ್ಲಿ ಶೀಘ್ರವಾಗಿ ಕಾರ್ಯನಿರ್ವಹಿಸಿದೆ ಎಂದು ಹೇಳಿದ್ದರು.

ಇದನ್ನೂ ಓದಿ: ಪಂಜಾಬ್ ಉಪಚುನಾವಣೆ: ಸಿಎಂ ಭಗವಂತ್ ಮಾನ್ ಪ್ರತಿನಿಧಿಸುತ್ತಿದ್ದ ಕ್ಷೇತ್ರ ಕಳೆದುಕೊಂಡ ಆಪ್

ಮಹಾನ್ ಗುರುಗಳ ಪರಂಪರೆಯನ್ನು ಮುಂದುವರಿಸಲು ಇಂತಹ ಪ್ರಯತ್ನಗಳನ್ನು ಸಾಮೂಹಿಕ ಮಟ್ಟದಲ್ಲಿ ಪುನರಾವರ್ತಿಸುವ ಅಗತ್ಯವಿದೆ ಎಂದು ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...