Homeರಾಷ್ಟ್ರೀಯನದಿ ನೀರು ಕುಡಿದ ಕೆಲವೇ ದಿನಗಳಲ್ಲಿ ಹೊಟ್ಟೆ ಸೋಂಕಿನಿಂದ ಆಸ್ಪತ್ರೆಗೆ ದಾಖಲಾದ ಪಂಜಾಬ್ ಸಿಎಂ

ನದಿ ನೀರು ಕುಡಿದ ಕೆಲವೇ ದಿನಗಳಲ್ಲಿ ಹೊಟ್ಟೆ ಸೋಂಕಿನಿಂದ ಆಸ್ಪತ್ರೆಗೆ ದಾಖಲಾದ ಪಂಜಾಬ್ ಸಿಎಂ

- Advertisement -
- Advertisement -

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಹೊಟ್ಟೆಯ ಸೋಂಕಿನಿಂದ ದೆಹಲಿಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ನಡುವೆ ಅವರು ಕುಲುಷಿತ ನೀರನ್ನು ಕುಡಿದ್ದರಿಂದ ಅನಾರೋಗ್ಯಕ್ಕೆ ಈಡಾಗಿದ್ದಾರೆ ಎಂದು ಆರೋಪಗಳನ್ನು ಮಾಡಲಾಗಿದ್ದು, ಅವರು ನದಿಯೊಂದರಿಂದ ನೀರು ಕುಡಿಯುತ್ತಿರುವ ವಿಡಿಯೊ ವೈರಲ್ ಆಗಿದೆ.

ನದಿಯ ನೀರನ್ನು ಲೋಟವೊಂದರಲ್ಲಿ ಎತ್ತಿ ಕುಡಿಯುಯತ್ತಿರುವ ವೀಡಿಯೊವನ್ನು ಆಮ್ ಆದ್ಮಿ ಪಾರ್ಟಿ ಪಂಜಾಬ್ ಟ್ವೀಟ್ ಮಾಡಿದೆ. ಅದರಲ್ಲಿ ಬೆಂಬಲಿಗರ ಜಯಘೋಷಗಳ ನಡುವೆ ಮುಖ್ಯಮಂತ್ರಿ ಮಾನ್‌ ಅವರು ನದಿಯಿಂದ ಒಂದು ಲೋಟ ನೀರನ್ನು ಕುಡಿಯುತ್ತಿರುವುದು ಕಾಣಬಹುದಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆದರೆ ಅವರ ಪಕ್ಷದ ನಾಯಕರು, ಮುಖ್ಯಮಂತ್ರಿ ನದಿಯ ನೀರು ಕುಡಿಯುತ್ತಿರುವುದಕ್ಕೂ, ಅವರ ಆರೋಗ್ಯದ ತೊಂದರೆಗೂ ಯಾವುದೇ ಸಂಬಂಧ ಇಲ್ಲ ಎಂದು ಹೇಳಿದ್ದಾರೆ. ಅವರು ಆಸ್ಪತ್ರೆಗೆ ರೆಗ್ಯುಲರ್‌‌ ತಪಾಸಣೆಗೆಂದು ಹೋಗಿದ್ದರು ಎಂದು ಅವರು ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ಪಂಜಾಬ್‌: ಉದ್ಯಾನದಲ್ಲಿದ್ದ ಗಾಂಧಿ ಪ್ರತಿಮೆ ಧ್ವಂಸ

ಎಎಪಿಯ ಪಂಜಾಬ್ ಘಟಕವು ಮಾಡಿದ ವೀಡಿಯೊದಲ್ಲಿ,“ಗುರು ನಾನಕ್ ಸಾಹಿಬ್ ಅವರು ಪಾದ ಇಟ್ಟ ನಾಡು ಸುಲ್ತಾನಪುರ ಲೋಧಿಯಲ್ಲಿ ಸಿಎಂ ಭಗವಂತಮಾನ್‌ ಪವಿತ್ರ ನೀರು ಕುಡಿಯುತ್ತಿದ್ದಾರೆ. ರಾಜ್ಯಸಭಾ ಸದಸ್ಯ ಸಂತ ಸಿಚೆವಾಲ್ ಅವರು ಪವಿತ್ರ ಸ್ಥಳವನ್ನು ಸ್ವಚ್ಛಗೊಳಿಸುವ ಕಾರ್ಯವನ್ನು ಕೈಗೊಂಡಿದ್ದಾರೆ” ಎಂದು ಬರೆದಿದೆ.

ವಿವಾದಿತ ವಿಡಿಯೋ ಕಳೆದ ಭಾನುವಾರದ್ದಾಗಿದ್ದು, ಮುಖ್ಯಮಂತ್ರಿ ಮಾನ್ ಅವರು ಖ್ಯಾತ ಪರಿಸರವಾದಿ, ರಾಜ್ಯಸಭಾ ಸಂಸದ ಬಾಬಾ ಬಲ್ಬೀರ್ ಸಿಂಗ್ ಸೀಚೆವಾಲ್ ಅವರು ಆಯೋಜಿಸಿದ್ದ ಕಾಳಿಬೀನ್ ನದಿಯ ಸ್ವಚ್ಛತೆಯ 22 ನೇ ವಾರ್ಷಿಕೋತ್ಸವದಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ: ಬಿಜೆಪಿ ಸೇರಲಿರುವ ಪಂಜಾಬ್‌ ಮಾಜಿ ಸಿಎಂ ಅಮರಿಂದರ್‌ ಸಿಂಗ್‌!

ಪಂಜಾಬ್‌ನ ಸುಲ್ತಾನ್‌ಪುರ ಲೋಧಿಯಲ್ಲಿರುವ ಈ ನದಿಯು ಸಿಖ್ಖರಿಗೆ ಪವಿತ್ರವಾಗಿದ್ದು, ಅಲ್ಲಿ ಮುಖ್ಯಮಂತ್ರಿ ನದಿಯ ನೀರನ್ನು ಕುಡಿದಿದ್ದರು. ನದಿಗೆ ಪಟ್ಟಣಗಳು ​​ಮತ್ತು ಹಳ್ಳಿಗಳ ಚರಂಡಿಯ ತ್ಯಾಜ್ಯಗಳು ಸೇರುತ್ತದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಈ ನೀರನ್ನು ಪಂಜಾಬ್ ಮುಖ್ಯಮಂತ್ರಿ ಯಾವುದೇ ಹಿಂಜರಿಕೆಯಿಲ್ಲದೆ ಕುಡಿದಿದ್ದರು.

ಇದಾಗಿ ಕೆಲವು ದಿನಗಳ ನಂತರ ಮುಖ್ಯಮಂತ್ರಿ ಮಾನ್ ಅವರು ದೆಹಲಿಯ ಅಪೋಲೋ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ನದಿಗಳು ಮತ್ತು ಚರಂಡಿಗಳನ್ನು ಸ್ವಚ್ಛಗೊಳಿಸಲು ರಾಜ್ಯಾದ್ಯಂತ ಅಭಿಯಾನವನ್ನು ಪ್ರಾರಂಭಿಸುವುದಾಗಿ ಪಂಜಾಬ್ ಘೋಷಿಸಿದೆ.

ಕಾಳಿಬೀನ್ ನದಿಯನ್ನು ಸ್ವಚ್ಛಗೊಳಿಸಲು ಸಂತ ಬಾಬಾ ಬಲ್ಬೀರ್ ಸಿಂಗ್ ಸೀಚೆವಾಲ್ ಮಾಡಿದ ಪ್ರಯತ್ನಗಳನ್ನು ಶ್ಲಾಘಿಸಿದ ಮುಖ್ಯಮಂತ್ರಿ, ಸುಮಾರು 22 ವರ್ಷಗಳ ಹಿಂದೆ ತೆಗೆದುಕೊಂಡ ಐತಿಹಾಸಿಕ ಉಪಕ್ರಮವು ಗುರುನಾನಕ್ ದೇವ್ ಅವರು ಸ್ನಾನ ಮಾಡುತ್ತಿದ್ದ ಪವಿತ್ರ ನದಿಯನ್ನು ಸ್ವಚ್ಛಗೊಳಿಸುವಲ್ಲಿ ಶೀಘ್ರವಾಗಿ ಕಾರ್ಯನಿರ್ವಹಿಸಿದೆ ಎಂದು ಹೇಳಿದ್ದರು.

ಇದನ್ನೂ ಓದಿ: ಪಂಜಾಬ್ ಉಪಚುನಾವಣೆ: ಸಿಎಂ ಭಗವಂತ್ ಮಾನ್ ಪ್ರತಿನಿಧಿಸುತ್ತಿದ್ದ ಕ್ಷೇತ್ರ ಕಳೆದುಕೊಂಡ ಆಪ್

ಮಹಾನ್ ಗುರುಗಳ ಪರಂಪರೆಯನ್ನು ಮುಂದುವರಿಸಲು ಇಂತಹ ಪ್ರಯತ್ನಗಳನ್ನು ಸಾಮೂಹಿಕ ಮಟ್ಟದಲ್ಲಿ ಪುನರಾವರ್ತಿಸುವ ಅಗತ್ಯವಿದೆ ಎಂದು ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...