Homeಮುಖಪುಟಪ್ರಸಿದ್ಧ ಬಾಕ್ಸರ್‌ ಮುಹಮ್ಮದ್ ಅಲಿ ಜೀವನ ಕಥೆ ನೆನಪಿಸಿದ ಭಾರತೀಯ ಕುಸ್ತಿಪಟುಗಳ ಹೋರಾಟ

ಪ್ರಸಿದ್ಧ ಬಾಕ್ಸರ್‌ ಮುಹಮ್ಮದ್ ಅಲಿ ಜೀವನ ಕಥೆ ನೆನಪಿಸಿದ ಭಾರತೀಯ ಕುಸ್ತಿಪಟುಗಳ ಹೋರಾಟ

- Advertisement -
- Advertisement -

ಲೈಂಗಿಕ ಕಿರುಕುಳದ ಆರೋಪಿ, ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್‌ ಸಿಂಗ್‌ನನ್ನು ಬಂಧಿಸುವಂತೆ ಆಗ್ರಹಿಸುತ್ತಿರುವ ಒಲಂಪಿಕ್ ಮತ್ತು ಕಾಮನ್‌ವೆಲ್ತ್‌ ಕ್ರೀಡಾಕೂಟಗಳ ಪದಕ ವಿಜೇತರು, “ಗಂಗಾ ನದಿಗೆ ನಮ್ಮ ಪದಕಗಳನ್ನು ಅರ್ಪಿಸುತ್ತೇವೆ” ಎಂದಿದ್ದು ಇತಿಹಾಸದಲ್ಲಿ ಉಳಿಯುವ ಘಟನೆ.

ಕುಸ್ತಿಪಟುಗಳಾದ ಸಾಕ್ಷಿ ಮಲಿಕ್, ಬಜರಂಗ್ ಪುನಿಯಾ ಮತ್ತು ವಿನೇಶ್ ಫೋಗಟ್ ಸೇರಿದಂತೆ ಅನೇಕರು ನಡೆಸುತ್ತಿರುವ ಈ ಹೋರಾಟ ದಿನದಿಂದ ದಿನಕ್ಕೆ ತೀವ್ರವಾಗುತ್ತಲೇ ಇದೆ. ಸರ್ಕಾರ ತಾಳಿರುವ ನಿರ್ಲಕ್ಷ್ಯದಿಂದಾಗಿ ಕುಸ್ತಿಪಟುಗಳು ತೀವ್ರವಾಗಿ ನೊಂದಿದ್ದು- ಪದಕಗಳನ್ನು ಗಂಗಾನದಿಗೆ ಬಿಡುವ ಕ್ರಮದ ಕುರಿತು ಚಿಂತಿಸಿದ್ದಾರೆ.

“ನಮ್ಮ ಕುತ್ತಿಗೆಯಲ್ಲಿ ಅಲಂಕರಿಸಲ್ಪಟ್ಟ ಈ ಪದಕಗಳಿಗೆ ಇನ್ನು ಮುಂದೆ ಯಾವುದೇ ಅರ್ಥವಿಲ್ಲ ಎಂದು ತೋರುತ್ತದೆ” ಎಂದು ಕುಸ್ತಿಪಟುಗಳು ಹೇಳಿದ್ದಾರೆ. “ಪೊಲೀಸ್ ಮತ್ತು ವ್ಯವಸ್ಥೆಯು ನಮ್ಮನ್ನು ಅಪರಾಧಿಗಳಂತೆ ಪರಿಗಣಿಸುತ್ತಿದೆ. ಕಿರುಕುಳ ನೀಡಿದಾಗ ಸಾರ್ವಜನಿಕ ಸಭೆಗಳಲ್ಲಿ ನಮ್ಮ ಮೇಲೆ ಬಹಿರಂಗವಾಗಿ ದಾಳಿ ನಡೆಸುತ್ತಿದ್ದಾನೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

‘ಗಂಗಾ ನದಿಗೆ ಪದಕಗಳನ್ನು ಬೀಸಾಡುವ ಯೋಚನೆ’ಯು ಭಾರತದ ಕ್ರೀಡಾ ಇತಿಹಾಸದಲ್ಲಿ ಅಸಾಮಾನ್ಯ ಹೆಜ್ಜೆಯಾಗಿದ್ದರೂ, ಪ್ರಪಂಚದಾದ್ಯಂತದ ಅನೇಕ ಕ್ರೀಡಾಪಟುಗಳು ಸಾಮಾಜಿಕ ಅನಿಷ್ಟಗಳ ವಿರುದ್ಧ ಪ್ರತಿಭಟಿಸಲು ಇಂತಹ ಕಠಿಣ ಕ್ರಮಗಳನ್ನು ಕೈಗೊಂಡಿದ್ದು ಉಂಟು. ಅಂತಹ ಐತಿಹಾಸಿಕ ಘಟನೆಗಳ ಪೈಕಿ- ಪ್ರಖ್ಯಾತ ಅಮೆರಿಕನ್ ಬಾಕ್ಸರ್‌ ಮುಹಮ್ಮದ್ ಅಲಿ ಅವರ ಪ್ರತಿರೋಧವೂ ಸೇರಿದೆ.

ಜನವರಿ 17, 1942 ರಂದು ಕೆಂಟುಕಿಯ ಲೂಯಿಸ್ವಿಲ್ಲೆಯಲ್ಲಿ ಜನಿಸಿದ ಮುಹಮ್ಮದ್ ಅಲಿ ಬಾಕ್ಸಿಂಗ್ ಜಗತ್ತಿಗೆ ಕಾಲಿಟ್ಟಿದ್ದು 12ನೇ ವಯಸ್ಸಿನಲ್ಲಿ. ಅಲಿ ಅವರ ಬೈಸಿಕಲ್ ಕಳವಾದ ಬಳಿಕ ಬಾಕ್ಸಿಂಗ್ ಕಡೆಗೆ ಆಕರ್ಷಿತರಾಗುತ್ತಾರೆ. ತಮ್ಮ ಬೈಸಿಕಲ್ ಕದ್ದವನಿಗೆ ಥಳಿಸುತ್ತೇನೆ ಎಂದು ಪೊಲೀಸರಲ್ಲಿ ಅಲಿ ಹೇಳಿಕೊಂಡಿದ್ದರು.

ಅಲಿ ಬಾಕ್ಸಿಂಗ್ ಜಗತ್ತಿನಲ್ಲಿ ಸಾಧನೆಗೈದರು. ‘ದಿ ಗ್ರೇಟೆಸ್ಟ್’ ಎಂಬ ಖ್ಯಾತಿಯನ್ನೂ ಪಡೆದರು. ಕೇವಲ ಆರು ವರ್ಷಗಳಲ್ಲಿ, ಅಂದರೆ 1960ರಲ್ಲಿ ಒಲಂಪಿಕ್ ಚಿನ್ನದ ಪದಕವನ್ನು ಮುಡಿಗೇರಿಸಿಕೊಂಡರು. ಆದರೆ 48 ಗಂಟೆಗಳ ಕಾಲ ಪದಕವನ್ನು ಸ್ವೀಕರಿಸಿರಲಿಲ್ಲ. ಯಾಕೆಂದರೆ ಈ ಪ್ರಚಂಡ ಯಶಸ್ಸಿನ ನಂತರವೂ ಅಲಿ ವರ್ಣಭೇದ ನೀತಿಯನ್ನು ಎದುರಿಸುತ್ತಲೇ ಇದ್ದರು.

ಅಲಿ ಅವರಿಗೆ ಸಂಬಂಧಿಸಿದ ಮತ್ತೊಂದು ಘಟನೆ ಪ್ರಸಿದ್ಧವಾಗಿದೆ.  ಅವರು ತಮ್ಮ ಒಲಿಂಪಿಕ್ ಚಿನ್ನದ ಪದಕದೊಂದಿಗೆ ಹಿಂದಿರುಗಿದಾಗ, ಬಿಳಿ ಜನರಿಗೆ ಮಾತ್ರ ಸೇವೆ ಸಲ್ಲಿಸುವ ರೆಸ್ಟೋರೆಂಟ್‌ನಲ್ಲಿ ಇವರಿಗೆ ಪ್ರವೇಶ ನಿರಾಕರಿಸಲಾಯಿತು. ಬಿಳಿಕ ಮೋಟಾರ್‌ಸೈಕಲ್ ಗ್ಯಾಂಗ್‌ನೊಂದಿಗೆ ಅವರು ಜಗಳವಾಡಿದ್ದರು.

ಸಮಯದಲ್ಲಿ ಕಪ್ಪು ಜನರಿಗೆ ಊಟ ಮಾಡಲು ಅವಕಾಶವಿರಲಿಲ್ಲ. ಆಗ ತನ್ನ ಪದಕವನ್ನು ಧರಿಸಿದ ಅಲಿ, ಊಟವನ್ನು ಕೇಳಿದರು. ಆದರೂ ಅನುಮತಿ ನೀಡಲಾಗಲಿಲ್ಲ.

ಇದನ್ನೂ ಓದಿರಿ: ಆರೋಪಿ ಬ್ರಿಜ್‌ಭೂಷಣ್ ಸಿಂಗ್ ವಿರುದ್ಧ ನಿಷ್ಪಕ್ಷಪಾತ ತನಿಖೆಗೆ ಒತ್ತಾಯಿಸಿದ ಅಂತಾರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿ

ತನ್ನ ಆತ್ಮಚರಿತ್ರೆಯಾದ “ದಿ ಗ್ರೇಟೆಸ್ಟ್”ನಲ್ಲಿ ಈ ಘಟನೆಯ ಕುರಿತು ಅಲಿ ಬರೆದುಕೊಂಡಿದ್ದಾರೆ. ಆ ಅವಮಾನದ ಬಳಿಕ ಅಲಿ ಅವರು ತಮ್ಮ ಪದಕವನ್ನು ಓಹಿಯೋ ನದಿಗೆ ಎಸೆದರು ಎಂದು ದಾಖಲಾಗಿದೆ.

ಆದಾಗ್ಯೂ, ಈ ಆವೃತ್ತಿಯ ಬಗ್ಗೆ ಅನೇಕರು ಅನುಮಾನಗಳನ್ನು ವ್ಯಕ್ತಪಡಿಸಿದ್ದಾರೆ. ಅಲಿಯವರು ಪದಕವನ್ನು ಕಳೆದುಕೊಂಡಿರಬಹುದು ಎಂದು ಕೆಲವು ನಿಕಟವರ್ತಿಗಳು ಹೇಳಿಕೊಂಡಿದ್ದಾರೆ.

ನ್ಯೂಯಾರ್ಕ್ ಟೈಮ್ಸ್‌ನ 2016ರ ವರದಿಯು ವಿಭಿನ್ನ ಆಯಾಮಗಳನ್ನು ನೀಡಿತ್ತು. ಮೌಖಿಕ ಇತಿಹಾಸದ ಲೇಖಕ ಥಾಮಸ್ ಹೌಸರ್, “ಬಾಕ್ಸರ್ ಮೊಹಮ್ಮದ್ ಅಲಿಯವರು ತಮ್ಮ ಪದಕವನ್ನು ಕಳೆದುಕೊಂಡಿದ್ದರು” ಎಂದು ತಿಳಿಸಿದ್ದಾರೆ. ಅವರಿಗೆ (ಅಲಿಯವರಿಗೆ) ಅಂತಿಮವಾಗಿ 1996 ಅಟ್ಲಾಂಟಾ ಒಲಿಂಪಿಕ್ಸ್‌ನಲ್ಲಿ ಪದಕದ ಪ್ರತಿರೂಪವನ್ನು ನೀಡಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...