Homeಮುಖಪುಟಪ್ರಸಿದ್ಧ ಬಾಕ್ಸರ್‌ ಮುಹಮ್ಮದ್ ಅಲಿ ಜೀವನ ಕಥೆ ನೆನಪಿಸಿದ ಭಾರತೀಯ ಕುಸ್ತಿಪಟುಗಳ ಹೋರಾಟ

ಪ್ರಸಿದ್ಧ ಬಾಕ್ಸರ್‌ ಮುಹಮ್ಮದ್ ಅಲಿ ಜೀವನ ಕಥೆ ನೆನಪಿಸಿದ ಭಾರತೀಯ ಕುಸ್ತಿಪಟುಗಳ ಹೋರಾಟ

- Advertisement -
- Advertisement -

ಲೈಂಗಿಕ ಕಿರುಕುಳದ ಆರೋಪಿ, ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್‌ ಸಿಂಗ್‌ನನ್ನು ಬಂಧಿಸುವಂತೆ ಆಗ್ರಹಿಸುತ್ತಿರುವ ಒಲಂಪಿಕ್ ಮತ್ತು ಕಾಮನ್‌ವೆಲ್ತ್‌ ಕ್ರೀಡಾಕೂಟಗಳ ಪದಕ ವಿಜೇತರು, “ಗಂಗಾ ನದಿಗೆ ನಮ್ಮ ಪದಕಗಳನ್ನು ಅರ್ಪಿಸುತ್ತೇವೆ” ಎಂದಿದ್ದು ಇತಿಹಾಸದಲ್ಲಿ ಉಳಿಯುವ ಘಟನೆ.

ಕುಸ್ತಿಪಟುಗಳಾದ ಸಾಕ್ಷಿ ಮಲಿಕ್, ಬಜರಂಗ್ ಪುನಿಯಾ ಮತ್ತು ವಿನೇಶ್ ಫೋಗಟ್ ಸೇರಿದಂತೆ ಅನೇಕರು ನಡೆಸುತ್ತಿರುವ ಈ ಹೋರಾಟ ದಿನದಿಂದ ದಿನಕ್ಕೆ ತೀವ್ರವಾಗುತ್ತಲೇ ಇದೆ. ಸರ್ಕಾರ ತಾಳಿರುವ ನಿರ್ಲಕ್ಷ್ಯದಿಂದಾಗಿ ಕುಸ್ತಿಪಟುಗಳು ತೀವ್ರವಾಗಿ ನೊಂದಿದ್ದು- ಪದಕಗಳನ್ನು ಗಂಗಾನದಿಗೆ ಬಿಡುವ ಕ್ರಮದ ಕುರಿತು ಚಿಂತಿಸಿದ್ದಾರೆ.

“ನಮ್ಮ ಕುತ್ತಿಗೆಯಲ್ಲಿ ಅಲಂಕರಿಸಲ್ಪಟ್ಟ ಈ ಪದಕಗಳಿಗೆ ಇನ್ನು ಮುಂದೆ ಯಾವುದೇ ಅರ್ಥವಿಲ್ಲ ಎಂದು ತೋರುತ್ತದೆ” ಎಂದು ಕುಸ್ತಿಪಟುಗಳು ಹೇಳಿದ್ದಾರೆ. “ಪೊಲೀಸ್ ಮತ್ತು ವ್ಯವಸ್ಥೆಯು ನಮ್ಮನ್ನು ಅಪರಾಧಿಗಳಂತೆ ಪರಿಗಣಿಸುತ್ತಿದೆ. ಕಿರುಕುಳ ನೀಡಿದಾಗ ಸಾರ್ವಜನಿಕ ಸಭೆಗಳಲ್ಲಿ ನಮ್ಮ ಮೇಲೆ ಬಹಿರಂಗವಾಗಿ ದಾಳಿ ನಡೆಸುತ್ತಿದ್ದಾನೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

‘ಗಂಗಾ ನದಿಗೆ ಪದಕಗಳನ್ನು ಬೀಸಾಡುವ ಯೋಚನೆ’ಯು ಭಾರತದ ಕ್ರೀಡಾ ಇತಿಹಾಸದಲ್ಲಿ ಅಸಾಮಾನ್ಯ ಹೆಜ್ಜೆಯಾಗಿದ್ದರೂ, ಪ್ರಪಂಚದಾದ್ಯಂತದ ಅನೇಕ ಕ್ರೀಡಾಪಟುಗಳು ಸಾಮಾಜಿಕ ಅನಿಷ್ಟಗಳ ವಿರುದ್ಧ ಪ್ರತಿಭಟಿಸಲು ಇಂತಹ ಕಠಿಣ ಕ್ರಮಗಳನ್ನು ಕೈಗೊಂಡಿದ್ದು ಉಂಟು. ಅಂತಹ ಐತಿಹಾಸಿಕ ಘಟನೆಗಳ ಪೈಕಿ- ಪ್ರಖ್ಯಾತ ಅಮೆರಿಕನ್ ಬಾಕ್ಸರ್‌ ಮುಹಮ್ಮದ್ ಅಲಿ ಅವರ ಪ್ರತಿರೋಧವೂ ಸೇರಿದೆ.

ಜನವರಿ 17, 1942 ರಂದು ಕೆಂಟುಕಿಯ ಲೂಯಿಸ್ವಿಲ್ಲೆಯಲ್ಲಿ ಜನಿಸಿದ ಮುಹಮ್ಮದ್ ಅಲಿ ಬಾಕ್ಸಿಂಗ್ ಜಗತ್ತಿಗೆ ಕಾಲಿಟ್ಟಿದ್ದು 12ನೇ ವಯಸ್ಸಿನಲ್ಲಿ. ಅಲಿ ಅವರ ಬೈಸಿಕಲ್ ಕಳವಾದ ಬಳಿಕ ಬಾಕ್ಸಿಂಗ್ ಕಡೆಗೆ ಆಕರ್ಷಿತರಾಗುತ್ತಾರೆ. ತಮ್ಮ ಬೈಸಿಕಲ್ ಕದ್ದವನಿಗೆ ಥಳಿಸುತ್ತೇನೆ ಎಂದು ಪೊಲೀಸರಲ್ಲಿ ಅಲಿ ಹೇಳಿಕೊಂಡಿದ್ದರು.

ಅಲಿ ಬಾಕ್ಸಿಂಗ್ ಜಗತ್ತಿನಲ್ಲಿ ಸಾಧನೆಗೈದರು. ‘ದಿ ಗ್ರೇಟೆಸ್ಟ್’ ಎಂಬ ಖ್ಯಾತಿಯನ್ನೂ ಪಡೆದರು. ಕೇವಲ ಆರು ವರ್ಷಗಳಲ್ಲಿ, ಅಂದರೆ 1960ರಲ್ಲಿ ಒಲಂಪಿಕ್ ಚಿನ್ನದ ಪದಕವನ್ನು ಮುಡಿಗೇರಿಸಿಕೊಂಡರು. ಆದರೆ 48 ಗಂಟೆಗಳ ಕಾಲ ಪದಕವನ್ನು ಸ್ವೀಕರಿಸಿರಲಿಲ್ಲ. ಯಾಕೆಂದರೆ ಈ ಪ್ರಚಂಡ ಯಶಸ್ಸಿನ ನಂತರವೂ ಅಲಿ ವರ್ಣಭೇದ ನೀತಿಯನ್ನು ಎದುರಿಸುತ್ತಲೇ ಇದ್ದರು.

ಅಲಿ ಅವರಿಗೆ ಸಂಬಂಧಿಸಿದ ಮತ್ತೊಂದು ಘಟನೆ ಪ್ರಸಿದ್ಧವಾಗಿದೆ.  ಅವರು ತಮ್ಮ ಒಲಿಂಪಿಕ್ ಚಿನ್ನದ ಪದಕದೊಂದಿಗೆ ಹಿಂದಿರುಗಿದಾಗ, ಬಿಳಿ ಜನರಿಗೆ ಮಾತ್ರ ಸೇವೆ ಸಲ್ಲಿಸುವ ರೆಸ್ಟೋರೆಂಟ್‌ನಲ್ಲಿ ಇವರಿಗೆ ಪ್ರವೇಶ ನಿರಾಕರಿಸಲಾಯಿತು. ಬಿಳಿಕ ಮೋಟಾರ್‌ಸೈಕಲ್ ಗ್ಯಾಂಗ್‌ನೊಂದಿಗೆ ಅವರು ಜಗಳವಾಡಿದ್ದರು.

ಸಮಯದಲ್ಲಿ ಕಪ್ಪು ಜನರಿಗೆ ಊಟ ಮಾಡಲು ಅವಕಾಶವಿರಲಿಲ್ಲ. ಆಗ ತನ್ನ ಪದಕವನ್ನು ಧರಿಸಿದ ಅಲಿ, ಊಟವನ್ನು ಕೇಳಿದರು. ಆದರೂ ಅನುಮತಿ ನೀಡಲಾಗಲಿಲ್ಲ.

ಇದನ್ನೂ ಓದಿರಿ: ಆರೋಪಿ ಬ್ರಿಜ್‌ಭೂಷಣ್ ಸಿಂಗ್ ವಿರುದ್ಧ ನಿಷ್ಪಕ್ಷಪಾತ ತನಿಖೆಗೆ ಒತ್ತಾಯಿಸಿದ ಅಂತಾರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿ

ತನ್ನ ಆತ್ಮಚರಿತ್ರೆಯಾದ “ದಿ ಗ್ರೇಟೆಸ್ಟ್”ನಲ್ಲಿ ಈ ಘಟನೆಯ ಕುರಿತು ಅಲಿ ಬರೆದುಕೊಂಡಿದ್ದಾರೆ. ಆ ಅವಮಾನದ ಬಳಿಕ ಅಲಿ ಅವರು ತಮ್ಮ ಪದಕವನ್ನು ಓಹಿಯೋ ನದಿಗೆ ಎಸೆದರು ಎಂದು ದಾಖಲಾಗಿದೆ.

ಆದಾಗ್ಯೂ, ಈ ಆವೃತ್ತಿಯ ಬಗ್ಗೆ ಅನೇಕರು ಅನುಮಾನಗಳನ್ನು ವ್ಯಕ್ತಪಡಿಸಿದ್ದಾರೆ. ಅಲಿಯವರು ಪದಕವನ್ನು ಕಳೆದುಕೊಂಡಿರಬಹುದು ಎಂದು ಕೆಲವು ನಿಕಟವರ್ತಿಗಳು ಹೇಳಿಕೊಂಡಿದ್ದಾರೆ.

ನ್ಯೂಯಾರ್ಕ್ ಟೈಮ್ಸ್‌ನ 2016ರ ವರದಿಯು ವಿಭಿನ್ನ ಆಯಾಮಗಳನ್ನು ನೀಡಿತ್ತು. ಮೌಖಿಕ ಇತಿಹಾಸದ ಲೇಖಕ ಥಾಮಸ್ ಹೌಸರ್, “ಬಾಕ್ಸರ್ ಮೊಹಮ್ಮದ್ ಅಲಿಯವರು ತಮ್ಮ ಪದಕವನ್ನು ಕಳೆದುಕೊಂಡಿದ್ದರು” ಎಂದು ತಿಳಿಸಿದ್ದಾರೆ. ಅವರಿಗೆ (ಅಲಿಯವರಿಗೆ) ಅಂತಿಮವಾಗಿ 1996 ಅಟ್ಲಾಂಟಾ ಒಲಿಂಪಿಕ್ಸ್‌ನಲ್ಲಿ ಪದಕದ ಪ್ರತಿರೂಪವನ್ನು ನೀಡಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...