Homeಮುಖಪುಟಪ್ರಸಿದ್ಧ ಬಾಕ್ಸರ್‌ ಮುಹಮ್ಮದ್ ಅಲಿ ಜೀವನ ಕಥೆ ನೆನಪಿಸಿದ ಭಾರತೀಯ ಕುಸ್ತಿಪಟುಗಳ ಹೋರಾಟ

ಪ್ರಸಿದ್ಧ ಬಾಕ್ಸರ್‌ ಮುಹಮ್ಮದ್ ಅಲಿ ಜೀವನ ಕಥೆ ನೆನಪಿಸಿದ ಭಾರತೀಯ ಕುಸ್ತಿಪಟುಗಳ ಹೋರಾಟ

- Advertisement -
- Advertisement -

ಲೈಂಗಿಕ ಕಿರುಕುಳದ ಆರೋಪಿ, ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್‌ ಸಿಂಗ್‌ನನ್ನು ಬಂಧಿಸುವಂತೆ ಆಗ್ರಹಿಸುತ್ತಿರುವ ಒಲಂಪಿಕ್ ಮತ್ತು ಕಾಮನ್‌ವೆಲ್ತ್‌ ಕ್ರೀಡಾಕೂಟಗಳ ಪದಕ ವಿಜೇತರು, “ಗಂಗಾ ನದಿಗೆ ನಮ್ಮ ಪದಕಗಳನ್ನು ಅರ್ಪಿಸುತ್ತೇವೆ” ಎಂದಿದ್ದು ಇತಿಹಾಸದಲ್ಲಿ ಉಳಿಯುವ ಘಟನೆ.

ಕುಸ್ತಿಪಟುಗಳಾದ ಸಾಕ್ಷಿ ಮಲಿಕ್, ಬಜರಂಗ್ ಪುನಿಯಾ ಮತ್ತು ವಿನೇಶ್ ಫೋಗಟ್ ಸೇರಿದಂತೆ ಅನೇಕರು ನಡೆಸುತ್ತಿರುವ ಈ ಹೋರಾಟ ದಿನದಿಂದ ದಿನಕ್ಕೆ ತೀವ್ರವಾಗುತ್ತಲೇ ಇದೆ. ಸರ್ಕಾರ ತಾಳಿರುವ ನಿರ್ಲಕ್ಷ್ಯದಿಂದಾಗಿ ಕುಸ್ತಿಪಟುಗಳು ತೀವ್ರವಾಗಿ ನೊಂದಿದ್ದು- ಪದಕಗಳನ್ನು ಗಂಗಾನದಿಗೆ ಬಿಡುವ ಕ್ರಮದ ಕುರಿತು ಚಿಂತಿಸಿದ್ದಾರೆ.

“ನಮ್ಮ ಕುತ್ತಿಗೆಯಲ್ಲಿ ಅಲಂಕರಿಸಲ್ಪಟ್ಟ ಈ ಪದಕಗಳಿಗೆ ಇನ್ನು ಮುಂದೆ ಯಾವುದೇ ಅರ್ಥವಿಲ್ಲ ಎಂದು ತೋರುತ್ತದೆ” ಎಂದು ಕುಸ್ತಿಪಟುಗಳು ಹೇಳಿದ್ದಾರೆ. “ಪೊಲೀಸ್ ಮತ್ತು ವ್ಯವಸ್ಥೆಯು ನಮ್ಮನ್ನು ಅಪರಾಧಿಗಳಂತೆ ಪರಿಗಣಿಸುತ್ತಿದೆ. ಕಿರುಕುಳ ನೀಡಿದಾಗ ಸಾರ್ವಜನಿಕ ಸಭೆಗಳಲ್ಲಿ ನಮ್ಮ ಮೇಲೆ ಬಹಿರಂಗವಾಗಿ ದಾಳಿ ನಡೆಸುತ್ತಿದ್ದಾನೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

‘ಗಂಗಾ ನದಿಗೆ ಪದಕಗಳನ್ನು ಬೀಸಾಡುವ ಯೋಚನೆ’ಯು ಭಾರತದ ಕ್ರೀಡಾ ಇತಿಹಾಸದಲ್ಲಿ ಅಸಾಮಾನ್ಯ ಹೆಜ್ಜೆಯಾಗಿದ್ದರೂ, ಪ್ರಪಂಚದಾದ್ಯಂತದ ಅನೇಕ ಕ್ರೀಡಾಪಟುಗಳು ಸಾಮಾಜಿಕ ಅನಿಷ್ಟಗಳ ವಿರುದ್ಧ ಪ್ರತಿಭಟಿಸಲು ಇಂತಹ ಕಠಿಣ ಕ್ರಮಗಳನ್ನು ಕೈಗೊಂಡಿದ್ದು ಉಂಟು. ಅಂತಹ ಐತಿಹಾಸಿಕ ಘಟನೆಗಳ ಪೈಕಿ- ಪ್ರಖ್ಯಾತ ಅಮೆರಿಕನ್ ಬಾಕ್ಸರ್‌ ಮುಹಮ್ಮದ್ ಅಲಿ ಅವರ ಪ್ರತಿರೋಧವೂ ಸೇರಿದೆ.

ಜನವರಿ 17, 1942 ರಂದು ಕೆಂಟುಕಿಯ ಲೂಯಿಸ್ವಿಲ್ಲೆಯಲ್ಲಿ ಜನಿಸಿದ ಮುಹಮ್ಮದ್ ಅಲಿ ಬಾಕ್ಸಿಂಗ್ ಜಗತ್ತಿಗೆ ಕಾಲಿಟ್ಟಿದ್ದು 12ನೇ ವಯಸ್ಸಿನಲ್ಲಿ. ಅಲಿ ಅವರ ಬೈಸಿಕಲ್ ಕಳವಾದ ಬಳಿಕ ಬಾಕ್ಸಿಂಗ್ ಕಡೆಗೆ ಆಕರ್ಷಿತರಾಗುತ್ತಾರೆ. ತಮ್ಮ ಬೈಸಿಕಲ್ ಕದ್ದವನಿಗೆ ಥಳಿಸುತ್ತೇನೆ ಎಂದು ಪೊಲೀಸರಲ್ಲಿ ಅಲಿ ಹೇಳಿಕೊಂಡಿದ್ದರು.

ಅಲಿ ಬಾಕ್ಸಿಂಗ್ ಜಗತ್ತಿನಲ್ಲಿ ಸಾಧನೆಗೈದರು. ‘ದಿ ಗ್ರೇಟೆಸ್ಟ್’ ಎಂಬ ಖ್ಯಾತಿಯನ್ನೂ ಪಡೆದರು. ಕೇವಲ ಆರು ವರ್ಷಗಳಲ್ಲಿ, ಅಂದರೆ 1960ರಲ್ಲಿ ಒಲಂಪಿಕ್ ಚಿನ್ನದ ಪದಕವನ್ನು ಮುಡಿಗೇರಿಸಿಕೊಂಡರು. ಆದರೆ 48 ಗಂಟೆಗಳ ಕಾಲ ಪದಕವನ್ನು ಸ್ವೀಕರಿಸಿರಲಿಲ್ಲ. ಯಾಕೆಂದರೆ ಈ ಪ್ರಚಂಡ ಯಶಸ್ಸಿನ ನಂತರವೂ ಅಲಿ ವರ್ಣಭೇದ ನೀತಿಯನ್ನು ಎದುರಿಸುತ್ತಲೇ ಇದ್ದರು.

ಅಲಿ ಅವರಿಗೆ ಸಂಬಂಧಿಸಿದ ಮತ್ತೊಂದು ಘಟನೆ ಪ್ರಸಿದ್ಧವಾಗಿದೆ.  ಅವರು ತಮ್ಮ ಒಲಿಂಪಿಕ್ ಚಿನ್ನದ ಪದಕದೊಂದಿಗೆ ಹಿಂದಿರುಗಿದಾಗ, ಬಿಳಿ ಜನರಿಗೆ ಮಾತ್ರ ಸೇವೆ ಸಲ್ಲಿಸುವ ರೆಸ್ಟೋರೆಂಟ್‌ನಲ್ಲಿ ಇವರಿಗೆ ಪ್ರವೇಶ ನಿರಾಕರಿಸಲಾಯಿತು. ಬಿಳಿಕ ಮೋಟಾರ್‌ಸೈಕಲ್ ಗ್ಯಾಂಗ್‌ನೊಂದಿಗೆ ಅವರು ಜಗಳವಾಡಿದ್ದರು.

ಸಮಯದಲ್ಲಿ ಕಪ್ಪು ಜನರಿಗೆ ಊಟ ಮಾಡಲು ಅವಕಾಶವಿರಲಿಲ್ಲ. ಆಗ ತನ್ನ ಪದಕವನ್ನು ಧರಿಸಿದ ಅಲಿ, ಊಟವನ್ನು ಕೇಳಿದರು. ಆದರೂ ಅನುಮತಿ ನೀಡಲಾಗಲಿಲ್ಲ.

ಇದನ್ನೂ ಓದಿರಿ: ಆರೋಪಿ ಬ್ರಿಜ್‌ಭೂಷಣ್ ಸಿಂಗ್ ವಿರುದ್ಧ ನಿಷ್ಪಕ್ಷಪಾತ ತನಿಖೆಗೆ ಒತ್ತಾಯಿಸಿದ ಅಂತಾರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿ

ತನ್ನ ಆತ್ಮಚರಿತ್ರೆಯಾದ “ದಿ ಗ್ರೇಟೆಸ್ಟ್”ನಲ್ಲಿ ಈ ಘಟನೆಯ ಕುರಿತು ಅಲಿ ಬರೆದುಕೊಂಡಿದ್ದಾರೆ. ಆ ಅವಮಾನದ ಬಳಿಕ ಅಲಿ ಅವರು ತಮ್ಮ ಪದಕವನ್ನು ಓಹಿಯೋ ನದಿಗೆ ಎಸೆದರು ಎಂದು ದಾಖಲಾಗಿದೆ.

ಆದಾಗ್ಯೂ, ಈ ಆವೃತ್ತಿಯ ಬಗ್ಗೆ ಅನೇಕರು ಅನುಮಾನಗಳನ್ನು ವ್ಯಕ್ತಪಡಿಸಿದ್ದಾರೆ. ಅಲಿಯವರು ಪದಕವನ್ನು ಕಳೆದುಕೊಂಡಿರಬಹುದು ಎಂದು ಕೆಲವು ನಿಕಟವರ್ತಿಗಳು ಹೇಳಿಕೊಂಡಿದ್ದಾರೆ.

ನ್ಯೂಯಾರ್ಕ್ ಟೈಮ್ಸ್‌ನ 2016ರ ವರದಿಯು ವಿಭಿನ್ನ ಆಯಾಮಗಳನ್ನು ನೀಡಿತ್ತು. ಮೌಖಿಕ ಇತಿಹಾಸದ ಲೇಖಕ ಥಾಮಸ್ ಹೌಸರ್, “ಬಾಕ್ಸರ್ ಮೊಹಮ್ಮದ್ ಅಲಿಯವರು ತಮ್ಮ ಪದಕವನ್ನು ಕಳೆದುಕೊಂಡಿದ್ದರು” ಎಂದು ತಿಳಿಸಿದ್ದಾರೆ. ಅವರಿಗೆ (ಅಲಿಯವರಿಗೆ) ಅಂತಿಮವಾಗಿ 1996 ಅಟ್ಲಾಂಟಾ ಒಲಿಂಪಿಕ್ಸ್‌ನಲ್ಲಿ ಪದಕದ ಪ್ರತಿರೂಪವನ್ನು ನೀಡಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...