Homeಮುಖಪುಟಪ್ರಸಿದ್ಧ ಬಾಕ್ಸರ್‌ ಮುಹಮ್ಮದ್ ಅಲಿ ಜೀವನ ಕಥೆ ನೆನಪಿಸಿದ ಭಾರತೀಯ ಕುಸ್ತಿಪಟುಗಳ ಹೋರಾಟ

ಪ್ರಸಿದ್ಧ ಬಾಕ್ಸರ್‌ ಮುಹಮ್ಮದ್ ಅಲಿ ಜೀವನ ಕಥೆ ನೆನಪಿಸಿದ ಭಾರತೀಯ ಕುಸ್ತಿಪಟುಗಳ ಹೋರಾಟ

- Advertisement -
- Advertisement -

ಲೈಂಗಿಕ ಕಿರುಕುಳದ ಆರೋಪಿ, ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್‌ ಸಿಂಗ್‌ನನ್ನು ಬಂಧಿಸುವಂತೆ ಆಗ್ರಹಿಸುತ್ತಿರುವ ಒಲಂಪಿಕ್ ಮತ್ತು ಕಾಮನ್‌ವೆಲ್ತ್‌ ಕ್ರೀಡಾಕೂಟಗಳ ಪದಕ ವಿಜೇತರು, “ಗಂಗಾ ನದಿಗೆ ನಮ್ಮ ಪದಕಗಳನ್ನು ಅರ್ಪಿಸುತ್ತೇವೆ” ಎಂದಿದ್ದು ಇತಿಹಾಸದಲ್ಲಿ ಉಳಿಯುವ ಘಟನೆ.

ಕುಸ್ತಿಪಟುಗಳಾದ ಸಾಕ್ಷಿ ಮಲಿಕ್, ಬಜರಂಗ್ ಪುನಿಯಾ ಮತ್ತು ವಿನೇಶ್ ಫೋಗಟ್ ಸೇರಿದಂತೆ ಅನೇಕರು ನಡೆಸುತ್ತಿರುವ ಈ ಹೋರಾಟ ದಿನದಿಂದ ದಿನಕ್ಕೆ ತೀವ್ರವಾಗುತ್ತಲೇ ಇದೆ. ಸರ್ಕಾರ ತಾಳಿರುವ ನಿರ್ಲಕ್ಷ್ಯದಿಂದಾಗಿ ಕುಸ್ತಿಪಟುಗಳು ತೀವ್ರವಾಗಿ ನೊಂದಿದ್ದು- ಪದಕಗಳನ್ನು ಗಂಗಾನದಿಗೆ ಬಿಡುವ ಕ್ರಮದ ಕುರಿತು ಚಿಂತಿಸಿದ್ದಾರೆ.

“ನಮ್ಮ ಕುತ್ತಿಗೆಯಲ್ಲಿ ಅಲಂಕರಿಸಲ್ಪಟ್ಟ ಈ ಪದಕಗಳಿಗೆ ಇನ್ನು ಮುಂದೆ ಯಾವುದೇ ಅರ್ಥವಿಲ್ಲ ಎಂದು ತೋರುತ್ತದೆ” ಎಂದು ಕುಸ್ತಿಪಟುಗಳು ಹೇಳಿದ್ದಾರೆ. “ಪೊಲೀಸ್ ಮತ್ತು ವ್ಯವಸ್ಥೆಯು ನಮ್ಮನ್ನು ಅಪರಾಧಿಗಳಂತೆ ಪರಿಗಣಿಸುತ್ತಿದೆ. ಕಿರುಕುಳ ನೀಡಿದಾಗ ಸಾರ್ವಜನಿಕ ಸಭೆಗಳಲ್ಲಿ ನಮ್ಮ ಮೇಲೆ ಬಹಿರಂಗವಾಗಿ ದಾಳಿ ನಡೆಸುತ್ತಿದ್ದಾನೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

‘ಗಂಗಾ ನದಿಗೆ ಪದಕಗಳನ್ನು ಬೀಸಾಡುವ ಯೋಚನೆ’ಯು ಭಾರತದ ಕ್ರೀಡಾ ಇತಿಹಾಸದಲ್ಲಿ ಅಸಾಮಾನ್ಯ ಹೆಜ್ಜೆಯಾಗಿದ್ದರೂ, ಪ್ರಪಂಚದಾದ್ಯಂತದ ಅನೇಕ ಕ್ರೀಡಾಪಟುಗಳು ಸಾಮಾಜಿಕ ಅನಿಷ್ಟಗಳ ವಿರುದ್ಧ ಪ್ರತಿಭಟಿಸಲು ಇಂತಹ ಕಠಿಣ ಕ್ರಮಗಳನ್ನು ಕೈಗೊಂಡಿದ್ದು ಉಂಟು. ಅಂತಹ ಐತಿಹಾಸಿಕ ಘಟನೆಗಳ ಪೈಕಿ- ಪ್ರಖ್ಯಾತ ಅಮೆರಿಕನ್ ಬಾಕ್ಸರ್‌ ಮುಹಮ್ಮದ್ ಅಲಿ ಅವರ ಪ್ರತಿರೋಧವೂ ಸೇರಿದೆ.

ಜನವರಿ 17, 1942 ರಂದು ಕೆಂಟುಕಿಯ ಲೂಯಿಸ್ವಿಲ್ಲೆಯಲ್ಲಿ ಜನಿಸಿದ ಮುಹಮ್ಮದ್ ಅಲಿ ಬಾಕ್ಸಿಂಗ್ ಜಗತ್ತಿಗೆ ಕಾಲಿಟ್ಟಿದ್ದು 12ನೇ ವಯಸ್ಸಿನಲ್ಲಿ. ಅಲಿ ಅವರ ಬೈಸಿಕಲ್ ಕಳವಾದ ಬಳಿಕ ಬಾಕ್ಸಿಂಗ್ ಕಡೆಗೆ ಆಕರ್ಷಿತರಾಗುತ್ತಾರೆ. ತಮ್ಮ ಬೈಸಿಕಲ್ ಕದ್ದವನಿಗೆ ಥಳಿಸುತ್ತೇನೆ ಎಂದು ಪೊಲೀಸರಲ್ಲಿ ಅಲಿ ಹೇಳಿಕೊಂಡಿದ್ದರು.

ಅಲಿ ಬಾಕ್ಸಿಂಗ್ ಜಗತ್ತಿನಲ್ಲಿ ಸಾಧನೆಗೈದರು. ‘ದಿ ಗ್ರೇಟೆಸ್ಟ್’ ಎಂಬ ಖ್ಯಾತಿಯನ್ನೂ ಪಡೆದರು. ಕೇವಲ ಆರು ವರ್ಷಗಳಲ್ಲಿ, ಅಂದರೆ 1960ರಲ್ಲಿ ಒಲಂಪಿಕ್ ಚಿನ್ನದ ಪದಕವನ್ನು ಮುಡಿಗೇರಿಸಿಕೊಂಡರು. ಆದರೆ 48 ಗಂಟೆಗಳ ಕಾಲ ಪದಕವನ್ನು ಸ್ವೀಕರಿಸಿರಲಿಲ್ಲ. ಯಾಕೆಂದರೆ ಈ ಪ್ರಚಂಡ ಯಶಸ್ಸಿನ ನಂತರವೂ ಅಲಿ ವರ್ಣಭೇದ ನೀತಿಯನ್ನು ಎದುರಿಸುತ್ತಲೇ ಇದ್ದರು.

ಅಲಿ ಅವರಿಗೆ ಸಂಬಂಧಿಸಿದ ಮತ್ತೊಂದು ಘಟನೆ ಪ್ರಸಿದ್ಧವಾಗಿದೆ.  ಅವರು ತಮ್ಮ ಒಲಿಂಪಿಕ್ ಚಿನ್ನದ ಪದಕದೊಂದಿಗೆ ಹಿಂದಿರುಗಿದಾಗ, ಬಿಳಿ ಜನರಿಗೆ ಮಾತ್ರ ಸೇವೆ ಸಲ್ಲಿಸುವ ರೆಸ್ಟೋರೆಂಟ್‌ನಲ್ಲಿ ಇವರಿಗೆ ಪ್ರವೇಶ ನಿರಾಕರಿಸಲಾಯಿತು. ಬಿಳಿಕ ಮೋಟಾರ್‌ಸೈಕಲ್ ಗ್ಯಾಂಗ್‌ನೊಂದಿಗೆ ಅವರು ಜಗಳವಾಡಿದ್ದರು.

ಸಮಯದಲ್ಲಿ ಕಪ್ಪು ಜನರಿಗೆ ಊಟ ಮಾಡಲು ಅವಕಾಶವಿರಲಿಲ್ಲ. ಆಗ ತನ್ನ ಪದಕವನ್ನು ಧರಿಸಿದ ಅಲಿ, ಊಟವನ್ನು ಕೇಳಿದರು. ಆದರೂ ಅನುಮತಿ ನೀಡಲಾಗಲಿಲ್ಲ.

ಇದನ್ನೂ ಓದಿರಿ: ಆರೋಪಿ ಬ್ರಿಜ್‌ಭೂಷಣ್ ಸಿಂಗ್ ವಿರುದ್ಧ ನಿಷ್ಪಕ್ಷಪಾತ ತನಿಖೆಗೆ ಒತ್ತಾಯಿಸಿದ ಅಂತಾರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿ

ತನ್ನ ಆತ್ಮಚರಿತ್ರೆಯಾದ “ದಿ ಗ್ರೇಟೆಸ್ಟ್”ನಲ್ಲಿ ಈ ಘಟನೆಯ ಕುರಿತು ಅಲಿ ಬರೆದುಕೊಂಡಿದ್ದಾರೆ. ಆ ಅವಮಾನದ ಬಳಿಕ ಅಲಿ ಅವರು ತಮ್ಮ ಪದಕವನ್ನು ಓಹಿಯೋ ನದಿಗೆ ಎಸೆದರು ಎಂದು ದಾಖಲಾಗಿದೆ.

ಆದಾಗ್ಯೂ, ಈ ಆವೃತ್ತಿಯ ಬಗ್ಗೆ ಅನೇಕರು ಅನುಮಾನಗಳನ್ನು ವ್ಯಕ್ತಪಡಿಸಿದ್ದಾರೆ. ಅಲಿಯವರು ಪದಕವನ್ನು ಕಳೆದುಕೊಂಡಿರಬಹುದು ಎಂದು ಕೆಲವು ನಿಕಟವರ್ತಿಗಳು ಹೇಳಿಕೊಂಡಿದ್ದಾರೆ.

ನ್ಯೂಯಾರ್ಕ್ ಟೈಮ್ಸ್‌ನ 2016ರ ವರದಿಯು ವಿಭಿನ್ನ ಆಯಾಮಗಳನ್ನು ನೀಡಿತ್ತು. ಮೌಖಿಕ ಇತಿಹಾಸದ ಲೇಖಕ ಥಾಮಸ್ ಹೌಸರ್, “ಬಾಕ್ಸರ್ ಮೊಹಮ್ಮದ್ ಅಲಿಯವರು ತಮ್ಮ ಪದಕವನ್ನು ಕಳೆದುಕೊಂಡಿದ್ದರು” ಎಂದು ತಿಳಿಸಿದ್ದಾರೆ. ಅವರಿಗೆ (ಅಲಿಯವರಿಗೆ) ಅಂತಿಮವಾಗಿ 1996 ಅಟ್ಲಾಂಟಾ ಒಲಿಂಪಿಕ್ಸ್‌ನಲ್ಲಿ ಪದಕದ ಪ್ರತಿರೂಪವನ್ನು ನೀಡಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...