Homeಮುಖಪುಟಪ್ರಸಿದ್ಧ ಬಾಕ್ಸರ್‌ ಮುಹಮ್ಮದ್ ಅಲಿ ಜೀವನ ಕಥೆ ನೆನಪಿಸಿದ ಭಾರತೀಯ ಕುಸ್ತಿಪಟುಗಳ ಹೋರಾಟ

ಪ್ರಸಿದ್ಧ ಬಾಕ್ಸರ್‌ ಮುಹಮ್ಮದ್ ಅಲಿ ಜೀವನ ಕಥೆ ನೆನಪಿಸಿದ ಭಾರತೀಯ ಕುಸ್ತಿಪಟುಗಳ ಹೋರಾಟ

- Advertisement -
- Advertisement -

ಲೈಂಗಿಕ ಕಿರುಕುಳದ ಆರೋಪಿ, ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್‌ ಸಿಂಗ್‌ನನ್ನು ಬಂಧಿಸುವಂತೆ ಆಗ್ರಹಿಸುತ್ತಿರುವ ಒಲಂಪಿಕ್ ಮತ್ತು ಕಾಮನ್‌ವೆಲ್ತ್‌ ಕ್ರೀಡಾಕೂಟಗಳ ಪದಕ ವಿಜೇತರು, “ಗಂಗಾ ನದಿಗೆ ನಮ್ಮ ಪದಕಗಳನ್ನು ಅರ್ಪಿಸುತ್ತೇವೆ” ಎಂದಿದ್ದು ಇತಿಹಾಸದಲ್ಲಿ ಉಳಿಯುವ ಘಟನೆ.

ಕುಸ್ತಿಪಟುಗಳಾದ ಸಾಕ್ಷಿ ಮಲಿಕ್, ಬಜರಂಗ್ ಪುನಿಯಾ ಮತ್ತು ವಿನೇಶ್ ಫೋಗಟ್ ಸೇರಿದಂತೆ ಅನೇಕರು ನಡೆಸುತ್ತಿರುವ ಈ ಹೋರಾಟ ದಿನದಿಂದ ದಿನಕ್ಕೆ ತೀವ್ರವಾಗುತ್ತಲೇ ಇದೆ. ಸರ್ಕಾರ ತಾಳಿರುವ ನಿರ್ಲಕ್ಷ್ಯದಿಂದಾಗಿ ಕುಸ್ತಿಪಟುಗಳು ತೀವ್ರವಾಗಿ ನೊಂದಿದ್ದು- ಪದಕಗಳನ್ನು ಗಂಗಾನದಿಗೆ ಬಿಡುವ ಕ್ರಮದ ಕುರಿತು ಚಿಂತಿಸಿದ್ದಾರೆ.

“ನಮ್ಮ ಕುತ್ತಿಗೆಯಲ್ಲಿ ಅಲಂಕರಿಸಲ್ಪಟ್ಟ ಈ ಪದಕಗಳಿಗೆ ಇನ್ನು ಮುಂದೆ ಯಾವುದೇ ಅರ್ಥವಿಲ್ಲ ಎಂದು ತೋರುತ್ತದೆ” ಎಂದು ಕುಸ್ತಿಪಟುಗಳು ಹೇಳಿದ್ದಾರೆ. “ಪೊಲೀಸ್ ಮತ್ತು ವ್ಯವಸ್ಥೆಯು ನಮ್ಮನ್ನು ಅಪರಾಧಿಗಳಂತೆ ಪರಿಗಣಿಸುತ್ತಿದೆ. ಕಿರುಕುಳ ನೀಡಿದಾಗ ಸಾರ್ವಜನಿಕ ಸಭೆಗಳಲ್ಲಿ ನಮ್ಮ ಮೇಲೆ ಬಹಿರಂಗವಾಗಿ ದಾಳಿ ನಡೆಸುತ್ತಿದ್ದಾನೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

‘ಗಂಗಾ ನದಿಗೆ ಪದಕಗಳನ್ನು ಬೀಸಾಡುವ ಯೋಚನೆ’ಯು ಭಾರತದ ಕ್ರೀಡಾ ಇತಿಹಾಸದಲ್ಲಿ ಅಸಾಮಾನ್ಯ ಹೆಜ್ಜೆಯಾಗಿದ್ದರೂ, ಪ್ರಪಂಚದಾದ್ಯಂತದ ಅನೇಕ ಕ್ರೀಡಾಪಟುಗಳು ಸಾಮಾಜಿಕ ಅನಿಷ್ಟಗಳ ವಿರುದ್ಧ ಪ್ರತಿಭಟಿಸಲು ಇಂತಹ ಕಠಿಣ ಕ್ರಮಗಳನ್ನು ಕೈಗೊಂಡಿದ್ದು ಉಂಟು. ಅಂತಹ ಐತಿಹಾಸಿಕ ಘಟನೆಗಳ ಪೈಕಿ- ಪ್ರಖ್ಯಾತ ಅಮೆರಿಕನ್ ಬಾಕ್ಸರ್‌ ಮುಹಮ್ಮದ್ ಅಲಿ ಅವರ ಪ್ರತಿರೋಧವೂ ಸೇರಿದೆ.

ಜನವರಿ 17, 1942 ರಂದು ಕೆಂಟುಕಿಯ ಲೂಯಿಸ್ವಿಲ್ಲೆಯಲ್ಲಿ ಜನಿಸಿದ ಮುಹಮ್ಮದ್ ಅಲಿ ಬಾಕ್ಸಿಂಗ್ ಜಗತ್ತಿಗೆ ಕಾಲಿಟ್ಟಿದ್ದು 12ನೇ ವಯಸ್ಸಿನಲ್ಲಿ. ಅಲಿ ಅವರ ಬೈಸಿಕಲ್ ಕಳವಾದ ಬಳಿಕ ಬಾಕ್ಸಿಂಗ್ ಕಡೆಗೆ ಆಕರ್ಷಿತರಾಗುತ್ತಾರೆ. ತಮ್ಮ ಬೈಸಿಕಲ್ ಕದ್ದವನಿಗೆ ಥಳಿಸುತ್ತೇನೆ ಎಂದು ಪೊಲೀಸರಲ್ಲಿ ಅಲಿ ಹೇಳಿಕೊಂಡಿದ್ದರು.

ಅಲಿ ಬಾಕ್ಸಿಂಗ್ ಜಗತ್ತಿನಲ್ಲಿ ಸಾಧನೆಗೈದರು. ‘ದಿ ಗ್ರೇಟೆಸ್ಟ್’ ಎಂಬ ಖ್ಯಾತಿಯನ್ನೂ ಪಡೆದರು. ಕೇವಲ ಆರು ವರ್ಷಗಳಲ್ಲಿ, ಅಂದರೆ 1960ರಲ್ಲಿ ಒಲಂಪಿಕ್ ಚಿನ್ನದ ಪದಕವನ್ನು ಮುಡಿಗೇರಿಸಿಕೊಂಡರು. ಆದರೆ 48 ಗಂಟೆಗಳ ಕಾಲ ಪದಕವನ್ನು ಸ್ವೀಕರಿಸಿರಲಿಲ್ಲ. ಯಾಕೆಂದರೆ ಈ ಪ್ರಚಂಡ ಯಶಸ್ಸಿನ ನಂತರವೂ ಅಲಿ ವರ್ಣಭೇದ ನೀತಿಯನ್ನು ಎದುರಿಸುತ್ತಲೇ ಇದ್ದರು.

ಅಲಿ ಅವರಿಗೆ ಸಂಬಂಧಿಸಿದ ಮತ್ತೊಂದು ಘಟನೆ ಪ್ರಸಿದ್ಧವಾಗಿದೆ.  ಅವರು ತಮ್ಮ ಒಲಿಂಪಿಕ್ ಚಿನ್ನದ ಪದಕದೊಂದಿಗೆ ಹಿಂದಿರುಗಿದಾಗ, ಬಿಳಿ ಜನರಿಗೆ ಮಾತ್ರ ಸೇವೆ ಸಲ್ಲಿಸುವ ರೆಸ್ಟೋರೆಂಟ್‌ನಲ್ಲಿ ಇವರಿಗೆ ಪ್ರವೇಶ ನಿರಾಕರಿಸಲಾಯಿತು. ಬಿಳಿಕ ಮೋಟಾರ್‌ಸೈಕಲ್ ಗ್ಯಾಂಗ್‌ನೊಂದಿಗೆ ಅವರು ಜಗಳವಾಡಿದ್ದರು.

ಸಮಯದಲ್ಲಿ ಕಪ್ಪು ಜನರಿಗೆ ಊಟ ಮಾಡಲು ಅವಕಾಶವಿರಲಿಲ್ಲ. ಆಗ ತನ್ನ ಪದಕವನ್ನು ಧರಿಸಿದ ಅಲಿ, ಊಟವನ್ನು ಕೇಳಿದರು. ಆದರೂ ಅನುಮತಿ ನೀಡಲಾಗಲಿಲ್ಲ.

ಇದನ್ನೂ ಓದಿರಿ: ಆರೋಪಿ ಬ್ರಿಜ್‌ಭೂಷಣ್ ಸಿಂಗ್ ವಿರುದ್ಧ ನಿಷ್ಪಕ್ಷಪಾತ ತನಿಖೆಗೆ ಒತ್ತಾಯಿಸಿದ ಅಂತಾರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿ

ತನ್ನ ಆತ್ಮಚರಿತ್ರೆಯಾದ “ದಿ ಗ್ರೇಟೆಸ್ಟ್”ನಲ್ಲಿ ಈ ಘಟನೆಯ ಕುರಿತು ಅಲಿ ಬರೆದುಕೊಂಡಿದ್ದಾರೆ. ಆ ಅವಮಾನದ ಬಳಿಕ ಅಲಿ ಅವರು ತಮ್ಮ ಪದಕವನ್ನು ಓಹಿಯೋ ನದಿಗೆ ಎಸೆದರು ಎಂದು ದಾಖಲಾಗಿದೆ.

ಆದಾಗ್ಯೂ, ಈ ಆವೃತ್ತಿಯ ಬಗ್ಗೆ ಅನೇಕರು ಅನುಮಾನಗಳನ್ನು ವ್ಯಕ್ತಪಡಿಸಿದ್ದಾರೆ. ಅಲಿಯವರು ಪದಕವನ್ನು ಕಳೆದುಕೊಂಡಿರಬಹುದು ಎಂದು ಕೆಲವು ನಿಕಟವರ್ತಿಗಳು ಹೇಳಿಕೊಂಡಿದ್ದಾರೆ.

ನ್ಯೂಯಾರ್ಕ್ ಟೈಮ್ಸ್‌ನ 2016ರ ವರದಿಯು ವಿಭಿನ್ನ ಆಯಾಮಗಳನ್ನು ನೀಡಿತ್ತು. ಮೌಖಿಕ ಇತಿಹಾಸದ ಲೇಖಕ ಥಾಮಸ್ ಹೌಸರ್, “ಬಾಕ್ಸರ್ ಮೊಹಮ್ಮದ್ ಅಲಿಯವರು ತಮ್ಮ ಪದಕವನ್ನು ಕಳೆದುಕೊಂಡಿದ್ದರು” ಎಂದು ತಿಳಿಸಿದ್ದಾರೆ. ಅವರಿಗೆ (ಅಲಿಯವರಿಗೆ) ಅಂತಿಮವಾಗಿ 1996 ಅಟ್ಲಾಂಟಾ ಒಲಿಂಪಿಕ್ಸ್‌ನಲ್ಲಿ ಪದಕದ ಪ್ರತಿರೂಪವನ್ನು ನೀಡಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...