Homeಮುಖಪುಟಪ್ರಸಿದ್ಧ ಬಾಕ್ಸರ್‌ ಮುಹಮ್ಮದ್ ಅಲಿ ಜೀವನ ಕಥೆ ನೆನಪಿಸಿದ ಭಾರತೀಯ ಕುಸ್ತಿಪಟುಗಳ ಹೋರಾಟ

ಪ್ರಸಿದ್ಧ ಬಾಕ್ಸರ್‌ ಮುಹಮ್ಮದ್ ಅಲಿ ಜೀವನ ಕಥೆ ನೆನಪಿಸಿದ ಭಾರತೀಯ ಕುಸ್ತಿಪಟುಗಳ ಹೋರಾಟ

- Advertisement -
- Advertisement -

ಲೈಂಗಿಕ ಕಿರುಕುಳದ ಆರೋಪಿ, ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್‌ ಸಿಂಗ್‌ನನ್ನು ಬಂಧಿಸುವಂತೆ ಆಗ್ರಹಿಸುತ್ತಿರುವ ಒಲಂಪಿಕ್ ಮತ್ತು ಕಾಮನ್‌ವೆಲ್ತ್‌ ಕ್ರೀಡಾಕೂಟಗಳ ಪದಕ ವಿಜೇತರು, “ಗಂಗಾ ನದಿಗೆ ನಮ್ಮ ಪದಕಗಳನ್ನು ಅರ್ಪಿಸುತ್ತೇವೆ” ಎಂದಿದ್ದು ಇತಿಹಾಸದಲ್ಲಿ ಉಳಿಯುವ ಘಟನೆ.

ಕುಸ್ತಿಪಟುಗಳಾದ ಸಾಕ್ಷಿ ಮಲಿಕ್, ಬಜರಂಗ್ ಪುನಿಯಾ ಮತ್ತು ವಿನೇಶ್ ಫೋಗಟ್ ಸೇರಿದಂತೆ ಅನೇಕರು ನಡೆಸುತ್ತಿರುವ ಈ ಹೋರಾಟ ದಿನದಿಂದ ದಿನಕ್ಕೆ ತೀವ್ರವಾಗುತ್ತಲೇ ಇದೆ. ಸರ್ಕಾರ ತಾಳಿರುವ ನಿರ್ಲಕ್ಷ್ಯದಿಂದಾಗಿ ಕುಸ್ತಿಪಟುಗಳು ತೀವ್ರವಾಗಿ ನೊಂದಿದ್ದು- ಪದಕಗಳನ್ನು ಗಂಗಾನದಿಗೆ ಬಿಡುವ ಕ್ರಮದ ಕುರಿತು ಚಿಂತಿಸಿದ್ದಾರೆ.

“ನಮ್ಮ ಕುತ್ತಿಗೆಯಲ್ಲಿ ಅಲಂಕರಿಸಲ್ಪಟ್ಟ ಈ ಪದಕಗಳಿಗೆ ಇನ್ನು ಮುಂದೆ ಯಾವುದೇ ಅರ್ಥವಿಲ್ಲ ಎಂದು ತೋರುತ್ತದೆ” ಎಂದು ಕುಸ್ತಿಪಟುಗಳು ಹೇಳಿದ್ದಾರೆ. “ಪೊಲೀಸ್ ಮತ್ತು ವ್ಯವಸ್ಥೆಯು ನಮ್ಮನ್ನು ಅಪರಾಧಿಗಳಂತೆ ಪರಿಗಣಿಸುತ್ತಿದೆ. ಕಿರುಕುಳ ನೀಡಿದಾಗ ಸಾರ್ವಜನಿಕ ಸಭೆಗಳಲ್ಲಿ ನಮ್ಮ ಮೇಲೆ ಬಹಿರಂಗವಾಗಿ ದಾಳಿ ನಡೆಸುತ್ತಿದ್ದಾನೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

‘ಗಂಗಾ ನದಿಗೆ ಪದಕಗಳನ್ನು ಬೀಸಾಡುವ ಯೋಚನೆ’ಯು ಭಾರತದ ಕ್ರೀಡಾ ಇತಿಹಾಸದಲ್ಲಿ ಅಸಾಮಾನ್ಯ ಹೆಜ್ಜೆಯಾಗಿದ್ದರೂ, ಪ್ರಪಂಚದಾದ್ಯಂತದ ಅನೇಕ ಕ್ರೀಡಾಪಟುಗಳು ಸಾಮಾಜಿಕ ಅನಿಷ್ಟಗಳ ವಿರುದ್ಧ ಪ್ರತಿಭಟಿಸಲು ಇಂತಹ ಕಠಿಣ ಕ್ರಮಗಳನ್ನು ಕೈಗೊಂಡಿದ್ದು ಉಂಟು. ಅಂತಹ ಐತಿಹಾಸಿಕ ಘಟನೆಗಳ ಪೈಕಿ- ಪ್ರಖ್ಯಾತ ಅಮೆರಿಕನ್ ಬಾಕ್ಸರ್‌ ಮುಹಮ್ಮದ್ ಅಲಿ ಅವರ ಪ್ರತಿರೋಧವೂ ಸೇರಿದೆ.

ಜನವರಿ 17, 1942 ರಂದು ಕೆಂಟುಕಿಯ ಲೂಯಿಸ್ವಿಲ್ಲೆಯಲ್ಲಿ ಜನಿಸಿದ ಮುಹಮ್ಮದ್ ಅಲಿ ಬಾಕ್ಸಿಂಗ್ ಜಗತ್ತಿಗೆ ಕಾಲಿಟ್ಟಿದ್ದು 12ನೇ ವಯಸ್ಸಿನಲ್ಲಿ. ಅಲಿ ಅವರ ಬೈಸಿಕಲ್ ಕಳವಾದ ಬಳಿಕ ಬಾಕ್ಸಿಂಗ್ ಕಡೆಗೆ ಆಕರ್ಷಿತರಾಗುತ್ತಾರೆ. ತಮ್ಮ ಬೈಸಿಕಲ್ ಕದ್ದವನಿಗೆ ಥಳಿಸುತ್ತೇನೆ ಎಂದು ಪೊಲೀಸರಲ್ಲಿ ಅಲಿ ಹೇಳಿಕೊಂಡಿದ್ದರು.

ಅಲಿ ಬಾಕ್ಸಿಂಗ್ ಜಗತ್ತಿನಲ್ಲಿ ಸಾಧನೆಗೈದರು. ‘ದಿ ಗ್ರೇಟೆಸ್ಟ್’ ಎಂಬ ಖ್ಯಾತಿಯನ್ನೂ ಪಡೆದರು. ಕೇವಲ ಆರು ವರ್ಷಗಳಲ್ಲಿ, ಅಂದರೆ 1960ರಲ್ಲಿ ಒಲಂಪಿಕ್ ಚಿನ್ನದ ಪದಕವನ್ನು ಮುಡಿಗೇರಿಸಿಕೊಂಡರು. ಆದರೆ 48 ಗಂಟೆಗಳ ಕಾಲ ಪದಕವನ್ನು ಸ್ವೀಕರಿಸಿರಲಿಲ್ಲ. ಯಾಕೆಂದರೆ ಈ ಪ್ರಚಂಡ ಯಶಸ್ಸಿನ ನಂತರವೂ ಅಲಿ ವರ್ಣಭೇದ ನೀತಿಯನ್ನು ಎದುರಿಸುತ್ತಲೇ ಇದ್ದರು.

ಅಲಿ ಅವರಿಗೆ ಸಂಬಂಧಿಸಿದ ಮತ್ತೊಂದು ಘಟನೆ ಪ್ರಸಿದ್ಧವಾಗಿದೆ.  ಅವರು ತಮ್ಮ ಒಲಿಂಪಿಕ್ ಚಿನ್ನದ ಪದಕದೊಂದಿಗೆ ಹಿಂದಿರುಗಿದಾಗ, ಬಿಳಿ ಜನರಿಗೆ ಮಾತ್ರ ಸೇವೆ ಸಲ್ಲಿಸುವ ರೆಸ್ಟೋರೆಂಟ್‌ನಲ್ಲಿ ಇವರಿಗೆ ಪ್ರವೇಶ ನಿರಾಕರಿಸಲಾಯಿತು. ಬಿಳಿಕ ಮೋಟಾರ್‌ಸೈಕಲ್ ಗ್ಯಾಂಗ್‌ನೊಂದಿಗೆ ಅವರು ಜಗಳವಾಡಿದ್ದರು.

ಸಮಯದಲ್ಲಿ ಕಪ್ಪು ಜನರಿಗೆ ಊಟ ಮಾಡಲು ಅವಕಾಶವಿರಲಿಲ್ಲ. ಆಗ ತನ್ನ ಪದಕವನ್ನು ಧರಿಸಿದ ಅಲಿ, ಊಟವನ್ನು ಕೇಳಿದರು. ಆದರೂ ಅನುಮತಿ ನೀಡಲಾಗಲಿಲ್ಲ.

ಇದನ್ನೂ ಓದಿರಿ: ಆರೋಪಿ ಬ್ರಿಜ್‌ಭೂಷಣ್ ಸಿಂಗ್ ವಿರುದ್ಧ ನಿಷ್ಪಕ್ಷಪಾತ ತನಿಖೆಗೆ ಒತ್ತಾಯಿಸಿದ ಅಂತಾರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿ

ತನ್ನ ಆತ್ಮಚರಿತ್ರೆಯಾದ “ದಿ ಗ್ರೇಟೆಸ್ಟ್”ನಲ್ಲಿ ಈ ಘಟನೆಯ ಕುರಿತು ಅಲಿ ಬರೆದುಕೊಂಡಿದ್ದಾರೆ. ಆ ಅವಮಾನದ ಬಳಿಕ ಅಲಿ ಅವರು ತಮ್ಮ ಪದಕವನ್ನು ಓಹಿಯೋ ನದಿಗೆ ಎಸೆದರು ಎಂದು ದಾಖಲಾಗಿದೆ.

ಆದಾಗ್ಯೂ, ಈ ಆವೃತ್ತಿಯ ಬಗ್ಗೆ ಅನೇಕರು ಅನುಮಾನಗಳನ್ನು ವ್ಯಕ್ತಪಡಿಸಿದ್ದಾರೆ. ಅಲಿಯವರು ಪದಕವನ್ನು ಕಳೆದುಕೊಂಡಿರಬಹುದು ಎಂದು ಕೆಲವು ನಿಕಟವರ್ತಿಗಳು ಹೇಳಿಕೊಂಡಿದ್ದಾರೆ.

ನ್ಯೂಯಾರ್ಕ್ ಟೈಮ್ಸ್‌ನ 2016ರ ವರದಿಯು ವಿಭಿನ್ನ ಆಯಾಮಗಳನ್ನು ನೀಡಿತ್ತು. ಮೌಖಿಕ ಇತಿಹಾಸದ ಲೇಖಕ ಥಾಮಸ್ ಹೌಸರ್, “ಬಾಕ್ಸರ್ ಮೊಹಮ್ಮದ್ ಅಲಿಯವರು ತಮ್ಮ ಪದಕವನ್ನು ಕಳೆದುಕೊಂಡಿದ್ದರು” ಎಂದು ತಿಳಿಸಿದ್ದಾರೆ. ಅವರಿಗೆ (ಅಲಿಯವರಿಗೆ) ಅಂತಿಮವಾಗಿ 1996 ಅಟ್ಲಾಂಟಾ ಒಲಿಂಪಿಕ್ಸ್‌ನಲ್ಲಿ ಪದಕದ ಪ್ರತಿರೂಪವನ್ನು ನೀಡಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...