Homeಚಳವಳಿಜೈಲಿನಲ್ಲಿ 10 ದಿನ ಉಪವಾಸ ಸತ್ಯಾಗ್ರಹ ಕೈಗೊಂಡ ಪ್ರೊ. ಜಿ.ಎನ್. ಸಾಯಿಬಾಬ!

ಜೈಲಿನಲ್ಲಿ 10 ದಿನ ಉಪವಾಸ ಸತ್ಯಾಗ್ರಹ ಕೈಗೊಂಡ ಪ್ರೊ. ಜಿ.ಎನ್. ಸಾಯಿಬಾಬ!

ಪುಸ್ತಕ, ಪತ್ರಿಕೆ ಮತ್ತು ಕಾಗದಗಳನ್ನು ನೀಡಬೇಕು ಎಂಬ ಬೇಡಿಕೆ ಈಡೇರಿದ ನಂತರ 10 ದಿನದಿಂದ ಕೈಗೊಂಡಿದ್ದ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ.

- Advertisement -
- Advertisement -

ಭೀಮಾ ಕೊರೊಗಾಂವ್ ಪ್ರಕರಣದಲ್ಲಿ ಬಂಧಿತರಾಗಿರುವ ನಾಗ್ಪುರದ ಕೇಂದ್ರ ಕಾರಾಗೃಹದಲ್ಲಿ ಪಾಶ್ವವಾಯು ಪೀಡಿತರಾಗಿ ಗಾಲಿಕುರ್ಚಿಯಲ್ಲೇ ಇರುವ ಮಾನವ ಹಕ್ಕು ಹೋರಾಟಗಾರ ಪ್ರೊ. ಜಿ. ಎನ್. ಸಾಯಿಬಾಬ, ತನಗೆ ಪುಸ್ತಕ, ಪತ್ರಿಕೆ ಮತ್ತು ಕಾಗದಗಳನ್ನು ನೀಡಬೇಕು ಎಂದು 10 ದಿನದಿಂದ ಕೈಗೊಂಡಿದ್ದ ಉಪವಾಸ ಸತ್ಯಾಗ್ರಹವನ್ನು ಜೈಲಿನ ಅಧಿಕಾರಿಗಳು ಅವರ ಬೇಡಿಕೆಗೆ ಒಪ್ಪಿಗೆ ಸೂಚಿಸಿದ ನಂತರ ಕೊನೆಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ.

ನವೆಂಬರ್‌ 6 ರಂದು ಅವರು “ಸಂಕ್ಷಿಪ್ತ ಕರೆ’’ ಮಾಡಿ ಈ ಬಗ್ಗೆ ತಿಳಿಸಿದ್ದು, ನಾನು ಅಘಾತಕ್ಕೊಳಗಾದೆ ಎಂದಿರುವ ಅವರ ಪತ್ನಿ ವಸಂತ ಕುಮಾರಿ, “ಅವರು 10 ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸಿದ್ದಾರೆಂದು ನನಗೆ ತಿಳಿದಿರಲಿಲ್ಲ. ಸಾಮಾನ್ಯ ದಿನಗಳಲ್ಲಿಯೂ ಅವರ ಆರೋಗ್ಯ ಉತ್ತಮವಾಗಿರಲಿಲ್ಲ. ನಾನು ತುಂಬಾ ಆತಂಕಕ್ಕೊಳಗಾಗಿದ್ದೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕ್ರಾಂತಿಕಾರಿ ರಾಜಕೀಯವನ್ನು ಜೀವನದ ಭಾಗವಾಗಿಸಿಕೊಂಡ ಡಾ.ಜಿ.ಎನ್. ಸಾಯಿಬಾಬಾ

ಕಳೆದ ತಿಂಗಳಷ್ಟೇ ಅವರೊಂದಿಗೆ ಉಪವಾಸ ಸತ್ಯಾಗ್ರಹ ಮಾಡಬಾರದು ಎಂದು ಮನವರಿಕೆ ಮಾಡಿದ್ದ ವಸಂತ ಕುಮಾರಿ, ತನಗೆ ಈ ಉಪವಾಸ ಸತ್ಯಾಗ್ರಹದ ಬಗ್ಗೆ ಯಾವುದೇ ಮಾಹಿತಿ ಇರಲಿಲ್ಲ ಎಂದು ಹೇಳಿದ್ದಾರೆ. ಸಾಯಿಬಾಬ ಅವರು ಅಕ್ಟೋಬರ್‌ 28 ರಿಂದ ನವೆಂಬರ್‌ 6 ವರೆಗೆ ಉಪವಾಸ ಸತ್ಯಾಗ್ರಹ ಮಾಡಿದ್ದಾರೆ ಎಂದು ಅವರೇ ಸ್ವತಃ ಹೇಳದ್ದಾಗಿ ವಸಂತ ಕುಮಾರಿ ಹೇಳಿದ್ದಾರೆ.

ಕೊರೊನಾ ನಿಯಮಗಳು ಜಾರಿಯಲ್ಲಿ ಇರುವುದರಿಂದ ಸಾಯಿಬಾಬಾ ಅವರನ್ನು ಭೇಟಿಯಾಗಲು ಅನುಮತಿಯಿಲ್ಲ, ಸುಧೀರ್ಘ ಉಪವಾಸ ಸತ್ಯಾಗ್ರಹದ ಕಾರಣದಿಂದ ಅವರು ಹೇಗಿದ್ದಾರೆಂದು ನನಗೆ ತಿಳಿಯುತ್ತಿಲ್ಲ ಎಂದು ವಸಂತ ಕುಮಾರಿ ಹೇಳಿದ್ದಾರೆ.

ತನ್ನ ಏಕೈಕ ಮಾಹಿತಿಯ ಮೂಲ ಮಾಧ್ಯಮವಾಗಿ ಸಾಯಿಬಾಬ ಅವರು ಅಪರೂಪದ ದೂರವಾಣಿ ಕರೆಯಾಗಿದೆ ಎನ್ನುವ ವಸಂತ ಕುಮಾರಿ, “ಪೊಲೀಸರು ಕೇವಲ ಇಂಗ್ಲಿಷ್‌‌ನಲ್ಲಿ ಮಾತ್ರ ಮಾತನಾಡಲು ಹೇಳುತ್ತಿದ್ದು, ನಮ್ಮ ಮಾತೃಭಾಷೆ ತೆಲುಗಿನಲ್ಲಿ ಆರಾಮವಾಗಿ ಮಾತನಾಡಲು ಅನುಮತಿಸುವುದಿಲ್ಲ. ಪತ್ರಗಳನ್ನು ಕೂಡಾ ಇಂಗ್ಲಿಷ್‌ನಲ್ಲಿ ಮಾತ್ರ ಬರೆಯಲು ಅನುಮತಿ ಇದೆ. ನನ್ನ ಇಂಗ್ಲಿಷ್ ಅಷ್ಟೇನೂ ಉತ್ತಮವಾಗಿಲ್ಲದ ಕಾರಣ ನಾನು ಹೇಳಬೇಕಿರುವುದನ್ನು ವ್ಯಕ್ತಪಡಿಸಲು ಹೆಣಗಾಡುತ್ತೇನೆ. ನಾನು ಎಂದಿಗೂ ವೈಯಕ್ತಿಕ ಭಾವನೆಗಳನ್ನು ಇಂಗ್ಲಿಷ್‌ನಲ್ಲಿ ಹಂಚಿಕೊಳ್ಳಲು ಸಾಧ್ಯವಿಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಔಷಧಿ, ಪುಸ್ತಕ, ಪತ್ರಗಳ ನಿರಾಕರಣೆ: ಜೈಲಿನಲ್ಲಿ ಉಪವಾಸ ಆರಂಭಿಸಲಿರುವ ಪ್ರೊ.ಜಿ.ಎನ್ ಸಾಯಿಬಾಬಾ

“ನಾನು ಆರೋಗ್ಯದ ಬಗ್ಗೆ ಕೇಳಲು ಮಾತ್ರ ಮಾತನಾಡುತ್ತೇನೆ. ಇತರ ಕೈದಿಗಳಿಗೆ ಅವರು ಮಾತೃಭಾಷೆಯಾಗಿದ್ದರೆ ಮರಾಠಿಯನ್ನು ಮಾತನಾಡಲು ಅನುಮತಿ ಇರುವತ್ತದೆ. ಆದರೆ ಸಾಯಿಬಾಬಾ ಮತ್ತು ನನಗೆ ಮಾತ್ರ ಅವರು ಈ ಭಾಷಾ ಸಮಸ್ಯೆಯನ್ನು ಸೃಷ್ಟಿಸುತ್ತಾರೆ. ಇದು ಯಾಕೆಂದು ನನಗೆ ತಿಳಿದಿಲ್ಲ. ಪೊಲೀಸರು ನಮ್ಮ ಎಲ್ಲಾ ಸಂಭಾಷಣೆಗಳನ್ನು ರೆಕಾರ್ಡ್ ಮಾಡುತ್ತಾರೆ ಮತ್ತು ನಮ್ಮ ಎಲ್ಲಾ ಅಕ್ಷರಗಳನ್ನು ಓದುತ್ತಾರೆ. ನಾವು ಯಾವುದನ್ನೂ ಮರೆಮಾಚುತ್ತಿಲ್ಲ. ಆದರೂ ಯಾಕೆ?” ಎಂದು ವಸಂತ ಕುಮಾರಿ ಪ್ರಶ್ನಿಸಿದ್ದಾರೆ.

ಮಾವೋವಾದಿಗಳೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂಬ ಆರೋಪದ ಮೇಲೆ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 53 ವರ್ಷದ ಪ್ರಾಧ್ಯಾಪಕ, ದೆಹಲಿ ವಿಶ್ವವಿದ್ಯಾಲಯದ ರಾಮ್ ಲಾಲ್ ಆನಂದ್ ಕಾಲೇಜಿನಲ್ಲಿ ಇಂಗ್ಲಿಷ್ ಭೋಧಿಸುತ್ತಿದ್ದರು. 2014 ರಲ್ಲಿ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (UAPA) ಅಡಿಯಲ್ಲಿ ಅವರನ್ನು ಬಂಧಿಸಲಾಯಿತು.

ಡಾ. ಜಿ.ಎನ್. ಸಾಯಿಬಾಬ ಗಾಲಿಕುರ್ಚಿಯನ್ನು ಅವಲಂಭಿಸಿದ್ದು, 90% ಅಂಗವೈಕಲ್ಯದಿಂದ ಬಳಲುತ್ತಿದ್ದಾರೆ. ಅಲ್ಲದೆ ಅವರು ಕೊಮೊರ್ಬಿಡಿಟಿ( ಸಹ ಕಾಯಿಲೆ)ಗಳಿಂದ ಬಳಲುತ್ತಿದ್ದಾರೆ. ನಾಗ್ಪುರ ಜೈಲಿನಲ್ಲಿ ವೈಯಕ್ತಿಕ ಪತ್ರಗಳು, ಪುಸ್ತಕಗಳು ಮತ್ತು ಔಷಧಿಗಳನ್ನು ಸ್ವೀಕರಿಸಲು ಅವಕಾಶವಿಲ್ಲದಿದ್ದರೆ ಅಕ್ಟೋಬರ್ 21 ರಿಂದ ಉಪವಾಸ ಸತ್ಯಾಗ್ರಹ ಮಾಡುವುದಾಗಿ ಬೆದರಿಕೆ ಹಾಕಿದ್ದರು.

ಈ ಮಧ್ಯೆ, ಅವರ ಉಪವಾಸ ಸತ್ಯಾಗ್ರಹದ ಬಗ್ಗೆ ತಿಳಿಯುತ್ತಿದ್ದಂತೆ ಮಾನವ ಹಕ್ಕುಗಳ ಸಮಿತಿ ಅವರ ರಕ್ಷಣೆ ಮತ್ತು ಬಿಡುಗಡೆಗಾಗಿ ಆಗ್ರಹಿಸಿ ಪತ್ರ ಬರೆದಿದೆ.


ಇದನ್ನೂ ಓದಿ: ಜೈಲಿನ ಬಾಗಿಲು ತೆರೆಯುತ್ತದೆ, ನೀವು ನಮ್ಮ ಬಳಿಗೆ ಹಿಂತಿರುಗುತ್ತೀರಿ: ಜೈಲಲ್ಲಿರುವ ಸ್ನೇಹಿತ ಸಾಯಿಬಾಬಾಗೆ ಅರುಂಧತಿ ರಾಯ್ ಬರೆದ ಭಾವನಾತ್ಮಕ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...