Homeಚಳವಳಿಜೈಲಿನಲ್ಲಿ 10 ದಿನ ಉಪವಾಸ ಸತ್ಯಾಗ್ರಹ ಕೈಗೊಂಡ ಪ್ರೊ. ಜಿ.ಎನ್. ಸಾಯಿಬಾಬ!

ಜೈಲಿನಲ್ಲಿ 10 ದಿನ ಉಪವಾಸ ಸತ್ಯಾಗ್ರಹ ಕೈಗೊಂಡ ಪ್ರೊ. ಜಿ.ಎನ್. ಸಾಯಿಬಾಬ!

ಪುಸ್ತಕ, ಪತ್ರಿಕೆ ಮತ್ತು ಕಾಗದಗಳನ್ನು ನೀಡಬೇಕು ಎಂಬ ಬೇಡಿಕೆ ಈಡೇರಿದ ನಂತರ 10 ದಿನದಿಂದ ಕೈಗೊಂಡಿದ್ದ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ.

- Advertisement -
- Advertisement -

ಭೀಮಾ ಕೊರೊಗಾಂವ್ ಪ್ರಕರಣದಲ್ಲಿ ಬಂಧಿತರಾಗಿರುವ ನಾಗ್ಪುರದ ಕೇಂದ್ರ ಕಾರಾಗೃಹದಲ್ಲಿ ಪಾಶ್ವವಾಯು ಪೀಡಿತರಾಗಿ ಗಾಲಿಕುರ್ಚಿಯಲ್ಲೇ ಇರುವ ಮಾನವ ಹಕ್ಕು ಹೋರಾಟಗಾರ ಪ್ರೊ. ಜಿ. ಎನ್. ಸಾಯಿಬಾಬ, ತನಗೆ ಪುಸ್ತಕ, ಪತ್ರಿಕೆ ಮತ್ತು ಕಾಗದಗಳನ್ನು ನೀಡಬೇಕು ಎಂದು 10 ದಿನದಿಂದ ಕೈಗೊಂಡಿದ್ದ ಉಪವಾಸ ಸತ್ಯಾಗ್ರಹವನ್ನು ಜೈಲಿನ ಅಧಿಕಾರಿಗಳು ಅವರ ಬೇಡಿಕೆಗೆ ಒಪ್ಪಿಗೆ ಸೂಚಿಸಿದ ನಂತರ ಕೊನೆಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ.

ನವೆಂಬರ್‌ 6 ರಂದು ಅವರು “ಸಂಕ್ಷಿಪ್ತ ಕರೆ’’ ಮಾಡಿ ಈ ಬಗ್ಗೆ ತಿಳಿಸಿದ್ದು, ನಾನು ಅಘಾತಕ್ಕೊಳಗಾದೆ ಎಂದಿರುವ ಅವರ ಪತ್ನಿ ವಸಂತ ಕುಮಾರಿ, “ಅವರು 10 ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸಿದ್ದಾರೆಂದು ನನಗೆ ತಿಳಿದಿರಲಿಲ್ಲ. ಸಾಮಾನ್ಯ ದಿನಗಳಲ್ಲಿಯೂ ಅವರ ಆರೋಗ್ಯ ಉತ್ತಮವಾಗಿರಲಿಲ್ಲ. ನಾನು ತುಂಬಾ ಆತಂಕಕ್ಕೊಳಗಾಗಿದ್ದೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕ್ರಾಂತಿಕಾರಿ ರಾಜಕೀಯವನ್ನು ಜೀವನದ ಭಾಗವಾಗಿಸಿಕೊಂಡ ಡಾ.ಜಿ.ಎನ್. ಸಾಯಿಬಾಬಾ

ಕಳೆದ ತಿಂಗಳಷ್ಟೇ ಅವರೊಂದಿಗೆ ಉಪವಾಸ ಸತ್ಯಾಗ್ರಹ ಮಾಡಬಾರದು ಎಂದು ಮನವರಿಕೆ ಮಾಡಿದ್ದ ವಸಂತ ಕುಮಾರಿ, ತನಗೆ ಈ ಉಪವಾಸ ಸತ್ಯಾಗ್ರಹದ ಬಗ್ಗೆ ಯಾವುದೇ ಮಾಹಿತಿ ಇರಲಿಲ್ಲ ಎಂದು ಹೇಳಿದ್ದಾರೆ. ಸಾಯಿಬಾಬ ಅವರು ಅಕ್ಟೋಬರ್‌ 28 ರಿಂದ ನವೆಂಬರ್‌ 6 ವರೆಗೆ ಉಪವಾಸ ಸತ್ಯಾಗ್ರಹ ಮಾಡಿದ್ದಾರೆ ಎಂದು ಅವರೇ ಸ್ವತಃ ಹೇಳದ್ದಾಗಿ ವಸಂತ ಕುಮಾರಿ ಹೇಳಿದ್ದಾರೆ.

ಕೊರೊನಾ ನಿಯಮಗಳು ಜಾರಿಯಲ್ಲಿ ಇರುವುದರಿಂದ ಸಾಯಿಬಾಬಾ ಅವರನ್ನು ಭೇಟಿಯಾಗಲು ಅನುಮತಿಯಿಲ್ಲ, ಸುಧೀರ್ಘ ಉಪವಾಸ ಸತ್ಯಾಗ್ರಹದ ಕಾರಣದಿಂದ ಅವರು ಹೇಗಿದ್ದಾರೆಂದು ನನಗೆ ತಿಳಿಯುತ್ತಿಲ್ಲ ಎಂದು ವಸಂತ ಕುಮಾರಿ ಹೇಳಿದ್ದಾರೆ.

ತನ್ನ ಏಕೈಕ ಮಾಹಿತಿಯ ಮೂಲ ಮಾಧ್ಯಮವಾಗಿ ಸಾಯಿಬಾಬ ಅವರು ಅಪರೂಪದ ದೂರವಾಣಿ ಕರೆಯಾಗಿದೆ ಎನ್ನುವ ವಸಂತ ಕುಮಾರಿ, “ಪೊಲೀಸರು ಕೇವಲ ಇಂಗ್ಲಿಷ್‌‌ನಲ್ಲಿ ಮಾತ್ರ ಮಾತನಾಡಲು ಹೇಳುತ್ತಿದ್ದು, ನಮ್ಮ ಮಾತೃಭಾಷೆ ತೆಲುಗಿನಲ್ಲಿ ಆರಾಮವಾಗಿ ಮಾತನಾಡಲು ಅನುಮತಿಸುವುದಿಲ್ಲ. ಪತ್ರಗಳನ್ನು ಕೂಡಾ ಇಂಗ್ಲಿಷ್‌ನಲ್ಲಿ ಮಾತ್ರ ಬರೆಯಲು ಅನುಮತಿ ಇದೆ. ನನ್ನ ಇಂಗ್ಲಿಷ್ ಅಷ್ಟೇನೂ ಉತ್ತಮವಾಗಿಲ್ಲದ ಕಾರಣ ನಾನು ಹೇಳಬೇಕಿರುವುದನ್ನು ವ್ಯಕ್ತಪಡಿಸಲು ಹೆಣಗಾಡುತ್ತೇನೆ. ನಾನು ಎಂದಿಗೂ ವೈಯಕ್ತಿಕ ಭಾವನೆಗಳನ್ನು ಇಂಗ್ಲಿಷ್‌ನಲ್ಲಿ ಹಂಚಿಕೊಳ್ಳಲು ಸಾಧ್ಯವಿಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಔಷಧಿ, ಪುಸ್ತಕ, ಪತ್ರಗಳ ನಿರಾಕರಣೆ: ಜೈಲಿನಲ್ಲಿ ಉಪವಾಸ ಆರಂಭಿಸಲಿರುವ ಪ್ರೊ.ಜಿ.ಎನ್ ಸಾಯಿಬಾಬಾ

“ನಾನು ಆರೋಗ್ಯದ ಬಗ್ಗೆ ಕೇಳಲು ಮಾತ್ರ ಮಾತನಾಡುತ್ತೇನೆ. ಇತರ ಕೈದಿಗಳಿಗೆ ಅವರು ಮಾತೃಭಾಷೆಯಾಗಿದ್ದರೆ ಮರಾಠಿಯನ್ನು ಮಾತನಾಡಲು ಅನುಮತಿ ಇರುವತ್ತದೆ. ಆದರೆ ಸಾಯಿಬಾಬಾ ಮತ್ತು ನನಗೆ ಮಾತ್ರ ಅವರು ಈ ಭಾಷಾ ಸಮಸ್ಯೆಯನ್ನು ಸೃಷ್ಟಿಸುತ್ತಾರೆ. ಇದು ಯಾಕೆಂದು ನನಗೆ ತಿಳಿದಿಲ್ಲ. ಪೊಲೀಸರು ನಮ್ಮ ಎಲ್ಲಾ ಸಂಭಾಷಣೆಗಳನ್ನು ರೆಕಾರ್ಡ್ ಮಾಡುತ್ತಾರೆ ಮತ್ತು ನಮ್ಮ ಎಲ್ಲಾ ಅಕ್ಷರಗಳನ್ನು ಓದುತ್ತಾರೆ. ನಾವು ಯಾವುದನ್ನೂ ಮರೆಮಾಚುತ್ತಿಲ್ಲ. ಆದರೂ ಯಾಕೆ?” ಎಂದು ವಸಂತ ಕುಮಾರಿ ಪ್ರಶ್ನಿಸಿದ್ದಾರೆ.

ಮಾವೋವಾದಿಗಳೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂಬ ಆರೋಪದ ಮೇಲೆ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 53 ವರ್ಷದ ಪ್ರಾಧ್ಯಾಪಕ, ದೆಹಲಿ ವಿಶ್ವವಿದ್ಯಾಲಯದ ರಾಮ್ ಲಾಲ್ ಆನಂದ್ ಕಾಲೇಜಿನಲ್ಲಿ ಇಂಗ್ಲಿಷ್ ಭೋಧಿಸುತ್ತಿದ್ದರು. 2014 ರಲ್ಲಿ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (UAPA) ಅಡಿಯಲ್ಲಿ ಅವರನ್ನು ಬಂಧಿಸಲಾಯಿತು.

ಡಾ. ಜಿ.ಎನ್. ಸಾಯಿಬಾಬ ಗಾಲಿಕುರ್ಚಿಯನ್ನು ಅವಲಂಭಿಸಿದ್ದು, 90% ಅಂಗವೈಕಲ್ಯದಿಂದ ಬಳಲುತ್ತಿದ್ದಾರೆ. ಅಲ್ಲದೆ ಅವರು ಕೊಮೊರ್ಬಿಡಿಟಿ( ಸಹ ಕಾಯಿಲೆ)ಗಳಿಂದ ಬಳಲುತ್ತಿದ್ದಾರೆ. ನಾಗ್ಪುರ ಜೈಲಿನಲ್ಲಿ ವೈಯಕ್ತಿಕ ಪತ್ರಗಳು, ಪುಸ್ತಕಗಳು ಮತ್ತು ಔಷಧಿಗಳನ್ನು ಸ್ವೀಕರಿಸಲು ಅವಕಾಶವಿಲ್ಲದಿದ್ದರೆ ಅಕ್ಟೋಬರ್ 21 ರಿಂದ ಉಪವಾಸ ಸತ್ಯಾಗ್ರಹ ಮಾಡುವುದಾಗಿ ಬೆದರಿಕೆ ಹಾಕಿದ್ದರು.

ಈ ಮಧ್ಯೆ, ಅವರ ಉಪವಾಸ ಸತ್ಯಾಗ್ರಹದ ಬಗ್ಗೆ ತಿಳಿಯುತ್ತಿದ್ದಂತೆ ಮಾನವ ಹಕ್ಕುಗಳ ಸಮಿತಿ ಅವರ ರಕ್ಷಣೆ ಮತ್ತು ಬಿಡುಗಡೆಗಾಗಿ ಆಗ್ರಹಿಸಿ ಪತ್ರ ಬರೆದಿದೆ.


ಇದನ್ನೂ ಓದಿ: ಜೈಲಿನ ಬಾಗಿಲು ತೆರೆಯುತ್ತದೆ, ನೀವು ನಮ್ಮ ಬಳಿಗೆ ಹಿಂತಿರುಗುತ್ತೀರಿ: ಜೈಲಲ್ಲಿರುವ ಸ್ನೇಹಿತ ಸಾಯಿಬಾಬಾಗೆ ಅರುಂಧತಿ ರಾಯ್ ಬರೆದ ಭಾವನಾತ್ಮಕ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...