Homeಚಳವಳಿಜೈಲಿನಲ್ಲಿ 10 ದಿನ ಉಪವಾಸ ಸತ್ಯಾಗ್ರಹ ಕೈಗೊಂಡ ಪ್ರೊ. ಜಿ.ಎನ್. ಸಾಯಿಬಾಬ!

ಜೈಲಿನಲ್ಲಿ 10 ದಿನ ಉಪವಾಸ ಸತ್ಯಾಗ್ರಹ ಕೈಗೊಂಡ ಪ್ರೊ. ಜಿ.ಎನ್. ಸಾಯಿಬಾಬ!

ಪುಸ್ತಕ, ಪತ್ರಿಕೆ ಮತ್ತು ಕಾಗದಗಳನ್ನು ನೀಡಬೇಕು ಎಂಬ ಬೇಡಿಕೆ ಈಡೇರಿದ ನಂತರ 10 ದಿನದಿಂದ ಕೈಗೊಂಡಿದ್ದ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ.

- Advertisement -
- Advertisement -

ಭೀಮಾ ಕೊರೊಗಾಂವ್ ಪ್ರಕರಣದಲ್ಲಿ ಬಂಧಿತರಾಗಿರುವ ನಾಗ್ಪುರದ ಕೇಂದ್ರ ಕಾರಾಗೃಹದಲ್ಲಿ ಪಾಶ್ವವಾಯು ಪೀಡಿತರಾಗಿ ಗಾಲಿಕುರ್ಚಿಯಲ್ಲೇ ಇರುವ ಮಾನವ ಹಕ್ಕು ಹೋರಾಟಗಾರ ಪ್ರೊ. ಜಿ. ಎನ್. ಸಾಯಿಬಾಬ, ತನಗೆ ಪುಸ್ತಕ, ಪತ್ರಿಕೆ ಮತ್ತು ಕಾಗದಗಳನ್ನು ನೀಡಬೇಕು ಎಂದು 10 ದಿನದಿಂದ ಕೈಗೊಂಡಿದ್ದ ಉಪವಾಸ ಸತ್ಯಾಗ್ರಹವನ್ನು ಜೈಲಿನ ಅಧಿಕಾರಿಗಳು ಅವರ ಬೇಡಿಕೆಗೆ ಒಪ್ಪಿಗೆ ಸೂಚಿಸಿದ ನಂತರ ಕೊನೆಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ.

ನವೆಂಬರ್‌ 6 ರಂದು ಅವರು “ಸಂಕ್ಷಿಪ್ತ ಕರೆ’’ ಮಾಡಿ ಈ ಬಗ್ಗೆ ತಿಳಿಸಿದ್ದು, ನಾನು ಅಘಾತಕ್ಕೊಳಗಾದೆ ಎಂದಿರುವ ಅವರ ಪತ್ನಿ ವಸಂತ ಕುಮಾರಿ, “ಅವರು 10 ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸಿದ್ದಾರೆಂದು ನನಗೆ ತಿಳಿದಿರಲಿಲ್ಲ. ಸಾಮಾನ್ಯ ದಿನಗಳಲ್ಲಿಯೂ ಅವರ ಆರೋಗ್ಯ ಉತ್ತಮವಾಗಿರಲಿಲ್ಲ. ನಾನು ತುಂಬಾ ಆತಂಕಕ್ಕೊಳಗಾಗಿದ್ದೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕ್ರಾಂತಿಕಾರಿ ರಾಜಕೀಯವನ್ನು ಜೀವನದ ಭಾಗವಾಗಿಸಿಕೊಂಡ ಡಾ.ಜಿ.ಎನ್. ಸಾಯಿಬಾಬಾ

ಕಳೆದ ತಿಂಗಳಷ್ಟೇ ಅವರೊಂದಿಗೆ ಉಪವಾಸ ಸತ್ಯಾಗ್ರಹ ಮಾಡಬಾರದು ಎಂದು ಮನವರಿಕೆ ಮಾಡಿದ್ದ ವಸಂತ ಕುಮಾರಿ, ತನಗೆ ಈ ಉಪವಾಸ ಸತ್ಯಾಗ್ರಹದ ಬಗ್ಗೆ ಯಾವುದೇ ಮಾಹಿತಿ ಇರಲಿಲ್ಲ ಎಂದು ಹೇಳಿದ್ದಾರೆ. ಸಾಯಿಬಾಬ ಅವರು ಅಕ್ಟೋಬರ್‌ 28 ರಿಂದ ನವೆಂಬರ್‌ 6 ವರೆಗೆ ಉಪವಾಸ ಸತ್ಯಾಗ್ರಹ ಮಾಡಿದ್ದಾರೆ ಎಂದು ಅವರೇ ಸ್ವತಃ ಹೇಳದ್ದಾಗಿ ವಸಂತ ಕುಮಾರಿ ಹೇಳಿದ್ದಾರೆ.

ಕೊರೊನಾ ನಿಯಮಗಳು ಜಾರಿಯಲ್ಲಿ ಇರುವುದರಿಂದ ಸಾಯಿಬಾಬಾ ಅವರನ್ನು ಭೇಟಿಯಾಗಲು ಅನುಮತಿಯಿಲ್ಲ, ಸುಧೀರ್ಘ ಉಪವಾಸ ಸತ್ಯಾಗ್ರಹದ ಕಾರಣದಿಂದ ಅವರು ಹೇಗಿದ್ದಾರೆಂದು ನನಗೆ ತಿಳಿಯುತ್ತಿಲ್ಲ ಎಂದು ವಸಂತ ಕುಮಾರಿ ಹೇಳಿದ್ದಾರೆ.

ತನ್ನ ಏಕೈಕ ಮಾಹಿತಿಯ ಮೂಲ ಮಾಧ್ಯಮವಾಗಿ ಸಾಯಿಬಾಬ ಅವರು ಅಪರೂಪದ ದೂರವಾಣಿ ಕರೆಯಾಗಿದೆ ಎನ್ನುವ ವಸಂತ ಕುಮಾರಿ, “ಪೊಲೀಸರು ಕೇವಲ ಇಂಗ್ಲಿಷ್‌‌ನಲ್ಲಿ ಮಾತ್ರ ಮಾತನಾಡಲು ಹೇಳುತ್ತಿದ್ದು, ನಮ್ಮ ಮಾತೃಭಾಷೆ ತೆಲುಗಿನಲ್ಲಿ ಆರಾಮವಾಗಿ ಮಾತನಾಡಲು ಅನುಮತಿಸುವುದಿಲ್ಲ. ಪತ್ರಗಳನ್ನು ಕೂಡಾ ಇಂಗ್ಲಿಷ್‌ನಲ್ಲಿ ಮಾತ್ರ ಬರೆಯಲು ಅನುಮತಿ ಇದೆ. ನನ್ನ ಇಂಗ್ಲಿಷ್ ಅಷ್ಟೇನೂ ಉತ್ತಮವಾಗಿಲ್ಲದ ಕಾರಣ ನಾನು ಹೇಳಬೇಕಿರುವುದನ್ನು ವ್ಯಕ್ತಪಡಿಸಲು ಹೆಣಗಾಡುತ್ತೇನೆ. ನಾನು ಎಂದಿಗೂ ವೈಯಕ್ತಿಕ ಭಾವನೆಗಳನ್ನು ಇಂಗ್ಲಿಷ್‌ನಲ್ಲಿ ಹಂಚಿಕೊಳ್ಳಲು ಸಾಧ್ಯವಿಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಔಷಧಿ, ಪುಸ್ತಕ, ಪತ್ರಗಳ ನಿರಾಕರಣೆ: ಜೈಲಿನಲ್ಲಿ ಉಪವಾಸ ಆರಂಭಿಸಲಿರುವ ಪ್ರೊ.ಜಿ.ಎನ್ ಸಾಯಿಬಾಬಾ

“ನಾನು ಆರೋಗ್ಯದ ಬಗ್ಗೆ ಕೇಳಲು ಮಾತ್ರ ಮಾತನಾಡುತ್ತೇನೆ. ಇತರ ಕೈದಿಗಳಿಗೆ ಅವರು ಮಾತೃಭಾಷೆಯಾಗಿದ್ದರೆ ಮರಾಠಿಯನ್ನು ಮಾತನಾಡಲು ಅನುಮತಿ ಇರುವತ್ತದೆ. ಆದರೆ ಸಾಯಿಬಾಬಾ ಮತ್ತು ನನಗೆ ಮಾತ್ರ ಅವರು ಈ ಭಾಷಾ ಸಮಸ್ಯೆಯನ್ನು ಸೃಷ್ಟಿಸುತ್ತಾರೆ. ಇದು ಯಾಕೆಂದು ನನಗೆ ತಿಳಿದಿಲ್ಲ. ಪೊಲೀಸರು ನಮ್ಮ ಎಲ್ಲಾ ಸಂಭಾಷಣೆಗಳನ್ನು ರೆಕಾರ್ಡ್ ಮಾಡುತ್ತಾರೆ ಮತ್ತು ನಮ್ಮ ಎಲ್ಲಾ ಅಕ್ಷರಗಳನ್ನು ಓದುತ್ತಾರೆ. ನಾವು ಯಾವುದನ್ನೂ ಮರೆಮಾಚುತ್ತಿಲ್ಲ. ಆದರೂ ಯಾಕೆ?” ಎಂದು ವಸಂತ ಕುಮಾರಿ ಪ್ರಶ್ನಿಸಿದ್ದಾರೆ.

ಮಾವೋವಾದಿಗಳೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂಬ ಆರೋಪದ ಮೇಲೆ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 53 ವರ್ಷದ ಪ್ರಾಧ್ಯಾಪಕ, ದೆಹಲಿ ವಿಶ್ವವಿದ್ಯಾಲಯದ ರಾಮ್ ಲಾಲ್ ಆನಂದ್ ಕಾಲೇಜಿನಲ್ಲಿ ಇಂಗ್ಲಿಷ್ ಭೋಧಿಸುತ್ತಿದ್ದರು. 2014 ರಲ್ಲಿ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (UAPA) ಅಡಿಯಲ್ಲಿ ಅವರನ್ನು ಬಂಧಿಸಲಾಯಿತು.

ಡಾ. ಜಿ.ಎನ್. ಸಾಯಿಬಾಬ ಗಾಲಿಕುರ್ಚಿಯನ್ನು ಅವಲಂಭಿಸಿದ್ದು, 90% ಅಂಗವೈಕಲ್ಯದಿಂದ ಬಳಲುತ್ತಿದ್ದಾರೆ. ಅಲ್ಲದೆ ಅವರು ಕೊಮೊರ್ಬಿಡಿಟಿ( ಸಹ ಕಾಯಿಲೆ)ಗಳಿಂದ ಬಳಲುತ್ತಿದ್ದಾರೆ. ನಾಗ್ಪುರ ಜೈಲಿನಲ್ಲಿ ವೈಯಕ್ತಿಕ ಪತ್ರಗಳು, ಪುಸ್ತಕಗಳು ಮತ್ತು ಔಷಧಿಗಳನ್ನು ಸ್ವೀಕರಿಸಲು ಅವಕಾಶವಿಲ್ಲದಿದ್ದರೆ ಅಕ್ಟೋಬರ್ 21 ರಿಂದ ಉಪವಾಸ ಸತ್ಯಾಗ್ರಹ ಮಾಡುವುದಾಗಿ ಬೆದರಿಕೆ ಹಾಕಿದ್ದರು.

ಈ ಮಧ್ಯೆ, ಅವರ ಉಪವಾಸ ಸತ್ಯಾಗ್ರಹದ ಬಗ್ಗೆ ತಿಳಿಯುತ್ತಿದ್ದಂತೆ ಮಾನವ ಹಕ್ಕುಗಳ ಸಮಿತಿ ಅವರ ರಕ್ಷಣೆ ಮತ್ತು ಬಿಡುಗಡೆಗಾಗಿ ಆಗ್ರಹಿಸಿ ಪತ್ರ ಬರೆದಿದೆ.


ಇದನ್ನೂ ಓದಿ: ಜೈಲಿನ ಬಾಗಿಲು ತೆರೆಯುತ್ತದೆ, ನೀವು ನಮ್ಮ ಬಳಿಗೆ ಹಿಂತಿರುಗುತ್ತೀರಿ: ಜೈಲಲ್ಲಿರುವ ಸ್ನೇಹಿತ ಸಾಯಿಬಾಬಾಗೆ ಅರುಂಧತಿ ರಾಯ್ ಬರೆದ ಭಾವನಾತ್ಮಕ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...