Homeಚಳವಳಿಜೈಲಿನಲ್ಲಿ 10 ದಿನ ಉಪವಾಸ ಸತ್ಯಾಗ್ರಹ ಕೈಗೊಂಡ ಪ್ರೊ. ಜಿ.ಎನ್. ಸಾಯಿಬಾಬ!

ಜೈಲಿನಲ್ಲಿ 10 ದಿನ ಉಪವಾಸ ಸತ್ಯಾಗ್ರಹ ಕೈಗೊಂಡ ಪ್ರೊ. ಜಿ.ಎನ್. ಸಾಯಿಬಾಬ!

ಪುಸ್ತಕ, ಪತ್ರಿಕೆ ಮತ್ತು ಕಾಗದಗಳನ್ನು ನೀಡಬೇಕು ಎಂಬ ಬೇಡಿಕೆ ಈಡೇರಿದ ನಂತರ 10 ದಿನದಿಂದ ಕೈಗೊಂಡಿದ್ದ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ.

- Advertisement -
- Advertisement -

ಭೀಮಾ ಕೊರೊಗಾಂವ್ ಪ್ರಕರಣದಲ್ಲಿ ಬಂಧಿತರಾಗಿರುವ ನಾಗ್ಪುರದ ಕೇಂದ್ರ ಕಾರಾಗೃಹದಲ್ಲಿ ಪಾಶ್ವವಾಯು ಪೀಡಿತರಾಗಿ ಗಾಲಿಕುರ್ಚಿಯಲ್ಲೇ ಇರುವ ಮಾನವ ಹಕ್ಕು ಹೋರಾಟಗಾರ ಪ್ರೊ. ಜಿ. ಎನ್. ಸಾಯಿಬಾಬ, ತನಗೆ ಪುಸ್ತಕ, ಪತ್ರಿಕೆ ಮತ್ತು ಕಾಗದಗಳನ್ನು ನೀಡಬೇಕು ಎಂದು 10 ದಿನದಿಂದ ಕೈಗೊಂಡಿದ್ದ ಉಪವಾಸ ಸತ್ಯಾಗ್ರಹವನ್ನು ಜೈಲಿನ ಅಧಿಕಾರಿಗಳು ಅವರ ಬೇಡಿಕೆಗೆ ಒಪ್ಪಿಗೆ ಸೂಚಿಸಿದ ನಂತರ ಕೊನೆಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ.

ನವೆಂಬರ್‌ 6 ರಂದು ಅವರು “ಸಂಕ್ಷಿಪ್ತ ಕರೆ’’ ಮಾಡಿ ಈ ಬಗ್ಗೆ ತಿಳಿಸಿದ್ದು, ನಾನು ಅಘಾತಕ್ಕೊಳಗಾದೆ ಎಂದಿರುವ ಅವರ ಪತ್ನಿ ವಸಂತ ಕುಮಾರಿ, “ಅವರು 10 ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸಿದ್ದಾರೆಂದು ನನಗೆ ತಿಳಿದಿರಲಿಲ್ಲ. ಸಾಮಾನ್ಯ ದಿನಗಳಲ್ಲಿಯೂ ಅವರ ಆರೋಗ್ಯ ಉತ್ತಮವಾಗಿರಲಿಲ್ಲ. ನಾನು ತುಂಬಾ ಆತಂಕಕ್ಕೊಳಗಾಗಿದ್ದೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕ್ರಾಂತಿಕಾರಿ ರಾಜಕೀಯವನ್ನು ಜೀವನದ ಭಾಗವಾಗಿಸಿಕೊಂಡ ಡಾ.ಜಿ.ಎನ್. ಸಾಯಿಬಾಬಾ

ಕಳೆದ ತಿಂಗಳಷ್ಟೇ ಅವರೊಂದಿಗೆ ಉಪವಾಸ ಸತ್ಯಾಗ್ರಹ ಮಾಡಬಾರದು ಎಂದು ಮನವರಿಕೆ ಮಾಡಿದ್ದ ವಸಂತ ಕುಮಾರಿ, ತನಗೆ ಈ ಉಪವಾಸ ಸತ್ಯಾಗ್ರಹದ ಬಗ್ಗೆ ಯಾವುದೇ ಮಾಹಿತಿ ಇರಲಿಲ್ಲ ಎಂದು ಹೇಳಿದ್ದಾರೆ. ಸಾಯಿಬಾಬ ಅವರು ಅಕ್ಟೋಬರ್‌ 28 ರಿಂದ ನವೆಂಬರ್‌ 6 ವರೆಗೆ ಉಪವಾಸ ಸತ್ಯಾಗ್ರಹ ಮಾಡಿದ್ದಾರೆ ಎಂದು ಅವರೇ ಸ್ವತಃ ಹೇಳದ್ದಾಗಿ ವಸಂತ ಕುಮಾರಿ ಹೇಳಿದ್ದಾರೆ.

ಕೊರೊನಾ ನಿಯಮಗಳು ಜಾರಿಯಲ್ಲಿ ಇರುವುದರಿಂದ ಸಾಯಿಬಾಬಾ ಅವರನ್ನು ಭೇಟಿಯಾಗಲು ಅನುಮತಿಯಿಲ್ಲ, ಸುಧೀರ್ಘ ಉಪವಾಸ ಸತ್ಯಾಗ್ರಹದ ಕಾರಣದಿಂದ ಅವರು ಹೇಗಿದ್ದಾರೆಂದು ನನಗೆ ತಿಳಿಯುತ್ತಿಲ್ಲ ಎಂದು ವಸಂತ ಕುಮಾರಿ ಹೇಳಿದ್ದಾರೆ.

ತನ್ನ ಏಕೈಕ ಮಾಹಿತಿಯ ಮೂಲ ಮಾಧ್ಯಮವಾಗಿ ಸಾಯಿಬಾಬ ಅವರು ಅಪರೂಪದ ದೂರವಾಣಿ ಕರೆಯಾಗಿದೆ ಎನ್ನುವ ವಸಂತ ಕುಮಾರಿ, “ಪೊಲೀಸರು ಕೇವಲ ಇಂಗ್ಲಿಷ್‌‌ನಲ್ಲಿ ಮಾತ್ರ ಮಾತನಾಡಲು ಹೇಳುತ್ತಿದ್ದು, ನಮ್ಮ ಮಾತೃಭಾಷೆ ತೆಲುಗಿನಲ್ಲಿ ಆರಾಮವಾಗಿ ಮಾತನಾಡಲು ಅನುಮತಿಸುವುದಿಲ್ಲ. ಪತ್ರಗಳನ್ನು ಕೂಡಾ ಇಂಗ್ಲಿಷ್‌ನಲ್ಲಿ ಮಾತ್ರ ಬರೆಯಲು ಅನುಮತಿ ಇದೆ. ನನ್ನ ಇಂಗ್ಲಿಷ್ ಅಷ್ಟೇನೂ ಉತ್ತಮವಾಗಿಲ್ಲದ ಕಾರಣ ನಾನು ಹೇಳಬೇಕಿರುವುದನ್ನು ವ್ಯಕ್ತಪಡಿಸಲು ಹೆಣಗಾಡುತ್ತೇನೆ. ನಾನು ಎಂದಿಗೂ ವೈಯಕ್ತಿಕ ಭಾವನೆಗಳನ್ನು ಇಂಗ್ಲಿಷ್‌ನಲ್ಲಿ ಹಂಚಿಕೊಳ್ಳಲು ಸಾಧ್ಯವಿಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಔಷಧಿ, ಪುಸ್ತಕ, ಪತ್ರಗಳ ನಿರಾಕರಣೆ: ಜೈಲಿನಲ್ಲಿ ಉಪವಾಸ ಆರಂಭಿಸಲಿರುವ ಪ್ರೊ.ಜಿ.ಎನ್ ಸಾಯಿಬಾಬಾ

“ನಾನು ಆರೋಗ್ಯದ ಬಗ್ಗೆ ಕೇಳಲು ಮಾತ್ರ ಮಾತನಾಡುತ್ತೇನೆ. ಇತರ ಕೈದಿಗಳಿಗೆ ಅವರು ಮಾತೃಭಾಷೆಯಾಗಿದ್ದರೆ ಮರಾಠಿಯನ್ನು ಮಾತನಾಡಲು ಅನುಮತಿ ಇರುವತ್ತದೆ. ಆದರೆ ಸಾಯಿಬಾಬಾ ಮತ್ತು ನನಗೆ ಮಾತ್ರ ಅವರು ಈ ಭಾಷಾ ಸಮಸ್ಯೆಯನ್ನು ಸೃಷ್ಟಿಸುತ್ತಾರೆ. ಇದು ಯಾಕೆಂದು ನನಗೆ ತಿಳಿದಿಲ್ಲ. ಪೊಲೀಸರು ನಮ್ಮ ಎಲ್ಲಾ ಸಂಭಾಷಣೆಗಳನ್ನು ರೆಕಾರ್ಡ್ ಮಾಡುತ್ತಾರೆ ಮತ್ತು ನಮ್ಮ ಎಲ್ಲಾ ಅಕ್ಷರಗಳನ್ನು ಓದುತ್ತಾರೆ. ನಾವು ಯಾವುದನ್ನೂ ಮರೆಮಾಚುತ್ತಿಲ್ಲ. ಆದರೂ ಯಾಕೆ?” ಎಂದು ವಸಂತ ಕುಮಾರಿ ಪ್ರಶ್ನಿಸಿದ್ದಾರೆ.

ಮಾವೋವಾದಿಗಳೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂಬ ಆರೋಪದ ಮೇಲೆ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 53 ವರ್ಷದ ಪ್ರಾಧ್ಯಾಪಕ, ದೆಹಲಿ ವಿಶ್ವವಿದ್ಯಾಲಯದ ರಾಮ್ ಲಾಲ್ ಆನಂದ್ ಕಾಲೇಜಿನಲ್ಲಿ ಇಂಗ್ಲಿಷ್ ಭೋಧಿಸುತ್ತಿದ್ದರು. 2014 ರಲ್ಲಿ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (UAPA) ಅಡಿಯಲ್ಲಿ ಅವರನ್ನು ಬಂಧಿಸಲಾಯಿತು.

ಡಾ. ಜಿ.ಎನ್. ಸಾಯಿಬಾಬ ಗಾಲಿಕುರ್ಚಿಯನ್ನು ಅವಲಂಭಿಸಿದ್ದು, 90% ಅಂಗವೈಕಲ್ಯದಿಂದ ಬಳಲುತ್ತಿದ್ದಾರೆ. ಅಲ್ಲದೆ ಅವರು ಕೊಮೊರ್ಬಿಡಿಟಿ( ಸಹ ಕಾಯಿಲೆ)ಗಳಿಂದ ಬಳಲುತ್ತಿದ್ದಾರೆ. ನಾಗ್ಪುರ ಜೈಲಿನಲ್ಲಿ ವೈಯಕ್ತಿಕ ಪತ್ರಗಳು, ಪುಸ್ತಕಗಳು ಮತ್ತು ಔಷಧಿಗಳನ್ನು ಸ್ವೀಕರಿಸಲು ಅವಕಾಶವಿಲ್ಲದಿದ್ದರೆ ಅಕ್ಟೋಬರ್ 21 ರಿಂದ ಉಪವಾಸ ಸತ್ಯಾಗ್ರಹ ಮಾಡುವುದಾಗಿ ಬೆದರಿಕೆ ಹಾಕಿದ್ದರು.

ಈ ಮಧ್ಯೆ, ಅವರ ಉಪವಾಸ ಸತ್ಯಾಗ್ರಹದ ಬಗ್ಗೆ ತಿಳಿಯುತ್ತಿದ್ದಂತೆ ಮಾನವ ಹಕ್ಕುಗಳ ಸಮಿತಿ ಅವರ ರಕ್ಷಣೆ ಮತ್ತು ಬಿಡುಗಡೆಗಾಗಿ ಆಗ್ರಹಿಸಿ ಪತ್ರ ಬರೆದಿದೆ.


ಇದನ್ನೂ ಓದಿ: ಜೈಲಿನ ಬಾಗಿಲು ತೆರೆಯುತ್ತದೆ, ನೀವು ನಮ್ಮ ಬಳಿಗೆ ಹಿಂತಿರುಗುತ್ತೀರಿ: ಜೈಲಲ್ಲಿರುವ ಸ್ನೇಹಿತ ಸಾಯಿಬಾಬಾಗೆ ಅರುಂಧತಿ ರಾಯ್ ಬರೆದ ಭಾವನಾತ್ಮಕ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...