Homeಚಳವಳಿಜೈಲಿನಲ್ಲಿ 10 ದಿನ ಉಪವಾಸ ಸತ್ಯಾಗ್ರಹ ಕೈಗೊಂಡ ಪ್ರೊ. ಜಿ.ಎನ್. ಸಾಯಿಬಾಬ!

ಜೈಲಿನಲ್ಲಿ 10 ದಿನ ಉಪವಾಸ ಸತ್ಯಾಗ್ರಹ ಕೈಗೊಂಡ ಪ್ರೊ. ಜಿ.ಎನ್. ಸಾಯಿಬಾಬ!

ಪುಸ್ತಕ, ಪತ್ರಿಕೆ ಮತ್ತು ಕಾಗದಗಳನ್ನು ನೀಡಬೇಕು ಎಂಬ ಬೇಡಿಕೆ ಈಡೇರಿದ ನಂತರ 10 ದಿನದಿಂದ ಕೈಗೊಂಡಿದ್ದ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ.

- Advertisement -
- Advertisement -

ಭೀಮಾ ಕೊರೊಗಾಂವ್ ಪ್ರಕರಣದಲ್ಲಿ ಬಂಧಿತರಾಗಿರುವ ನಾಗ್ಪುರದ ಕೇಂದ್ರ ಕಾರಾಗೃಹದಲ್ಲಿ ಪಾಶ್ವವಾಯು ಪೀಡಿತರಾಗಿ ಗಾಲಿಕುರ್ಚಿಯಲ್ಲೇ ಇರುವ ಮಾನವ ಹಕ್ಕು ಹೋರಾಟಗಾರ ಪ್ರೊ. ಜಿ. ಎನ್. ಸಾಯಿಬಾಬ, ತನಗೆ ಪುಸ್ತಕ, ಪತ್ರಿಕೆ ಮತ್ತು ಕಾಗದಗಳನ್ನು ನೀಡಬೇಕು ಎಂದು 10 ದಿನದಿಂದ ಕೈಗೊಂಡಿದ್ದ ಉಪವಾಸ ಸತ್ಯಾಗ್ರಹವನ್ನು ಜೈಲಿನ ಅಧಿಕಾರಿಗಳು ಅವರ ಬೇಡಿಕೆಗೆ ಒಪ್ಪಿಗೆ ಸೂಚಿಸಿದ ನಂತರ ಕೊನೆಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ.

ನವೆಂಬರ್‌ 6 ರಂದು ಅವರು “ಸಂಕ್ಷಿಪ್ತ ಕರೆ’’ ಮಾಡಿ ಈ ಬಗ್ಗೆ ತಿಳಿಸಿದ್ದು, ನಾನು ಅಘಾತಕ್ಕೊಳಗಾದೆ ಎಂದಿರುವ ಅವರ ಪತ್ನಿ ವಸಂತ ಕುಮಾರಿ, “ಅವರು 10 ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸಿದ್ದಾರೆಂದು ನನಗೆ ತಿಳಿದಿರಲಿಲ್ಲ. ಸಾಮಾನ್ಯ ದಿನಗಳಲ್ಲಿಯೂ ಅವರ ಆರೋಗ್ಯ ಉತ್ತಮವಾಗಿರಲಿಲ್ಲ. ನಾನು ತುಂಬಾ ಆತಂಕಕ್ಕೊಳಗಾಗಿದ್ದೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕ್ರಾಂತಿಕಾರಿ ರಾಜಕೀಯವನ್ನು ಜೀವನದ ಭಾಗವಾಗಿಸಿಕೊಂಡ ಡಾ.ಜಿ.ಎನ್. ಸಾಯಿಬಾಬಾ

ಕಳೆದ ತಿಂಗಳಷ್ಟೇ ಅವರೊಂದಿಗೆ ಉಪವಾಸ ಸತ್ಯಾಗ್ರಹ ಮಾಡಬಾರದು ಎಂದು ಮನವರಿಕೆ ಮಾಡಿದ್ದ ವಸಂತ ಕುಮಾರಿ, ತನಗೆ ಈ ಉಪವಾಸ ಸತ್ಯಾಗ್ರಹದ ಬಗ್ಗೆ ಯಾವುದೇ ಮಾಹಿತಿ ಇರಲಿಲ್ಲ ಎಂದು ಹೇಳಿದ್ದಾರೆ. ಸಾಯಿಬಾಬ ಅವರು ಅಕ್ಟೋಬರ್‌ 28 ರಿಂದ ನವೆಂಬರ್‌ 6 ವರೆಗೆ ಉಪವಾಸ ಸತ್ಯಾಗ್ರಹ ಮಾಡಿದ್ದಾರೆ ಎಂದು ಅವರೇ ಸ್ವತಃ ಹೇಳದ್ದಾಗಿ ವಸಂತ ಕುಮಾರಿ ಹೇಳಿದ್ದಾರೆ.

ಕೊರೊನಾ ನಿಯಮಗಳು ಜಾರಿಯಲ್ಲಿ ಇರುವುದರಿಂದ ಸಾಯಿಬಾಬಾ ಅವರನ್ನು ಭೇಟಿಯಾಗಲು ಅನುಮತಿಯಿಲ್ಲ, ಸುಧೀರ್ಘ ಉಪವಾಸ ಸತ್ಯಾಗ್ರಹದ ಕಾರಣದಿಂದ ಅವರು ಹೇಗಿದ್ದಾರೆಂದು ನನಗೆ ತಿಳಿಯುತ್ತಿಲ್ಲ ಎಂದು ವಸಂತ ಕುಮಾರಿ ಹೇಳಿದ್ದಾರೆ.

ತನ್ನ ಏಕೈಕ ಮಾಹಿತಿಯ ಮೂಲ ಮಾಧ್ಯಮವಾಗಿ ಸಾಯಿಬಾಬ ಅವರು ಅಪರೂಪದ ದೂರವಾಣಿ ಕರೆಯಾಗಿದೆ ಎನ್ನುವ ವಸಂತ ಕುಮಾರಿ, “ಪೊಲೀಸರು ಕೇವಲ ಇಂಗ್ಲಿಷ್‌‌ನಲ್ಲಿ ಮಾತ್ರ ಮಾತನಾಡಲು ಹೇಳುತ್ತಿದ್ದು, ನಮ್ಮ ಮಾತೃಭಾಷೆ ತೆಲುಗಿನಲ್ಲಿ ಆರಾಮವಾಗಿ ಮಾತನಾಡಲು ಅನುಮತಿಸುವುದಿಲ್ಲ. ಪತ್ರಗಳನ್ನು ಕೂಡಾ ಇಂಗ್ಲಿಷ್‌ನಲ್ಲಿ ಮಾತ್ರ ಬರೆಯಲು ಅನುಮತಿ ಇದೆ. ನನ್ನ ಇಂಗ್ಲಿಷ್ ಅಷ್ಟೇನೂ ಉತ್ತಮವಾಗಿಲ್ಲದ ಕಾರಣ ನಾನು ಹೇಳಬೇಕಿರುವುದನ್ನು ವ್ಯಕ್ತಪಡಿಸಲು ಹೆಣಗಾಡುತ್ತೇನೆ. ನಾನು ಎಂದಿಗೂ ವೈಯಕ್ತಿಕ ಭಾವನೆಗಳನ್ನು ಇಂಗ್ಲಿಷ್‌ನಲ್ಲಿ ಹಂಚಿಕೊಳ್ಳಲು ಸಾಧ್ಯವಿಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಔಷಧಿ, ಪುಸ್ತಕ, ಪತ್ರಗಳ ನಿರಾಕರಣೆ: ಜೈಲಿನಲ್ಲಿ ಉಪವಾಸ ಆರಂಭಿಸಲಿರುವ ಪ್ರೊ.ಜಿ.ಎನ್ ಸಾಯಿಬಾಬಾ

“ನಾನು ಆರೋಗ್ಯದ ಬಗ್ಗೆ ಕೇಳಲು ಮಾತ್ರ ಮಾತನಾಡುತ್ತೇನೆ. ಇತರ ಕೈದಿಗಳಿಗೆ ಅವರು ಮಾತೃಭಾಷೆಯಾಗಿದ್ದರೆ ಮರಾಠಿಯನ್ನು ಮಾತನಾಡಲು ಅನುಮತಿ ಇರುವತ್ತದೆ. ಆದರೆ ಸಾಯಿಬಾಬಾ ಮತ್ತು ನನಗೆ ಮಾತ್ರ ಅವರು ಈ ಭಾಷಾ ಸಮಸ್ಯೆಯನ್ನು ಸೃಷ್ಟಿಸುತ್ತಾರೆ. ಇದು ಯಾಕೆಂದು ನನಗೆ ತಿಳಿದಿಲ್ಲ. ಪೊಲೀಸರು ನಮ್ಮ ಎಲ್ಲಾ ಸಂಭಾಷಣೆಗಳನ್ನು ರೆಕಾರ್ಡ್ ಮಾಡುತ್ತಾರೆ ಮತ್ತು ನಮ್ಮ ಎಲ್ಲಾ ಅಕ್ಷರಗಳನ್ನು ಓದುತ್ತಾರೆ. ನಾವು ಯಾವುದನ್ನೂ ಮರೆಮಾಚುತ್ತಿಲ್ಲ. ಆದರೂ ಯಾಕೆ?” ಎಂದು ವಸಂತ ಕುಮಾರಿ ಪ್ರಶ್ನಿಸಿದ್ದಾರೆ.

ಮಾವೋವಾದಿಗಳೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂಬ ಆರೋಪದ ಮೇಲೆ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 53 ವರ್ಷದ ಪ್ರಾಧ್ಯಾಪಕ, ದೆಹಲಿ ವಿಶ್ವವಿದ್ಯಾಲಯದ ರಾಮ್ ಲಾಲ್ ಆನಂದ್ ಕಾಲೇಜಿನಲ್ಲಿ ಇಂಗ್ಲಿಷ್ ಭೋಧಿಸುತ್ತಿದ್ದರು. 2014 ರಲ್ಲಿ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (UAPA) ಅಡಿಯಲ್ಲಿ ಅವರನ್ನು ಬಂಧಿಸಲಾಯಿತು.

ಡಾ. ಜಿ.ಎನ್. ಸಾಯಿಬಾಬ ಗಾಲಿಕುರ್ಚಿಯನ್ನು ಅವಲಂಭಿಸಿದ್ದು, 90% ಅಂಗವೈಕಲ್ಯದಿಂದ ಬಳಲುತ್ತಿದ್ದಾರೆ. ಅಲ್ಲದೆ ಅವರು ಕೊಮೊರ್ಬಿಡಿಟಿ( ಸಹ ಕಾಯಿಲೆ)ಗಳಿಂದ ಬಳಲುತ್ತಿದ್ದಾರೆ. ನಾಗ್ಪುರ ಜೈಲಿನಲ್ಲಿ ವೈಯಕ್ತಿಕ ಪತ್ರಗಳು, ಪುಸ್ತಕಗಳು ಮತ್ತು ಔಷಧಿಗಳನ್ನು ಸ್ವೀಕರಿಸಲು ಅವಕಾಶವಿಲ್ಲದಿದ್ದರೆ ಅಕ್ಟೋಬರ್ 21 ರಿಂದ ಉಪವಾಸ ಸತ್ಯಾಗ್ರಹ ಮಾಡುವುದಾಗಿ ಬೆದರಿಕೆ ಹಾಕಿದ್ದರು.

ಈ ಮಧ್ಯೆ, ಅವರ ಉಪವಾಸ ಸತ್ಯಾಗ್ರಹದ ಬಗ್ಗೆ ತಿಳಿಯುತ್ತಿದ್ದಂತೆ ಮಾನವ ಹಕ್ಕುಗಳ ಸಮಿತಿ ಅವರ ರಕ್ಷಣೆ ಮತ್ತು ಬಿಡುಗಡೆಗಾಗಿ ಆಗ್ರಹಿಸಿ ಪತ್ರ ಬರೆದಿದೆ.


ಇದನ್ನೂ ಓದಿ: ಜೈಲಿನ ಬಾಗಿಲು ತೆರೆಯುತ್ತದೆ, ನೀವು ನಮ್ಮ ಬಳಿಗೆ ಹಿಂತಿರುಗುತ್ತೀರಿ: ಜೈಲಲ್ಲಿರುವ ಸ್ನೇಹಿತ ಸಾಯಿಬಾಬಾಗೆ ಅರುಂಧತಿ ರಾಯ್ ಬರೆದ ಭಾವನಾತ್ಮಕ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...