Homeಚಳವಳಿಜೈಲಿನಲ್ಲಿ 10 ದಿನ ಉಪವಾಸ ಸತ್ಯಾಗ್ರಹ ಕೈಗೊಂಡ ಪ್ರೊ. ಜಿ.ಎನ್. ಸಾಯಿಬಾಬ!

ಜೈಲಿನಲ್ಲಿ 10 ದಿನ ಉಪವಾಸ ಸತ್ಯಾಗ್ರಹ ಕೈಗೊಂಡ ಪ್ರೊ. ಜಿ.ಎನ್. ಸಾಯಿಬಾಬ!

ಪುಸ್ತಕ, ಪತ್ರಿಕೆ ಮತ್ತು ಕಾಗದಗಳನ್ನು ನೀಡಬೇಕು ಎಂಬ ಬೇಡಿಕೆ ಈಡೇರಿದ ನಂತರ 10 ದಿನದಿಂದ ಕೈಗೊಂಡಿದ್ದ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ.

- Advertisement -
- Advertisement -

ಭೀಮಾ ಕೊರೊಗಾಂವ್ ಪ್ರಕರಣದಲ್ಲಿ ಬಂಧಿತರಾಗಿರುವ ನಾಗ್ಪುರದ ಕೇಂದ್ರ ಕಾರಾಗೃಹದಲ್ಲಿ ಪಾಶ್ವವಾಯು ಪೀಡಿತರಾಗಿ ಗಾಲಿಕುರ್ಚಿಯಲ್ಲೇ ಇರುವ ಮಾನವ ಹಕ್ಕು ಹೋರಾಟಗಾರ ಪ್ರೊ. ಜಿ. ಎನ್. ಸಾಯಿಬಾಬ, ತನಗೆ ಪುಸ್ತಕ, ಪತ್ರಿಕೆ ಮತ್ತು ಕಾಗದಗಳನ್ನು ನೀಡಬೇಕು ಎಂದು 10 ದಿನದಿಂದ ಕೈಗೊಂಡಿದ್ದ ಉಪವಾಸ ಸತ್ಯಾಗ್ರಹವನ್ನು ಜೈಲಿನ ಅಧಿಕಾರಿಗಳು ಅವರ ಬೇಡಿಕೆಗೆ ಒಪ್ಪಿಗೆ ಸೂಚಿಸಿದ ನಂತರ ಕೊನೆಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ.

ನವೆಂಬರ್‌ 6 ರಂದು ಅವರು “ಸಂಕ್ಷಿಪ್ತ ಕರೆ’’ ಮಾಡಿ ಈ ಬಗ್ಗೆ ತಿಳಿಸಿದ್ದು, ನಾನು ಅಘಾತಕ್ಕೊಳಗಾದೆ ಎಂದಿರುವ ಅವರ ಪತ್ನಿ ವಸಂತ ಕುಮಾರಿ, “ಅವರು 10 ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸಿದ್ದಾರೆಂದು ನನಗೆ ತಿಳಿದಿರಲಿಲ್ಲ. ಸಾಮಾನ್ಯ ದಿನಗಳಲ್ಲಿಯೂ ಅವರ ಆರೋಗ್ಯ ಉತ್ತಮವಾಗಿರಲಿಲ್ಲ. ನಾನು ತುಂಬಾ ಆತಂಕಕ್ಕೊಳಗಾಗಿದ್ದೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕ್ರಾಂತಿಕಾರಿ ರಾಜಕೀಯವನ್ನು ಜೀವನದ ಭಾಗವಾಗಿಸಿಕೊಂಡ ಡಾ.ಜಿ.ಎನ್. ಸಾಯಿಬಾಬಾ

ಕಳೆದ ತಿಂಗಳಷ್ಟೇ ಅವರೊಂದಿಗೆ ಉಪವಾಸ ಸತ್ಯಾಗ್ರಹ ಮಾಡಬಾರದು ಎಂದು ಮನವರಿಕೆ ಮಾಡಿದ್ದ ವಸಂತ ಕುಮಾರಿ, ತನಗೆ ಈ ಉಪವಾಸ ಸತ್ಯಾಗ್ರಹದ ಬಗ್ಗೆ ಯಾವುದೇ ಮಾಹಿತಿ ಇರಲಿಲ್ಲ ಎಂದು ಹೇಳಿದ್ದಾರೆ. ಸಾಯಿಬಾಬ ಅವರು ಅಕ್ಟೋಬರ್‌ 28 ರಿಂದ ನವೆಂಬರ್‌ 6 ವರೆಗೆ ಉಪವಾಸ ಸತ್ಯಾಗ್ರಹ ಮಾಡಿದ್ದಾರೆ ಎಂದು ಅವರೇ ಸ್ವತಃ ಹೇಳದ್ದಾಗಿ ವಸಂತ ಕುಮಾರಿ ಹೇಳಿದ್ದಾರೆ.

ಕೊರೊನಾ ನಿಯಮಗಳು ಜಾರಿಯಲ್ಲಿ ಇರುವುದರಿಂದ ಸಾಯಿಬಾಬಾ ಅವರನ್ನು ಭೇಟಿಯಾಗಲು ಅನುಮತಿಯಿಲ್ಲ, ಸುಧೀರ್ಘ ಉಪವಾಸ ಸತ್ಯಾಗ್ರಹದ ಕಾರಣದಿಂದ ಅವರು ಹೇಗಿದ್ದಾರೆಂದು ನನಗೆ ತಿಳಿಯುತ್ತಿಲ್ಲ ಎಂದು ವಸಂತ ಕುಮಾರಿ ಹೇಳಿದ್ದಾರೆ.

ತನ್ನ ಏಕೈಕ ಮಾಹಿತಿಯ ಮೂಲ ಮಾಧ್ಯಮವಾಗಿ ಸಾಯಿಬಾಬ ಅವರು ಅಪರೂಪದ ದೂರವಾಣಿ ಕರೆಯಾಗಿದೆ ಎನ್ನುವ ವಸಂತ ಕುಮಾರಿ, “ಪೊಲೀಸರು ಕೇವಲ ಇಂಗ್ಲಿಷ್‌‌ನಲ್ಲಿ ಮಾತ್ರ ಮಾತನಾಡಲು ಹೇಳುತ್ತಿದ್ದು, ನಮ್ಮ ಮಾತೃಭಾಷೆ ತೆಲುಗಿನಲ್ಲಿ ಆರಾಮವಾಗಿ ಮಾತನಾಡಲು ಅನುಮತಿಸುವುದಿಲ್ಲ. ಪತ್ರಗಳನ್ನು ಕೂಡಾ ಇಂಗ್ಲಿಷ್‌ನಲ್ಲಿ ಮಾತ್ರ ಬರೆಯಲು ಅನುಮತಿ ಇದೆ. ನನ್ನ ಇಂಗ್ಲಿಷ್ ಅಷ್ಟೇನೂ ಉತ್ತಮವಾಗಿಲ್ಲದ ಕಾರಣ ನಾನು ಹೇಳಬೇಕಿರುವುದನ್ನು ವ್ಯಕ್ತಪಡಿಸಲು ಹೆಣಗಾಡುತ್ತೇನೆ. ನಾನು ಎಂದಿಗೂ ವೈಯಕ್ತಿಕ ಭಾವನೆಗಳನ್ನು ಇಂಗ್ಲಿಷ್‌ನಲ್ಲಿ ಹಂಚಿಕೊಳ್ಳಲು ಸಾಧ್ಯವಿಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಔಷಧಿ, ಪುಸ್ತಕ, ಪತ್ರಗಳ ನಿರಾಕರಣೆ: ಜೈಲಿನಲ್ಲಿ ಉಪವಾಸ ಆರಂಭಿಸಲಿರುವ ಪ್ರೊ.ಜಿ.ಎನ್ ಸಾಯಿಬಾಬಾ

“ನಾನು ಆರೋಗ್ಯದ ಬಗ್ಗೆ ಕೇಳಲು ಮಾತ್ರ ಮಾತನಾಡುತ್ತೇನೆ. ಇತರ ಕೈದಿಗಳಿಗೆ ಅವರು ಮಾತೃಭಾಷೆಯಾಗಿದ್ದರೆ ಮರಾಠಿಯನ್ನು ಮಾತನಾಡಲು ಅನುಮತಿ ಇರುವತ್ತದೆ. ಆದರೆ ಸಾಯಿಬಾಬಾ ಮತ್ತು ನನಗೆ ಮಾತ್ರ ಅವರು ಈ ಭಾಷಾ ಸಮಸ್ಯೆಯನ್ನು ಸೃಷ್ಟಿಸುತ್ತಾರೆ. ಇದು ಯಾಕೆಂದು ನನಗೆ ತಿಳಿದಿಲ್ಲ. ಪೊಲೀಸರು ನಮ್ಮ ಎಲ್ಲಾ ಸಂಭಾಷಣೆಗಳನ್ನು ರೆಕಾರ್ಡ್ ಮಾಡುತ್ತಾರೆ ಮತ್ತು ನಮ್ಮ ಎಲ್ಲಾ ಅಕ್ಷರಗಳನ್ನು ಓದುತ್ತಾರೆ. ನಾವು ಯಾವುದನ್ನೂ ಮರೆಮಾಚುತ್ತಿಲ್ಲ. ಆದರೂ ಯಾಕೆ?” ಎಂದು ವಸಂತ ಕುಮಾರಿ ಪ್ರಶ್ನಿಸಿದ್ದಾರೆ.

ಮಾವೋವಾದಿಗಳೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂಬ ಆರೋಪದ ಮೇಲೆ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 53 ವರ್ಷದ ಪ್ರಾಧ್ಯಾಪಕ, ದೆಹಲಿ ವಿಶ್ವವಿದ್ಯಾಲಯದ ರಾಮ್ ಲಾಲ್ ಆನಂದ್ ಕಾಲೇಜಿನಲ್ಲಿ ಇಂಗ್ಲಿಷ್ ಭೋಧಿಸುತ್ತಿದ್ದರು. 2014 ರಲ್ಲಿ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (UAPA) ಅಡಿಯಲ್ಲಿ ಅವರನ್ನು ಬಂಧಿಸಲಾಯಿತು.

ಡಾ. ಜಿ.ಎನ್. ಸಾಯಿಬಾಬ ಗಾಲಿಕುರ್ಚಿಯನ್ನು ಅವಲಂಭಿಸಿದ್ದು, 90% ಅಂಗವೈಕಲ್ಯದಿಂದ ಬಳಲುತ್ತಿದ್ದಾರೆ. ಅಲ್ಲದೆ ಅವರು ಕೊಮೊರ್ಬಿಡಿಟಿ( ಸಹ ಕಾಯಿಲೆ)ಗಳಿಂದ ಬಳಲುತ್ತಿದ್ದಾರೆ. ನಾಗ್ಪುರ ಜೈಲಿನಲ್ಲಿ ವೈಯಕ್ತಿಕ ಪತ್ರಗಳು, ಪುಸ್ತಕಗಳು ಮತ್ತು ಔಷಧಿಗಳನ್ನು ಸ್ವೀಕರಿಸಲು ಅವಕಾಶವಿಲ್ಲದಿದ್ದರೆ ಅಕ್ಟೋಬರ್ 21 ರಿಂದ ಉಪವಾಸ ಸತ್ಯಾಗ್ರಹ ಮಾಡುವುದಾಗಿ ಬೆದರಿಕೆ ಹಾಕಿದ್ದರು.

ಈ ಮಧ್ಯೆ, ಅವರ ಉಪವಾಸ ಸತ್ಯಾಗ್ರಹದ ಬಗ್ಗೆ ತಿಳಿಯುತ್ತಿದ್ದಂತೆ ಮಾನವ ಹಕ್ಕುಗಳ ಸಮಿತಿ ಅವರ ರಕ್ಷಣೆ ಮತ್ತು ಬಿಡುಗಡೆಗಾಗಿ ಆಗ್ರಹಿಸಿ ಪತ್ರ ಬರೆದಿದೆ.


ಇದನ್ನೂ ಓದಿ: ಜೈಲಿನ ಬಾಗಿಲು ತೆರೆಯುತ್ತದೆ, ನೀವು ನಮ್ಮ ಬಳಿಗೆ ಹಿಂತಿರುಗುತ್ತೀರಿ: ಜೈಲಲ್ಲಿರುವ ಸ್ನೇಹಿತ ಸಾಯಿಬಾಬಾಗೆ ಅರುಂಧತಿ ರಾಯ್ ಬರೆದ ಭಾವನಾತ್ಮಕ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...