Homeಚಳವಳಿಜೈಲಿನಲ್ಲಿ 10 ದಿನ ಉಪವಾಸ ಸತ್ಯಾಗ್ರಹ ಕೈಗೊಂಡ ಪ್ರೊ. ಜಿ.ಎನ್. ಸಾಯಿಬಾಬ!

ಜೈಲಿನಲ್ಲಿ 10 ದಿನ ಉಪವಾಸ ಸತ್ಯಾಗ್ರಹ ಕೈಗೊಂಡ ಪ್ರೊ. ಜಿ.ಎನ್. ಸಾಯಿಬಾಬ!

ಪುಸ್ತಕ, ಪತ್ರಿಕೆ ಮತ್ತು ಕಾಗದಗಳನ್ನು ನೀಡಬೇಕು ಎಂಬ ಬೇಡಿಕೆ ಈಡೇರಿದ ನಂತರ 10 ದಿನದಿಂದ ಕೈಗೊಂಡಿದ್ದ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ.

- Advertisement -
- Advertisement -

ಭೀಮಾ ಕೊರೊಗಾಂವ್ ಪ್ರಕರಣದಲ್ಲಿ ಬಂಧಿತರಾಗಿರುವ ನಾಗ್ಪುರದ ಕೇಂದ್ರ ಕಾರಾಗೃಹದಲ್ಲಿ ಪಾಶ್ವವಾಯು ಪೀಡಿತರಾಗಿ ಗಾಲಿಕುರ್ಚಿಯಲ್ಲೇ ಇರುವ ಮಾನವ ಹಕ್ಕು ಹೋರಾಟಗಾರ ಪ್ರೊ. ಜಿ. ಎನ್. ಸಾಯಿಬಾಬ, ತನಗೆ ಪುಸ್ತಕ, ಪತ್ರಿಕೆ ಮತ್ತು ಕಾಗದಗಳನ್ನು ನೀಡಬೇಕು ಎಂದು 10 ದಿನದಿಂದ ಕೈಗೊಂಡಿದ್ದ ಉಪವಾಸ ಸತ್ಯಾಗ್ರಹವನ್ನು ಜೈಲಿನ ಅಧಿಕಾರಿಗಳು ಅವರ ಬೇಡಿಕೆಗೆ ಒಪ್ಪಿಗೆ ಸೂಚಿಸಿದ ನಂತರ ಕೊನೆಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ.

ನವೆಂಬರ್‌ 6 ರಂದು ಅವರು “ಸಂಕ್ಷಿಪ್ತ ಕರೆ’’ ಮಾಡಿ ಈ ಬಗ್ಗೆ ತಿಳಿಸಿದ್ದು, ನಾನು ಅಘಾತಕ್ಕೊಳಗಾದೆ ಎಂದಿರುವ ಅವರ ಪತ್ನಿ ವಸಂತ ಕುಮಾರಿ, “ಅವರು 10 ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸಿದ್ದಾರೆಂದು ನನಗೆ ತಿಳಿದಿರಲಿಲ್ಲ. ಸಾಮಾನ್ಯ ದಿನಗಳಲ್ಲಿಯೂ ಅವರ ಆರೋಗ್ಯ ಉತ್ತಮವಾಗಿರಲಿಲ್ಲ. ನಾನು ತುಂಬಾ ಆತಂಕಕ್ಕೊಳಗಾಗಿದ್ದೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕ್ರಾಂತಿಕಾರಿ ರಾಜಕೀಯವನ್ನು ಜೀವನದ ಭಾಗವಾಗಿಸಿಕೊಂಡ ಡಾ.ಜಿ.ಎನ್. ಸಾಯಿಬಾಬಾ

ಕಳೆದ ತಿಂಗಳಷ್ಟೇ ಅವರೊಂದಿಗೆ ಉಪವಾಸ ಸತ್ಯಾಗ್ರಹ ಮಾಡಬಾರದು ಎಂದು ಮನವರಿಕೆ ಮಾಡಿದ್ದ ವಸಂತ ಕುಮಾರಿ, ತನಗೆ ಈ ಉಪವಾಸ ಸತ್ಯಾಗ್ರಹದ ಬಗ್ಗೆ ಯಾವುದೇ ಮಾಹಿತಿ ಇರಲಿಲ್ಲ ಎಂದು ಹೇಳಿದ್ದಾರೆ. ಸಾಯಿಬಾಬ ಅವರು ಅಕ್ಟೋಬರ್‌ 28 ರಿಂದ ನವೆಂಬರ್‌ 6 ವರೆಗೆ ಉಪವಾಸ ಸತ್ಯಾಗ್ರಹ ಮಾಡಿದ್ದಾರೆ ಎಂದು ಅವರೇ ಸ್ವತಃ ಹೇಳದ್ದಾಗಿ ವಸಂತ ಕುಮಾರಿ ಹೇಳಿದ್ದಾರೆ.

ಕೊರೊನಾ ನಿಯಮಗಳು ಜಾರಿಯಲ್ಲಿ ಇರುವುದರಿಂದ ಸಾಯಿಬಾಬಾ ಅವರನ್ನು ಭೇಟಿಯಾಗಲು ಅನುಮತಿಯಿಲ್ಲ, ಸುಧೀರ್ಘ ಉಪವಾಸ ಸತ್ಯಾಗ್ರಹದ ಕಾರಣದಿಂದ ಅವರು ಹೇಗಿದ್ದಾರೆಂದು ನನಗೆ ತಿಳಿಯುತ್ತಿಲ್ಲ ಎಂದು ವಸಂತ ಕುಮಾರಿ ಹೇಳಿದ್ದಾರೆ.

ತನ್ನ ಏಕೈಕ ಮಾಹಿತಿಯ ಮೂಲ ಮಾಧ್ಯಮವಾಗಿ ಸಾಯಿಬಾಬ ಅವರು ಅಪರೂಪದ ದೂರವಾಣಿ ಕರೆಯಾಗಿದೆ ಎನ್ನುವ ವಸಂತ ಕುಮಾರಿ, “ಪೊಲೀಸರು ಕೇವಲ ಇಂಗ್ಲಿಷ್‌‌ನಲ್ಲಿ ಮಾತ್ರ ಮಾತನಾಡಲು ಹೇಳುತ್ತಿದ್ದು, ನಮ್ಮ ಮಾತೃಭಾಷೆ ತೆಲುಗಿನಲ್ಲಿ ಆರಾಮವಾಗಿ ಮಾತನಾಡಲು ಅನುಮತಿಸುವುದಿಲ್ಲ. ಪತ್ರಗಳನ್ನು ಕೂಡಾ ಇಂಗ್ಲಿಷ್‌ನಲ್ಲಿ ಮಾತ್ರ ಬರೆಯಲು ಅನುಮತಿ ಇದೆ. ನನ್ನ ಇಂಗ್ಲಿಷ್ ಅಷ್ಟೇನೂ ಉತ್ತಮವಾಗಿಲ್ಲದ ಕಾರಣ ನಾನು ಹೇಳಬೇಕಿರುವುದನ್ನು ವ್ಯಕ್ತಪಡಿಸಲು ಹೆಣಗಾಡುತ್ತೇನೆ. ನಾನು ಎಂದಿಗೂ ವೈಯಕ್ತಿಕ ಭಾವನೆಗಳನ್ನು ಇಂಗ್ಲಿಷ್‌ನಲ್ಲಿ ಹಂಚಿಕೊಳ್ಳಲು ಸಾಧ್ಯವಿಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಔಷಧಿ, ಪುಸ್ತಕ, ಪತ್ರಗಳ ನಿರಾಕರಣೆ: ಜೈಲಿನಲ್ಲಿ ಉಪವಾಸ ಆರಂಭಿಸಲಿರುವ ಪ್ರೊ.ಜಿ.ಎನ್ ಸಾಯಿಬಾಬಾ

“ನಾನು ಆರೋಗ್ಯದ ಬಗ್ಗೆ ಕೇಳಲು ಮಾತ್ರ ಮಾತನಾಡುತ್ತೇನೆ. ಇತರ ಕೈದಿಗಳಿಗೆ ಅವರು ಮಾತೃಭಾಷೆಯಾಗಿದ್ದರೆ ಮರಾಠಿಯನ್ನು ಮಾತನಾಡಲು ಅನುಮತಿ ಇರುವತ್ತದೆ. ಆದರೆ ಸಾಯಿಬಾಬಾ ಮತ್ತು ನನಗೆ ಮಾತ್ರ ಅವರು ಈ ಭಾಷಾ ಸಮಸ್ಯೆಯನ್ನು ಸೃಷ್ಟಿಸುತ್ತಾರೆ. ಇದು ಯಾಕೆಂದು ನನಗೆ ತಿಳಿದಿಲ್ಲ. ಪೊಲೀಸರು ನಮ್ಮ ಎಲ್ಲಾ ಸಂಭಾಷಣೆಗಳನ್ನು ರೆಕಾರ್ಡ್ ಮಾಡುತ್ತಾರೆ ಮತ್ತು ನಮ್ಮ ಎಲ್ಲಾ ಅಕ್ಷರಗಳನ್ನು ಓದುತ್ತಾರೆ. ನಾವು ಯಾವುದನ್ನೂ ಮರೆಮಾಚುತ್ತಿಲ್ಲ. ಆದರೂ ಯಾಕೆ?” ಎಂದು ವಸಂತ ಕುಮಾರಿ ಪ್ರಶ್ನಿಸಿದ್ದಾರೆ.

ಮಾವೋವಾದಿಗಳೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂಬ ಆರೋಪದ ಮೇಲೆ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 53 ವರ್ಷದ ಪ್ರಾಧ್ಯಾಪಕ, ದೆಹಲಿ ವಿಶ್ವವಿದ್ಯಾಲಯದ ರಾಮ್ ಲಾಲ್ ಆನಂದ್ ಕಾಲೇಜಿನಲ್ಲಿ ಇಂಗ್ಲಿಷ್ ಭೋಧಿಸುತ್ತಿದ್ದರು. 2014 ರಲ್ಲಿ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (UAPA) ಅಡಿಯಲ್ಲಿ ಅವರನ್ನು ಬಂಧಿಸಲಾಯಿತು.

ಡಾ. ಜಿ.ಎನ್. ಸಾಯಿಬಾಬ ಗಾಲಿಕುರ್ಚಿಯನ್ನು ಅವಲಂಭಿಸಿದ್ದು, 90% ಅಂಗವೈಕಲ್ಯದಿಂದ ಬಳಲುತ್ತಿದ್ದಾರೆ. ಅಲ್ಲದೆ ಅವರು ಕೊಮೊರ್ಬಿಡಿಟಿ( ಸಹ ಕಾಯಿಲೆ)ಗಳಿಂದ ಬಳಲುತ್ತಿದ್ದಾರೆ. ನಾಗ್ಪುರ ಜೈಲಿನಲ್ಲಿ ವೈಯಕ್ತಿಕ ಪತ್ರಗಳು, ಪುಸ್ತಕಗಳು ಮತ್ತು ಔಷಧಿಗಳನ್ನು ಸ್ವೀಕರಿಸಲು ಅವಕಾಶವಿಲ್ಲದಿದ್ದರೆ ಅಕ್ಟೋಬರ್ 21 ರಿಂದ ಉಪವಾಸ ಸತ್ಯಾಗ್ರಹ ಮಾಡುವುದಾಗಿ ಬೆದರಿಕೆ ಹಾಕಿದ್ದರು.

ಈ ಮಧ್ಯೆ, ಅವರ ಉಪವಾಸ ಸತ್ಯಾಗ್ರಹದ ಬಗ್ಗೆ ತಿಳಿಯುತ್ತಿದ್ದಂತೆ ಮಾನವ ಹಕ್ಕುಗಳ ಸಮಿತಿ ಅವರ ರಕ್ಷಣೆ ಮತ್ತು ಬಿಡುಗಡೆಗಾಗಿ ಆಗ್ರಹಿಸಿ ಪತ್ರ ಬರೆದಿದೆ.


ಇದನ್ನೂ ಓದಿ: ಜೈಲಿನ ಬಾಗಿಲು ತೆರೆಯುತ್ತದೆ, ನೀವು ನಮ್ಮ ಬಳಿಗೆ ಹಿಂತಿರುಗುತ್ತೀರಿ: ಜೈಲಲ್ಲಿರುವ ಸ್ನೇಹಿತ ಸಾಯಿಬಾಬಾಗೆ ಅರುಂಧತಿ ರಾಯ್ ಬರೆದ ಭಾವನಾತ್ಮಕ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...