Homeಕರ್ನಾಟಕಕಾರ್ಖಾನೆಯಲ್ಲಿ ಬೆಂಕಿ ಅವಘಡ; ಮೃತ ದೇಹದ ಅವಶೇಷಗಳನ್ನು ಕೈಚೀಲದಲ್ಲಿ ಹಾಕಿಕೊಟ್ಟ ಅಧಿಕಾರಿಗಳು

ಕಾರ್ಖಾನೆಯಲ್ಲಿ ಬೆಂಕಿ ಅವಘಡ; ಮೃತ ದೇಹದ ಅವಶೇಷಗಳನ್ನು ಕೈಚೀಲದಲ್ಲಿ ಹಾಕಿಕೊಟ್ಟ ಅಧಿಕಾರಿಗಳು

- Advertisement -
- Advertisement -

ಆಗಸ್ಟ್ 6 ರಂದು ರಾತ್ರಿ ಬೆಳಗಾವಿ ಜಿಲ್ಲೆಯ ನವಗೆ ಎಂಬಲ್ಲಿ ಖಾಸಗಿ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಓರ್ವ ಸಾವನ್ನಪ್ಪಿದ್ದು, ಮೂವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತ ಯುವಕನ ಶವದ ಅವಶೇಷಗಳನ್ನು ಜಿಲ್ಲಾಡಳಿತ ಕೈಚೀಲದಲ್ಲಿ ಹಾಕಿಕೊಟ್ಟಿರುವ ಅಮಾನವೀಯ ಘಟನೆಗೆ ಈ ಪ್ರಕರಣ ಸಾಕ್ಷಿಯಾಗಿದೆ.

ಮೃತ ಕಾರ್ಮಿಕ 20 ವರ್ಷದ ಯಲ್ಲಪ್ಪ ಸಣ್ಣಗೌಡ ಗುಂಡ್ಯಾಗೋಳ ಎಂಬುವವರಾಗಿದ್ದು, ಅವರ ಶವದ ಅವಶೇಷಗಳನ್ನು ಕೈಚೀಲದಲ್ಲಿ ತುಂಬಿಸಿ ತಂದೆಗೆ ಹಸ್ತಾಂತರಿಸಲಾಗಿದೆ. ಮೃತ ಯುವಕನಿಗೆ ಕನಿಷ್ಠ ಮಟ್ಟದ ಗೌರವ ನೀಡದ, ಶವ ಸಾಗಾಣೆಗೆ ವಾಹನ ವ್ಯವಸ್ಥೆ ಮಾಡದ ಜಿಲ್ಲಾಡಳಿತದ ವರ್ತನೆಗೆ ಆಕ್ರೋಶ ವ್ಯಕ್ತವಾಗಿದೆ.

ಘಟನೆ ಹಿನ್ನೆಲೆ:

ಟೇಪ್ ತಯಾರಿಸುವ ಸ್ನೇಹಾ ಇಂಡಸ್ಟ್ರೀಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಕೆಲವು ಕಾರ್ಮಿಕರು ದೂರಿದ ನಂತರ ಅಗ್ನಿಶಾಮಕ ಮತ್ತು ತುರ್ತು ಸಿಬ್ಬಂದಿ ಬೆಳಗಾವಿಯ ಹೊರವಲಯದಲ್ಲಿರುವ ನಾವಜ್ ಇಂಡಸ್ಟ್ರಿಯಲ್ ಏರಿಯಾಕ್ಕೆ ಧಾವಿಸಿದರು. ಎಲಿವೇಟರ್ ಶಾಫ್ಟ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಶಂಕಿಸಲಾಗಿದೆ. ಇದು ಕಾರ್ಖಾನೆಯಲ್ಲಿ ಹರಡಿದ್ದು, ಎಲ್ಲಾ ದಹಿಸುವ ವಸ್ತುಗಳು ಸುಟ್ಟುಹೋಗಿವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಪಘಾತದ ಸಮಯದಲ್ಲಿ ಕಾರ್ಖಾನೆಯಲ್ಲಿ ಸುಮಾರು 20 ಕಾರ್ಮಿಕರು ಇದ್ದರು. ಹೆಚ್ಚಿನವರು ಹೊರಗೆ ಧಾವಿಸಿದರು. ಆದರೆ ಕೆಲವರು ಸಿಕ್ಕಿಬಿದ್ದು ಸುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಜಿಲ್ಲಾ ಸಿವಿಲ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮಂಗಳವಾರ ರಾತ್ರಿ ಈ ಅಪಘಾತ ಸಂಭವಿಸಿದ್ದು, ಶಂಕಿತ ಶಾರ್ಟ್ ಸರ್ಕ್ಯೂಟ್‌ನಿಂದ ಲಿಫ್ಟ್ ಶಾಫ್ಟ್‌ನಲ್ಲಿ ಕಿಡಿ ಹೊತ್ತಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜ್ಯ ವಿಪತ್ತು ನಿರ್ವಹಣಾ ಪಡೆಯ ತಂಡವು ಲಿಫ್ಟ್‌ನಲ್ಲಿ ಸಿಲುಕಿದ್ದ ಯಲ್ಲಪ್ಪ ಗುಂಡ್ಯಗೋಳ್ ಅವರ ಸುಟ್ಟ ಅವಶೇಷಗಳನ್ನು ಪತ್ತೆ ಮಾಡಿದೆ. ಇತರ ಮೂವರು- ಕಾವಲವಾಡಿಯ ಮಾರುತಿ ನಾರಾಯಣ ಕರವೇಕರ (32), ಬೆಳಗಾವಿಯ ಯಲ್ಲಪ್ಪ ಪ್ರಕಾಶ ಸಾಲಗೂಡು, 35 ಮತ್ತು ರಾಜವಾಡಿಯ ರಂಜಿತ್ ದಶರತ್ ಪಾಟೀಲ್, 39 ಗಂಭೀರ ಗಾಯಗೊಂಡಿದ್ದರಿಂದ ಅವರನ್ನು ಕೆಎಲ್‌ಇ ಆಸ್ಪತ್ರೆಗೆ ರವಾನಿಸಲಾಗಿದೆ. ರಾತ್ರಿ ಪಾಳಿಯಲ್ಲಿ ಕನಿಷ್ಠ 74 ಮಂದಿ ಕೆಲಸ ಮಾಡುತ್ತಿದ್ದರು. ಬೆಂಕಿಯ ಸಮಯದಲ್ಲಿ ಸುಮಾರು 20 ಮಂದಿ ಓಡಿಹೋದರು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ; ‘ನೀವು ಯಾವಾಗಲೂ ನಮ್ಮ ಚಾಂಪಿಯನ್ ಆಗಿರುತ್ತೀರಿ..’; ವಿನೇಶಾ ಅನರ್ಹತೆ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಯುವಕನ ಕಸ್ಟಡಿ ಸಾವು ಆರೋಪ : ರಾಜ್ಯ ಸರ್ಕಾರ, ಪೊಲೀಸರು, ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಹೈಕೋರ್ಟ್ ನೋಟಿಸ್

ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್‌) ಕರ್ನಾಟಕ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)ಗೆ ಸಂಬಂಧಿಸಿದಂತೆ ಹೈಕೋರ್ಟ್ ಬುಧವಾರ (ಏ.8) ರಾಜ್ಯ ಸರ್ಕಾರ, ಪೊಲೀಸರು ಮತ್ತು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ...

ಇಬ್ಬರು ಮಕ್ಕಳ ಸಾವಿನ ಬಳಿಕ ಮಣಿಪುರದಲ್ಲಿ ಭುಗಿಲೆದ್ದ ಪ್ರತಿಭಟನೆ; ಅಶ್ರುವಾಯು ಪ್ರಯೋಗಿಸಿದ ಪೊಲೀಸರು

ಏಪ್ರಿಲ್ 7 ರಂದು ಬಿಷ್ಣುಪುರ ಜಿಲ್ಲೆಯಲ್ಲಿ ಬಾಂಬ್ ದಾಳಿಯಲ್ಲಿ ಇಬ್ಬರು ಅಪ್ರಾಪ್ತ ಮಕ್ಕಳು ಸಾವನ್ನಪ್ಪಿದ ನಂತರ ಕಣಿವೆ ರಾಜ್ಯದಲ್ಲಿ ವ್ಯಾಪಕ ಪ್ರತಿಭಟನೆಗಳು ಭುಗಿಲೆದ್ದ ಕಾರಣ ಬುಧವಾರ (ಏಪ್ರಿಲ್ 8) ಮಣಿಪುರದಾದ್ಯಂತ ಉದ್ವಿಗ್ನತೆ ಉಂಟಾಗಿತ್ತು....

ಮತಕ್ಕಾಗಿ ನಗದು ಪ್ರಕರಣ: ಪಾಲಕ್ಕಾಡ್‌ನಲ್ಲಿ ಎನ್‌ಡಿಎ ಕಾರ್ಯಕರ್ತರ ವಿರುದ್ಧ ಎಫ್‌ಐಆರ್

ಮತದಾನದ ಒಂದು ದಿನಕ್ಕೆ ಮುಂಚಿತವಾಗಿ ಮತದಾರರಿಗೆ ಲಂಚ ನೀಡಿದ ಆರೋಪದ ಮೇಲೆ ಪಾಲಕ್ಕಾಡ್ ಕ್ಷೇತ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಪ್ರತಿನಿಧಿಗಳ ವಿರುದ್ಧ ಬುಧವಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಏಪ್ರಿಲ್ 8 ರಂದು ಬೆಳಿಗ್ಗೆ 10...

ಮಾದಕ ವ್ಯಸನ : 10 ವರ್ಷದಲ್ಲಿ ಐವರು ಗಂಡು ಮಕ್ಕಳನ್ನು ಕಳೆದುಕೊಂಡ ವೃದ್ಧ ದಂಪತಿ

ಡ್ರಗ್ ಕಾರಣದಿಂದ ವೃದ್ದ ದಂಪತಿ ತನ್ನ ಐವರು ಗಂಡು ಮಕ್ಕಳನ್ನು ಕಳೆದುಕೊಂಡ ಹೃದಯ ವಿದ್ರಾವಕ ಮತ್ತು ಆಘಾತಕಾರಿ ವರದಿ ಪಂಜಾಬ್‌ನ ಕಪುರ್ಥಲಾ ಜಿಲ್ಲೆಯ ಸುಲ್ತಾನ್‌ಪುರ ಲೋಧಿಯಿಂದ ಬಂದಿದೆ. ಸುಲ್ತಾನ್‌ಪುರ ಲೋಧಿಯ ಪಂಡೋರಿ ಮೊಹಲ್ಲಾ ಎಂಬ ಪ್ರದೇಶದಲ್ಲಿ ವಾಸಿಸುತ್ತಿರುವ...

ಜಮ್ಮು-ಕಾಶ್ಮೀರ: 28 ವರ್ಷಗಳ ಕಾಲ ಸೇನಾ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ಘೋಷಿಸಿದ ಶ್ರೀನಗರ ನ್ಯಾಯಾಲಯ

1997 ರಲ್ಲಿ ಸೇನಾ ಕಸ್ಟಡಿಗೆ ತೆಗೆದುಕೊಂಡ ಸುಮಾರು 28 ವರ್ಷಗಳ ನಂತರ ಶ್ರೀನಗರ ನ್ಯಾಯಾಲಯವು ಒಬ್ಬ ವ್ಯಕ್ತಿಯನ್ನು ಸತ್ತನೆಂದು ಘೋಷಿಸಿದೆ. ಬಂಧನದಲ್ಲಿದ್ದಾಗ ಕೊಲ್ಲಲ್ಪಟ್ಟಿದ್ದಾನೆ ಎಂಬ ತನಿಖಾ ಸಂಶೋಧನೆಗಳನ್ನು ಉಲ್ಲೇಖಿಸಿ ಮತ್ತು ಸಾವಿನ ಕಾನೂನುಬದ್ಧ...

ದೆಹಲಿ: ವೇತನ ಕೇಳಿದ್ದಕ್ಕೆ ಅಪಾಯಕಾರಿ ಚರಂಡಿ ಸ್ವಚ್ಛಗೊಳಿಸಲು ಒತ್ತಾಯ; ಸುರಕ್ಷತಾ ಸಾಧನಗಳಿಲ್ಲದೆ ಚರಂಡಿಗಿಳಿದ ನೈರ್ಮಲ್ಯ ಕಾರ್ಮಿಕ ಸಾವು

ವಾಲ್ಮೀಕಿ ಸಮುದಾಯದ ಗುತ್ತಿಗೆ ನೈರ್ಮಲ್ಯ ಕಾರ್ಮಿಕ ರಾಹುಲ್ (32) ಮಾರ್ಚ್ 30 ರಂದು ದಿಲ್ಶಾದ್ ಗಾರ್ಡನ್‌ನ ತಹಿರ್‌ಪುರದಲ್ಲಿ 8 ರಿಂದ 10 ಅಡಿ ಆಳದ ಚರಂಡಿಯನ್ನು ಹಸ್ತಚಾಲಿತವಾಗಿ ಹೂಳು ತೆಗೆಯುವಾಗ ಯಾವುದೇ ಸುರಕ್ಷತಾ...

ಗಾಝಾ | ಇಸ್ರೇಲ್ ದಾಳಿಯಲ್ಲಿ ಅಲ್‌-ಜಝೀರಾ ಪತ್ರಕರ್ತ ಸಾವು : ತೀವ್ರ ಖಂಡನೆ ವ್ಯಕ್ತಪಡಿಸಿದ ಮಾಧ್ಯಮ ಸಂಸ್ಥೆ

ಗಾಝಾ ಪಟ್ಟಿಯಲ್ಲಿ ಇಸ್ರೇಲ್ ನಡೆಸಿದ ಡ್ರೋನ್ ದಾಳಿಯಲ್ಲಿ ಅಲ್-ಜಝೀರಾ ಮಾಧ್ಯಮ ಸಂಸ್ಥೆಯ ಪತ್ರಕರ್ತ ಮೊಹಮ್ಮದ್ ವಿಶಾಹ್ ಸಾವನ್ನಪ್ಪಿದ್ದಾರೆ. ಗಾಝಾ ನಗರದ ಪಶ್ಚಿಮ ಭಾಗದಲ್ಲಿರುವ ಕರಾವಳಿ ರಸ್ತೆಯಾದ ಅಲ್-ರಶೀದ್ ಸ್ಟ್ರೀಟ್‌ನಲ್ಲಿ ಬುಧವಾರ (ಏ.8) ಕಾರಿನ...

ಅಸ್ಸಾಂ : ಮತದಾನದ ಹಿಂದಿನ ದಿನ ಪಕ್ಷಕ್ಕೆ ರಾಜೀನಾಮೆ ನೀಡಿದ ಕಾಂಗ್ರೆಸ್ ಅಭ್ಯರ್ಥಿ!

ಅಸ್ಸಾಂ ವಿಧಾನಸಭೆ ಚುನಾವಣೆಗೆ ಕೇವಲ ಒಂದು ದಿನ ಬಾಕಿ ಇರುವಾಗ, ಉದಲ್ಗುರಿ (ಎಸ್‌ಟಿ) ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುರೇನ್ ದೈಮರಿ ಅವರು ಪಕ್ಷಕ್ಕೆ ರಾಜೀನಾಮೆ ನೀಡಿ ತಮ್ಮ ಉಮೇದುವಾರಿಕೆಯನ್ನು ಹಿಂಪಡೆದಿದ್ದಾರೆ ಎಂದು ವರದಿಯಾಗಿದೆ. ಪಕ್ಷದ ನಾಯಕತ್ವದಿಂದ...

ವಿಧಾನಸಭೆ ಚುನಾವಣೆ : ಅಸ್ಸಾಂ, ಕೇರಳ, ಪುದುಚೇರಿಯಲ್ಲಿ ಇಂದು ಮತದಾನ

ಅಸ್ಸಾಂ, ಕೇರಳ ಮತ್ತು ಪುದುಚೇರಿ ವಿಧಾನಸಭೆಯ ಚುನಾವಣೆಯ ಮತದಾನ ಇಂದು (ಏ.9, 2026) ಒಂದೇ ಹಂತದಲ್ಲಿ ನಡೆಯಲಿದೆ. ಈಗಾಗಲೇ ಮತದಾನ ಆರಂಭಗೊಂಡಿದೆ. ಅಸ್ಸಾಂನ 126 ಸದಸ್ಯ ಬಲದ ವಿಧಾನಸಭೆಗೆ ನಡೆಯಲಿರುವ ಚುನಾವಣೆಯು...

‘ಯುದ್ಧ ಮುಂದುವರಿಸಲು ಸಾಧ್ಯವಾಗದೆ ಅಮೆರಿಕ ಬಲವಂತವಾಗಿ ಕದನ ವಿರಾಮ ಘೋಷಿಸಿತು’: ಭಾರತದಲ್ಲಿ ಇರಾನ್ ಸುಪ್ರೀಂ ಲೀಡರ್ ಪ್ರತಿನಿಧಿ

ನವದೆಹಲಿ: ಸಂಘರ್ಷವನ್ನು ಮುುಂದುವರಿಸಲು ವಿಫಲವಾದ ನಂತರ ಅಮೆರಿಕವು ಇರಾನ್ ಜೊತೆ ಕದನ ವಿರಾಮ ಘೋಷಿಸಲು ಒತ್ತಾಯಿಸಲ್ಪಟ್ಟಿತು ಮತ್ತು ನಿರಂತರ ಹಗೆತನವು ವಾಷಿಂಗ್ಟನ್‌ಗೆ ಮತ್ತಷ್ಟು ಹಿನ್ನಡೆಗೆ ಕಾರಣವಾಗುತ್ತಿತ್ತು ಎಂದು ಇರಾನ್‌ನ ಸರ್ವೋಚ್ಚ ನಾಯಕನ ಭಾರತದಲ್ಲಿನ...