Homeಕರ್ನಾಟಕಕಾರ್ಖಾನೆಯಲ್ಲಿ ಬೆಂಕಿ ಅವಘಡ; ಮೃತ ದೇಹದ ಅವಶೇಷಗಳನ್ನು ಕೈಚೀಲದಲ್ಲಿ ಹಾಕಿಕೊಟ್ಟ ಅಧಿಕಾರಿಗಳು

ಕಾರ್ಖಾನೆಯಲ್ಲಿ ಬೆಂಕಿ ಅವಘಡ; ಮೃತ ದೇಹದ ಅವಶೇಷಗಳನ್ನು ಕೈಚೀಲದಲ್ಲಿ ಹಾಕಿಕೊಟ್ಟ ಅಧಿಕಾರಿಗಳು

- Advertisement -
- Advertisement -

ಆಗಸ್ಟ್ 6 ರಂದು ರಾತ್ರಿ ಬೆಳಗಾವಿ ಜಿಲ್ಲೆಯ ನವಗೆ ಎಂಬಲ್ಲಿ ಖಾಸಗಿ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಓರ್ವ ಸಾವನ್ನಪ್ಪಿದ್ದು, ಮೂವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತ ಯುವಕನ ಶವದ ಅವಶೇಷಗಳನ್ನು ಜಿಲ್ಲಾಡಳಿತ ಕೈಚೀಲದಲ್ಲಿ ಹಾಕಿಕೊಟ್ಟಿರುವ ಅಮಾನವೀಯ ಘಟನೆಗೆ ಈ ಪ್ರಕರಣ ಸಾಕ್ಷಿಯಾಗಿದೆ.

ಮೃತ ಕಾರ್ಮಿಕ 20 ವರ್ಷದ ಯಲ್ಲಪ್ಪ ಸಣ್ಣಗೌಡ ಗುಂಡ್ಯಾಗೋಳ ಎಂಬುವವರಾಗಿದ್ದು, ಅವರ ಶವದ ಅವಶೇಷಗಳನ್ನು ಕೈಚೀಲದಲ್ಲಿ ತುಂಬಿಸಿ ತಂದೆಗೆ ಹಸ್ತಾಂತರಿಸಲಾಗಿದೆ. ಮೃತ ಯುವಕನಿಗೆ ಕನಿಷ್ಠ ಮಟ್ಟದ ಗೌರವ ನೀಡದ, ಶವ ಸಾಗಾಣೆಗೆ ವಾಹನ ವ್ಯವಸ್ಥೆ ಮಾಡದ ಜಿಲ್ಲಾಡಳಿತದ ವರ್ತನೆಗೆ ಆಕ್ರೋಶ ವ್ಯಕ್ತವಾಗಿದೆ.

ಘಟನೆ ಹಿನ್ನೆಲೆ:

ಟೇಪ್ ತಯಾರಿಸುವ ಸ್ನೇಹಾ ಇಂಡಸ್ಟ್ರೀಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಕೆಲವು ಕಾರ್ಮಿಕರು ದೂರಿದ ನಂತರ ಅಗ್ನಿಶಾಮಕ ಮತ್ತು ತುರ್ತು ಸಿಬ್ಬಂದಿ ಬೆಳಗಾವಿಯ ಹೊರವಲಯದಲ್ಲಿರುವ ನಾವಜ್ ಇಂಡಸ್ಟ್ರಿಯಲ್ ಏರಿಯಾಕ್ಕೆ ಧಾವಿಸಿದರು. ಎಲಿವೇಟರ್ ಶಾಫ್ಟ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಶಂಕಿಸಲಾಗಿದೆ. ಇದು ಕಾರ್ಖಾನೆಯಲ್ಲಿ ಹರಡಿದ್ದು, ಎಲ್ಲಾ ದಹಿಸುವ ವಸ್ತುಗಳು ಸುಟ್ಟುಹೋಗಿವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಪಘಾತದ ಸಮಯದಲ್ಲಿ ಕಾರ್ಖಾನೆಯಲ್ಲಿ ಸುಮಾರು 20 ಕಾರ್ಮಿಕರು ಇದ್ದರು. ಹೆಚ್ಚಿನವರು ಹೊರಗೆ ಧಾವಿಸಿದರು. ಆದರೆ ಕೆಲವರು ಸಿಕ್ಕಿಬಿದ್ದು ಸುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಜಿಲ್ಲಾ ಸಿವಿಲ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮಂಗಳವಾರ ರಾತ್ರಿ ಈ ಅಪಘಾತ ಸಂಭವಿಸಿದ್ದು, ಶಂಕಿತ ಶಾರ್ಟ್ ಸರ್ಕ್ಯೂಟ್‌ನಿಂದ ಲಿಫ್ಟ್ ಶಾಫ್ಟ್‌ನಲ್ಲಿ ಕಿಡಿ ಹೊತ್ತಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜ್ಯ ವಿಪತ್ತು ನಿರ್ವಹಣಾ ಪಡೆಯ ತಂಡವು ಲಿಫ್ಟ್‌ನಲ್ಲಿ ಸಿಲುಕಿದ್ದ ಯಲ್ಲಪ್ಪ ಗುಂಡ್ಯಗೋಳ್ ಅವರ ಸುಟ್ಟ ಅವಶೇಷಗಳನ್ನು ಪತ್ತೆ ಮಾಡಿದೆ. ಇತರ ಮೂವರು- ಕಾವಲವಾಡಿಯ ಮಾರುತಿ ನಾರಾಯಣ ಕರವೇಕರ (32), ಬೆಳಗಾವಿಯ ಯಲ್ಲಪ್ಪ ಪ್ರಕಾಶ ಸಾಲಗೂಡು, 35 ಮತ್ತು ರಾಜವಾಡಿಯ ರಂಜಿತ್ ದಶರತ್ ಪಾಟೀಲ್, 39 ಗಂಭೀರ ಗಾಯಗೊಂಡಿದ್ದರಿಂದ ಅವರನ್ನು ಕೆಎಲ್‌ಇ ಆಸ್ಪತ್ರೆಗೆ ರವಾನಿಸಲಾಗಿದೆ. ರಾತ್ರಿ ಪಾಳಿಯಲ್ಲಿ ಕನಿಷ್ಠ 74 ಮಂದಿ ಕೆಲಸ ಮಾಡುತ್ತಿದ್ದರು. ಬೆಂಕಿಯ ಸಮಯದಲ್ಲಿ ಸುಮಾರು 20 ಮಂದಿ ಓಡಿಹೋದರು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ; ‘ನೀವು ಯಾವಾಗಲೂ ನಮ್ಮ ಚಾಂಪಿಯನ್ ಆಗಿರುತ್ತೀರಿ..’; ವಿನೇಶಾ ಅನರ್ಹತೆ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಹಮದಾಬಾದ್‌ನಲ್ಲಿ ಪುಸ್ತಕ ಓದುಗರ ಮೇಲೆ ಭಜರಂಗದಳ ದೌರ್ಜನ್ಯ: ಮಲಾಲಾ, ಆನ್ ಫ್ರಾಂಕ್ ಕೃತಿಗಳಿಗೆ ವಿರೋಧಿಸಿ ಬೆದರಿಕೆ!

ಗುಜರಾತ್‌ನ ಅಹಮದಾಬಾದ್‌ನಲ್ಲಿ ಸಾಹಿತ್ಯಾಭಿಮಾನಿಗಳ ಮೇಲೆ ಭಜರಂಗದಳ ಕಾರ್ಯಕರ್ತರು ಭೀಕರ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ನಗರದ ಸಾರ್ವಜನಿಕ ಉದ್ಯಾನವನವೊಂದರಲ್ಲಿ ನೊಬೆಲ್ ಶಾಂತಿ ಪ್ರಶಸ್ತಿ ವಿಜೇತೆ ಮಲಾಲಾ ಯೂಸಫ್‌ಜೈ ಹಾಗೂ ವಿಶ್ವಪ್ರಸಿದ್ಧ ಲೇಖಕಿ ಆನ್...

ಉಮರ್ ಖಾಲಿದ್ – ಶಾರ್ಜೀಲ್ ಇಮಾಮ್ ಜಾಮೀನಿಗೆ ದೆಹಲಿ ಪೊಲೀಸರ ವಿರೋಧ

2020ರ ಈಶಾನ್ಯ ದೆಹಲಿ ಕೋಮು ಗಲಭೆಯ ಹಿಂದಿನ ಪ್ರಮುಖ ಸಂಚುಕೋರರು ಎಂದು ಆರೋಪಿಸಿರುವ ದೆಹಲಿ ಪೊಲೀಸರು, ಕಾರಾಗೃಹದಲ್ಲಿರುವ ವಿದ್ಯಾರ್ಥಿ ಕಾರ್ಯಕರ್ತರಾದ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರ ಜಾಮೀನು ಅರ್ಜಿಗಳನ್ನು ದೆಹಲಿ...

‘ಆರ್‌ಎಸ್‌ಎಸ್-ಬಿಜೆಪಿಯ ರಕ್ತನಾಳಗಳಲ್ಲಿ ತಾರತಮ್ಯ ಹರಿಯುತ್ತಿದೆ’: ಖರ್ಗೆ ರ್ಯಾಲಿ ಸ್ಥಳದ ‘ಶುದ್ಧೀಕರಣ’ ಸಮರ್ಥಿಸಿಕೊಂಡ ಉತ್ತರಾಖಂಡ ಬಿಜೆಪಿ ರಾಜ್ಯಾಧ್ಯಕ್ಷನ ವಿರುದ್ಧ ಕಾಂಗ್ರೆಸ್ ಕಿಡಿ

ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆಯ ನಂತರ ಉತ್ತರಾಖಂಡದ ಹಲ್ದ್ವಾನಿಯಲ್ಲಿ ನಡೆದ ಸ್ಥಳೀಯ ‘ಶುದ್ಧೀಕರಣ’ ಸಮಾರಂಭದ ಸುತ್ತಲಿನ ರಾಜಕೀಯ ವಿವಾದವು ತೀವ್ರ ಸ್ವರೂಪ...

ಯುಜಿಸಿಇಟಿ ಸೀಟು ರದ್ದುಗೊಳಿಸಲು ರೂ.5,000 ಶುಲ್ಕ; ಕೆಇಎ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ

ಯುಜಿಸಿಇಟಿ 2026ರ ಎರಡನೇ ಹಂತದ ಕೌನ್ಸಿಲಿಂಗ್‌ನಲ್ಲಿ ಹಂಚಿಕೆಯಾದ ಸೀಟುಗಳನ್ನು ರದ್ದುಗೊಳಿಸಲು ಇಚ್ಛಿಸುವ ಅಭ್ಯರ್ಥಿಗಳಿಗೆ ರೂ.5,000 ದಂಡ ವಿಧಿಸುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ನಿರ್ಧಾರವನ್ನು ವಿರೋಧಿಸಿ ವಿದ್ಯಾರ್ಥಿಗಳು ಮತ್ತು ಪೋಷಕರು ಮಲ್ಲೇಶ್ವರದಲ್ಲಿರುವ ಕೆಇಎ...

162 ವರ್ಷಗಳ ಇತಿಹಾಸದಲ್ಲೇ ಪ್ರಥಮ: ಬಾಂಬೆ ಹೈಕೋರ್ಟ್ ವಕೀಲರ ಸಂಘಕ್ಕೆ ಮಹಿಳಾ ಅಧ್ಯಕ್ಷೆ! 

ಮುಂಬೈ: ಭಾರತೀಯ ನ್ಯಾಯಾಂಗ ರಂಗದ ಇತಿಹಾಸದಲ್ಲಿ ಅತ್ಯಂತ ಮಹತ್ವದ ಮತ್ತು ಕ್ರಾಂತಿಕಾರಿ ನಿರ್ಧಾರವೊಂದನ್ನು ಬಾಂಬೆ ಹೈಕೋರ್ಟ್‌ನ ಪ್ರತಿಷ್ಠಿತ ವಕೀಲರ ಸಂಘಟನೆಯಾದ 'ಅಸೋಸಿಯೇಷನ್‌ ಆಫ್‌ ಅಡ್ವೊಕೇಟ್ಸ್‌ ಆಫ್‌ ವೆಸ್ಟರ್ನ್ ಇಂಡಿಯಾ' (AAWI) ಕೈಗೊಂಡಿದೆ ಎಂದು...

ಫ್ರೀಡಂ ಪಾರ್ಕ್‌: ಧರಣಿಗೆ 1 ಲಕ್ಷ ರೂ. ಶುಲ್ಕ? ಜಿಬಿಎ ನಡೆಗೆ ಹೋರಾಟಗಾರರ ಆಕ್ರೋಶ

ಬೆಂಗಳೂರಿನ ಐತಿಹಾಸಿಕ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಹಾಗೂ ಧರಣಿ ನಡೆಸಲು ದಿನಕ್ಕೆ 1 ಲಕ್ಷ ರೂ. ಶುಲ್ಕ ಮತ್ತು 10,000 ರೂ. ಮುಂಗಡ ಠೇವಣಿ ವಿಧಿಸಲಾಗುತ್ತಿದೆ ಎಂಬ ಸುದ್ದಿ ಸಾರ್ವಜನಿಕ ಹಾಗೂ ಹೋರಾಟಗಾರರ...

ಅಧಿಕಾರದಲ್ಲಿರುವವರ ವಿರುದ್ಧ ಮಾತನಾಡುವ ಭಯವನ್ನು ನೀಟ್ ಚಳವಳಿ ಹೋಗಲಾಡಿಸಿದೆ: ನೇಹಾ ಬೋರಾ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ 'ಜೆನ್ ಜಿ' ಚಳವಳಿಯು ಜನರಲ್ಲಿದ್ದ ಭಯವನ್ನು ಹೋಗಲಾಡಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಹಾಗೂ ಆರ್‌ಎಸ್‌ಎಸ್‌ನವರು ವಿದ್ಯಾರ್ಥಿ ಮತ್ತು ಯುವಜನರನ್ನು ತಲುಪುವಂತೆ ಮಾಡಿದೆ ಎಂದು ಆಲ್...

Karnataka SIR : ನಿರ್ದೋಷಿ ಜನರೇಕೆ ದಾಖಲೆಗಾಗಿ ಅಲೆದಾಡಬೇಕು? ಲಾಜಿಕಲ್ ಡಿಸ್ಕ್ರಿಪೆನ್ಸಿ ನೋಟಿಸ್‌ಗೆ ನಾಗರಿಕ ಸಂಘಟನೆಗಳ ಆಕ್ಷೇಪ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಭಾಗವಾಗಿ ಮತದಾರರಿಗೆ ನೋಟಿಸ್ ನೀಡಲು ಮುಂದಾಗಿರುವ ಚುನಾವಣಾ ಆಯೋಗದ ಕ್ರಮವನ್ನು ನಾಗರಿಕ ಸಂಘಟನೆಗಳು ತೀವ್ರವಾಗಿ ವಿರೋಧಿಸಿವೆ. ಆಗಸ್ಟ್ 25ರಂದು ಎಸ್‌ಐಆರ್‌ಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗದ...

ಮಳೆಯೇ ಇಲ್ಲದೆ ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹಕ್ಕೆ ಕಾರಣವೇನು?

ನೇಪಾಳ-ಟಿಬೆಟ್ ಗಡಿಭಾಗದ ಹಿಮಾಲಯ ಪ್ರದೇಶದಲ್ಲಿ ಹಿಮನದಿ ಇದ್ದಕ್ಕಿದ್ದಂತೆ ಕರಗಿ ಕುಸಿದ ಪರಿಣಾಮ ಭೀಕರ ಪ್ರವಾಹ ಉಂಟಾಗಿದೆ. ಈ ವಿಕೋಪದಲ್ಲಿ ಇದುವರೆಗೆ 160ಕ್ಕೂ ಹೆಚ್ಚು ಜನರು ಮೃತಪಟ್ಟಿರುವುದು ದೃಢಪಟ್ಟಿದ್ದು, 800ಕ್ಕೂ ಹೆಚ್ಚು ವಿದೇಶಿ ಪ್ರವಾಸಿಗರು...

ರಾಹುಲ್ ಗಾಂಧಿ ಅವರ ‘ಛಾತ್ರೋನ್ ಕೀ ಗೂಂಜ್’ಗೆ ಹೇಳಿಕೆಗಳ ಫ್ಯಾಕ್ಟ್-ಚೆಕ್: ಬಿಜೆಪಿಯಿಂದ ‘ಜೂಠ್ ಕೀ ಗೂಂಜ್’ ವೆಬ್‌ಸೈಟ್ ಆರಂಭ

ಲೋಕಸಭೆ ವಿಪಕ್ಷ ನಾಯಕ, ಕಾಂಗ್ರೆಸ್‌ ಸಂಸದ ರಾಹುಲ್ ಗಾಂಧಿ ಅವರ 'ಛಾತ್ರೋನ್ ಕೀ ಗೂಂಜ್' ಅಭಿಯಾನದ ವೇಳೆ ನೀಡಲಾದ ಹೇಳಿಕೆಗಳನ್ನು ಫ್ಯಾಕ್ಟ್-ಚೆಕ್ (ಸತ್ಯಾಸತ್ಯತೆ ಪರಿಶೀಲನೆ) ಮಾಡುವ ವೆಬ್‌ಸೈಟ್‌ ಒಂದನ್ನು ಉಲ್ಲೇಖಿಸಿರುವ ಬಿಜೆಪಿ, "ರಾಹುಲ್...