Homeಕರ್ನಾಟಕಕಾರ್ಖಾನೆಯಲ್ಲಿ ಬೆಂಕಿ ಅವಘಡ; ಮೃತ ದೇಹದ ಅವಶೇಷಗಳನ್ನು ಕೈಚೀಲದಲ್ಲಿ ಹಾಕಿಕೊಟ್ಟ ಅಧಿಕಾರಿಗಳು

ಕಾರ್ಖಾನೆಯಲ್ಲಿ ಬೆಂಕಿ ಅವಘಡ; ಮೃತ ದೇಹದ ಅವಶೇಷಗಳನ್ನು ಕೈಚೀಲದಲ್ಲಿ ಹಾಕಿಕೊಟ್ಟ ಅಧಿಕಾರಿಗಳು

- Advertisement -
- Advertisement -

ಆಗಸ್ಟ್ 6 ರಂದು ರಾತ್ರಿ ಬೆಳಗಾವಿ ಜಿಲ್ಲೆಯ ನವಗೆ ಎಂಬಲ್ಲಿ ಖಾಸಗಿ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಓರ್ವ ಸಾವನ್ನಪ್ಪಿದ್ದು, ಮೂವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತ ಯುವಕನ ಶವದ ಅವಶೇಷಗಳನ್ನು ಜಿಲ್ಲಾಡಳಿತ ಕೈಚೀಲದಲ್ಲಿ ಹಾಕಿಕೊಟ್ಟಿರುವ ಅಮಾನವೀಯ ಘಟನೆಗೆ ಈ ಪ್ರಕರಣ ಸಾಕ್ಷಿಯಾಗಿದೆ.

ಮೃತ ಕಾರ್ಮಿಕ 20 ವರ್ಷದ ಯಲ್ಲಪ್ಪ ಸಣ್ಣಗೌಡ ಗುಂಡ್ಯಾಗೋಳ ಎಂಬುವವರಾಗಿದ್ದು, ಅವರ ಶವದ ಅವಶೇಷಗಳನ್ನು ಕೈಚೀಲದಲ್ಲಿ ತುಂಬಿಸಿ ತಂದೆಗೆ ಹಸ್ತಾಂತರಿಸಲಾಗಿದೆ. ಮೃತ ಯುವಕನಿಗೆ ಕನಿಷ್ಠ ಮಟ್ಟದ ಗೌರವ ನೀಡದ, ಶವ ಸಾಗಾಣೆಗೆ ವಾಹನ ವ್ಯವಸ್ಥೆ ಮಾಡದ ಜಿಲ್ಲಾಡಳಿತದ ವರ್ತನೆಗೆ ಆಕ್ರೋಶ ವ್ಯಕ್ತವಾಗಿದೆ.

ಘಟನೆ ಹಿನ್ನೆಲೆ:

ಟೇಪ್ ತಯಾರಿಸುವ ಸ್ನೇಹಾ ಇಂಡಸ್ಟ್ರೀಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಕೆಲವು ಕಾರ್ಮಿಕರು ದೂರಿದ ನಂತರ ಅಗ್ನಿಶಾಮಕ ಮತ್ತು ತುರ್ತು ಸಿಬ್ಬಂದಿ ಬೆಳಗಾವಿಯ ಹೊರವಲಯದಲ್ಲಿರುವ ನಾವಜ್ ಇಂಡಸ್ಟ್ರಿಯಲ್ ಏರಿಯಾಕ್ಕೆ ಧಾವಿಸಿದರು. ಎಲಿವೇಟರ್ ಶಾಫ್ಟ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಶಂಕಿಸಲಾಗಿದೆ. ಇದು ಕಾರ್ಖಾನೆಯಲ್ಲಿ ಹರಡಿದ್ದು, ಎಲ್ಲಾ ದಹಿಸುವ ವಸ್ತುಗಳು ಸುಟ್ಟುಹೋಗಿವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಪಘಾತದ ಸಮಯದಲ್ಲಿ ಕಾರ್ಖಾನೆಯಲ್ಲಿ ಸುಮಾರು 20 ಕಾರ್ಮಿಕರು ಇದ್ದರು. ಹೆಚ್ಚಿನವರು ಹೊರಗೆ ಧಾವಿಸಿದರು. ಆದರೆ ಕೆಲವರು ಸಿಕ್ಕಿಬಿದ್ದು ಸುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಜಿಲ್ಲಾ ಸಿವಿಲ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮಂಗಳವಾರ ರಾತ್ರಿ ಈ ಅಪಘಾತ ಸಂಭವಿಸಿದ್ದು, ಶಂಕಿತ ಶಾರ್ಟ್ ಸರ್ಕ್ಯೂಟ್‌ನಿಂದ ಲಿಫ್ಟ್ ಶಾಫ್ಟ್‌ನಲ್ಲಿ ಕಿಡಿ ಹೊತ್ತಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜ್ಯ ವಿಪತ್ತು ನಿರ್ವಹಣಾ ಪಡೆಯ ತಂಡವು ಲಿಫ್ಟ್‌ನಲ್ಲಿ ಸಿಲುಕಿದ್ದ ಯಲ್ಲಪ್ಪ ಗುಂಡ್ಯಗೋಳ್ ಅವರ ಸುಟ್ಟ ಅವಶೇಷಗಳನ್ನು ಪತ್ತೆ ಮಾಡಿದೆ. ಇತರ ಮೂವರು- ಕಾವಲವಾಡಿಯ ಮಾರುತಿ ನಾರಾಯಣ ಕರವೇಕರ (32), ಬೆಳಗಾವಿಯ ಯಲ್ಲಪ್ಪ ಪ್ರಕಾಶ ಸಾಲಗೂಡು, 35 ಮತ್ತು ರಾಜವಾಡಿಯ ರಂಜಿತ್ ದಶರತ್ ಪಾಟೀಲ್, 39 ಗಂಭೀರ ಗಾಯಗೊಂಡಿದ್ದರಿಂದ ಅವರನ್ನು ಕೆಎಲ್‌ಇ ಆಸ್ಪತ್ರೆಗೆ ರವಾನಿಸಲಾಗಿದೆ. ರಾತ್ರಿ ಪಾಳಿಯಲ್ಲಿ ಕನಿಷ್ಠ 74 ಮಂದಿ ಕೆಲಸ ಮಾಡುತ್ತಿದ್ದರು. ಬೆಂಕಿಯ ಸಮಯದಲ್ಲಿ ಸುಮಾರು 20 ಮಂದಿ ಓಡಿಹೋದರು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ; ‘ನೀವು ಯಾವಾಗಲೂ ನಮ್ಮ ಚಾಂಪಿಯನ್ ಆಗಿರುತ್ತೀರಿ..’; ವಿನೇಶಾ ಅನರ್ಹತೆ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐಎಎಸ್‌ ಅಧಿಕಾರಿ ಫೌಝಿಯಾ ತರನ್ನುಮ್‌ ಅವರನ್ನು ಪಾಕಿಸ್ತಾನಿ ಎಂದ ಪ್ರಕರಣ : ಬಿಜೆಪಿ ಎಂಎಲ್‌ಸಿ ರವಿಕುಮಾರ್‌ಗೆ ಹೈಕೋರ್ಟ್‌ ತರಾಟೆ

ಕಲಬುರಗಿಯಲ್ಲಿ ನಡೆದಿದ್ದ ಪ್ರತಿಭಟನೆಯ ವೇಳೆ ಐಎಎಸ್‌ ಅಧಿಕಾರಿ ಫೌಝಿಯಾ ತರನ್ನುಮ್‌ ಅವರನ್ನು ಭಾರತೀಯರೋ ಅಥವಾ ಪಾಕಿಸ್ತಾನಿಯೋ ಎಂದಿದ್ದ ವಿಧಾನ ಪರಿಷತ್‌ನ ಬಿಜೆಪಿ ಸದಸ್ಯ ಎನ್‌. ರವಿಕುಮಾರ್‌ ವಿರುದ್ಧ ಶುಕ್ರವಾರ (ಆ.7) ಕರ್ನಾಟಕ ಹೈಕೋರ್ಟ್‌...

ಸಿಲಿಕಾನ್ ಸಿಟಿಯ ಐಷಾರಾಮಿ ಹೋಟೆಲ್‌ಗಳ ಮೇಲೆ ದಾಳಿ: ಅಡುಗೆ ಮನೆಯಲ್ಲಿ ಸಿಕ್ತು 250.KG ಕೊಳೆತ ಮಾಂಸ ಮತ್ತು ತರಕಾರಿ

ಶಾಲಾ-ಕಾಲೇಜುಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟದ ವಿರುದ್ಧ ಸಮರ ಸಾರಿದ್ದ ಆಹಾರ ಸುರಕ್ಷತೆ ಮತ್ತು ಔಷಧ ನಿಯಂತ್ರಣ (FSDA) ಇಲಾಖೆ, ಶುಕ್ರವಾರ ಬೆಂಗಳೂರಿನ ಫೈವ್-ಸ್ಟಾರ್ ಹೋಟೆಲ್‌ಗಳ ಮೇಲೆ ದಿಢೀರ್ ದಾಳಿ ನಡೆಸಿ...

‘ರಷ್ಯಾ ನಿರ್ಬಂಧ ಮಸೂದೆ’ ಅಂಗೀಕರಿಸಿದ ಅಮೆರಿಕ ಸೆನೆಟ್: ಭಾರತದ ಮೇಲೆ ಶೇ. 100ರಷ್ಟು ಸುಂಕ ವಿಧಿಸುವ ಎಚ್ಚರಿಕೆ

ಉಕ್ರೇನ್ ವಿರುದ್ಧದ ಯುದ್ಧಕ್ಕೆ ಆರ್ಥಿಕ ನೆರವು ಸಿಗದಂತೆ ಮಾಡಲು, ರಷ್ಯಾದಿಂದ ಪೆಟ್ರೋಲಿಯಂ ಉತ್ಪನ್ನಗಳನ್ನು ಹೆಚ್ಚಾಗಿ ಖರೀದಿಸುವ ಭಾರತ ಮತ್ತು ಚೀನಾದಂತಹ ಪ್ರಮುಖ ದೇಶಗಳನ್ನು ಗುರಿಯಾಗಿಸಿಕೊಂಡು ಅಮೆರಿಕದ ಸೆನೆಟ್‌ ಬೃಹತ್‌ ಬೆಂಬಲದೊಂದಿಗೆ ಹೊಸ ಮಸೂದೆಯನ್ನು...

ಆರ್‌ಎಸ್‌ಎಸ್‌ ಗೂಂಡಾಗಳಿಗೆ ಶಾಯಿ ಇರುವುದು ಬರೆಯಲು, ಎರಚಲು ಅಲ್ಲ ಎಂಬುವುದು ಗೊತ್ತಿಲ್ಲ, ನಮ್ಮ ಸಂಕಲ್ಪಕ್ಕೆ ಮಿತಿಯಿಲ್ಲ : ನೇಹಾ ಬೋರಾ

ಜಾರ್ಖಂಡ್ ವಿದ್ಯಾರ್ಥಿ ಹೋರಾಟವನ್ನು ಬೆಂಬಲಿಸಲು ಹೋಗಿದ್ದ ವೇಳೆ ತನ್ನ ಮೇಲೆ ಶಾಯಿ ಎರಚಿರುವುದಕ್ಕೆ ಅಖಿಲ ಭಾರತ ವಿದ್ಯಾರ್ಥಿ ಸಂಘದ (AISA) ರಾಷ್ಟ್ರೀಯ ಅಧ್ಯಕ್ಷೆ ನೇಹಾ ಬೋರಾ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ...

ಮನೆಗೆ ಬರುವ ಸಂದರ್ಶಕರೊಂದಿಗೆ ಪಿಎಸ್‌ಐ ‘ಅಸಭ್ಯ’ ವರ್ತನೆ; ಆಕ್ರೋಶ ವ್ಯಕ್ತಪಡಿಸಿದ ಅಭಿಜೀತ್ ದಿಪ್ಕೆ

ಛತ್ರಪತಿ ಸಂಭಾಜಿನಗರದಲ್ಲಿರುವ ತಮ್ಮ ಮನೆಯಲ್ಲಿ ಭದ್ರತಾ ಪಡೆಯ ಭಾಗವಾಗಿ ನಿಯೋಜಿಸಲಾದ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಪಿಎಸ್‌ಐ) ಅವರು, ಜನರು ನಮ್ಮನ್ನು ಭೇಟಿಯಾಗದಂತೆ ತಡೆಯುತ್ತಿದ್ದಾರೆ ಎಂದು ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಂಚಾಲಕ ಅಭಿಜೀತ್ ದಿಪ್ಕೆ...

ಮೋಹನ್ ಭಾಗವತ್‌ ದೇಶಪ್ರವೇಶ ನಿಷೇಧಿಸುವಂತೆ ಕೆನಡಾದ 40ಕ್ಕೂ ಹೆಚ್ಚು ಸಂಘಟನೆಗಳಿಂದ ಸರ್ಕಾರಕ್ಕೆ ಒತ್ತಾಯ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಮುಖ್ಯಸ್ಥ ಮೋಹನ್ ಭಾಗವತ್‌ ದೇಶದೊಳಗೆ ಪ್ರವೇಶಿಸುವುದನ್ನು ತಡೆಯುವಂತೆ ಕೆನಡಾದ 40ಕ್ಕೂ ಹೆಚ್ಚು ನಾಗರಿಕ, ಮಾನವ ಹಕ್ಕುಗಳು, ಕಾರ್ಮಿಕ ಮತ್ತು ಧಾರ್ಮಿಕ ಸಂಘಟನೆಗಳು ಅಲ್ಲಿನ ಸಾರ್ವಜನಿಕ ಸುರಕ್ಷತಾ ಸಚಿವರಿಗೆ...

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು,...

ಕಾವೇರಿ ವಿಚಾರದಲ್ಲಿ ಅಗ್ಗದ ರಾಜಕೀಯ ಮಾಡಲ್ಲ: ತಮಿಳುನಾಡು ಸಿಎಂ ವಿಜಯ್

ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿರುವ ವಿಚಾರವಾಗಿ ತಮಿಳುನಾಡಿನಲ್ಲಿ ರಾಜಕೀಯ ಕಾವು ಏರುತ್ತಿರುವ ಬೆನ್ನಲ್ಲೇ, ಈ ಕುರಿತು ತಕ್ಷಣವೇ ಸರ್ವಪಕ್ಷಗಳ ಸಭೆಯನ್ನು ಆಯೋಜಿಸುವ ಯಾವುದೇ ಅಗತ್ಯವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ....

ಬೆಂಗಳೂರಿನ ಜಕ್ಕೂರಿನಲ್ಲಿ 22-23 ವರ್ಷದ ಇಬ್ಬರು ನೇಪಾಳಿ ಯುವತಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜಕ್ಕೂರು ಮುಖ್ಯ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಸೀರೆಯಿಂದ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನೇಪಾಳ...

NEET Paper Leak: ಒಂದೇ ಒಂದು CCTV ಇರಲಿಲ್ಲ, ಚೆಕಿಂಗ್ ಇರಲಿಲ್ಲ! ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದು ಹೇಗೆ? CBI ವರದಿ ಇಲ್ಲಿದೆ

ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ನೀಟ್ (NEET) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನ ಅಂತಿಮ ಚಾರ್ಜ್‌ಶೀಟ್ ಸಲ್ಲಿಸಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA)...