Homeಚಳವಳಿಮಹಾರಾಷ್ಟ್ರದ 21 ಜಿಲ್ಲೆಯಿಂದ ಮುಂಬೈಗೆ ಭೋರ್ಗರೆದ ರೈತರ ದಂಡು

ಮಹಾರಾಷ್ಟ್ರದ 21 ಜಿಲ್ಲೆಯಿಂದ ಮುಂಬೈಗೆ ಭೋರ್ಗರೆದ ರೈತರ ದಂಡು

ರೈತರ ರ್‍ಯಾಲಿಗೆ ಕೇಂದ್ರ ಸರ್ಕಾರ ವಿರುದ್ದವಾಗಿದ್ದು, ಸುಪ್ರೀಂಕೋರ್ಟ್‌ನಲ್ಲಿ ರ್‍ಯಾಲಿಯು ’ರಾಷ್ಟ್ರಕ್ಕೆ ಮುಜುಗರ’ ಮಾಡುತ್ತದೆ ಎಂದು ಹೇಳಿ, ರ್‍ಯಾಲಿಯನ್ನು ತಡೆಯುವಂತೆ ಮನವಿ ಸಲ್ಲಿಸಿತ್ತು.

- Advertisement -
- Advertisement -

ಶನಿವಾರ ನಾಸಿಕ್‌ನಿಂದ ಹೊರಟ ಮಹಾರಾಷ್ಟ್ರದ 21 ಜಿಲ್ಲೆಗಳ ಲಕ್ಷಾಂತರ ರೈತರ ರ್‍ಯಾಲಿಯು, 180 ಕಿ.ಮೀ. ದೂರದ ಮಹಾರಾಷ್ಟ್ರ ರಾಜಧಾನಿಯಾದ ಮುಂಬೈಗೆ ತಲುಪುತ್ತಿದೆ. ಸೋಮವಾರದಂದು ರೈತರು ನಗರದ ಹೆಸರಾಂತ ಆಜಾದ್‌ ಮೈದಾನದಲ್ಲಿ ಸೇರಲಿದ್ದಾರೆ. ಘೋಷಣೆ ಕೂಗುತ್ತಾ ಹೊರಟ ರೈತರ ರ್‍ಯಾಲಿಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಈಗಾಗಲೇ ವೈರಲಾಗಿದೆ.

ರೈತರ ಈ ರ್‍ಯಾಲಿಯಲ್ಲಿ ಆಡಳಿತಾರೂಢ ಮಹಾ ವಿಕಾಸ್ ಅಘಾಡಿ ಸರ್ಕಾರದ ಮಿತ್ರಪಕ್ಷವಾಗಿರುವ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಕೂಡಾ ಪಾಲ್ಗೊಳ್ಳಲಿದ್ದಾರೆ ಎನ್ನಲಾಗಿದೆ.

ಅಖಿಲ ಭಾರತ ಕಿಸಾನ್ ಸಭಾದ ಅಡಿಯಲ್ಲಿ ಒಟ್ಟುಗೂಡಿಡಿರುವ ರೈತರು ಕೆಲವೇ ಗಂಟೆಗಳಲ್ಲಿ ಮುಂಬೈ ತಲುಪುವ ನಿರೀಕ್ಷೆಯಿದೆ. ಗಣರಾಜ್ಯೋತ್ಸವದಂದು ದೆಹಲಿಯಲ್ಲಿ ಟ್ರ್ಯಾಕ್ಟರ್ ರ್‍ಯಾಲಿ ನಡೆಯಲಿದ್ದು ಅದಕ್ಕೂ ಎರಡು ದಿನಗಳ ಮೊದಲೇ ರೈತರು ಇಲ್ಲಿ ರ್‍ಯಾಲಿ ಮಾಡುತ್ತಿದ್ದಾರೆ.

ಇದನ್ನೂ ಓದಿ: 69 ವರ್ಷಗಳ ಹಿಂದೆ ನಡೆದ ಗಣರಾಜ್ಯೋತ್ಸವದಂದು ಸಹ ಟ್ರ್ಯಾಕ್ಟರ್‌ ಪರೇಡ್‌ ನಡೆದಿತ್ತು!

ಜನವರಿ 26 ರಂದು ದೆಹಲಿಯ ಸುತ್ತಲೂ ಇರುವ ರಿಂಗ್ ರಸ್ತೆಯ ಉದ್ದಕ್ಕೂ ನಡೆಯಲಿರುವ ರ್‍ಯಾಲಿಯಲ್ಲಿ ಲಕ್ಷಾಂತರ ಟ್ರಾಕ್ಟರುಗಳು ಭಾಗವಹಿಸುವ ನಿರೀಕ್ಷೆಯಿದೆ ಮತ್ತು ಇದಕ್ಕಾಗಿ ದೆಹಲಿ ಪೊಲೀಸರಿಂದ ಅನುಮತಿ ಕೋರಲಾಗಿದೆ.

ಉದ್ದೇಶಿತ ರ್‍ಯಾಲಿಗೆ ತಾವು ಪೊಲೀಸ್‌‌‌ ಅನುಮತಿ ಪಡೆದಿದ್ದೇವೆ ಎಂದು ಶನಿವಾರ ರೈತರು ಹೇಳಿಕೊಂಡಿದ್ದರು. ಆದರೆ ಇದನ್ನು ದೆಹಲಿ ಪೊಲೀಸರು ವಿರೋಧಿಸಿದ್ದು, “ರೈತರು ನಮಗೆ ರ್‍ಯಾಲಿ ನಡೆಯುವ ಮಾರ್ಗದ ಬಗ್ಗೆ ಲಿಖಿತವಾಗಿ ತಿಳಿಸಿಲ್ಲ. ಅದನ್ನು ಲಿಖಿತವಾಗಿ ಸ್ವೀಕರಿಸಿದ ನಂತರ ಈ ಬಗ್ಗೆ ತಿಳಿಸುತ್ತೇವೆ” ಎಂದು ದೆಹಲಿ ಪೊಲೀಸ್ ಆಯುಕ್ತ ಎಸ್.ಎನ್. ಶ್ರೀವಾಸ್ತವ ಹೇಳಿದ್ದಾರೆಂದು ಎನ್‌ಡಿಟಿವಿ ವರದಿ ಮಾಡಿದೆ.

ರ್‍ಯಾಲಿಯ ಬಗ್ಗೆ ದೆಹಲಿ ಪೊಲೀಸರು ಇಂದು ಸಂಜೆ ನಿರ್ಧಾರ ತೆಗೆದುಕೊಳ್ಳುವ ನಿರೀಕ್ಷೆಯಿದೆ.

ರೈತರೊಂದಿಗೆ ಕೇಂದ್ರ ಸರ್ಕಾರ ಇದುವರೆಗೂ 11 ವಿಫಲ ಮಾತುಕತೆಗಳನ್ನು ನಡೆಸಿದೆ. ರ್‍ಯಾಲಿಗೆ ಕೇಂದ್ರ ಸರ್ಕಾರ ವಿರುದ್ದವಾಗಿದ್ದು, ಸುಪ್ರೀಂಕೋರ್ಟ್‌ನಲ್ಲಿ ರ್‍ಯಾಲಿಯು “ರಾಷ್ಟ್ರಕ್ಕೆ ಮುಜುಗರ” ಉಂಟು ಮಾಡುತ್ತದೆ ಎಂದು ಹೇಳಿ, ರ್‍ಯಾಲಿಯನ್ನು ತಡೆಯುವಂತೆ ಮನವಿ ಸಲ್ಲಿಸಿತ್ತು. ಆದರೆ ಸುಪ್ರೀಂಕೋರ್ಟ್ ಕೇಂದ್ರದ ಮನವಿಯನ್ನು ತಿರಸ್ಕರಿಸಿದ್ದು, ಆಸ್ತಿಪಾಸ್ತಿ ಹಾಗೂ ಜೀವಗಳಿಗೆ ಹಾನಿಯಾಗದಂತೆ ಶಾಂತಿಯುತ ಪ್ರತಿಭಟನೆ ನಡೆಸುವ ರೈತರ ಹಕ್ಕನ್ನು ನ್ಯಾಯಾಲಯ ಎತ್ತಿಹಿಡಿದಿತ್ತು.

ಇದನ್ನೂ ಓದಿ: ಬಲವಂತವಾಗಿ ರೈತ ಜಾಥಾ ತಡೆದ ಪೊಲೀಸರು: ರೈತ ಮುಖಂಡರ ಆಕ್ಷೇಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...