Homeಮುಖಪುಟಕಾಲಿಗೆ ಸರಪಳಿ ಬಿಗಿದ ಸ್ಥಿತಿಯಲ್ಲಿ ವಿದೇಶಿ ಮಹಿಳೆ ಕಾಡಿನಲ್ಲಿ ಪತ್ತೆ; ಜೇಬಿನಲ್ಲಿ ಯುಎಸ್ ಪಾಸ್‌ಪೋರ್ಟ್

ಕಾಲಿಗೆ ಸರಪಳಿ ಬಿಗಿದ ಸ್ಥಿತಿಯಲ್ಲಿ ವಿದೇಶಿ ಮಹಿಳೆ ಕಾಡಿನಲ್ಲಿ ಪತ್ತೆ; ಜೇಬಿನಲ್ಲಿ ಯುಎಸ್ ಪಾಸ್‌ಪೋರ್ಟ್

- Advertisement -
- Advertisement -

ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ಅರಣ್ಯದಲ್ಲಿ 50 ವರ್ಷದ ಮಹಿಳೆಯನ್ನು ಕಬ್ಬಿಣದ ಸರಪಳಿಯಿಂದ ಮರಕ್ಕೆ ಕಟ್ಟಿಹಾಕಿರುವುದು ಪತ್ತೆಯಾಗಿದೆ. “ಆಕೆಯ ಯುಎಸ್ ಪಾಸ್‌ಪೋರ್ಟ್‌ನ ಫೋಟೋಕಾಪಿ ಮತ್ತು ತಮಿಳುನಾಡು ವಿಳಾಸದೊಂದಿಗೆ ಆಧಾರ್ ಕಾರ್ಡ್ ಸೇರಿದಂತೆ ಇತರ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಮುಂಬೈನಿಂದ ಸುಮಾರು 450 ಕಿಲೋಮೀಟರ್ ದೂರದಲ್ಲಿರುವ ಸೋನುರ್ಲಿ ಗ್ರಾಮದಲ್ಲಿ ಶನಿವಾರ ಸಂಜೆ ಕುರಿಗಾಹಿಯೊಬ್ಬರು ಆಕೆಯ ಅಳಲು ಕೇಳಿದ್ದು, ಸರಪಳಿಯಲ್ಲಿ ಸಿಲುಕಿರುವ ಮತ್ತು ಸಂಕಷ್ಟದಲ್ಲಿರುವುದನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

“ಮಹಿಳೆಯನ್ನು ಸಾವಂತವಾಡಿ (ರಾಜ್ಯದ ಕೊಂಕಣ ಪ್ರದೇಶದಲ್ಲಿ) ಮತ್ತು ನಂತರ ಸಿಂಧುದುರ್ಗದ ಓರೋಸ್‌ನ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆಕೆಯ ಮಾನಸಿಕ ಮತ್ತು ಆರೋಗ್ಯ ಸ್ಥಿತಿಯನ್ನು ಪರಿಗಣಿಸಿ, ಅವರಿಗೆ ಉನ್ನತ ಚಿಕಿತ್ಸೆಗಾಗಿ ಗೋವಾ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಯಿತು. ಆಕೆ ಅಪಾಯದಿಂದ ಪಾರಾಗಿದ್ದಾಳೆ; ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಆಕೆ ಮನೋವೈದ್ಯಕೀಯ ಸಮಸ್ಯೆಗಳಿಂದ ಬಳಲುತ್ತಿದ್ದಾಳೆ ಎಂಬುದಕ್ಕೆ ನಾವು ಆಕೆಯ ಬಳಿ ಇದ್ದ ವೈದ್ಯಕೀಯ ಪ್ರಿಸ್ಕ್ರಿಪ್ಷನ್‌ಗಳಿಂದ ಕಂಡುಕೊಂಡಿದ್ದೇವೆ” ಎಂದು ಹೇಳಿದರು.

“ನಾವು ಆಕೆಯ ತಮಿಳುನಾಡು ವಿಳಾಸ ಆಧಾರ್ ಕಾರ್ಡ್, ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾ ಪಾಸ್‌ಪೋರ್ಟ್‌ನ ನಕಲು ಪ್ರತಿಯನ್ನು ಕಂಡುಕೊಂಡಿದ್ದೇವೆ. ಆಕೆಯನ್ನು ಲಲಿತಾ ಕಯಿ ಎಂದು ಗುರುತಿಸಲಾಗಿದೆ. ಆಕೆಯ ವೀಸಾ ಅವಧಿ ಮುಗಿದಿದೆ. ಆಕೆಯ ರಾಷ್ಟ್ರೀಯತೆಯನ್ನು ಖಚಿತಪಡಿಸಿಕೊಳ್ಳಲು ನಾವು ಈ ಎಲ್ಲ ದಾಖಲೆಗಳನ್ನು ಪರಿಶೀಲಿಸುತ್ತಿದ್ದೇವೆ. ನಮ್ಮ ಪೊಲೀಸರು ವಿದೇಶಿಯರ ಪ್ರಾದೇಶಿಕ ನೋಂದಣಿ ಕಛೇರಿಯೊಂದಿಗೆ ಸಂಪರ್ಕದಲ್ಲಿದೆ” ಎಂದು ಅವರು ಹೇಳಿದರು.

ಪೊಲೀಸರು ಪಡೆದ ಪ್ರಾಥಮಿಕ ಮಾಹಿತಿಯಂತೆ ಮಹಿಳೆ ಕಳೆದ 10 ವರ್ಷಗಳಿಂದ ಭಾರತದಲ್ಲಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

“ಮಹಿಳೆ ಹೇಳಿಕೆ ನೀಡುವ ಸ್ಥಿತಿಯಲ್ಲಿಲ್ಲ; ಒಂದೆರಡು ದಿನಗಳಿಂದ ಏನನ್ನೂ ತಿನ್ನದ ಕಾರಣ ಮಹಿಳೆ ದುರ್ಬಲಳಾಗಿದ್ದಾಳೆ ಹಾಗೂ ಈ ಪ್ರದೇಶದಲ್ಲಿ ಭಾರೀ ಮಳೆಯಾಗಿದ್ದು, ಎಷ್ಟು ದಿನ ಆಕೆಯನ್ನು ಕಟ್ಟಿಹಾಕಲಾಕಿತ್ತೋ ಗೊತ್ತಿಲ್ಲ. ಆಕೆಯ ಪತಿ ತಮಿಳುನಾಡಿನಿಂದ ಬಂದಿದ್ದು, ಆಕೆಯನ್ನು ಅಲ್ಲಿ ಕಟ್ಟಿಹಾಕಿ ಪರಾರಿಯಾಗಿರಬಹುದು” ಎಂದು ಪೊಲೀಸರು ಹೇಳಿದ್ದಾರೆ.

ತನಿಖೆಯ ಭಾಗವಾಗಿ ಆಕೆಯ ಸಂಬಂಧಿಕರನ್ನು ಪತ್ತೆಹಚ್ಚಲು ಪೊಲೀಸ್ ತಂಡಗಳು ತಮಿಳುನಾಡು, ಗೋವಾ ಮತ್ತು ಇತರ ಕೆಲವು ಸ್ಥಳಗಳಿಗೆ ತೆರಳಿವೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ; ಹೇಮಂತ್ ಸೊರೇನ್ ಜಾಮೀನು ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...