Homeಅಂತರಾಷ್ಟ್ರೀಯCAA ವಿರುದ್ಧ ಪ್ರತಿಭಟಿಸಿದ್ದಕ್ಕಾಗಿ ಸ್ವರಾಷ್ಟ್ರಕ್ಕೆ ತೆರಳುವ ಶಿಕ್ಷೆ ಪಡೆದ ಜರ್ಮನ್‌ ವಿದ್ಯಾರ್ಥಿ..

CAA ವಿರುದ್ಧ ಪ್ರತಿಭಟಿಸಿದ್ದಕ್ಕಾಗಿ ಸ್ವರಾಷ್ಟ್ರಕ್ಕೆ ತೆರಳುವ ಶಿಕ್ಷೆ ಪಡೆದ ಜರ್ಮನ್‌ ವಿದ್ಯಾರ್ಥಿ..

- Advertisement -
- Advertisement -

ಐಐಟಿ ಮದ್ರಾಸ್‌ನಲ್ಲಿ ಓದುತ್ತಿರುವ ಜರ್ಮನ್ ವಿದ್ಯಾರ್ಥಿಯನ್ನು ಪೌರತ್ವ ಕಾನೂನು ವಿರೋಧಿ ಹೋರಾಟದಲ್ಲಿ ಭಾಗವಹಿಸಿದ್ದಕ್ಕಾಗಿ ಜರ್ಮನಿಗೆ ವಾಪಸ್ ಕಳಿಸಲಾಗಿದೆ ಎಂದು ವರದಿಯಾಗಿದೆ.

ಮದ್ರಾಸ್‌ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಭೌತಶಾಸ್ತ್ರದ ಸ್ನಾತಕೋತ್ತರ ವಿದ್ಯಾರ್ಥಿ ಜಾಕೋಬ್ ಲಿಂಡೆಂಥಾಲ್‌ ಸೋಮವಾರ ಆಮ್‌ಸ್ಟಾರ್‌ಡ್ಯಾಮ್‌ಗೆ ತೆರಳಿದ್ದಾರೆ ಎಂದು ವರದಿಯಾಗಿದೆ. ಚೆನ್ನೈನಲ್ಲಿರುವ ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿಯಿಂದ ಭಾರತವನ್ನು ತೊರೆಯಲು ಮೌಖಿಕ ಆದೇಶಗಳನ್ನು ಬಂದಿದ್ದವು ಎಂದು ಆತ ಇಂಡಿಯನ್ ಎಕ್ಸ್ ಪ್ರೆಸ್‌ಗೆ ತಿಳಿಸಿದ್ದಾಗಿ ವರದಿಯಾಗಿದೆ.

24 ವರ್ಷದ ಜಾಕೋಬ್ ಜರ್ಮನಿಯ ಡ್ರೆಸ್ಡೆನ್ ಮೂಲದವನಾಗಿದ್ದು ಕಳೆದ ವಾರ ನಡೆದ ಹಲವು ಪ್ರತಿಭಟನೆಗಳಲ್ಲಿ ಅವರು ಭಾಗವಹಿಸಿದ್ದಾರೆ. ಅವರು “ಏಕರೂಪದ ಅಪರಾಧಿಗಳು = ಅಪರಾಧಿಗಳು” ಎಂದು ಬರೆಯುವ ಫಲಕವನ್ನು ಹಿಡಿದಿರುವ ಫೋಟೊ ವೈರಲ್ ಆಗಿತ್ತು. ಜೊತೆಗೆ ಅವರು ಎತ್ತಿ ಹಿಡಿದ ಮತ್ತೊಂದು ಫಲಕದಲ್ಲಿ “1933-1945 ನಾವು ಅಲ್ಲಿದ್ದೇವೆ” ಎಂದು ಬರೆಯಲಾಗಿತ್ತು. ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ಅವರ ವೀಸಾ ನಿಯಮಗಳ ಉಲ್ಲಂಘನೆಯಾಗಿದೆ ಅದಕ್ಕಾಗಿ ಅವರು ತಕ್ಷಣ ಭಾರತವನ್ನು ತೊರೆಯಬೇಕಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಐಐಟಿ ಮದ್ರಾಸ್ ಅಥವಾ ಕೇಂದ್ರ ಸರ್ಕಾರವೇ ಅವರನ್ನು ವಾಪಸ್‌ ಕಳುಹಿಸಲು ನಿರ್ಧರಿಸಿದೆಯೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಐಐಟಿ ಮದ್ರಾಸ್ ವಿದ್ಯಾರ್ಥಿಗಳು ಅಂತಹ ನಿರ್ಧಾರವನ್ನು ತೆಗೆದುಕೊಂಡಿದ್ದು “ಅವಮಾನ” ಎಂದು ಕರೆದಿದ್ದಾರೆ. ಪೌರತ್ವ ವಿರೋಧಿ ಕಾರ್ಯಕರ್ತರು ಮತ್ತು ವಿದ್ಯಾರ್ಥಿಗಳಲ್ಲದೆ, ರಾಜಕೀಯ ಮುಖಂಡರು ಕೂಡ ತಮ್ಮ ಖಂಡನೆಯನ್ನು ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಶಿಕ್ಷಣ ಸಚಿವ ಆರ್.ಪಿ. ನಿಶಾಂಕ್ ಅವರನ್ನು ಟ್ಯಾಗ್ ಮಾಡುವ ಮೂಲಕ ಟ್ವೀಟ್ ನಲ್ಲಿ ಹೇಳಿದ್ದಾರೆ: ಇದು ನಿರಾಶಾದಾಯಕವಾಗಿದೆ. ನಾವು ಹೆಮ್ಮೆಯ ಪ್ರಜಾಪ್ರಭುತ್ವವಾಗಿದ್ದೇವೆ. ಆ ಮೂಲಕ ಜಗತ್ತಿಗೆ ಒಂದು ಉದಾಹರಣೆಯಾಗಿದ್ದೆವು. ಯಾವುದೇ ಪ್ರಜಾಪ್ರಭುತ್ವವು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಶಿಕ್ಷಿಸುವುದಿಲ್ಲ. ಉಚ್ಛಾಟನೆಯನ್ನು ಹಿಂತೆಗೆದುಕೊಳ್ಳಲು ಮತ್ತು ಶೈಕ್ಷಣಿಕ ಜಗತ್ತಿನಲ್ಲಿ ಭಾರತವು ತಲೆ ಎತ್ತುವಂತೆ ಮಾಡುವುದಕ್ಕಾಗಿ ಐಐಟಿ ಮದ್ರಾಸ್‌ಗೆ ಸೂಚನೆ ನೀಡಲು ನಾನು ಆರ್.ಪಿ. ನಿಶಾಂಕ್‌ಗೆ ಕರೆ ನೀಡುತ್ತೇನೆ.” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮನುವಾದಿಗಳು ಭಾರತದ ಮರ್ಯಾದೆಯನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಹರಾಜು ಹಾಕುತ್ತಿದ್ದಾರೆ.

LEAVE A REPLY

Please enter your comment!
Please enter your name here

- Advertisment -

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...