Homeಕರ್ನಾಟಕಒಳ ಮೀಸಲಾತಿ | ದಲಿತ ಸಮುದಾಯಕ್ಕೆ ಶಾಶ್ವತ ಪರಿಹಾರ ಕಲ್ಪಿಸಲು ರಾಜ್ಯ ಸರ್ಕಾರಕ್ಕಿದು ಸುವರ್ಣಾವಕಾಶ: ಅಂಬಣ್ಣ...

ಒಳ ಮೀಸಲಾತಿ | ದಲಿತ ಸಮುದಾಯಕ್ಕೆ ಶಾಶ್ವತ ಪರಿಹಾರ ಕಲ್ಪಿಸಲು ರಾಜ್ಯ ಸರ್ಕಾರಕ್ಕಿದು ಸುವರ್ಣಾವಕಾಶ: ಅಂಬಣ್ಣ ಅರೋಲಿಕರ್

- Advertisement -
- Advertisement -

ಪರಿಶಿಷ್ಟ ಜಾತಿ, ಪಂಗಡಗಳಲ್ಲಿ ಅತ್ಯಂತ ಹಿಂದುಳಿದಿರುವ ಸಮುದಾಯಗಳಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ಕಲ್ಪಿಸಲು ಒಳ ಮೀಸಲಾತಿಯನ್ನು ಒದಗಿಸುವ ಪ್ರಸ್ತಾವಕ್ಕೆ ಸುಪ್ರೀಂ ಕೋರ್ಟ್‌ನ ಏಳು ನ್ಯಾಯಾಧೀಶರ ಸಾಂವಿಧಾನಿಕ ಪೀಠವು ಸಮ್ಮತಿ ಸೂಚಿಸಿದ್ದು, ರಾಜ್ಯದಲ್ಲಿ ಒಳ ಮೀಸಲಾತಿ ಹೋರಾಟದ ಮುಂಚೂಣಿಯಲ್ಲಿರುವ ಅಂಬಣ್ಣ ಅರೋಲಿಕರ್ ಅವರು ತೀರ್ಪನ್ನು ಸ್ವಾಗತಿಸಿದ್ದಾರೆ.

“ಸರ್ಕಾರಗಳು ಕಾಲಹರಣವನ್ನು ಮುಂದುವರಿಸದೆ, ಸಣ್ಣಪುಟ್ಟ ಲೋಪದೋಷಗಳನ್ನು ತಿದ್ದುಪಡಿ ಮಾಡಿಕೊಳ್ಳಬೇಕು. ದಮನಿತ ಸಮುದಾಯಗಳಿಗೆ ಶಾಶ್ವತ ಪರಿಹಾರ ಕಲ್ಪಿಸಲು ರಾಜ್ಯ ಸರ್ಕಾರಕ್ಕೆ ಇದು ಸುವರ್ಣಾವಕಾಶವಾಗಿದೆ” ಎಂದು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ನಾನುಗೌರಿ.ಕಾಮ್ ಜತೆಗೆ ಮಾತನಾಡಿದ ಅಂಬಣ್ಣ ಅರೋಲಿಕರ್, “ಸುಪ್ರೀಂ ಕೋರ್ಟಿನ ಒಳ ಮೀಸಲಾತಿ ಕುರಿತ ತೀರ್ಪು ಗೌರವಿಸಬೇಕಾದ ವಿಚಾರ. ಕಳೆದ ಮೂವತ್ತು ವರ್ಷಗಳಿಂದ ಈ ಬಗ್ಗೆ ಬೀದಿ ಹೋರಾಟ ಮಾಡಿದ್ದೇವೆ. 2020ರಲ್ಲಿ ಅರುಣ್ ಮಿಶ್ರಾ ಪೀಠದ ತೀರ್ಪು ಬಂದು, ಐದನೇ ಬೆಂಚ್‌ನಿಂದ ಏಳನೇ ಬೆಂಚಿಗೆ ಪ್ರಕರಣ ವರ್ಗಾವಣೆಯಾದ ನಂತರ ಏನಾಗುತ್ತದೋ ಎಂಬ ಬಗ್ಗೆ ಬಹಳ ಆತಂಕವಿತ್ತು. ಈಗ ಬಂದಿರುವ ತೀರ್ಪನ್ನು ನಾವು ಸ್ವಾಗತ್ತಿಸುತ್ತೇವೆ” ಎಂದು ಸಂತಸ ವ್ಯಕ್ತಪಡಿಸಿದರು.

“ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಕಾಲಹರಣ ಮಾಡದೆ, ಸುಪ್ರೀಂ ಕೋರ್ಟ್‌ ರಾಜ್ಯ ಸರ್ಕಾರಗಳಿಗೆ ಕೊಟ್ಟಿರುವ ಪರಮಾಧಿಕಾರವನ್ನು ಬಳಸಿಕೊಳ್ಳುವ ಮೂಲಕ ಕೂಡಲೇ ಒಳ ಮೀಸಲಾತಿ ಅನುಷ್ಠಾನಕ್ಕೆ ತರುವ ಕೆಲಸವನ್ನು ಯುದ್ದೋಪಾದಿಯಲ್ಲಿ ಮಾಡಬೇಕು. ಕಳೆದ 75 ವರ್ಷಗಳಿಂದ ಅಸ್ಪೃಶ್ಯ ಸಮುದಾಯಗಳಿಗೆ ವಿದ್ಯೆ, ಉದ್ಯೋಗದಲ್ಲಿ ಸಾಕಷ್ಟು ನಷ್ಟವಾಗಿದೆ. ಹಾಗಾಗಿ, ಕಾಲಹರಣ ಮುಂದುವರಿಸದೆ ಸರ್ಕಾರಗಳು ಸಣ್ಣಪುಟ್ಟ ಲೋಪದೋಷಗಳನ್ನು ತಿದ್ದುಪಡಿ ಮಾಡಿಕೊಳ್ಳಬೇಕು. ಶಾಶ್ವತ ಪರಿಹಾರ ಕಲ್ಪಿಸಲು ರಾಜ್ಯ ಸರ್ಕಾರಕ್ಕೆ ಇದು ಸುವರ್ಣಾವಕಾಶವಾಗಿದೆ; ಅದನ್ನು ಸರ್ಕಾರಗಳು ಕೂಡಲೇ ಮಾಡಬೇಕು” ಎಂದು ಅವರು ಒತ್ತಾಯಿಸಿದರು.

ನ್ಯಾಯಾಲಯದ ತೀರ್ಪನ್ನು ಪ್ರತಿಯೊಬ್ಬರೂ ಗೌರವಿಸಬೇಕು

“ನ್ಯಾಯಾಲಯದ ತೀರ್ಪನ್ನು ಪ್ರತಿಯೊಬ್ಬರೂ ಗೌರವಿಸಬೇಕು; ಗೌರವಿಸದೇ ಇದ್ದಲ್ಲಿ ಸಮುದಾಯದ ತೀರ್ಮಾನ ಮತ್ತು ನ್ಯಾಯಾಂಗದ ಛೀಮಾರಿಯನ್ನು ಯಾವುದೇ ಸರ್ಕಾರ ಎದುರಿಸಬೇಕಾಗುತ್ತದೆ. ಪ್ರತಿ ಸರ್ಕಾರ ಶೇ.100ರಷ್ಟು ಇದನ್ನು ಒಪ್ಪಲೇಬೇಕು, ಕಡೆಗಣಿಸಿದರೆ ಪ್ರತಿಫಲ ಎದುರಿಸಬೇಕು. ಸರ್ಕಾರಗಳು ಬೇಷರತ್ತಾಗಿ ಒಳ ಮೀಸಲಾತಿ ಜಾರಿ ಮಾಡಬೇಕು. ಯಾವುದೇ ಕಾರಣಕ್ಕೂ ನ್ಯಾಯದ ವಿಳಂಬ ಆಗಬಾರದು. ಒಂದು ಗುಂಪಾಗಿ ಸರ್ಕಾರದ ಮೇಲೆ ಒತ್ತಡ ಹೇರುವ ಕೆಲಸವನ್ನು ನಾವು ಮಾಡೇ ಮಾಡುತ್ತೇವೆ” ಎಂದರು.

“ಒಳ ಮೀಸಲಾತಿ ಹೋರಾಟ ದಕ್ಷಿಣ ಭಾರತದಲ್ಲಿ ನಡೆದಿದೆ. ಆ ಮೂಲಕ ಇಡೀ ದೇಶಕ್ಕೆ ದೊಡ್ಡ ಮಟ್ಟದ ಸಂದೇಶ ಸಿಕ್ಕಿದೆ. ದಕ್ಷಿಣ ಭಾರತ ಹೊರತುಪಡಿಸಿ ಬೇರೆಕಡೆ ಬೀದಿ ಹೋರಾಟ ಇರಲಿಲ್ಲ.. ತಮಿಳುನಾಡು ಸರ್ಕಾರ ಇದರಲ್ಲಿ ನೇರವಾಗಿ ಭಾಗಿ ಆಗಿತ್ತು. ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ ರಾಜ್ಯಗಳು ಪಾಲುದಾರಿಕೆ ಮತ್ತು ಸಕ್ರಿಯ ಭಾಗವಹಿಸುವುಕೆಯೇ ಈ ತೀರ್ಪು ಬುರುವುದಕ್ಕೆ ಕಾರಣವಾಗಿದೆ” ಎಂದು ವಿವರಿಸಿದರು.

“ಜನಸಂಖ್ಯೆ ಆಧಾರವಾಗಿ ಮೀಸಲಾತಿ ಹಂಚಬೇಕು ಎನ್ನುವುದೇ ನಮ್ಮ ಬೇಡಿಕೆ. ಆಯಾ ರಾಜ್ಯಗಳು ಈ ಬಗ್ಗೆ ಅಧ್ಯಯನ ಮಾಡಿ ಮೀಸಲಾತಿ ಹಂಚಿಕೆ ಮಾಡುವ ಕೆಲಸ ಆಗಬೇಕು. ಯಾವುದೇ ರಾಜ್ಯದಲ್ಲಿ ಮೀಸಲಾತಿಯ ಶೇ.50 ರ ಮಿತಿಯನ್ನು ಮೀರುವ ಸಾಧ್ಯತೆ ಸದ್ಯಕ್ಕಂತೂ ಇಲ್ಲ. ಅಸ್ತಿತ್ವದಲ್ಲಿರುವ ಮೀಸಲಾತಿಯಲ್ಲೇ ನಮ್ಮ ಪಾಲನ್ನು ಸಮಾನವಾಗಿ ಹಂಚಿದರೆ ಸಾಕು. ಈಗಾಗಲೇ ಕಳೆದ 75 ವರ್ಷಗಳಿಂದ ನಮ್ಮ ಸಮುದಾಯಕ್ಕೆ ವಿದ್ಯೆ-ಉದ್ಯೋಗದಲ್ಲಿ ಸಾಕಷ್ಟು ನಷ್ಟವಾಗಿದೆ; ಆರ್ಥಿಕ ನಷ್ಟವಾಗಿದೆ. ಕನಿಷ್ಠ ಐದಾರು ತಿಂಗಳಲ್ಲೇ ಈ ಪ್ರಕರಣ ಇತ್ಯರ್ಥಗೊಳಿಸುವುದು ಸೂಕ್ತ. ಅದು ಈ ತೀರ್ಪಿಗೆ ಗೌರವ ತರುತ್ತದೆ. ಇದುವರೆಗೆ ಮಾಡಿರುವ ಕಾಲಹರಣ ಮಾಡಬಾರದು ಎನ್ನುವುದೇ ನಮ್ಮ ಆಗ್ರಹ” ಎಂದು ಹೇಳಿದರು.

ಒಳಮೀಳಾತಿಯ ಚೆಂಡು ರಾಜ್ಯಗಳ ಕೋರ್ಟಿಗೆ ಬಂದು ಬಿದ್ದಿದೆ: ಶಿವಸುಂದರ್

“ಸುಪ್ರೀಂಕೋರ್ಟಿನ ಏಳು ಸದಸ್ಯರ ಸಾಂವಿಧಾನಿಕ ಪೀಠ 6-1 ಬಹುಮತದಲ್ಲಿ ಪರಿಶಿಷ್ಟರ ಮೀಸಲಾತಿಯ ಒಳಗೆ ಅತ್ಯಂತ ಹಿಂದುಳಿದವರನ್ನು ಗುರುತಿಸುವ ಹಾಗೂ ಪರಿಶಿಷ್ಟ ಮೀಸಲಾತಿಯೊಳಗೆ ಒಳ ಮೀಸಲಾತಿಯನ್ನು ಕಲ್ಪಿಸುವ ರಾಜ್ಯ ಗಳ ಅಧಿಕಾರವನ್ನು ಎತ್ತಿಹಿಡಿದಿದೆ. ಆದರೆ, ಹಾಗೆ ಮಾಡುವ ಮುನ್ನ ರಾಜ್ಯ ಸರ್ಕಾರವು ಅಂಥ ಮೀಸಲಾತಿಯು ಯಾವ ಸಮುದಾಯಗಳಿಗೆ ಅಗತ್ಯವಿದೆ ಎಂಬುದರ ಬಗ್ಗೆ ಅಧ್ಯಯನವನ್ನು ಮಾಡಬೇಕು. ಆ ಅಧ್ಯಯನವನ್ನು ಆಧರಿಸಿ ಒಳಮೀಸಲಾತಿ ಕಲ್ಪಿಸಬೇಕು. ಹಾಗೂ ಆ ಒಳಮೀಸಲಾತಿಯು ಪರಿಶಿಷ್ಟ ಮೀಸಲಾತಿಯ ಶೇ. 100 ಅನ್ನು ಒಳಗೊಳ್ಳಬಾರದು ಎಂದು ತೀರ್ಪಿತ್ತಿದೆ” ಎಂದು ಚಿಂತಕರಾದ ಶೀವಸುಂದರ್ ಅಭಿಪ್ರಾಯಪಟ್ಟಿದ್ದಾರೆ.

ಈ ಕುರಿತು ತಮ್ಮ ಅಭಿಪ್ರಾಯ ಹಂಚಿಕೊಂಡಿರುವ ಅವರು, “ಜಸ್ಟೀಸ್ ಬೇಲಾ ತ್ರಿವೇದಿ ಯವರು ಮಾತ್ರ ಒಳಮೀಸಲಾತಿಯ ತಾತ್ವಿಕನೆಲೆಯನ್ನು, ದೊಡ್ಡ ಪೀಠಕ್ಕೆ ಇಂಥಾ ಪ್ರಕರಣಗಳನ್ನು ವರ್ಗಾಯಿಸುವುದನ್ನು ವಿರೋಧಿಸಿ ಭಿನ್ನಮತದ ತೀರ್ಪಿತ್ತಿದ್ದಾರೆ” ಎಂದು ಹೇಳಿದ್ದಾರೆ.

“ಈಗ ಮತ್ತೆ ಒಳಮೀಳಾತಿಯ ಚೆಂಡು ರಾಜ್ಯಗಳ ಕೋರ್ಟಿಗೆ ಬಂದು ಬಿದ್ದಿದೆ. ಈಗ ರಾಜ್ಯಗಳು ಪರಿಶಿಷ್ಟ ವರ್ಗಗಳಲ್ಲಿ ಇರುವ ಜಾತಿಗಳ ಪ್ರಾತಿನಿಧ್ಯ, ಹಿಂದುಳಿದಿರುವಿಕೆಯ ಬಗ್ಗೆ ಅಧ್ಯಯನ ಕೈಗೊಳ್ಳಬೇಕು. ಈಗಾಗಲೇ ಇದರ ಸುತ್ತ ನಡೆದಿರುವ ಮೇಲ್ಜಾತಿಗಳ ಒಡೆದಾಳುವ ರಾಜಕಾರಣದ ಅನುಭವ ಇರುವ ಪರಿಶಿಷ್ಟ ಸಮುದಾಯಗಳು ಭ್ರಾತೃತ್ವ ಭಾವನೆಯಿಂದ ಅತ್ಯಂತ ವಂಚಿತರಿಗೆ ಮೊದಲ ಆದ್ಯತೆ ಎಂಬ ತತ್ವದ ಮೇರೆಗೆ ಮುಂದಾಗಬೇಕಿದೆ. ಹಾಗೆಯೇ ಒಳಮೀಸಲಾತಿಯು ಶೇ. 100 ರಷ್ಟು ಇರಬಾರದೆಂಬ ನಿರ್ಣಯಾದ ಹಿಂದಿರುವ ಅಪಾಯಕಾರಿ ‘ಮೆರಿಟೋಕ್ರಸಿ’ಯ ತಾತ್ವಿಕ ನೆಲೆಯನ್ನು ಮರುಪರಿಶೀಲನೆಗೊಡ್ಡಬೇಕು ಎಂದು ನನಗನಿಸುತ್ತದೆ” ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕೋಲಾರದ ಹಿರಿಯ ದಲಿತ ಹೋರಾಟಗಾರರಾದ ಹ.ಮಾ. ರಾಮಚಂದ್ರ ನಾನುಗೌರಿ.ಕಾಮ್ ಜತೆಗೆ ಮಾತನಾಡಿ, “ಒಳ ಮೀಸಲಾತಿ ಕುರಿತ ಸುಪ್ರೀಂ ಕೋರ್ಟಿನ ತೀರ್ಪನ್ನು ಸ್ವಾಗತಿಸುತ್ತೇವೆ.. ವೈಜ್ಞಾನಿಕವಾಗಿ ಅಧ್ಯಯನ ನಡೆಸಿ, ಮೀಸಲಾತಿ ಅಳವಡಿಸಿಕೊಳ್ಳುವುದು ಸೂಕ್ತ. ಏಕೆಂದರೆ, ಒಳ ಮೀಸಲಾತಿ ಕೇಳುತ್ತಿರುವ ದಲಿತ ಸಮುದಾಯದ ಎಲ್ಲ ಜಾತಿಗಳಿಗೆ ಪಾಲು ಮತ್ತು ಪ್ರಾತಿನಿಧ್ಯ ಸಿಗಬೇಕು. ಮೊದಲಿಗೆ, ಸುಪ್ರೀಂ ಕೋರ್ಟು ಈ ರೀತಿಯ ತೀರ್ಪು ನೀಡಿರುವುದನ್ನು ಸ್ವಾಗತಿಸಬೇಕು, ಅದರಲ್ಲೂ ರಾಜ್ಯ ಸರ್ಕಾರಗಳಿಗೆ ಅಧಿಕಾರ ಕೊಟ್ಟಿದ್ದಾರೆ. ಜಾತಿ ಗಣತಿ ಕೂಡ ಆಗಬೇಕಿದೆ, ಅದಕ್ಕೆ ಎಲ್ಲ ಕಡೆಯಿಂದ ಒತ್ತಡ ಬರುತ್ತಿದೆ. ಅರ್ಹ ಜಾತಿಗಳನ್ನು ಗುರುತಿಸಿ ಮೀಸಲಾತಿ ನೀಡಬೇಕು ಎಂಬುದು ನಮ್ಮ ಆಶಯ” ಎಂದರು.

ಇದನ್ನೂ ಓದಿ; ಪರಿಶಿಷ್ಟ ಜಾತಿ, ಪಂಗಡಗಳಲ್ಲೇ ಹಿಂದುಳಿದ ಸಮುದಾಯಗಳಿಗೆ ಪ್ರತ್ಯೇಕ ಮೀಸಲಾತಿ: ಸುಪ್ರೀಂ ಕೋರ್ಟ್ ಸಮ್ಮತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...