Homeಕರ್ನಾಟಕಒಳ ಮೀಸಲಾತಿ | ದಲಿತ ಸಮುದಾಯಕ್ಕೆ ಶಾಶ್ವತ ಪರಿಹಾರ ಕಲ್ಪಿಸಲು ರಾಜ್ಯ ಸರ್ಕಾರಕ್ಕಿದು ಸುವರ್ಣಾವಕಾಶ: ಅಂಬಣ್ಣ...

ಒಳ ಮೀಸಲಾತಿ | ದಲಿತ ಸಮುದಾಯಕ್ಕೆ ಶಾಶ್ವತ ಪರಿಹಾರ ಕಲ್ಪಿಸಲು ರಾಜ್ಯ ಸರ್ಕಾರಕ್ಕಿದು ಸುವರ್ಣಾವಕಾಶ: ಅಂಬಣ್ಣ ಅರೋಲಿಕರ್

- Advertisement -
- Advertisement -

ಪರಿಶಿಷ್ಟ ಜಾತಿ, ಪಂಗಡಗಳಲ್ಲಿ ಅತ್ಯಂತ ಹಿಂದುಳಿದಿರುವ ಸಮುದಾಯಗಳಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ಕಲ್ಪಿಸಲು ಒಳ ಮೀಸಲಾತಿಯನ್ನು ಒದಗಿಸುವ ಪ್ರಸ್ತಾವಕ್ಕೆ ಸುಪ್ರೀಂ ಕೋರ್ಟ್‌ನ ಏಳು ನ್ಯಾಯಾಧೀಶರ ಸಾಂವಿಧಾನಿಕ ಪೀಠವು ಸಮ್ಮತಿ ಸೂಚಿಸಿದ್ದು, ರಾಜ್ಯದಲ್ಲಿ ಒಳ ಮೀಸಲಾತಿ ಹೋರಾಟದ ಮುಂಚೂಣಿಯಲ್ಲಿರುವ ಅಂಬಣ್ಣ ಅರೋಲಿಕರ್ ಅವರು ತೀರ್ಪನ್ನು ಸ್ವಾಗತಿಸಿದ್ದಾರೆ.

“ಸರ್ಕಾರಗಳು ಕಾಲಹರಣವನ್ನು ಮುಂದುವರಿಸದೆ, ಸಣ್ಣಪುಟ್ಟ ಲೋಪದೋಷಗಳನ್ನು ತಿದ್ದುಪಡಿ ಮಾಡಿಕೊಳ್ಳಬೇಕು. ದಮನಿತ ಸಮುದಾಯಗಳಿಗೆ ಶಾಶ್ವತ ಪರಿಹಾರ ಕಲ್ಪಿಸಲು ರಾಜ್ಯ ಸರ್ಕಾರಕ್ಕೆ ಇದು ಸುವರ್ಣಾವಕಾಶವಾಗಿದೆ” ಎಂದು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ನಾನುಗೌರಿ.ಕಾಮ್ ಜತೆಗೆ ಮಾತನಾಡಿದ ಅಂಬಣ್ಣ ಅರೋಲಿಕರ್, “ಸುಪ್ರೀಂ ಕೋರ್ಟಿನ ಒಳ ಮೀಸಲಾತಿ ಕುರಿತ ತೀರ್ಪು ಗೌರವಿಸಬೇಕಾದ ವಿಚಾರ. ಕಳೆದ ಮೂವತ್ತು ವರ್ಷಗಳಿಂದ ಈ ಬಗ್ಗೆ ಬೀದಿ ಹೋರಾಟ ಮಾಡಿದ್ದೇವೆ. 2020ರಲ್ಲಿ ಅರುಣ್ ಮಿಶ್ರಾ ಪೀಠದ ತೀರ್ಪು ಬಂದು, ಐದನೇ ಬೆಂಚ್‌ನಿಂದ ಏಳನೇ ಬೆಂಚಿಗೆ ಪ್ರಕರಣ ವರ್ಗಾವಣೆಯಾದ ನಂತರ ಏನಾಗುತ್ತದೋ ಎಂಬ ಬಗ್ಗೆ ಬಹಳ ಆತಂಕವಿತ್ತು. ಈಗ ಬಂದಿರುವ ತೀರ್ಪನ್ನು ನಾವು ಸ್ವಾಗತ್ತಿಸುತ್ತೇವೆ” ಎಂದು ಸಂತಸ ವ್ಯಕ್ತಪಡಿಸಿದರು.

“ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಕಾಲಹರಣ ಮಾಡದೆ, ಸುಪ್ರೀಂ ಕೋರ್ಟ್‌ ರಾಜ್ಯ ಸರ್ಕಾರಗಳಿಗೆ ಕೊಟ್ಟಿರುವ ಪರಮಾಧಿಕಾರವನ್ನು ಬಳಸಿಕೊಳ್ಳುವ ಮೂಲಕ ಕೂಡಲೇ ಒಳ ಮೀಸಲಾತಿ ಅನುಷ್ಠಾನಕ್ಕೆ ತರುವ ಕೆಲಸವನ್ನು ಯುದ್ದೋಪಾದಿಯಲ್ಲಿ ಮಾಡಬೇಕು. ಕಳೆದ 75 ವರ್ಷಗಳಿಂದ ಅಸ್ಪೃಶ್ಯ ಸಮುದಾಯಗಳಿಗೆ ವಿದ್ಯೆ, ಉದ್ಯೋಗದಲ್ಲಿ ಸಾಕಷ್ಟು ನಷ್ಟವಾಗಿದೆ. ಹಾಗಾಗಿ, ಕಾಲಹರಣ ಮುಂದುವರಿಸದೆ ಸರ್ಕಾರಗಳು ಸಣ್ಣಪುಟ್ಟ ಲೋಪದೋಷಗಳನ್ನು ತಿದ್ದುಪಡಿ ಮಾಡಿಕೊಳ್ಳಬೇಕು. ಶಾಶ್ವತ ಪರಿಹಾರ ಕಲ್ಪಿಸಲು ರಾಜ್ಯ ಸರ್ಕಾರಕ್ಕೆ ಇದು ಸುವರ್ಣಾವಕಾಶವಾಗಿದೆ; ಅದನ್ನು ಸರ್ಕಾರಗಳು ಕೂಡಲೇ ಮಾಡಬೇಕು” ಎಂದು ಅವರು ಒತ್ತಾಯಿಸಿದರು.

ನ್ಯಾಯಾಲಯದ ತೀರ್ಪನ್ನು ಪ್ರತಿಯೊಬ್ಬರೂ ಗೌರವಿಸಬೇಕು

“ನ್ಯಾಯಾಲಯದ ತೀರ್ಪನ್ನು ಪ್ರತಿಯೊಬ್ಬರೂ ಗೌರವಿಸಬೇಕು; ಗೌರವಿಸದೇ ಇದ್ದಲ್ಲಿ ಸಮುದಾಯದ ತೀರ್ಮಾನ ಮತ್ತು ನ್ಯಾಯಾಂಗದ ಛೀಮಾರಿಯನ್ನು ಯಾವುದೇ ಸರ್ಕಾರ ಎದುರಿಸಬೇಕಾಗುತ್ತದೆ. ಪ್ರತಿ ಸರ್ಕಾರ ಶೇ.100ರಷ್ಟು ಇದನ್ನು ಒಪ್ಪಲೇಬೇಕು, ಕಡೆಗಣಿಸಿದರೆ ಪ್ರತಿಫಲ ಎದುರಿಸಬೇಕು. ಸರ್ಕಾರಗಳು ಬೇಷರತ್ತಾಗಿ ಒಳ ಮೀಸಲಾತಿ ಜಾರಿ ಮಾಡಬೇಕು. ಯಾವುದೇ ಕಾರಣಕ್ಕೂ ನ್ಯಾಯದ ವಿಳಂಬ ಆಗಬಾರದು. ಒಂದು ಗುಂಪಾಗಿ ಸರ್ಕಾರದ ಮೇಲೆ ಒತ್ತಡ ಹೇರುವ ಕೆಲಸವನ್ನು ನಾವು ಮಾಡೇ ಮಾಡುತ್ತೇವೆ” ಎಂದರು.

“ಒಳ ಮೀಸಲಾತಿ ಹೋರಾಟ ದಕ್ಷಿಣ ಭಾರತದಲ್ಲಿ ನಡೆದಿದೆ. ಆ ಮೂಲಕ ಇಡೀ ದೇಶಕ್ಕೆ ದೊಡ್ಡ ಮಟ್ಟದ ಸಂದೇಶ ಸಿಕ್ಕಿದೆ. ದಕ್ಷಿಣ ಭಾರತ ಹೊರತುಪಡಿಸಿ ಬೇರೆಕಡೆ ಬೀದಿ ಹೋರಾಟ ಇರಲಿಲ್ಲ.. ತಮಿಳುನಾಡು ಸರ್ಕಾರ ಇದರಲ್ಲಿ ನೇರವಾಗಿ ಭಾಗಿ ಆಗಿತ್ತು. ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ ರಾಜ್ಯಗಳು ಪಾಲುದಾರಿಕೆ ಮತ್ತು ಸಕ್ರಿಯ ಭಾಗವಹಿಸುವುಕೆಯೇ ಈ ತೀರ್ಪು ಬುರುವುದಕ್ಕೆ ಕಾರಣವಾಗಿದೆ” ಎಂದು ವಿವರಿಸಿದರು.

“ಜನಸಂಖ್ಯೆ ಆಧಾರವಾಗಿ ಮೀಸಲಾತಿ ಹಂಚಬೇಕು ಎನ್ನುವುದೇ ನಮ್ಮ ಬೇಡಿಕೆ. ಆಯಾ ರಾಜ್ಯಗಳು ಈ ಬಗ್ಗೆ ಅಧ್ಯಯನ ಮಾಡಿ ಮೀಸಲಾತಿ ಹಂಚಿಕೆ ಮಾಡುವ ಕೆಲಸ ಆಗಬೇಕು. ಯಾವುದೇ ರಾಜ್ಯದಲ್ಲಿ ಮೀಸಲಾತಿಯ ಶೇ.50 ರ ಮಿತಿಯನ್ನು ಮೀರುವ ಸಾಧ್ಯತೆ ಸದ್ಯಕ್ಕಂತೂ ಇಲ್ಲ. ಅಸ್ತಿತ್ವದಲ್ಲಿರುವ ಮೀಸಲಾತಿಯಲ್ಲೇ ನಮ್ಮ ಪಾಲನ್ನು ಸಮಾನವಾಗಿ ಹಂಚಿದರೆ ಸಾಕು. ಈಗಾಗಲೇ ಕಳೆದ 75 ವರ್ಷಗಳಿಂದ ನಮ್ಮ ಸಮುದಾಯಕ್ಕೆ ವಿದ್ಯೆ-ಉದ್ಯೋಗದಲ್ಲಿ ಸಾಕಷ್ಟು ನಷ್ಟವಾಗಿದೆ; ಆರ್ಥಿಕ ನಷ್ಟವಾಗಿದೆ. ಕನಿಷ್ಠ ಐದಾರು ತಿಂಗಳಲ್ಲೇ ಈ ಪ್ರಕರಣ ಇತ್ಯರ್ಥಗೊಳಿಸುವುದು ಸೂಕ್ತ. ಅದು ಈ ತೀರ್ಪಿಗೆ ಗೌರವ ತರುತ್ತದೆ. ಇದುವರೆಗೆ ಮಾಡಿರುವ ಕಾಲಹರಣ ಮಾಡಬಾರದು ಎನ್ನುವುದೇ ನಮ್ಮ ಆಗ್ರಹ” ಎಂದು ಹೇಳಿದರು.

ಒಳಮೀಳಾತಿಯ ಚೆಂಡು ರಾಜ್ಯಗಳ ಕೋರ್ಟಿಗೆ ಬಂದು ಬಿದ್ದಿದೆ: ಶಿವಸುಂದರ್

“ಸುಪ್ರೀಂಕೋರ್ಟಿನ ಏಳು ಸದಸ್ಯರ ಸಾಂವಿಧಾನಿಕ ಪೀಠ 6-1 ಬಹುಮತದಲ್ಲಿ ಪರಿಶಿಷ್ಟರ ಮೀಸಲಾತಿಯ ಒಳಗೆ ಅತ್ಯಂತ ಹಿಂದುಳಿದವರನ್ನು ಗುರುತಿಸುವ ಹಾಗೂ ಪರಿಶಿಷ್ಟ ಮೀಸಲಾತಿಯೊಳಗೆ ಒಳ ಮೀಸಲಾತಿಯನ್ನು ಕಲ್ಪಿಸುವ ರಾಜ್ಯ ಗಳ ಅಧಿಕಾರವನ್ನು ಎತ್ತಿಹಿಡಿದಿದೆ. ಆದರೆ, ಹಾಗೆ ಮಾಡುವ ಮುನ್ನ ರಾಜ್ಯ ಸರ್ಕಾರವು ಅಂಥ ಮೀಸಲಾತಿಯು ಯಾವ ಸಮುದಾಯಗಳಿಗೆ ಅಗತ್ಯವಿದೆ ಎಂಬುದರ ಬಗ್ಗೆ ಅಧ್ಯಯನವನ್ನು ಮಾಡಬೇಕು. ಆ ಅಧ್ಯಯನವನ್ನು ಆಧರಿಸಿ ಒಳಮೀಸಲಾತಿ ಕಲ್ಪಿಸಬೇಕು. ಹಾಗೂ ಆ ಒಳಮೀಸಲಾತಿಯು ಪರಿಶಿಷ್ಟ ಮೀಸಲಾತಿಯ ಶೇ. 100 ಅನ್ನು ಒಳಗೊಳ್ಳಬಾರದು ಎಂದು ತೀರ್ಪಿತ್ತಿದೆ” ಎಂದು ಚಿಂತಕರಾದ ಶೀವಸುಂದರ್ ಅಭಿಪ್ರಾಯಪಟ್ಟಿದ್ದಾರೆ.

ಈ ಕುರಿತು ತಮ್ಮ ಅಭಿಪ್ರಾಯ ಹಂಚಿಕೊಂಡಿರುವ ಅವರು, “ಜಸ್ಟೀಸ್ ಬೇಲಾ ತ್ರಿವೇದಿ ಯವರು ಮಾತ್ರ ಒಳಮೀಸಲಾತಿಯ ತಾತ್ವಿಕನೆಲೆಯನ್ನು, ದೊಡ್ಡ ಪೀಠಕ್ಕೆ ಇಂಥಾ ಪ್ರಕರಣಗಳನ್ನು ವರ್ಗಾಯಿಸುವುದನ್ನು ವಿರೋಧಿಸಿ ಭಿನ್ನಮತದ ತೀರ್ಪಿತ್ತಿದ್ದಾರೆ” ಎಂದು ಹೇಳಿದ್ದಾರೆ.

“ಈಗ ಮತ್ತೆ ಒಳಮೀಳಾತಿಯ ಚೆಂಡು ರಾಜ್ಯಗಳ ಕೋರ್ಟಿಗೆ ಬಂದು ಬಿದ್ದಿದೆ. ಈಗ ರಾಜ್ಯಗಳು ಪರಿಶಿಷ್ಟ ವರ್ಗಗಳಲ್ಲಿ ಇರುವ ಜಾತಿಗಳ ಪ್ರಾತಿನಿಧ್ಯ, ಹಿಂದುಳಿದಿರುವಿಕೆಯ ಬಗ್ಗೆ ಅಧ್ಯಯನ ಕೈಗೊಳ್ಳಬೇಕು. ಈಗಾಗಲೇ ಇದರ ಸುತ್ತ ನಡೆದಿರುವ ಮೇಲ್ಜಾತಿಗಳ ಒಡೆದಾಳುವ ರಾಜಕಾರಣದ ಅನುಭವ ಇರುವ ಪರಿಶಿಷ್ಟ ಸಮುದಾಯಗಳು ಭ್ರಾತೃತ್ವ ಭಾವನೆಯಿಂದ ಅತ್ಯಂತ ವಂಚಿತರಿಗೆ ಮೊದಲ ಆದ್ಯತೆ ಎಂಬ ತತ್ವದ ಮೇರೆಗೆ ಮುಂದಾಗಬೇಕಿದೆ. ಹಾಗೆಯೇ ಒಳಮೀಸಲಾತಿಯು ಶೇ. 100 ರಷ್ಟು ಇರಬಾರದೆಂಬ ನಿರ್ಣಯಾದ ಹಿಂದಿರುವ ಅಪಾಯಕಾರಿ ‘ಮೆರಿಟೋಕ್ರಸಿ’ಯ ತಾತ್ವಿಕ ನೆಲೆಯನ್ನು ಮರುಪರಿಶೀಲನೆಗೊಡ್ಡಬೇಕು ಎಂದು ನನಗನಿಸುತ್ತದೆ” ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕೋಲಾರದ ಹಿರಿಯ ದಲಿತ ಹೋರಾಟಗಾರರಾದ ಹ.ಮಾ. ರಾಮಚಂದ್ರ ನಾನುಗೌರಿ.ಕಾಮ್ ಜತೆಗೆ ಮಾತನಾಡಿ, “ಒಳ ಮೀಸಲಾತಿ ಕುರಿತ ಸುಪ್ರೀಂ ಕೋರ್ಟಿನ ತೀರ್ಪನ್ನು ಸ್ವಾಗತಿಸುತ್ತೇವೆ.. ವೈಜ್ಞಾನಿಕವಾಗಿ ಅಧ್ಯಯನ ನಡೆಸಿ, ಮೀಸಲಾತಿ ಅಳವಡಿಸಿಕೊಳ್ಳುವುದು ಸೂಕ್ತ. ಏಕೆಂದರೆ, ಒಳ ಮೀಸಲಾತಿ ಕೇಳುತ್ತಿರುವ ದಲಿತ ಸಮುದಾಯದ ಎಲ್ಲ ಜಾತಿಗಳಿಗೆ ಪಾಲು ಮತ್ತು ಪ್ರಾತಿನಿಧ್ಯ ಸಿಗಬೇಕು. ಮೊದಲಿಗೆ, ಸುಪ್ರೀಂ ಕೋರ್ಟು ಈ ರೀತಿಯ ತೀರ್ಪು ನೀಡಿರುವುದನ್ನು ಸ್ವಾಗತಿಸಬೇಕು, ಅದರಲ್ಲೂ ರಾಜ್ಯ ಸರ್ಕಾರಗಳಿಗೆ ಅಧಿಕಾರ ಕೊಟ್ಟಿದ್ದಾರೆ. ಜಾತಿ ಗಣತಿ ಕೂಡ ಆಗಬೇಕಿದೆ, ಅದಕ್ಕೆ ಎಲ್ಲ ಕಡೆಯಿಂದ ಒತ್ತಡ ಬರುತ್ತಿದೆ. ಅರ್ಹ ಜಾತಿಗಳನ್ನು ಗುರುತಿಸಿ ಮೀಸಲಾತಿ ನೀಡಬೇಕು ಎಂಬುದು ನಮ್ಮ ಆಶಯ” ಎಂದರು.

ಇದನ್ನೂ ಓದಿ; ಪರಿಶಿಷ್ಟ ಜಾತಿ, ಪಂಗಡಗಳಲ್ಲೇ ಹಿಂದುಳಿದ ಸಮುದಾಯಗಳಿಗೆ ಪ್ರತ್ಯೇಕ ಮೀಸಲಾತಿ: ಸುಪ್ರೀಂ ಕೋರ್ಟ್ ಸಮ್ಮತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...