Homeಕರ್ನಾಟಕಒಳ ಮೀಸಲಾತಿ | ದಲಿತ ಸಮುದಾಯಕ್ಕೆ ಶಾಶ್ವತ ಪರಿಹಾರ ಕಲ್ಪಿಸಲು ರಾಜ್ಯ ಸರ್ಕಾರಕ್ಕಿದು ಸುವರ್ಣಾವಕಾಶ: ಅಂಬಣ್ಣ...

ಒಳ ಮೀಸಲಾತಿ | ದಲಿತ ಸಮುದಾಯಕ್ಕೆ ಶಾಶ್ವತ ಪರಿಹಾರ ಕಲ್ಪಿಸಲು ರಾಜ್ಯ ಸರ್ಕಾರಕ್ಕಿದು ಸುವರ್ಣಾವಕಾಶ: ಅಂಬಣ್ಣ ಅರೋಲಿಕರ್

- Advertisement -
- Advertisement -

ಪರಿಶಿಷ್ಟ ಜಾತಿ, ಪಂಗಡಗಳಲ್ಲಿ ಅತ್ಯಂತ ಹಿಂದುಳಿದಿರುವ ಸಮುದಾಯಗಳಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ಕಲ್ಪಿಸಲು ಒಳ ಮೀಸಲಾತಿಯನ್ನು ಒದಗಿಸುವ ಪ್ರಸ್ತಾವಕ್ಕೆ ಸುಪ್ರೀಂ ಕೋರ್ಟ್‌ನ ಏಳು ನ್ಯಾಯಾಧೀಶರ ಸಾಂವಿಧಾನಿಕ ಪೀಠವು ಸಮ್ಮತಿ ಸೂಚಿಸಿದ್ದು, ರಾಜ್ಯದಲ್ಲಿ ಒಳ ಮೀಸಲಾತಿ ಹೋರಾಟದ ಮುಂಚೂಣಿಯಲ್ಲಿರುವ ಅಂಬಣ್ಣ ಅರೋಲಿಕರ್ ಅವರು ತೀರ್ಪನ್ನು ಸ್ವಾಗತಿಸಿದ್ದಾರೆ.

“ಸರ್ಕಾರಗಳು ಕಾಲಹರಣವನ್ನು ಮುಂದುವರಿಸದೆ, ಸಣ್ಣಪುಟ್ಟ ಲೋಪದೋಷಗಳನ್ನು ತಿದ್ದುಪಡಿ ಮಾಡಿಕೊಳ್ಳಬೇಕು. ದಮನಿತ ಸಮುದಾಯಗಳಿಗೆ ಶಾಶ್ವತ ಪರಿಹಾರ ಕಲ್ಪಿಸಲು ರಾಜ್ಯ ಸರ್ಕಾರಕ್ಕೆ ಇದು ಸುವರ್ಣಾವಕಾಶವಾಗಿದೆ” ಎಂದು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ನಾನುಗೌರಿ.ಕಾಮ್ ಜತೆಗೆ ಮಾತನಾಡಿದ ಅಂಬಣ್ಣ ಅರೋಲಿಕರ್, “ಸುಪ್ರೀಂ ಕೋರ್ಟಿನ ಒಳ ಮೀಸಲಾತಿ ಕುರಿತ ತೀರ್ಪು ಗೌರವಿಸಬೇಕಾದ ವಿಚಾರ. ಕಳೆದ ಮೂವತ್ತು ವರ್ಷಗಳಿಂದ ಈ ಬಗ್ಗೆ ಬೀದಿ ಹೋರಾಟ ಮಾಡಿದ್ದೇವೆ. 2020ರಲ್ಲಿ ಅರುಣ್ ಮಿಶ್ರಾ ಪೀಠದ ತೀರ್ಪು ಬಂದು, ಐದನೇ ಬೆಂಚ್‌ನಿಂದ ಏಳನೇ ಬೆಂಚಿಗೆ ಪ್ರಕರಣ ವರ್ಗಾವಣೆಯಾದ ನಂತರ ಏನಾಗುತ್ತದೋ ಎಂಬ ಬಗ್ಗೆ ಬಹಳ ಆತಂಕವಿತ್ತು. ಈಗ ಬಂದಿರುವ ತೀರ್ಪನ್ನು ನಾವು ಸ್ವಾಗತ್ತಿಸುತ್ತೇವೆ” ಎಂದು ಸಂತಸ ವ್ಯಕ್ತಪಡಿಸಿದರು.

“ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಕಾಲಹರಣ ಮಾಡದೆ, ಸುಪ್ರೀಂ ಕೋರ್ಟ್‌ ರಾಜ್ಯ ಸರ್ಕಾರಗಳಿಗೆ ಕೊಟ್ಟಿರುವ ಪರಮಾಧಿಕಾರವನ್ನು ಬಳಸಿಕೊಳ್ಳುವ ಮೂಲಕ ಕೂಡಲೇ ಒಳ ಮೀಸಲಾತಿ ಅನುಷ್ಠಾನಕ್ಕೆ ತರುವ ಕೆಲಸವನ್ನು ಯುದ್ದೋಪಾದಿಯಲ್ಲಿ ಮಾಡಬೇಕು. ಕಳೆದ 75 ವರ್ಷಗಳಿಂದ ಅಸ್ಪೃಶ್ಯ ಸಮುದಾಯಗಳಿಗೆ ವಿದ್ಯೆ, ಉದ್ಯೋಗದಲ್ಲಿ ಸಾಕಷ್ಟು ನಷ್ಟವಾಗಿದೆ. ಹಾಗಾಗಿ, ಕಾಲಹರಣ ಮುಂದುವರಿಸದೆ ಸರ್ಕಾರಗಳು ಸಣ್ಣಪುಟ್ಟ ಲೋಪದೋಷಗಳನ್ನು ತಿದ್ದುಪಡಿ ಮಾಡಿಕೊಳ್ಳಬೇಕು. ಶಾಶ್ವತ ಪರಿಹಾರ ಕಲ್ಪಿಸಲು ರಾಜ್ಯ ಸರ್ಕಾರಕ್ಕೆ ಇದು ಸುವರ್ಣಾವಕಾಶವಾಗಿದೆ; ಅದನ್ನು ಸರ್ಕಾರಗಳು ಕೂಡಲೇ ಮಾಡಬೇಕು” ಎಂದು ಅವರು ಒತ್ತಾಯಿಸಿದರು.

ನ್ಯಾಯಾಲಯದ ತೀರ್ಪನ್ನು ಪ್ರತಿಯೊಬ್ಬರೂ ಗೌರವಿಸಬೇಕು

“ನ್ಯಾಯಾಲಯದ ತೀರ್ಪನ್ನು ಪ್ರತಿಯೊಬ್ಬರೂ ಗೌರವಿಸಬೇಕು; ಗೌರವಿಸದೇ ಇದ್ದಲ್ಲಿ ಸಮುದಾಯದ ತೀರ್ಮಾನ ಮತ್ತು ನ್ಯಾಯಾಂಗದ ಛೀಮಾರಿಯನ್ನು ಯಾವುದೇ ಸರ್ಕಾರ ಎದುರಿಸಬೇಕಾಗುತ್ತದೆ. ಪ್ರತಿ ಸರ್ಕಾರ ಶೇ.100ರಷ್ಟು ಇದನ್ನು ಒಪ್ಪಲೇಬೇಕು, ಕಡೆಗಣಿಸಿದರೆ ಪ್ರತಿಫಲ ಎದುರಿಸಬೇಕು. ಸರ್ಕಾರಗಳು ಬೇಷರತ್ತಾಗಿ ಒಳ ಮೀಸಲಾತಿ ಜಾರಿ ಮಾಡಬೇಕು. ಯಾವುದೇ ಕಾರಣಕ್ಕೂ ನ್ಯಾಯದ ವಿಳಂಬ ಆಗಬಾರದು. ಒಂದು ಗುಂಪಾಗಿ ಸರ್ಕಾರದ ಮೇಲೆ ಒತ್ತಡ ಹೇರುವ ಕೆಲಸವನ್ನು ನಾವು ಮಾಡೇ ಮಾಡುತ್ತೇವೆ” ಎಂದರು.

“ಒಳ ಮೀಸಲಾತಿ ಹೋರಾಟ ದಕ್ಷಿಣ ಭಾರತದಲ್ಲಿ ನಡೆದಿದೆ. ಆ ಮೂಲಕ ಇಡೀ ದೇಶಕ್ಕೆ ದೊಡ್ಡ ಮಟ್ಟದ ಸಂದೇಶ ಸಿಕ್ಕಿದೆ. ದಕ್ಷಿಣ ಭಾರತ ಹೊರತುಪಡಿಸಿ ಬೇರೆಕಡೆ ಬೀದಿ ಹೋರಾಟ ಇರಲಿಲ್ಲ.. ತಮಿಳುನಾಡು ಸರ್ಕಾರ ಇದರಲ್ಲಿ ನೇರವಾಗಿ ಭಾಗಿ ಆಗಿತ್ತು. ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ ರಾಜ್ಯಗಳು ಪಾಲುದಾರಿಕೆ ಮತ್ತು ಸಕ್ರಿಯ ಭಾಗವಹಿಸುವುಕೆಯೇ ಈ ತೀರ್ಪು ಬುರುವುದಕ್ಕೆ ಕಾರಣವಾಗಿದೆ” ಎಂದು ವಿವರಿಸಿದರು.

“ಜನಸಂಖ್ಯೆ ಆಧಾರವಾಗಿ ಮೀಸಲಾತಿ ಹಂಚಬೇಕು ಎನ್ನುವುದೇ ನಮ್ಮ ಬೇಡಿಕೆ. ಆಯಾ ರಾಜ್ಯಗಳು ಈ ಬಗ್ಗೆ ಅಧ್ಯಯನ ಮಾಡಿ ಮೀಸಲಾತಿ ಹಂಚಿಕೆ ಮಾಡುವ ಕೆಲಸ ಆಗಬೇಕು. ಯಾವುದೇ ರಾಜ್ಯದಲ್ಲಿ ಮೀಸಲಾತಿಯ ಶೇ.50 ರ ಮಿತಿಯನ್ನು ಮೀರುವ ಸಾಧ್ಯತೆ ಸದ್ಯಕ್ಕಂತೂ ಇಲ್ಲ. ಅಸ್ತಿತ್ವದಲ್ಲಿರುವ ಮೀಸಲಾತಿಯಲ್ಲೇ ನಮ್ಮ ಪಾಲನ್ನು ಸಮಾನವಾಗಿ ಹಂಚಿದರೆ ಸಾಕು. ಈಗಾಗಲೇ ಕಳೆದ 75 ವರ್ಷಗಳಿಂದ ನಮ್ಮ ಸಮುದಾಯಕ್ಕೆ ವಿದ್ಯೆ-ಉದ್ಯೋಗದಲ್ಲಿ ಸಾಕಷ್ಟು ನಷ್ಟವಾಗಿದೆ; ಆರ್ಥಿಕ ನಷ್ಟವಾಗಿದೆ. ಕನಿಷ್ಠ ಐದಾರು ತಿಂಗಳಲ್ಲೇ ಈ ಪ್ರಕರಣ ಇತ್ಯರ್ಥಗೊಳಿಸುವುದು ಸೂಕ್ತ. ಅದು ಈ ತೀರ್ಪಿಗೆ ಗೌರವ ತರುತ್ತದೆ. ಇದುವರೆಗೆ ಮಾಡಿರುವ ಕಾಲಹರಣ ಮಾಡಬಾರದು ಎನ್ನುವುದೇ ನಮ್ಮ ಆಗ್ರಹ” ಎಂದು ಹೇಳಿದರು.

ಒಳಮೀಳಾತಿಯ ಚೆಂಡು ರಾಜ್ಯಗಳ ಕೋರ್ಟಿಗೆ ಬಂದು ಬಿದ್ದಿದೆ: ಶಿವಸುಂದರ್

“ಸುಪ್ರೀಂಕೋರ್ಟಿನ ಏಳು ಸದಸ್ಯರ ಸಾಂವಿಧಾನಿಕ ಪೀಠ 6-1 ಬಹುಮತದಲ್ಲಿ ಪರಿಶಿಷ್ಟರ ಮೀಸಲಾತಿಯ ಒಳಗೆ ಅತ್ಯಂತ ಹಿಂದುಳಿದವರನ್ನು ಗುರುತಿಸುವ ಹಾಗೂ ಪರಿಶಿಷ್ಟ ಮೀಸಲಾತಿಯೊಳಗೆ ಒಳ ಮೀಸಲಾತಿಯನ್ನು ಕಲ್ಪಿಸುವ ರಾಜ್ಯ ಗಳ ಅಧಿಕಾರವನ್ನು ಎತ್ತಿಹಿಡಿದಿದೆ. ಆದರೆ, ಹಾಗೆ ಮಾಡುವ ಮುನ್ನ ರಾಜ್ಯ ಸರ್ಕಾರವು ಅಂಥ ಮೀಸಲಾತಿಯು ಯಾವ ಸಮುದಾಯಗಳಿಗೆ ಅಗತ್ಯವಿದೆ ಎಂಬುದರ ಬಗ್ಗೆ ಅಧ್ಯಯನವನ್ನು ಮಾಡಬೇಕು. ಆ ಅಧ್ಯಯನವನ್ನು ಆಧರಿಸಿ ಒಳಮೀಸಲಾತಿ ಕಲ್ಪಿಸಬೇಕು. ಹಾಗೂ ಆ ಒಳಮೀಸಲಾತಿಯು ಪರಿಶಿಷ್ಟ ಮೀಸಲಾತಿಯ ಶೇ. 100 ಅನ್ನು ಒಳಗೊಳ್ಳಬಾರದು ಎಂದು ತೀರ್ಪಿತ್ತಿದೆ” ಎಂದು ಚಿಂತಕರಾದ ಶೀವಸುಂದರ್ ಅಭಿಪ್ರಾಯಪಟ್ಟಿದ್ದಾರೆ.

ಈ ಕುರಿತು ತಮ್ಮ ಅಭಿಪ್ರಾಯ ಹಂಚಿಕೊಂಡಿರುವ ಅವರು, “ಜಸ್ಟೀಸ್ ಬೇಲಾ ತ್ರಿವೇದಿ ಯವರು ಮಾತ್ರ ಒಳಮೀಸಲಾತಿಯ ತಾತ್ವಿಕನೆಲೆಯನ್ನು, ದೊಡ್ಡ ಪೀಠಕ್ಕೆ ಇಂಥಾ ಪ್ರಕರಣಗಳನ್ನು ವರ್ಗಾಯಿಸುವುದನ್ನು ವಿರೋಧಿಸಿ ಭಿನ್ನಮತದ ತೀರ್ಪಿತ್ತಿದ್ದಾರೆ” ಎಂದು ಹೇಳಿದ್ದಾರೆ.

“ಈಗ ಮತ್ತೆ ಒಳಮೀಳಾತಿಯ ಚೆಂಡು ರಾಜ್ಯಗಳ ಕೋರ್ಟಿಗೆ ಬಂದು ಬಿದ್ದಿದೆ. ಈಗ ರಾಜ್ಯಗಳು ಪರಿಶಿಷ್ಟ ವರ್ಗಗಳಲ್ಲಿ ಇರುವ ಜಾತಿಗಳ ಪ್ರಾತಿನಿಧ್ಯ, ಹಿಂದುಳಿದಿರುವಿಕೆಯ ಬಗ್ಗೆ ಅಧ್ಯಯನ ಕೈಗೊಳ್ಳಬೇಕು. ಈಗಾಗಲೇ ಇದರ ಸುತ್ತ ನಡೆದಿರುವ ಮೇಲ್ಜಾತಿಗಳ ಒಡೆದಾಳುವ ರಾಜಕಾರಣದ ಅನುಭವ ಇರುವ ಪರಿಶಿಷ್ಟ ಸಮುದಾಯಗಳು ಭ್ರಾತೃತ್ವ ಭಾವನೆಯಿಂದ ಅತ್ಯಂತ ವಂಚಿತರಿಗೆ ಮೊದಲ ಆದ್ಯತೆ ಎಂಬ ತತ್ವದ ಮೇರೆಗೆ ಮುಂದಾಗಬೇಕಿದೆ. ಹಾಗೆಯೇ ಒಳಮೀಸಲಾತಿಯು ಶೇ. 100 ರಷ್ಟು ಇರಬಾರದೆಂಬ ನಿರ್ಣಯಾದ ಹಿಂದಿರುವ ಅಪಾಯಕಾರಿ ‘ಮೆರಿಟೋಕ್ರಸಿ’ಯ ತಾತ್ವಿಕ ನೆಲೆಯನ್ನು ಮರುಪರಿಶೀಲನೆಗೊಡ್ಡಬೇಕು ಎಂದು ನನಗನಿಸುತ್ತದೆ” ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕೋಲಾರದ ಹಿರಿಯ ದಲಿತ ಹೋರಾಟಗಾರರಾದ ಹ.ಮಾ. ರಾಮಚಂದ್ರ ನಾನುಗೌರಿ.ಕಾಮ್ ಜತೆಗೆ ಮಾತನಾಡಿ, “ಒಳ ಮೀಸಲಾತಿ ಕುರಿತ ಸುಪ್ರೀಂ ಕೋರ್ಟಿನ ತೀರ್ಪನ್ನು ಸ್ವಾಗತಿಸುತ್ತೇವೆ.. ವೈಜ್ಞಾನಿಕವಾಗಿ ಅಧ್ಯಯನ ನಡೆಸಿ, ಮೀಸಲಾತಿ ಅಳವಡಿಸಿಕೊಳ್ಳುವುದು ಸೂಕ್ತ. ಏಕೆಂದರೆ, ಒಳ ಮೀಸಲಾತಿ ಕೇಳುತ್ತಿರುವ ದಲಿತ ಸಮುದಾಯದ ಎಲ್ಲ ಜಾತಿಗಳಿಗೆ ಪಾಲು ಮತ್ತು ಪ್ರಾತಿನಿಧ್ಯ ಸಿಗಬೇಕು. ಮೊದಲಿಗೆ, ಸುಪ್ರೀಂ ಕೋರ್ಟು ಈ ರೀತಿಯ ತೀರ್ಪು ನೀಡಿರುವುದನ್ನು ಸ್ವಾಗತಿಸಬೇಕು, ಅದರಲ್ಲೂ ರಾಜ್ಯ ಸರ್ಕಾರಗಳಿಗೆ ಅಧಿಕಾರ ಕೊಟ್ಟಿದ್ದಾರೆ. ಜಾತಿ ಗಣತಿ ಕೂಡ ಆಗಬೇಕಿದೆ, ಅದಕ್ಕೆ ಎಲ್ಲ ಕಡೆಯಿಂದ ಒತ್ತಡ ಬರುತ್ತಿದೆ. ಅರ್ಹ ಜಾತಿಗಳನ್ನು ಗುರುತಿಸಿ ಮೀಸಲಾತಿ ನೀಡಬೇಕು ಎಂಬುದು ನಮ್ಮ ಆಶಯ” ಎಂದರು.

ಇದನ್ನೂ ಓದಿ; ಪರಿಶಿಷ್ಟ ಜಾತಿ, ಪಂಗಡಗಳಲ್ಲೇ ಹಿಂದುಳಿದ ಸಮುದಾಯಗಳಿಗೆ ಪ್ರತ್ಯೇಕ ಮೀಸಲಾತಿ: ಸುಪ್ರೀಂ ಕೋರ್ಟ್ ಸಮ್ಮತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

'ಎಲ್ ಮೆಂಚೊ' ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು...

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...