Homeಕರ್ನಾಟಕಒಳ ಮೀಸಲಾತಿ | ದಲಿತ ಸಮುದಾಯಕ್ಕೆ ಶಾಶ್ವತ ಪರಿಹಾರ ಕಲ್ಪಿಸಲು ರಾಜ್ಯ ಸರ್ಕಾರಕ್ಕಿದು ಸುವರ್ಣಾವಕಾಶ: ಅಂಬಣ್ಣ...

ಒಳ ಮೀಸಲಾತಿ | ದಲಿತ ಸಮುದಾಯಕ್ಕೆ ಶಾಶ್ವತ ಪರಿಹಾರ ಕಲ್ಪಿಸಲು ರಾಜ್ಯ ಸರ್ಕಾರಕ್ಕಿದು ಸುವರ್ಣಾವಕಾಶ: ಅಂಬಣ್ಣ ಅರೋಲಿಕರ್

- Advertisement -
- Advertisement -

ಪರಿಶಿಷ್ಟ ಜಾತಿ, ಪಂಗಡಗಳಲ್ಲಿ ಅತ್ಯಂತ ಹಿಂದುಳಿದಿರುವ ಸಮುದಾಯಗಳಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ಕಲ್ಪಿಸಲು ಒಳ ಮೀಸಲಾತಿಯನ್ನು ಒದಗಿಸುವ ಪ್ರಸ್ತಾವಕ್ಕೆ ಸುಪ್ರೀಂ ಕೋರ್ಟ್‌ನ ಏಳು ನ್ಯಾಯಾಧೀಶರ ಸಾಂವಿಧಾನಿಕ ಪೀಠವು ಸಮ್ಮತಿ ಸೂಚಿಸಿದ್ದು, ರಾಜ್ಯದಲ್ಲಿ ಒಳ ಮೀಸಲಾತಿ ಹೋರಾಟದ ಮುಂಚೂಣಿಯಲ್ಲಿರುವ ಅಂಬಣ್ಣ ಅರೋಲಿಕರ್ ಅವರು ತೀರ್ಪನ್ನು ಸ್ವಾಗತಿಸಿದ್ದಾರೆ.

“ಸರ್ಕಾರಗಳು ಕಾಲಹರಣವನ್ನು ಮುಂದುವರಿಸದೆ, ಸಣ್ಣಪುಟ್ಟ ಲೋಪದೋಷಗಳನ್ನು ತಿದ್ದುಪಡಿ ಮಾಡಿಕೊಳ್ಳಬೇಕು. ದಮನಿತ ಸಮುದಾಯಗಳಿಗೆ ಶಾಶ್ವತ ಪರಿಹಾರ ಕಲ್ಪಿಸಲು ರಾಜ್ಯ ಸರ್ಕಾರಕ್ಕೆ ಇದು ಸುವರ್ಣಾವಕಾಶವಾಗಿದೆ” ಎಂದು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ನಾನುಗೌರಿ.ಕಾಮ್ ಜತೆಗೆ ಮಾತನಾಡಿದ ಅಂಬಣ್ಣ ಅರೋಲಿಕರ್, “ಸುಪ್ರೀಂ ಕೋರ್ಟಿನ ಒಳ ಮೀಸಲಾತಿ ಕುರಿತ ತೀರ್ಪು ಗೌರವಿಸಬೇಕಾದ ವಿಚಾರ. ಕಳೆದ ಮೂವತ್ತು ವರ್ಷಗಳಿಂದ ಈ ಬಗ್ಗೆ ಬೀದಿ ಹೋರಾಟ ಮಾಡಿದ್ದೇವೆ. 2020ರಲ್ಲಿ ಅರುಣ್ ಮಿಶ್ರಾ ಪೀಠದ ತೀರ್ಪು ಬಂದು, ಐದನೇ ಬೆಂಚ್‌ನಿಂದ ಏಳನೇ ಬೆಂಚಿಗೆ ಪ್ರಕರಣ ವರ್ಗಾವಣೆಯಾದ ನಂತರ ಏನಾಗುತ್ತದೋ ಎಂಬ ಬಗ್ಗೆ ಬಹಳ ಆತಂಕವಿತ್ತು. ಈಗ ಬಂದಿರುವ ತೀರ್ಪನ್ನು ನಾವು ಸ್ವಾಗತ್ತಿಸುತ್ತೇವೆ” ಎಂದು ಸಂತಸ ವ್ಯಕ್ತಪಡಿಸಿದರು.

“ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಕಾಲಹರಣ ಮಾಡದೆ, ಸುಪ್ರೀಂ ಕೋರ್ಟ್‌ ರಾಜ್ಯ ಸರ್ಕಾರಗಳಿಗೆ ಕೊಟ್ಟಿರುವ ಪರಮಾಧಿಕಾರವನ್ನು ಬಳಸಿಕೊಳ್ಳುವ ಮೂಲಕ ಕೂಡಲೇ ಒಳ ಮೀಸಲಾತಿ ಅನುಷ್ಠಾನಕ್ಕೆ ತರುವ ಕೆಲಸವನ್ನು ಯುದ್ದೋಪಾದಿಯಲ್ಲಿ ಮಾಡಬೇಕು. ಕಳೆದ 75 ವರ್ಷಗಳಿಂದ ಅಸ್ಪೃಶ್ಯ ಸಮುದಾಯಗಳಿಗೆ ವಿದ್ಯೆ, ಉದ್ಯೋಗದಲ್ಲಿ ಸಾಕಷ್ಟು ನಷ್ಟವಾಗಿದೆ. ಹಾಗಾಗಿ, ಕಾಲಹರಣ ಮುಂದುವರಿಸದೆ ಸರ್ಕಾರಗಳು ಸಣ್ಣಪುಟ್ಟ ಲೋಪದೋಷಗಳನ್ನು ತಿದ್ದುಪಡಿ ಮಾಡಿಕೊಳ್ಳಬೇಕು. ಶಾಶ್ವತ ಪರಿಹಾರ ಕಲ್ಪಿಸಲು ರಾಜ್ಯ ಸರ್ಕಾರಕ್ಕೆ ಇದು ಸುವರ್ಣಾವಕಾಶವಾಗಿದೆ; ಅದನ್ನು ಸರ್ಕಾರಗಳು ಕೂಡಲೇ ಮಾಡಬೇಕು” ಎಂದು ಅವರು ಒತ್ತಾಯಿಸಿದರು.

ನ್ಯಾಯಾಲಯದ ತೀರ್ಪನ್ನು ಪ್ರತಿಯೊಬ್ಬರೂ ಗೌರವಿಸಬೇಕು

“ನ್ಯಾಯಾಲಯದ ತೀರ್ಪನ್ನು ಪ್ರತಿಯೊಬ್ಬರೂ ಗೌರವಿಸಬೇಕು; ಗೌರವಿಸದೇ ಇದ್ದಲ್ಲಿ ಸಮುದಾಯದ ತೀರ್ಮಾನ ಮತ್ತು ನ್ಯಾಯಾಂಗದ ಛೀಮಾರಿಯನ್ನು ಯಾವುದೇ ಸರ್ಕಾರ ಎದುರಿಸಬೇಕಾಗುತ್ತದೆ. ಪ್ರತಿ ಸರ್ಕಾರ ಶೇ.100ರಷ್ಟು ಇದನ್ನು ಒಪ್ಪಲೇಬೇಕು, ಕಡೆಗಣಿಸಿದರೆ ಪ್ರತಿಫಲ ಎದುರಿಸಬೇಕು. ಸರ್ಕಾರಗಳು ಬೇಷರತ್ತಾಗಿ ಒಳ ಮೀಸಲಾತಿ ಜಾರಿ ಮಾಡಬೇಕು. ಯಾವುದೇ ಕಾರಣಕ್ಕೂ ನ್ಯಾಯದ ವಿಳಂಬ ಆಗಬಾರದು. ಒಂದು ಗುಂಪಾಗಿ ಸರ್ಕಾರದ ಮೇಲೆ ಒತ್ತಡ ಹೇರುವ ಕೆಲಸವನ್ನು ನಾವು ಮಾಡೇ ಮಾಡುತ್ತೇವೆ” ಎಂದರು.

“ಒಳ ಮೀಸಲಾತಿ ಹೋರಾಟ ದಕ್ಷಿಣ ಭಾರತದಲ್ಲಿ ನಡೆದಿದೆ. ಆ ಮೂಲಕ ಇಡೀ ದೇಶಕ್ಕೆ ದೊಡ್ಡ ಮಟ್ಟದ ಸಂದೇಶ ಸಿಕ್ಕಿದೆ. ದಕ್ಷಿಣ ಭಾರತ ಹೊರತುಪಡಿಸಿ ಬೇರೆಕಡೆ ಬೀದಿ ಹೋರಾಟ ಇರಲಿಲ್ಲ.. ತಮಿಳುನಾಡು ಸರ್ಕಾರ ಇದರಲ್ಲಿ ನೇರವಾಗಿ ಭಾಗಿ ಆಗಿತ್ತು. ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ ರಾಜ್ಯಗಳು ಪಾಲುದಾರಿಕೆ ಮತ್ತು ಸಕ್ರಿಯ ಭಾಗವಹಿಸುವುಕೆಯೇ ಈ ತೀರ್ಪು ಬುರುವುದಕ್ಕೆ ಕಾರಣವಾಗಿದೆ” ಎಂದು ವಿವರಿಸಿದರು.

“ಜನಸಂಖ್ಯೆ ಆಧಾರವಾಗಿ ಮೀಸಲಾತಿ ಹಂಚಬೇಕು ಎನ್ನುವುದೇ ನಮ್ಮ ಬೇಡಿಕೆ. ಆಯಾ ರಾಜ್ಯಗಳು ಈ ಬಗ್ಗೆ ಅಧ್ಯಯನ ಮಾಡಿ ಮೀಸಲಾತಿ ಹಂಚಿಕೆ ಮಾಡುವ ಕೆಲಸ ಆಗಬೇಕು. ಯಾವುದೇ ರಾಜ್ಯದಲ್ಲಿ ಮೀಸಲಾತಿಯ ಶೇ.50 ರ ಮಿತಿಯನ್ನು ಮೀರುವ ಸಾಧ್ಯತೆ ಸದ್ಯಕ್ಕಂತೂ ಇಲ್ಲ. ಅಸ್ತಿತ್ವದಲ್ಲಿರುವ ಮೀಸಲಾತಿಯಲ್ಲೇ ನಮ್ಮ ಪಾಲನ್ನು ಸಮಾನವಾಗಿ ಹಂಚಿದರೆ ಸಾಕು. ಈಗಾಗಲೇ ಕಳೆದ 75 ವರ್ಷಗಳಿಂದ ನಮ್ಮ ಸಮುದಾಯಕ್ಕೆ ವಿದ್ಯೆ-ಉದ್ಯೋಗದಲ್ಲಿ ಸಾಕಷ್ಟು ನಷ್ಟವಾಗಿದೆ; ಆರ್ಥಿಕ ನಷ್ಟವಾಗಿದೆ. ಕನಿಷ್ಠ ಐದಾರು ತಿಂಗಳಲ್ಲೇ ಈ ಪ್ರಕರಣ ಇತ್ಯರ್ಥಗೊಳಿಸುವುದು ಸೂಕ್ತ. ಅದು ಈ ತೀರ್ಪಿಗೆ ಗೌರವ ತರುತ್ತದೆ. ಇದುವರೆಗೆ ಮಾಡಿರುವ ಕಾಲಹರಣ ಮಾಡಬಾರದು ಎನ್ನುವುದೇ ನಮ್ಮ ಆಗ್ರಹ” ಎಂದು ಹೇಳಿದರು.

ಒಳಮೀಳಾತಿಯ ಚೆಂಡು ರಾಜ್ಯಗಳ ಕೋರ್ಟಿಗೆ ಬಂದು ಬಿದ್ದಿದೆ: ಶಿವಸುಂದರ್

“ಸುಪ್ರೀಂಕೋರ್ಟಿನ ಏಳು ಸದಸ್ಯರ ಸಾಂವಿಧಾನಿಕ ಪೀಠ 6-1 ಬಹುಮತದಲ್ಲಿ ಪರಿಶಿಷ್ಟರ ಮೀಸಲಾತಿಯ ಒಳಗೆ ಅತ್ಯಂತ ಹಿಂದುಳಿದವರನ್ನು ಗುರುತಿಸುವ ಹಾಗೂ ಪರಿಶಿಷ್ಟ ಮೀಸಲಾತಿಯೊಳಗೆ ಒಳ ಮೀಸಲಾತಿಯನ್ನು ಕಲ್ಪಿಸುವ ರಾಜ್ಯ ಗಳ ಅಧಿಕಾರವನ್ನು ಎತ್ತಿಹಿಡಿದಿದೆ. ಆದರೆ, ಹಾಗೆ ಮಾಡುವ ಮುನ್ನ ರಾಜ್ಯ ಸರ್ಕಾರವು ಅಂಥ ಮೀಸಲಾತಿಯು ಯಾವ ಸಮುದಾಯಗಳಿಗೆ ಅಗತ್ಯವಿದೆ ಎಂಬುದರ ಬಗ್ಗೆ ಅಧ್ಯಯನವನ್ನು ಮಾಡಬೇಕು. ಆ ಅಧ್ಯಯನವನ್ನು ಆಧರಿಸಿ ಒಳಮೀಸಲಾತಿ ಕಲ್ಪಿಸಬೇಕು. ಹಾಗೂ ಆ ಒಳಮೀಸಲಾತಿಯು ಪರಿಶಿಷ್ಟ ಮೀಸಲಾತಿಯ ಶೇ. 100 ಅನ್ನು ಒಳಗೊಳ್ಳಬಾರದು ಎಂದು ತೀರ್ಪಿತ್ತಿದೆ” ಎಂದು ಚಿಂತಕರಾದ ಶೀವಸುಂದರ್ ಅಭಿಪ್ರಾಯಪಟ್ಟಿದ್ದಾರೆ.

ಈ ಕುರಿತು ತಮ್ಮ ಅಭಿಪ್ರಾಯ ಹಂಚಿಕೊಂಡಿರುವ ಅವರು, “ಜಸ್ಟೀಸ್ ಬೇಲಾ ತ್ರಿವೇದಿ ಯವರು ಮಾತ್ರ ಒಳಮೀಸಲಾತಿಯ ತಾತ್ವಿಕನೆಲೆಯನ್ನು, ದೊಡ್ಡ ಪೀಠಕ್ಕೆ ಇಂಥಾ ಪ್ರಕರಣಗಳನ್ನು ವರ್ಗಾಯಿಸುವುದನ್ನು ವಿರೋಧಿಸಿ ಭಿನ್ನಮತದ ತೀರ್ಪಿತ್ತಿದ್ದಾರೆ” ಎಂದು ಹೇಳಿದ್ದಾರೆ.

“ಈಗ ಮತ್ತೆ ಒಳಮೀಳಾತಿಯ ಚೆಂಡು ರಾಜ್ಯಗಳ ಕೋರ್ಟಿಗೆ ಬಂದು ಬಿದ್ದಿದೆ. ಈಗ ರಾಜ್ಯಗಳು ಪರಿಶಿಷ್ಟ ವರ್ಗಗಳಲ್ಲಿ ಇರುವ ಜಾತಿಗಳ ಪ್ರಾತಿನಿಧ್ಯ, ಹಿಂದುಳಿದಿರುವಿಕೆಯ ಬಗ್ಗೆ ಅಧ್ಯಯನ ಕೈಗೊಳ್ಳಬೇಕು. ಈಗಾಗಲೇ ಇದರ ಸುತ್ತ ನಡೆದಿರುವ ಮೇಲ್ಜಾತಿಗಳ ಒಡೆದಾಳುವ ರಾಜಕಾರಣದ ಅನುಭವ ಇರುವ ಪರಿಶಿಷ್ಟ ಸಮುದಾಯಗಳು ಭ್ರಾತೃತ್ವ ಭಾವನೆಯಿಂದ ಅತ್ಯಂತ ವಂಚಿತರಿಗೆ ಮೊದಲ ಆದ್ಯತೆ ಎಂಬ ತತ್ವದ ಮೇರೆಗೆ ಮುಂದಾಗಬೇಕಿದೆ. ಹಾಗೆಯೇ ಒಳಮೀಸಲಾತಿಯು ಶೇ. 100 ರಷ್ಟು ಇರಬಾರದೆಂಬ ನಿರ್ಣಯಾದ ಹಿಂದಿರುವ ಅಪಾಯಕಾರಿ ‘ಮೆರಿಟೋಕ್ರಸಿ’ಯ ತಾತ್ವಿಕ ನೆಲೆಯನ್ನು ಮರುಪರಿಶೀಲನೆಗೊಡ್ಡಬೇಕು ಎಂದು ನನಗನಿಸುತ್ತದೆ” ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕೋಲಾರದ ಹಿರಿಯ ದಲಿತ ಹೋರಾಟಗಾರರಾದ ಹ.ಮಾ. ರಾಮಚಂದ್ರ ನಾನುಗೌರಿ.ಕಾಮ್ ಜತೆಗೆ ಮಾತನಾಡಿ, “ಒಳ ಮೀಸಲಾತಿ ಕುರಿತ ಸುಪ್ರೀಂ ಕೋರ್ಟಿನ ತೀರ್ಪನ್ನು ಸ್ವಾಗತಿಸುತ್ತೇವೆ.. ವೈಜ್ಞಾನಿಕವಾಗಿ ಅಧ್ಯಯನ ನಡೆಸಿ, ಮೀಸಲಾತಿ ಅಳವಡಿಸಿಕೊಳ್ಳುವುದು ಸೂಕ್ತ. ಏಕೆಂದರೆ, ಒಳ ಮೀಸಲಾತಿ ಕೇಳುತ್ತಿರುವ ದಲಿತ ಸಮುದಾಯದ ಎಲ್ಲ ಜಾತಿಗಳಿಗೆ ಪಾಲು ಮತ್ತು ಪ್ರಾತಿನಿಧ್ಯ ಸಿಗಬೇಕು. ಮೊದಲಿಗೆ, ಸುಪ್ರೀಂ ಕೋರ್ಟು ಈ ರೀತಿಯ ತೀರ್ಪು ನೀಡಿರುವುದನ್ನು ಸ್ವಾಗತಿಸಬೇಕು, ಅದರಲ್ಲೂ ರಾಜ್ಯ ಸರ್ಕಾರಗಳಿಗೆ ಅಧಿಕಾರ ಕೊಟ್ಟಿದ್ದಾರೆ. ಜಾತಿ ಗಣತಿ ಕೂಡ ಆಗಬೇಕಿದೆ, ಅದಕ್ಕೆ ಎಲ್ಲ ಕಡೆಯಿಂದ ಒತ್ತಡ ಬರುತ್ತಿದೆ. ಅರ್ಹ ಜಾತಿಗಳನ್ನು ಗುರುತಿಸಿ ಮೀಸಲಾತಿ ನೀಡಬೇಕು ಎಂಬುದು ನಮ್ಮ ಆಶಯ” ಎಂದರು.

ಇದನ್ನೂ ಓದಿ; ಪರಿಶಿಷ್ಟ ಜಾತಿ, ಪಂಗಡಗಳಲ್ಲೇ ಹಿಂದುಳಿದ ಸಮುದಾಯಗಳಿಗೆ ಪ್ರತ್ಯೇಕ ಮೀಸಲಾತಿ: ಸುಪ್ರೀಂ ಕೋರ್ಟ್ ಸಮ್ಮತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...

ಉತ್ತರ ಪ್ರದೇಶ| ಪಾಕ್ ಸಂಪರ್ಕದ ಆರೋಪ; ಮಹಿಳೆ ಸೇರಿದಂತೆ 6 ಜನರ ಬಂಧನ

ಪಾಕಿಸ್ತಾನದ ದೇಶದ ಕೋಡ್‌ನಲ್ಲಿ ನೋಂದಾಯಿಸಲಾದ ವಿದೇಶಿ ಸಂಖ್ಯೆಯೊಂದಿಗೆ ಭದ್ರತಾ ಕಚೇರಿಗಳು, ತನಿಖಾ ಸಂಸ್ಥೆಗಳು ಮತ್ತು ರೈಲ್ವೆ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಚಿತ್ರೀಕರಿಸಿ ಹಂಚಿಕೊಂಡ ಆರೋಪದ ಮೇಲೆ ಗಾಜಿಯಾಬಾದ್‌ನಲ್ಲಿ ಮಹಿಳೆ...

ವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

ಲಿಂಗತಾರತಮ್ಯ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ತಮಿಳು ಸಾಹಿತಿ ವೈರಮುತ್ತು ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಘೋಷಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.  ಸಾಹಿತ್ಯ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಪರಿಗಣಿಸಿ...

ಡ್ರೋನ್ ದಾಳಿಯ ನಂತರ ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ ಅವಘಡ; ವಿಮಾನ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತ

ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿಯಿಂದಾಗಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಆದರೆ, ದುಬೈ ಅಧಿಕಾರಿಗಳ ಪ್ರಕಾರ, ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ."ದುಬೈ ಅಂತರಾಷ್ಟ್ರೀಯ ವಿಮಾನ...

ಕಾನ್ಶಿ ರಾಮ್‌ಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಸ್ಥಾಪಿಸಿದ ದಲಿತ ಐಕಾನ್ ಕಾನ್ಶಿ ರಾಮ್‌ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ...

ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಹತ್ತು ರಾಜ್ಯಗಳ 37 ಸ್ಥಾನಗಳನ್ನು ಒಳಗೊಂಡ ದ್ವೈವಾರ್ಷಿಕ ರಾಜ್ಯಸಭಾ ಚುನಾವಣೆಗೆ ಸೋಮವಾರ (ಮಾ.16) ಮತದಾನ ನಡೆಯುತ್ತಿದೆ. ಬಿಹಾರ, ಒಡಿಶಾ ಮತ್ತು ಹರಿಯಾಣದಲ್ಲಿ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದ್ದು, 26 ಅಭ್ಯರ್ಥಿಗಳು ಈಗಾಗಲೇ...