Homeಕರ್ನಾಟಕಒಳ ಮೀಸಲಾತಿ | ದಲಿತ ಸಮುದಾಯಕ್ಕೆ ಶಾಶ್ವತ ಪರಿಹಾರ ಕಲ್ಪಿಸಲು ರಾಜ್ಯ ಸರ್ಕಾರಕ್ಕಿದು ಸುವರ್ಣಾವಕಾಶ: ಅಂಬಣ್ಣ...

ಒಳ ಮೀಸಲಾತಿ | ದಲಿತ ಸಮುದಾಯಕ್ಕೆ ಶಾಶ್ವತ ಪರಿಹಾರ ಕಲ್ಪಿಸಲು ರಾಜ್ಯ ಸರ್ಕಾರಕ್ಕಿದು ಸುವರ್ಣಾವಕಾಶ: ಅಂಬಣ್ಣ ಅರೋಲಿಕರ್

- Advertisement -
- Advertisement -

ಪರಿಶಿಷ್ಟ ಜಾತಿ, ಪಂಗಡಗಳಲ್ಲಿ ಅತ್ಯಂತ ಹಿಂದುಳಿದಿರುವ ಸಮುದಾಯಗಳಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ಕಲ್ಪಿಸಲು ಒಳ ಮೀಸಲಾತಿಯನ್ನು ಒದಗಿಸುವ ಪ್ರಸ್ತಾವಕ್ಕೆ ಸುಪ್ರೀಂ ಕೋರ್ಟ್‌ನ ಏಳು ನ್ಯಾಯಾಧೀಶರ ಸಾಂವಿಧಾನಿಕ ಪೀಠವು ಸಮ್ಮತಿ ಸೂಚಿಸಿದ್ದು, ರಾಜ್ಯದಲ್ಲಿ ಒಳ ಮೀಸಲಾತಿ ಹೋರಾಟದ ಮುಂಚೂಣಿಯಲ್ಲಿರುವ ಅಂಬಣ್ಣ ಅರೋಲಿಕರ್ ಅವರು ತೀರ್ಪನ್ನು ಸ್ವಾಗತಿಸಿದ್ದಾರೆ.

“ಸರ್ಕಾರಗಳು ಕಾಲಹರಣವನ್ನು ಮುಂದುವರಿಸದೆ, ಸಣ್ಣಪುಟ್ಟ ಲೋಪದೋಷಗಳನ್ನು ತಿದ್ದುಪಡಿ ಮಾಡಿಕೊಳ್ಳಬೇಕು. ದಮನಿತ ಸಮುದಾಯಗಳಿಗೆ ಶಾಶ್ವತ ಪರಿಹಾರ ಕಲ್ಪಿಸಲು ರಾಜ್ಯ ಸರ್ಕಾರಕ್ಕೆ ಇದು ಸುವರ್ಣಾವಕಾಶವಾಗಿದೆ” ಎಂದು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ನಾನುಗೌರಿ.ಕಾಮ್ ಜತೆಗೆ ಮಾತನಾಡಿದ ಅಂಬಣ್ಣ ಅರೋಲಿಕರ್, “ಸುಪ್ರೀಂ ಕೋರ್ಟಿನ ಒಳ ಮೀಸಲಾತಿ ಕುರಿತ ತೀರ್ಪು ಗೌರವಿಸಬೇಕಾದ ವಿಚಾರ. ಕಳೆದ ಮೂವತ್ತು ವರ್ಷಗಳಿಂದ ಈ ಬಗ್ಗೆ ಬೀದಿ ಹೋರಾಟ ಮಾಡಿದ್ದೇವೆ. 2020ರಲ್ಲಿ ಅರುಣ್ ಮಿಶ್ರಾ ಪೀಠದ ತೀರ್ಪು ಬಂದು, ಐದನೇ ಬೆಂಚ್‌ನಿಂದ ಏಳನೇ ಬೆಂಚಿಗೆ ಪ್ರಕರಣ ವರ್ಗಾವಣೆಯಾದ ನಂತರ ಏನಾಗುತ್ತದೋ ಎಂಬ ಬಗ್ಗೆ ಬಹಳ ಆತಂಕವಿತ್ತು. ಈಗ ಬಂದಿರುವ ತೀರ್ಪನ್ನು ನಾವು ಸ್ವಾಗತ್ತಿಸುತ್ತೇವೆ” ಎಂದು ಸಂತಸ ವ್ಯಕ್ತಪಡಿಸಿದರು.

“ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಕಾಲಹರಣ ಮಾಡದೆ, ಸುಪ್ರೀಂ ಕೋರ್ಟ್‌ ರಾಜ್ಯ ಸರ್ಕಾರಗಳಿಗೆ ಕೊಟ್ಟಿರುವ ಪರಮಾಧಿಕಾರವನ್ನು ಬಳಸಿಕೊಳ್ಳುವ ಮೂಲಕ ಕೂಡಲೇ ಒಳ ಮೀಸಲಾತಿ ಅನುಷ್ಠಾನಕ್ಕೆ ತರುವ ಕೆಲಸವನ್ನು ಯುದ್ದೋಪಾದಿಯಲ್ಲಿ ಮಾಡಬೇಕು. ಕಳೆದ 75 ವರ್ಷಗಳಿಂದ ಅಸ್ಪೃಶ್ಯ ಸಮುದಾಯಗಳಿಗೆ ವಿದ್ಯೆ, ಉದ್ಯೋಗದಲ್ಲಿ ಸಾಕಷ್ಟು ನಷ್ಟವಾಗಿದೆ. ಹಾಗಾಗಿ, ಕಾಲಹರಣ ಮುಂದುವರಿಸದೆ ಸರ್ಕಾರಗಳು ಸಣ್ಣಪುಟ್ಟ ಲೋಪದೋಷಗಳನ್ನು ತಿದ್ದುಪಡಿ ಮಾಡಿಕೊಳ್ಳಬೇಕು. ಶಾಶ್ವತ ಪರಿಹಾರ ಕಲ್ಪಿಸಲು ರಾಜ್ಯ ಸರ್ಕಾರಕ್ಕೆ ಇದು ಸುವರ್ಣಾವಕಾಶವಾಗಿದೆ; ಅದನ್ನು ಸರ್ಕಾರಗಳು ಕೂಡಲೇ ಮಾಡಬೇಕು” ಎಂದು ಅವರು ಒತ್ತಾಯಿಸಿದರು.

ನ್ಯಾಯಾಲಯದ ತೀರ್ಪನ್ನು ಪ್ರತಿಯೊಬ್ಬರೂ ಗೌರವಿಸಬೇಕು

“ನ್ಯಾಯಾಲಯದ ತೀರ್ಪನ್ನು ಪ್ರತಿಯೊಬ್ಬರೂ ಗೌರವಿಸಬೇಕು; ಗೌರವಿಸದೇ ಇದ್ದಲ್ಲಿ ಸಮುದಾಯದ ತೀರ್ಮಾನ ಮತ್ತು ನ್ಯಾಯಾಂಗದ ಛೀಮಾರಿಯನ್ನು ಯಾವುದೇ ಸರ್ಕಾರ ಎದುರಿಸಬೇಕಾಗುತ್ತದೆ. ಪ್ರತಿ ಸರ್ಕಾರ ಶೇ.100ರಷ್ಟು ಇದನ್ನು ಒಪ್ಪಲೇಬೇಕು, ಕಡೆಗಣಿಸಿದರೆ ಪ್ರತಿಫಲ ಎದುರಿಸಬೇಕು. ಸರ್ಕಾರಗಳು ಬೇಷರತ್ತಾಗಿ ಒಳ ಮೀಸಲಾತಿ ಜಾರಿ ಮಾಡಬೇಕು. ಯಾವುದೇ ಕಾರಣಕ್ಕೂ ನ್ಯಾಯದ ವಿಳಂಬ ಆಗಬಾರದು. ಒಂದು ಗುಂಪಾಗಿ ಸರ್ಕಾರದ ಮೇಲೆ ಒತ್ತಡ ಹೇರುವ ಕೆಲಸವನ್ನು ನಾವು ಮಾಡೇ ಮಾಡುತ್ತೇವೆ” ಎಂದರು.

“ಒಳ ಮೀಸಲಾತಿ ಹೋರಾಟ ದಕ್ಷಿಣ ಭಾರತದಲ್ಲಿ ನಡೆದಿದೆ. ಆ ಮೂಲಕ ಇಡೀ ದೇಶಕ್ಕೆ ದೊಡ್ಡ ಮಟ್ಟದ ಸಂದೇಶ ಸಿಕ್ಕಿದೆ. ದಕ್ಷಿಣ ಭಾರತ ಹೊರತುಪಡಿಸಿ ಬೇರೆಕಡೆ ಬೀದಿ ಹೋರಾಟ ಇರಲಿಲ್ಲ.. ತಮಿಳುನಾಡು ಸರ್ಕಾರ ಇದರಲ್ಲಿ ನೇರವಾಗಿ ಭಾಗಿ ಆಗಿತ್ತು. ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ ರಾಜ್ಯಗಳು ಪಾಲುದಾರಿಕೆ ಮತ್ತು ಸಕ್ರಿಯ ಭಾಗವಹಿಸುವುಕೆಯೇ ಈ ತೀರ್ಪು ಬುರುವುದಕ್ಕೆ ಕಾರಣವಾಗಿದೆ” ಎಂದು ವಿವರಿಸಿದರು.

“ಜನಸಂಖ್ಯೆ ಆಧಾರವಾಗಿ ಮೀಸಲಾತಿ ಹಂಚಬೇಕು ಎನ್ನುವುದೇ ನಮ್ಮ ಬೇಡಿಕೆ. ಆಯಾ ರಾಜ್ಯಗಳು ಈ ಬಗ್ಗೆ ಅಧ್ಯಯನ ಮಾಡಿ ಮೀಸಲಾತಿ ಹಂಚಿಕೆ ಮಾಡುವ ಕೆಲಸ ಆಗಬೇಕು. ಯಾವುದೇ ರಾಜ್ಯದಲ್ಲಿ ಮೀಸಲಾತಿಯ ಶೇ.50 ರ ಮಿತಿಯನ್ನು ಮೀರುವ ಸಾಧ್ಯತೆ ಸದ್ಯಕ್ಕಂತೂ ಇಲ್ಲ. ಅಸ್ತಿತ್ವದಲ್ಲಿರುವ ಮೀಸಲಾತಿಯಲ್ಲೇ ನಮ್ಮ ಪಾಲನ್ನು ಸಮಾನವಾಗಿ ಹಂಚಿದರೆ ಸಾಕು. ಈಗಾಗಲೇ ಕಳೆದ 75 ವರ್ಷಗಳಿಂದ ನಮ್ಮ ಸಮುದಾಯಕ್ಕೆ ವಿದ್ಯೆ-ಉದ್ಯೋಗದಲ್ಲಿ ಸಾಕಷ್ಟು ನಷ್ಟವಾಗಿದೆ; ಆರ್ಥಿಕ ನಷ್ಟವಾಗಿದೆ. ಕನಿಷ್ಠ ಐದಾರು ತಿಂಗಳಲ್ಲೇ ಈ ಪ್ರಕರಣ ಇತ್ಯರ್ಥಗೊಳಿಸುವುದು ಸೂಕ್ತ. ಅದು ಈ ತೀರ್ಪಿಗೆ ಗೌರವ ತರುತ್ತದೆ. ಇದುವರೆಗೆ ಮಾಡಿರುವ ಕಾಲಹರಣ ಮಾಡಬಾರದು ಎನ್ನುವುದೇ ನಮ್ಮ ಆಗ್ರಹ” ಎಂದು ಹೇಳಿದರು.

ಒಳಮೀಳಾತಿಯ ಚೆಂಡು ರಾಜ್ಯಗಳ ಕೋರ್ಟಿಗೆ ಬಂದು ಬಿದ್ದಿದೆ: ಶಿವಸುಂದರ್

“ಸುಪ್ರೀಂಕೋರ್ಟಿನ ಏಳು ಸದಸ್ಯರ ಸಾಂವಿಧಾನಿಕ ಪೀಠ 6-1 ಬಹುಮತದಲ್ಲಿ ಪರಿಶಿಷ್ಟರ ಮೀಸಲಾತಿಯ ಒಳಗೆ ಅತ್ಯಂತ ಹಿಂದುಳಿದವರನ್ನು ಗುರುತಿಸುವ ಹಾಗೂ ಪರಿಶಿಷ್ಟ ಮೀಸಲಾತಿಯೊಳಗೆ ಒಳ ಮೀಸಲಾತಿಯನ್ನು ಕಲ್ಪಿಸುವ ರಾಜ್ಯ ಗಳ ಅಧಿಕಾರವನ್ನು ಎತ್ತಿಹಿಡಿದಿದೆ. ಆದರೆ, ಹಾಗೆ ಮಾಡುವ ಮುನ್ನ ರಾಜ್ಯ ಸರ್ಕಾರವು ಅಂಥ ಮೀಸಲಾತಿಯು ಯಾವ ಸಮುದಾಯಗಳಿಗೆ ಅಗತ್ಯವಿದೆ ಎಂಬುದರ ಬಗ್ಗೆ ಅಧ್ಯಯನವನ್ನು ಮಾಡಬೇಕು. ಆ ಅಧ್ಯಯನವನ್ನು ಆಧರಿಸಿ ಒಳಮೀಸಲಾತಿ ಕಲ್ಪಿಸಬೇಕು. ಹಾಗೂ ಆ ಒಳಮೀಸಲಾತಿಯು ಪರಿಶಿಷ್ಟ ಮೀಸಲಾತಿಯ ಶೇ. 100 ಅನ್ನು ಒಳಗೊಳ್ಳಬಾರದು ಎಂದು ತೀರ್ಪಿತ್ತಿದೆ” ಎಂದು ಚಿಂತಕರಾದ ಶೀವಸುಂದರ್ ಅಭಿಪ್ರಾಯಪಟ್ಟಿದ್ದಾರೆ.

ಈ ಕುರಿತು ತಮ್ಮ ಅಭಿಪ್ರಾಯ ಹಂಚಿಕೊಂಡಿರುವ ಅವರು, “ಜಸ್ಟೀಸ್ ಬೇಲಾ ತ್ರಿವೇದಿ ಯವರು ಮಾತ್ರ ಒಳಮೀಸಲಾತಿಯ ತಾತ್ವಿಕನೆಲೆಯನ್ನು, ದೊಡ್ಡ ಪೀಠಕ್ಕೆ ಇಂಥಾ ಪ್ರಕರಣಗಳನ್ನು ವರ್ಗಾಯಿಸುವುದನ್ನು ವಿರೋಧಿಸಿ ಭಿನ್ನಮತದ ತೀರ್ಪಿತ್ತಿದ್ದಾರೆ” ಎಂದು ಹೇಳಿದ್ದಾರೆ.

“ಈಗ ಮತ್ತೆ ಒಳಮೀಳಾತಿಯ ಚೆಂಡು ರಾಜ್ಯಗಳ ಕೋರ್ಟಿಗೆ ಬಂದು ಬಿದ್ದಿದೆ. ಈಗ ರಾಜ್ಯಗಳು ಪರಿಶಿಷ್ಟ ವರ್ಗಗಳಲ್ಲಿ ಇರುವ ಜಾತಿಗಳ ಪ್ರಾತಿನಿಧ್ಯ, ಹಿಂದುಳಿದಿರುವಿಕೆಯ ಬಗ್ಗೆ ಅಧ್ಯಯನ ಕೈಗೊಳ್ಳಬೇಕು. ಈಗಾಗಲೇ ಇದರ ಸುತ್ತ ನಡೆದಿರುವ ಮೇಲ್ಜಾತಿಗಳ ಒಡೆದಾಳುವ ರಾಜಕಾರಣದ ಅನುಭವ ಇರುವ ಪರಿಶಿಷ್ಟ ಸಮುದಾಯಗಳು ಭ್ರಾತೃತ್ವ ಭಾವನೆಯಿಂದ ಅತ್ಯಂತ ವಂಚಿತರಿಗೆ ಮೊದಲ ಆದ್ಯತೆ ಎಂಬ ತತ್ವದ ಮೇರೆಗೆ ಮುಂದಾಗಬೇಕಿದೆ. ಹಾಗೆಯೇ ಒಳಮೀಸಲಾತಿಯು ಶೇ. 100 ರಷ್ಟು ಇರಬಾರದೆಂಬ ನಿರ್ಣಯಾದ ಹಿಂದಿರುವ ಅಪಾಯಕಾರಿ ‘ಮೆರಿಟೋಕ್ರಸಿ’ಯ ತಾತ್ವಿಕ ನೆಲೆಯನ್ನು ಮರುಪರಿಶೀಲನೆಗೊಡ್ಡಬೇಕು ಎಂದು ನನಗನಿಸುತ್ತದೆ” ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕೋಲಾರದ ಹಿರಿಯ ದಲಿತ ಹೋರಾಟಗಾರರಾದ ಹ.ಮಾ. ರಾಮಚಂದ್ರ ನಾನುಗೌರಿ.ಕಾಮ್ ಜತೆಗೆ ಮಾತನಾಡಿ, “ಒಳ ಮೀಸಲಾತಿ ಕುರಿತ ಸುಪ್ರೀಂ ಕೋರ್ಟಿನ ತೀರ್ಪನ್ನು ಸ್ವಾಗತಿಸುತ್ತೇವೆ.. ವೈಜ್ಞಾನಿಕವಾಗಿ ಅಧ್ಯಯನ ನಡೆಸಿ, ಮೀಸಲಾತಿ ಅಳವಡಿಸಿಕೊಳ್ಳುವುದು ಸೂಕ್ತ. ಏಕೆಂದರೆ, ಒಳ ಮೀಸಲಾತಿ ಕೇಳುತ್ತಿರುವ ದಲಿತ ಸಮುದಾಯದ ಎಲ್ಲ ಜಾತಿಗಳಿಗೆ ಪಾಲು ಮತ್ತು ಪ್ರಾತಿನಿಧ್ಯ ಸಿಗಬೇಕು. ಮೊದಲಿಗೆ, ಸುಪ್ರೀಂ ಕೋರ್ಟು ಈ ರೀತಿಯ ತೀರ್ಪು ನೀಡಿರುವುದನ್ನು ಸ್ವಾಗತಿಸಬೇಕು, ಅದರಲ್ಲೂ ರಾಜ್ಯ ಸರ್ಕಾರಗಳಿಗೆ ಅಧಿಕಾರ ಕೊಟ್ಟಿದ್ದಾರೆ. ಜಾತಿ ಗಣತಿ ಕೂಡ ಆಗಬೇಕಿದೆ, ಅದಕ್ಕೆ ಎಲ್ಲ ಕಡೆಯಿಂದ ಒತ್ತಡ ಬರುತ್ತಿದೆ. ಅರ್ಹ ಜಾತಿಗಳನ್ನು ಗುರುತಿಸಿ ಮೀಸಲಾತಿ ನೀಡಬೇಕು ಎಂಬುದು ನಮ್ಮ ಆಶಯ” ಎಂದರು.

ಇದನ್ನೂ ಓದಿ; ಪರಿಶಿಷ್ಟ ಜಾತಿ, ಪಂಗಡಗಳಲ್ಲೇ ಹಿಂದುಳಿದ ಸಮುದಾಯಗಳಿಗೆ ಪ್ರತ್ಯೇಕ ಮೀಸಲಾತಿ: ಸುಪ್ರೀಂ ಕೋರ್ಟ್ ಸಮ್ಮತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...