Homeಕರ್ನಾಟಕಒಳ ಮೀಸಲಾತಿ | ದಲಿತ ಸಮುದಾಯಕ್ಕೆ ಶಾಶ್ವತ ಪರಿಹಾರ ಕಲ್ಪಿಸಲು ರಾಜ್ಯ ಸರ್ಕಾರಕ್ಕಿದು ಸುವರ್ಣಾವಕಾಶ: ಅಂಬಣ್ಣ...

ಒಳ ಮೀಸಲಾತಿ | ದಲಿತ ಸಮುದಾಯಕ್ಕೆ ಶಾಶ್ವತ ಪರಿಹಾರ ಕಲ್ಪಿಸಲು ರಾಜ್ಯ ಸರ್ಕಾರಕ್ಕಿದು ಸುವರ್ಣಾವಕಾಶ: ಅಂಬಣ್ಣ ಅರೋಲಿಕರ್

- Advertisement -
- Advertisement -

ಪರಿಶಿಷ್ಟ ಜಾತಿ, ಪಂಗಡಗಳಲ್ಲಿ ಅತ್ಯಂತ ಹಿಂದುಳಿದಿರುವ ಸಮುದಾಯಗಳಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ಕಲ್ಪಿಸಲು ಒಳ ಮೀಸಲಾತಿಯನ್ನು ಒದಗಿಸುವ ಪ್ರಸ್ತಾವಕ್ಕೆ ಸುಪ್ರೀಂ ಕೋರ್ಟ್‌ನ ಏಳು ನ್ಯಾಯಾಧೀಶರ ಸಾಂವಿಧಾನಿಕ ಪೀಠವು ಸಮ್ಮತಿ ಸೂಚಿಸಿದ್ದು, ರಾಜ್ಯದಲ್ಲಿ ಒಳ ಮೀಸಲಾತಿ ಹೋರಾಟದ ಮುಂಚೂಣಿಯಲ್ಲಿರುವ ಅಂಬಣ್ಣ ಅರೋಲಿಕರ್ ಅವರು ತೀರ್ಪನ್ನು ಸ್ವಾಗತಿಸಿದ್ದಾರೆ.

“ಸರ್ಕಾರಗಳು ಕಾಲಹರಣವನ್ನು ಮುಂದುವರಿಸದೆ, ಸಣ್ಣಪುಟ್ಟ ಲೋಪದೋಷಗಳನ್ನು ತಿದ್ದುಪಡಿ ಮಾಡಿಕೊಳ್ಳಬೇಕು. ದಮನಿತ ಸಮುದಾಯಗಳಿಗೆ ಶಾಶ್ವತ ಪರಿಹಾರ ಕಲ್ಪಿಸಲು ರಾಜ್ಯ ಸರ್ಕಾರಕ್ಕೆ ಇದು ಸುವರ್ಣಾವಕಾಶವಾಗಿದೆ” ಎಂದು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ನಾನುಗೌರಿ.ಕಾಮ್ ಜತೆಗೆ ಮಾತನಾಡಿದ ಅಂಬಣ್ಣ ಅರೋಲಿಕರ್, “ಸುಪ್ರೀಂ ಕೋರ್ಟಿನ ಒಳ ಮೀಸಲಾತಿ ಕುರಿತ ತೀರ್ಪು ಗೌರವಿಸಬೇಕಾದ ವಿಚಾರ. ಕಳೆದ ಮೂವತ್ತು ವರ್ಷಗಳಿಂದ ಈ ಬಗ್ಗೆ ಬೀದಿ ಹೋರಾಟ ಮಾಡಿದ್ದೇವೆ. 2020ರಲ್ಲಿ ಅರುಣ್ ಮಿಶ್ರಾ ಪೀಠದ ತೀರ್ಪು ಬಂದು, ಐದನೇ ಬೆಂಚ್‌ನಿಂದ ಏಳನೇ ಬೆಂಚಿಗೆ ಪ್ರಕರಣ ವರ್ಗಾವಣೆಯಾದ ನಂತರ ಏನಾಗುತ್ತದೋ ಎಂಬ ಬಗ್ಗೆ ಬಹಳ ಆತಂಕವಿತ್ತು. ಈಗ ಬಂದಿರುವ ತೀರ್ಪನ್ನು ನಾವು ಸ್ವಾಗತ್ತಿಸುತ್ತೇವೆ” ಎಂದು ಸಂತಸ ವ್ಯಕ್ತಪಡಿಸಿದರು.

“ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಕಾಲಹರಣ ಮಾಡದೆ, ಸುಪ್ರೀಂ ಕೋರ್ಟ್‌ ರಾಜ್ಯ ಸರ್ಕಾರಗಳಿಗೆ ಕೊಟ್ಟಿರುವ ಪರಮಾಧಿಕಾರವನ್ನು ಬಳಸಿಕೊಳ್ಳುವ ಮೂಲಕ ಕೂಡಲೇ ಒಳ ಮೀಸಲಾತಿ ಅನುಷ್ಠಾನಕ್ಕೆ ತರುವ ಕೆಲಸವನ್ನು ಯುದ್ದೋಪಾದಿಯಲ್ಲಿ ಮಾಡಬೇಕು. ಕಳೆದ 75 ವರ್ಷಗಳಿಂದ ಅಸ್ಪೃಶ್ಯ ಸಮುದಾಯಗಳಿಗೆ ವಿದ್ಯೆ, ಉದ್ಯೋಗದಲ್ಲಿ ಸಾಕಷ್ಟು ನಷ್ಟವಾಗಿದೆ. ಹಾಗಾಗಿ, ಕಾಲಹರಣ ಮುಂದುವರಿಸದೆ ಸರ್ಕಾರಗಳು ಸಣ್ಣಪುಟ್ಟ ಲೋಪದೋಷಗಳನ್ನು ತಿದ್ದುಪಡಿ ಮಾಡಿಕೊಳ್ಳಬೇಕು. ಶಾಶ್ವತ ಪರಿಹಾರ ಕಲ್ಪಿಸಲು ರಾಜ್ಯ ಸರ್ಕಾರಕ್ಕೆ ಇದು ಸುವರ್ಣಾವಕಾಶವಾಗಿದೆ; ಅದನ್ನು ಸರ್ಕಾರಗಳು ಕೂಡಲೇ ಮಾಡಬೇಕು” ಎಂದು ಅವರು ಒತ್ತಾಯಿಸಿದರು.

ನ್ಯಾಯಾಲಯದ ತೀರ್ಪನ್ನು ಪ್ರತಿಯೊಬ್ಬರೂ ಗೌರವಿಸಬೇಕು

“ನ್ಯಾಯಾಲಯದ ತೀರ್ಪನ್ನು ಪ್ರತಿಯೊಬ್ಬರೂ ಗೌರವಿಸಬೇಕು; ಗೌರವಿಸದೇ ಇದ್ದಲ್ಲಿ ಸಮುದಾಯದ ತೀರ್ಮಾನ ಮತ್ತು ನ್ಯಾಯಾಂಗದ ಛೀಮಾರಿಯನ್ನು ಯಾವುದೇ ಸರ್ಕಾರ ಎದುರಿಸಬೇಕಾಗುತ್ತದೆ. ಪ್ರತಿ ಸರ್ಕಾರ ಶೇ.100ರಷ್ಟು ಇದನ್ನು ಒಪ್ಪಲೇಬೇಕು, ಕಡೆಗಣಿಸಿದರೆ ಪ್ರತಿಫಲ ಎದುರಿಸಬೇಕು. ಸರ್ಕಾರಗಳು ಬೇಷರತ್ತಾಗಿ ಒಳ ಮೀಸಲಾತಿ ಜಾರಿ ಮಾಡಬೇಕು. ಯಾವುದೇ ಕಾರಣಕ್ಕೂ ನ್ಯಾಯದ ವಿಳಂಬ ಆಗಬಾರದು. ಒಂದು ಗುಂಪಾಗಿ ಸರ್ಕಾರದ ಮೇಲೆ ಒತ್ತಡ ಹೇರುವ ಕೆಲಸವನ್ನು ನಾವು ಮಾಡೇ ಮಾಡುತ್ತೇವೆ” ಎಂದರು.

“ಒಳ ಮೀಸಲಾತಿ ಹೋರಾಟ ದಕ್ಷಿಣ ಭಾರತದಲ್ಲಿ ನಡೆದಿದೆ. ಆ ಮೂಲಕ ಇಡೀ ದೇಶಕ್ಕೆ ದೊಡ್ಡ ಮಟ್ಟದ ಸಂದೇಶ ಸಿಕ್ಕಿದೆ. ದಕ್ಷಿಣ ಭಾರತ ಹೊರತುಪಡಿಸಿ ಬೇರೆಕಡೆ ಬೀದಿ ಹೋರಾಟ ಇರಲಿಲ್ಲ.. ತಮಿಳುನಾಡು ಸರ್ಕಾರ ಇದರಲ್ಲಿ ನೇರವಾಗಿ ಭಾಗಿ ಆಗಿತ್ತು. ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ ರಾಜ್ಯಗಳು ಪಾಲುದಾರಿಕೆ ಮತ್ತು ಸಕ್ರಿಯ ಭಾಗವಹಿಸುವುಕೆಯೇ ಈ ತೀರ್ಪು ಬುರುವುದಕ್ಕೆ ಕಾರಣವಾಗಿದೆ” ಎಂದು ವಿವರಿಸಿದರು.

“ಜನಸಂಖ್ಯೆ ಆಧಾರವಾಗಿ ಮೀಸಲಾತಿ ಹಂಚಬೇಕು ಎನ್ನುವುದೇ ನಮ್ಮ ಬೇಡಿಕೆ. ಆಯಾ ರಾಜ್ಯಗಳು ಈ ಬಗ್ಗೆ ಅಧ್ಯಯನ ಮಾಡಿ ಮೀಸಲಾತಿ ಹಂಚಿಕೆ ಮಾಡುವ ಕೆಲಸ ಆಗಬೇಕು. ಯಾವುದೇ ರಾಜ್ಯದಲ್ಲಿ ಮೀಸಲಾತಿಯ ಶೇ.50 ರ ಮಿತಿಯನ್ನು ಮೀರುವ ಸಾಧ್ಯತೆ ಸದ್ಯಕ್ಕಂತೂ ಇಲ್ಲ. ಅಸ್ತಿತ್ವದಲ್ಲಿರುವ ಮೀಸಲಾತಿಯಲ್ಲೇ ನಮ್ಮ ಪಾಲನ್ನು ಸಮಾನವಾಗಿ ಹಂಚಿದರೆ ಸಾಕು. ಈಗಾಗಲೇ ಕಳೆದ 75 ವರ್ಷಗಳಿಂದ ನಮ್ಮ ಸಮುದಾಯಕ್ಕೆ ವಿದ್ಯೆ-ಉದ್ಯೋಗದಲ್ಲಿ ಸಾಕಷ್ಟು ನಷ್ಟವಾಗಿದೆ; ಆರ್ಥಿಕ ನಷ್ಟವಾಗಿದೆ. ಕನಿಷ್ಠ ಐದಾರು ತಿಂಗಳಲ್ಲೇ ಈ ಪ್ರಕರಣ ಇತ್ಯರ್ಥಗೊಳಿಸುವುದು ಸೂಕ್ತ. ಅದು ಈ ತೀರ್ಪಿಗೆ ಗೌರವ ತರುತ್ತದೆ. ಇದುವರೆಗೆ ಮಾಡಿರುವ ಕಾಲಹರಣ ಮಾಡಬಾರದು ಎನ್ನುವುದೇ ನಮ್ಮ ಆಗ್ರಹ” ಎಂದು ಹೇಳಿದರು.

ಒಳಮೀಳಾತಿಯ ಚೆಂಡು ರಾಜ್ಯಗಳ ಕೋರ್ಟಿಗೆ ಬಂದು ಬಿದ್ದಿದೆ: ಶಿವಸುಂದರ್

“ಸುಪ್ರೀಂಕೋರ್ಟಿನ ಏಳು ಸದಸ್ಯರ ಸಾಂವಿಧಾನಿಕ ಪೀಠ 6-1 ಬಹುಮತದಲ್ಲಿ ಪರಿಶಿಷ್ಟರ ಮೀಸಲಾತಿಯ ಒಳಗೆ ಅತ್ಯಂತ ಹಿಂದುಳಿದವರನ್ನು ಗುರುತಿಸುವ ಹಾಗೂ ಪರಿಶಿಷ್ಟ ಮೀಸಲಾತಿಯೊಳಗೆ ಒಳ ಮೀಸಲಾತಿಯನ್ನು ಕಲ್ಪಿಸುವ ರಾಜ್ಯ ಗಳ ಅಧಿಕಾರವನ್ನು ಎತ್ತಿಹಿಡಿದಿದೆ. ಆದರೆ, ಹಾಗೆ ಮಾಡುವ ಮುನ್ನ ರಾಜ್ಯ ಸರ್ಕಾರವು ಅಂಥ ಮೀಸಲಾತಿಯು ಯಾವ ಸಮುದಾಯಗಳಿಗೆ ಅಗತ್ಯವಿದೆ ಎಂಬುದರ ಬಗ್ಗೆ ಅಧ್ಯಯನವನ್ನು ಮಾಡಬೇಕು. ಆ ಅಧ್ಯಯನವನ್ನು ಆಧರಿಸಿ ಒಳಮೀಸಲಾತಿ ಕಲ್ಪಿಸಬೇಕು. ಹಾಗೂ ಆ ಒಳಮೀಸಲಾತಿಯು ಪರಿಶಿಷ್ಟ ಮೀಸಲಾತಿಯ ಶೇ. 100 ಅನ್ನು ಒಳಗೊಳ್ಳಬಾರದು ಎಂದು ತೀರ್ಪಿತ್ತಿದೆ” ಎಂದು ಚಿಂತಕರಾದ ಶೀವಸುಂದರ್ ಅಭಿಪ್ರಾಯಪಟ್ಟಿದ್ದಾರೆ.

ಈ ಕುರಿತು ತಮ್ಮ ಅಭಿಪ್ರಾಯ ಹಂಚಿಕೊಂಡಿರುವ ಅವರು, “ಜಸ್ಟೀಸ್ ಬೇಲಾ ತ್ರಿವೇದಿ ಯವರು ಮಾತ್ರ ಒಳಮೀಸಲಾತಿಯ ತಾತ್ವಿಕನೆಲೆಯನ್ನು, ದೊಡ್ಡ ಪೀಠಕ್ಕೆ ಇಂಥಾ ಪ್ರಕರಣಗಳನ್ನು ವರ್ಗಾಯಿಸುವುದನ್ನು ವಿರೋಧಿಸಿ ಭಿನ್ನಮತದ ತೀರ್ಪಿತ್ತಿದ್ದಾರೆ” ಎಂದು ಹೇಳಿದ್ದಾರೆ.

“ಈಗ ಮತ್ತೆ ಒಳಮೀಳಾತಿಯ ಚೆಂಡು ರಾಜ್ಯಗಳ ಕೋರ್ಟಿಗೆ ಬಂದು ಬಿದ್ದಿದೆ. ಈಗ ರಾಜ್ಯಗಳು ಪರಿಶಿಷ್ಟ ವರ್ಗಗಳಲ್ಲಿ ಇರುವ ಜಾತಿಗಳ ಪ್ರಾತಿನಿಧ್ಯ, ಹಿಂದುಳಿದಿರುವಿಕೆಯ ಬಗ್ಗೆ ಅಧ್ಯಯನ ಕೈಗೊಳ್ಳಬೇಕು. ಈಗಾಗಲೇ ಇದರ ಸುತ್ತ ನಡೆದಿರುವ ಮೇಲ್ಜಾತಿಗಳ ಒಡೆದಾಳುವ ರಾಜಕಾರಣದ ಅನುಭವ ಇರುವ ಪರಿಶಿಷ್ಟ ಸಮುದಾಯಗಳು ಭ್ರಾತೃತ್ವ ಭಾವನೆಯಿಂದ ಅತ್ಯಂತ ವಂಚಿತರಿಗೆ ಮೊದಲ ಆದ್ಯತೆ ಎಂಬ ತತ್ವದ ಮೇರೆಗೆ ಮುಂದಾಗಬೇಕಿದೆ. ಹಾಗೆಯೇ ಒಳಮೀಸಲಾತಿಯು ಶೇ. 100 ರಷ್ಟು ಇರಬಾರದೆಂಬ ನಿರ್ಣಯಾದ ಹಿಂದಿರುವ ಅಪಾಯಕಾರಿ ‘ಮೆರಿಟೋಕ್ರಸಿ’ಯ ತಾತ್ವಿಕ ನೆಲೆಯನ್ನು ಮರುಪರಿಶೀಲನೆಗೊಡ್ಡಬೇಕು ಎಂದು ನನಗನಿಸುತ್ತದೆ” ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕೋಲಾರದ ಹಿರಿಯ ದಲಿತ ಹೋರಾಟಗಾರರಾದ ಹ.ಮಾ. ರಾಮಚಂದ್ರ ನಾನುಗೌರಿ.ಕಾಮ್ ಜತೆಗೆ ಮಾತನಾಡಿ, “ಒಳ ಮೀಸಲಾತಿ ಕುರಿತ ಸುಪ್ರೀಂ ಕೋರ್ಟಿನ ತೀರ್ಪನ್ನು ಸ್ವಾಗತಿಸುತ್ತೇವೆ.. ವೈಜ್ಞಾನಿಕವಾಗಿ ಅಧ್ಯಯನ ನಡೆಸಿ, ಮೀಸಲಾತಿ ಅಳವಡಿಸಿಕೊಳ್ಳುವುದು ಸೂಕ್ತ. ಏಕೆಂದರೆ, ಒಳ ಮೀಸಲಾತಿ ಕೇಳುತ್ತಿರುವ ದಲಿತ ಸಮುದಾಯದ ಎಲ್ಲ ಜಾತಿಗಳಿಗೆ ಪಾಲು ಮತ್ತು ಪ್ರಾತಿನಿಧ್ಯ ಸಿಗಬೇಕು. ಮೊದಲಿಗೆ, ಸುಪ್ರೀಂ ಕೋರ್ಟು ಈ ರೀತಿಯ ತೀರ್ಪು ನೀಡಿರುವುದನ್ನು ಸ್ವಾಗತಿಸಬೇಕು, ಅದರಲ್ಲೂ ರಾಜ್ಯ ಸರ್ಕಾರಗಳಿಗೆ ಅಧಿಕಾರ ಕೊಟ್ಟಿದ್ದಾರೆ. ಜಾತಿ ಗಣತಿ ಕೂಡ ಆಗಬೇಕಿದೆ, ಅದಕ್ಕೆ ಎಲ್ಲ ಕಡೆಯಿಂದ ಒತ್ತಡ ಬರುತ್ತಿದೆ. ಅರ್ಹ ಜಾತಿಗಳನ್ನು ಗುರುತಿಸಿ ಮೀಸಲಾತಿ ನೀಡಬೇಕು ಎಂಬುದು ನಮ್ಮ ಆಶಯ” ಎಂದರು.

ಇದನ್ನೂ ಓದಿ; ಪರಿಶಿಷ್ಟ ಜಾತಿ, ಪಂಗಡಗಳಲ್ಲೇ ಹಿಂದುಳಿದ ಸಮುದಾಯಗಳಿಗೆ ಪ್ರತ್ಯೇಕ ಮೀಸಲಾತಿ: ಸುಪ್ರೀಂ ಕೋರ್ಟ್ ಸಮ್ಮತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...