Homeಕರ್ನಾಟಕ‘ಲೈಂಗಿಕ ಕಿರುಕುಳದ ತನಿಖೆ ನಡೆಸುವ ಬದಲು ಸಚಿವನ ರಕ್ಷಣೆಗೆ ನಿಂತ ಸರ್ಕಾರ’ - ಮಹಿಳಾ ಹೋರಾಟಗಾರರ...

‘ಲೈಂಗಿಕ ಕಿರುಕುಳದ ತನಿಖೆ ನಡೆಸುವ ಬದಲು ಸಚಿವನ ರಕ್ಷಣೆಗೆ ನಿಂತ ಸರ್ಕಾರ’ – ಮಹಿಳಾ ಹೋರಾಟಗಾರರ ಆಕ್ರೋಶ

- Advertisement -
- Advertisement -

ರಮೇಶ್‌‌ ಜಾರಕಿಹೊಳಿ ಲೈಂಗಿಕ ಹಗರಣದಲ್ಲಿ ಮಹಿಳೆ ಕಿರುಕುಳಕ್ಕೆ ಬಲಿಯಾಗಿದ್ದಾರೆಯೆ ಎಂದು ತನಿಖೆ ಮಾಡುವ ಬದಲು ಆಪಾದಿತ “ರಾಜಕೀಯ ಪಿತೂರಿ” ಕೋನವನ್ನು ಮಾತ್ರ ಕೇಂದ್ರೀಕರಿಸುವ ಉದ್ದೇಶದಿಂದ ವಿಶೇಷ ತನಿಖಾ ತಂಡ (ಎಸ್‌ಐಟಿ) ನೇಮಿಸಿದ ಕರ್ನಾಟಕ ಸರ್ಕಾರದ ಕ್ರಮವು ಪ್ರಶ್ನಾರ್ಹವಾಗಿದೆ ಎಂದು ಮಹಿಳಾ ಸಂಘಟನೆಗಳು ಕಿಡಿಕಾರಿವೆ.

ಸರ್ಕಾರಿ ಕೆಲಸ ಕೊಡಿಸುವುದಾಗಿ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂಬ ಆರೋಪದಲ್ಲಿ ಲೈಂಗಿಕ ದೃಶ್ಯಾವಳಿಯಿರುವ ವಿಡಿಯೊಗಳು ಸಾಮಾಜಕ ಜಾಲತಾಣದಲ್ಲಿ ಮತ್ತು ಮಾಧ್ಯಮಗಳಲ್ಲಿ ಪ್ರಸಾರವಾಗಿದ್ದವು. ಇದರ ನಂತರ ರಾಜ್ಯದ ಬೃಹತ್ ಜಲಸಂಪನ್ಮೂಲ ಸಚಿವರಾಗಿದ್ದ ರಮೇಶ್ ಜಾರಕಿಹೊಳಿ ಮಾರ್ಚ್ 3 ರಂದು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ತಮ್ಮ ರಾಜೀನಾಮೆ ಪತ್ರದಲ್ಲಿ, ತನ್ನ ಮೇಲಿನ ಆರೋಪಗಳು ಸುಳ್ಳು ಎಂದು ಪ್ರತಿಪಾದಿಸಿದ್ದು, ಬಿಜೆಪಿಯನ್ನು ಮುಜುಗರದಿಂದ ತಪ್ಪಿಸಲು ಅವರು ಸಂಪುಟಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಹೇಳಿದ್ದರು.

ಇದನ್ನೂ ಓದಿ: ಜಾರಕಿಹೊಳಿ ಸಿಡಿ ಮಾಡಿದವರನ್ನು ಪತ್ತೆ ಹಚ್ಚಲು SIT ರಚಿಸಿದ ರಾಜ್ಯ ಸರ್ಕಾರ

ರೈತ ನಾಯಕಿ ಮತ್ತು ದಲಿತ ಮಹಿಳಾ ಒಕ್ಕೂಟದ ಮಾಜಿ ರಾಜ್ಯ ಕಾರ್ಯದರ್ಶಿ ಆಗಿರುವ ಜಯಶ್ರೀ ಗುರನ್ನಾನವರ್, “ರಾಜ್ಯ ಸರ್ಕಾರ ಕೇವಲ ತನ್ನ ಸಚಿವ ಪ್ರತಿಷ್ಠೆಯನ್ನು ರಕ್ಷಿಸಲು ಮಾತ್ರ ಆಸಕ್ತಿ ಹೊಂದಿದೆ. ಮಾಧ್ಯಮಗಳು ಯುವತಿಯ ಗುರುತು ಪತ್ತೆಗೆ ಮತ್ತು ಸಚಿವರ ಮನೆಗೆ ಅವರು ಯಾಕೆ ಪದೆ ಪದೆ ಎಂಬುವುದನ್ನು ಪತ್ತೆ ಹಚ್ಚಲು ತೊಡಗಿಕೊಂಡಿದೆ. ಆದರೆ ಯಾರೂ ಕೂಡಾ ಮಾಜಿ ಸಚಿವ ತನ್ನ ಅಧಿಕಾರವನ್ನು ದುರುಪಯೋಗ ಮಾಡಿದ್ದಾರೆಯೆ ಇಲ್ಲವೆ ಎಂದು ಪತ್ತೆ ಹಚ್ಚುತ್ತಿಲ್ಲ” ಎಂದು ಹೇಳಿದ್ದಾರೆಂದು ದಿ ಹಿಂದು ವರದಿ ಮಾಡಿದೆ.

ಅಖಿಲ ಭಾರತೀಯ ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಘಟಕದ ಉಪಾಧ್ಯಕ್ಷೆ ಕೆ.ನೀಲಾ ಅವರು ಇದು ಮೊದಲೇ ಊಹಿಸಲಾಗಿದ್ದ ಪಿತೃಪ್ರಧಾನ ಮನಸ್ಥಿತಿ, ರಾಜ್ಯ ಸರ್ಕಾರದ ಕ್ರಮಗಳಿಂದೇನು ಆಶ್ಚರ್ಯವಾಗಿಲ್ಲ ಎಂದು ಹೇಳಿದ್ದು, “ಲೈಂಗಿಕ ಕಿರುಕುಳದ ಆರೋಪದ ಎಲ್ಲಾ ಸಂದರ್ಭಗಳಲ್ಲಿ, ಮಹಿಳೆಯರದ್ದೇ ತಪ್ಪು ಎಂದು ಭಾವಿಸಲಾಗಿದೆ. ಇದು ಸರ್ಕಾರವು ಜಾರಕಿಹೊಳಿಯನ್ನು ರಕ್ಷಿಸಲು ಪ್ರಯತ್ನಿಸುತ್ತಿದೆ ಎಂಬ ಸಂದೇಶವನ್ನು ರವಾನಿಸುತ್ತದೆ. ಸಂವಿಧಾನವನ್ನು ಧಿಕ್ಕರಿಸಿ ಮಹಿಳೆಯರನ್ನು ಖಳನಾಯಕರು, ಅವರು ಬಲಿಪಶುಗಳಲ್ಲ ಎಂದು ಕಾಣುವ ಉತ್ತರ ಪ್ರದೇಶದ ಮಾದರಿಯತ್ತ ಕರ್ನಾಟಕ ಚಲಿಸುತ್ತಿದೆ” ಎಂದು ಕಿಡಿಕಾರಿದ್ದಾರೆ ಎಂದು ಹಿಂದೂ ವರದಿ ಮಾಡಿದೆ.

ಪ್ರಕರಣದ ಬಗ್ಗೆ ಬಿಜೆಪಿ ಶಾಸಕ, ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ, ಮಹಿಳೆಯು ಬಲಿಪಶು ಅಲ್ಲ, ಇದು ಬ್ಲ್ಯಾಕ್ಮೇಲ್ ಮತ್ತು ರಾಜಕೀಯ ಪಿತೂರಿ ಪ್ರಕರಣ ಎಂದು ಆರೋಪಿಸಿದ್ದರು.

ಇದನ್ನೂ ಓದಿ: ಸಿಡಿ ಪ್ರಕರಣ: ಸಿಡಿ ನಕಲಿ, ನಾನು ನಿರಪರಾಧಿ ಎಂದು ರಮೇಶ್ ಜಾರಕಿಹೊಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...