Homeಕರ್ನಾಟಕ‘ಲೈಂಗಿಕ ಕಿರುಕುಳದ ತನಿಖೆ ನಡೆಸುವ ಬದಲು ಸಚಿವನ ರಕ್ಷಣೆಗೆ ನಿಂತ ಸರ್ಕಾರ’ - ಮಹಿಳಾ ಹೋರಾಟಗಾರರ...

‘ಲೈಂಗಿಕ ಕಿರುಕುಳದ ತನಿಖೆ ನಡೆಸುವ ಬದಲು ಸಚಿವನ ರಕ್ಷಣೆಗೆ ನಿಂತ ಸರ್ಕಾರ’ – ಮಹಿಳಾ ಹೋರಾಟಗಾರರ ಆಕ್ರೋಶ

- Advertisement -
- Advertisement -

ರಮೇಶ್‌‌ ಜಾರಕಿಹೊಳಿ ಲೈಂಗಿಕ ಹಗರಣದಲ್ಲಿ ಮಹಿಳೆ ಕಿರುಕುಳಕ್ಕೆ ಬಲಿಯಾಗಿದ್ದಾರೆಯೆ ಎಂದು ತನಿಖೆ ಮಾಡುವ ಬದಲು ಆಪಾದಿತ “ರಾಜಕೀಯ ಪಿತೂರಿ” ಕೋನವನ್ನು ಮಾತ್ರ ಕೇಂದ್ರೀಕರಿಸುವ ಉದ್ದೇಶದಿಂದ ವಿಶೇಷ ತನಿಖಾ ತಂಡ (ಎಸ್‌ಐಟಿ) ನೇಮಿಸಿದ ಕರ್ನಾಟಕ ಸರ್ಕಾರದ ಕ್ರಮವು ಪ್ರಶ್ನಾರ್ಹವಾಗಿದೆ ಎಂದು ಮಹಿಳಾ ಸಂಘಟನೆಗಳು ಕಿಡಿಕಾರಿವೆ.

ಸರ್ಕಾರಿ ಕೆಲಸ ಕೊಡಿಸುವುದಾಗಿ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂಬ ಆರೋಪದಲ್ಲಿ ಲೈಂಗಿಕ ದೃಶ್ಯಾವಳಿಯಿರುವ ವಿಡಿಯೊಗಳು ಸಾಮಾಜಕ ಜಾಲತಾಣದಲ್ಲಿ ಮತ್ತು ಮಾಧ್ಯಮಗಳಲ್ಲಿ ಪ್ರಸಾರವಾಗಿದ್ದವು. ಇದರ ನಂತರ ರಾಜ್ಯದ ಬೃಹತ್ ಜಲಸಂಪನ್ಮೂಲ ಸಚಿವರಾಗಿದ್ದ ರಮೇಶ್ ಜಾರಕಿಹೊಳಿ ಮಾರ್ಚ್ 3 ರಂದು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ತಮ್ಮ ರಾಜೀನಾಮೆ ಪತ್ರದಲ್ಲಿ, ತನ್ನ ಮೇಲಿನ ಆರೋಪಗಳು ಸುಳ್ಳು ಎಂದು ಪ್ರತಿಪಾದಿಸಿದ್ದು, ಬಿಜೆಪಿಯನ್ನು ಮುಜುಗರದಿಂದ ತಪ್ಪಿಸಲು ಅವರು ಸಂಪುಟಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಹೇಳಿದ್ದರು.

ಇದನ್ನೂ ಓದಿ: ಜಾರಕಿಹೊಳಿ ಸಿಡಿ ಮಾಡಿದವರನ್ನು ಪತ್ತೆ ಹಚ್ಚಲು SIT ರಚಿಸಿದ ರಾಜ್ಯ ಸರ್ಕಾರ

ರೈತ ನಾಯಕಿ ಮತ್ತು ದಲಿತ ಮಹಿಳಾ ಒಕ್ಕೂಟದ ಮಾಜಿ ರಾಜ್ಯ ಕಾರ್ಯದರ್ಶಿ ಆಗಿರುವ ಜಯಶ್ರೀ ಗುರನ್ನಾನವರ್, “ರಾಜ್ಯ ಸರ್ಕಾರ ಕೇವಲ ತನ್ನ ಸಚಿವ ಪ್ರತಿಷ್ಠೆಯನ್ನು ರಕ್ಷಿಸಲು ಮಾತ್ರ ಆಸಕ್ತಿ ಹೊಂದಿದೆ. ಮಾಧ್ಯಮಗಳು ಯುವತಿಯ ಗುರುತು ಪತ್ತೆಗೆ ಮತ್ತು ಸಚಿವರ ಮನೆಗೆ ಅವರು ಯಾಕೆ ಪದೆ ಪದೆ ಎಂಬುವುದನ್ನು ಪತ್ತೆ ಹಚ್ಚಲು ತೊಡಗಿಕೊಂಡಿದೆ. ಆದರೆ ಯಾರೂ ಕೂಡಾ ಮಾಜಿ ಸಚಿವ ತನ್ನ ಅಧಿಕಾರವನ್ನು ದುರುಪಯೋಗ ಮಾಡಿದ್ದಾರೆಯೆ ಇಲ್ಲವೆ ಎಂದು ಪತ್ತೆ ಹಚ್ಚುತ್ತಿಲ್ಲ” ಎಂದು ಹೇಳಿದ್ದಾರೆಂದು ದಿ ಹಿಂದು ವರದಿ ಮಾಡಿದೆ.

ಅಖಿಲ ಭಾರತೀಯ ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಘಟಕದ ಉಪಾಧ್ಯಕ್ಷೆ ಕೆ.ನೀಲಾ ಅವರು ಇದು ಮೊದಲೇ ಊಹಿಸಲಾಗಿದ್ದ ಪಿತೃಪ್ರಧಾನ ಮನಸ್ಥಿತಿ, ರಾಜ್ಯ ಸರ್ಕಾರದ ಕ್ರಮಗಳಿಂದೇನು ಆಶ್ಚರ್ಯವಾಗಿಲ್ಲ ಎಂದು ಹೇಳಿದ್ದು, “ಲೈಂಗಿಕ ಕಿರುಕುಳದ ಆರೋಪದ ಎಲ್ಲಾ ಸಂದರ್ಭಗಳಲ್ಲಿ, ಮಹಿಳೆಯರದ್ದೇ ತಪ್ಪು ಎಂದು ಭಾವಿಸಲಾಗಿದೆ. ಇದು ಸರ್ಕಾರವು ಜಾರಕಿಹೊಳಿಯನ್ನು ರಕ್ಷಿಸಲು ಪ್ರಯತ್ನಿಸುತ್ತಿದೆ ಎಂಬ ಸಂದೇಶವನ್ನು ರವಾನಿಸುತ್ತದೆ. ಸಂವಿಧಾನವನ್ನು ಧಿಕ್ಕರಿಸಿ ಮಹಿಳೆಯರನ್ನು ಖಳನಾಯಕರು, ಅವರು ಬಲಿಪಶುಗಳಲ್ಲ ಎಂದು ಕಾಣುವ ಉತ್ತರ ಪ್ರದೇಶದ ಮಾದರಿಯತ್ತ ಕರ್ನಾಟಕ ಚಲಿಸುತ್ತಿದೆ” ಎಂದು ಕಿಡಿಕಾರಿದ್ದಾರೆ ಎಂದು ಹಿಂದೂ ವರದಿ ಮಾಡಿದೆ.

ಪ್ರಕರಣದ ಬಗ್ಗೆ ಬಿಜೆಪಿ ಶಾಸಕ, ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ, ಮಹಿಳೆಯು ಬಲಿಪಶು ಅಲ್ಲ, ಇದು ಬ್ಲ್ಯಾಕ್ಮೇಲ್ ಮತ್ತು ರಾಜಕೀಯ ಪಿತೂರಿ ಪ್ರಕರಣ ಎಂದು ಆರೋಪಿಸಿದ್ದರು.

ಇದನ್ನೂ ಓದಿ: ಸಿಡಿ ಪ್ರಕರಣ: ಸಿಡಿ ನಕಲಿ, ನಾನು ನಿರಪರಾಧಿ ಎಂದು ರಮೇಶ್ ಜಾರಕಿಹೊಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...