Homeಅಂತರಾಷ್ಟ್ರೀಯವಿಡಿಯೋ: ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಇಟಲಿಗೆ ಬಂದಿಳಿದ ವೈದ್ಯರಿಗೆ ಭವ್ಯ ಸ್ವಾಗತ

ವಿಡಿಯೋ: ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಇಟಲಿಗೆ ಬಂದಿಳಿದ ವೈದ್ಯರಿಗೆ ಭವ್ಯ ಸ್ವಾಗತ

- Advertisement -
- Advertisement -

ಕೊರೊನ ವೈರಸ್‌ ಸೋಕಿನಿಂದಾಗಿ ನಾಲ್ಕು ಸಾವಿರಕ್ಕೂ ಹೆಚ್ಚು ಜನರು ಪ್ರಾಣ ತೆತ್ತಿರುವ ಇಟಲಿಯ ನೆರವಿಗೆ ದ್ವೀಪ ರಾಷ್ಟ್ರವಾದ ಕ್ಯೂಬಾದಿಂದ ಬಲಿಷ್ಠ ವೈದ್ಯರು ಮತ್ತು ದಾದಿಯರ ತಂಡ ಧಾವಿಸಿದ್ದು ಅವರಿಗೆ ಇಟಲಿಯ ಲೊಂಬಾರ್ಡ್‌ ವಿಮಾನ ನಿಲ್ದಾಣದಲ್ಲಿ ಭವ್ಯ ಸ್ವಾಗತ ಕೋರಲಾಯಿತು.

ಕ್ಯೂಬಾದ 52 ವೈದ್ಯರ ಬಲಿಷ್ಠ ತಂಡವು ವಿಶ್ವದ ಶ್ರೀಮಂತ ರಾಷ್ಟ್ರಗಳಲ್ಲಿ ಒಂದಾದ ಇಟಲಿಗೆ ತುರ್ತು ದಳವನ್ನು ಕಳುಹಿಸಿದ್ದು ಇದೇ ಮೊದಲಾಗಿದೆ. “ನಮಗೆಲ್ಲರಿಗೂ ಹೆದರಿಕೆಯಿದೆ. ಆದರೆ ನಮಗೆ ಒಂದು ಕ್ರಾಂತಿಕಾರಿ ಕರ್ತವ್ಯವಿದೆ, ಆದ್ದರಿಂದ ನಾವು ಭಯವನ್ನು ಬದಿಗೆ ಇಡುತ್ತೇವೆ” ಎಂದು 68 ವರ್ಷದ ತೀವ್ರ ನಿಗಾ ತಜ್ಞ ಲಿಯೊನಾರ್ಡೊ ಫರ್ನಾಂಡೀಸ್ ತಿಳಿಸಿದ್ದಾರೆ.

ವಿಡಿಯೋ ನೋಡಿ:

ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಇಟಲಿಗೆ ಬಂದಿಳಿದ ಕ್ಯೂಬಾದ ವೈದ್ಯರ ತಂಡಕ್ಕೆ ಅಭೂತಪೂರ್ವ ಸ್ವಾಗತ..

Posted by Naanu Gauri on Monday, March 23, 2020

ವಿದೇಶದಲ್ಲಿ ಹೊಸ ರೋಗ ಹರಡುವುದನ್ನು ಎದುರಿಸಲು ಕ್ಯೂಬಾ ಇತ್ತೀಚಿನ ದಿನಗಳಲ್ಲಿ ಕಳುಹಿಸಿದ ಆರನೇ ವೈದ್ಯಕೀಯ ತಂಡ ಇದಾಗಿದೆ. ಇದು ಸಮಾಜವಾದಿ ಮಿತ್ರರಾಷ್ಟ್ರಗಳಾದ ವೆನೆಜುವೆಲಾ, ನಿಕರಾಗುವಾ, ಜಮೈಕಾ, ಸುರಿನಾಮ್ ಮತ್ತು ಗ್ರೆನಡಾಗಳಿಗೆ ತನ್ನ ತುಕಡಿಗಳನ್ನು ಕಳುಹಿಸಿದೆ.

ತಂಡದ ಮುಖ್ಯಸ್ತರಾದ ಲಿಯೊನಾರ್ಡೊ ಫರ್ನಾಂಡೀಸ್ ತನ್ನ ತನ್ನ ತಂಡದ ನಿರ್ಗಮನಕ್ಕೆ ಮೊದಲು “ತಾನು ಹೆದರುವುದಿಲ್ಲ ಎಂದು ಹೇಳುವವನು ಸೂಪರ್ ಹೀರೋ, ಆದರೆ ನಾವು ಸೂಪರ್ ಹೀರೋಗಳಲ್ಲ, ಕ್ರಾಂತಿಕಾರಿ ವೈದ್ಯರು” ಎಂದು ಹೇಳಿದ್ದಾರೆ. ಎಬೊಲಾ ವಿರುದ್ಧದ ಹೋರಾಟದ ಸಮಯದಲ್ಲಿ ಲೈಬೀರಿಯಾ ಸೇರಿದಂತೆ ಇದು ಅವರ ಎಂಟನೇ ಅಂತರರಾಷ್ಟ್ರೀಯ ಮಿಷನ್ ಎಂದು ಫರ್ನಾಂಡೀಸ್ ಹೇಳಿದ್ದಾರೆ.

ಚೀನಾದಲ್ಲಿ ಹುಟ್ಟಿದ ಸಾಂಕ್ರಾಮಿಕ ವೈರಸ್‌ನಿಂದ ಹೆಚ್ಚು ಹಾನಿಗೊಳಗಾದ ದೇಶ ಇಟಲಿಯಗಿದೆ. ಅಲ್ಲಿ ಸಾವಿನ ಸಂಖ್ಯೆ ಶನಿವಾರ 546 ರಿಂದ 3,095 ಕ್ಕೆ ಏರಿದೆ ಎಂದು ತಿಳಿದುಬಂದಿದೆ.

ಬ್ರಿಟಿಷ್ ಕ್ರೂಸ್ ಹಡಗನ್ನು ದ್ವೀಪದಲ್ಲಿ ಕಟ್ಟಲು ಅನುಮತಿಸಿದ್ದಕ್ಕಾಗಿ ಮತ್ತು ವಿಮಾನದಲ್ಲಿ 600 ಕ್ಕೂ ಹೆಚ್ಚು ಪ್ರಯಾಣಿಕರನ್ನು ಸ್ಥಳಾಂತರಿಸಲು ಅನುವು ಮಾಡಿಕೊಟ್ಟಿದ್ದಕ್ಕಾಗಿ ಬ್ರಿಟನ್ ಕಳೆದ ವಾರ ಕ್ಯೂಬಾಗೆ ಧನ್ಯವಾದ ಅರ್ಪಿಸಿತ್ತು.

ವಿಪತ್ತು ಸನ್ನದ್ಧತೆಗೆ ಹೆಸರುವಾಸಿಯಾದ ಕ್ಯೂಬಾ, ಕೊರೊನಾ ವೈರಸ್ ಸಾಂಕ್ರಾಮಿಕ ರೋಗವನ್ನು ತಡೆಗಟ್ಟಲು ತನ್ನ ದೇಶದಲ್ಲಿಯೂ ಅಗತ್ಯ ಕ್ರಮಗಳನ್ನು ಹೆಚ್ಚಿಸುತ್ತಿದೆ. ಈವರೆಗೆ ಅಲ್ಲಿ ಇಪ್ಪತ್ತೈದು ಪ್ರಕರಣಗಳು ದೃಡಪಟ್ಟಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...

ಬಹುಭಾಷಾ ನಟ ಪ್ರಕಾಶ್ ರಾಜ್‌ ತಾಯಿ ಸ್ವರ್ಣಲತಾ ನಿಧನ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ನಟ ಪ್ರಕಾಶ್‌ ರಾಜ್‌ ಅವರು ತಮ್ಮ ತಾಯಿಯೊಂದಿಗೆ ಇದ್ದ...

ಮುಂಬೈ: ಸ್ವ-ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ಆಕ್ರೋಶ: ದಾದರ್‌ನಲ್ಲಿ ಮೂಢನಂಬಿಕೆ ವಿರೋಧಿ ಅಭಿಯಾನ

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಚಟುವಟಿಕೆಗಳ ಸುತ್ತ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ವಿವೇಕ್ ಜಾಗರ್ ಉಪಕ್ರಮದಡಿಯಲ್ಲಿ ಮಹಾರಾಷ್ಟ್ರ ಅಂಧಾಶ್ರದ್ಧ ನಿರ್ಮೂಲನ ಸಮಿತಿ (MANS) ಮಹಾರಾಷ್ಟ್ರ ಘಟಕವು ಭಾನುವಾರ...

ನೋಟಿಸ್ ನೀಡದೆ ಮಸೀದಿ ಬಂದ್; ಉತ್ತರ ಪ್ರದೇಶ ಸರ್ಕಾರವನ್ನು ಪ್ರಶ್ನಿಸಿದ ಅಲಹಾಬಾದ್ ಹೈಕೋರ್ಟ್

ಪೂರ್ವ ಸೂಚನೆ ನೀಡದೆ ಅಥವಾ ಮಾಲೀಕರಿಗೆ ವಿಚಾರಣೆಗೆ ಅವಕಾಶ ನೀಡದೆ ಪ್ರಾರ್ಥನಾ ಸ್ಥಳಕ್ಕೆ ಬೀಗ ಹಾಕಬಹುದೇ ಎಂಬ ಬಗ್ಗೆ ವಿವರಣೆ ನೀಡಬೇಕು ಎಂದು ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರವನ್ನು ಕೇಳಿದೆ. ಮುಜಫರ್‌ನಗರದಲ್ಲಿ ಮಸೀದಿಯನ್ನು...

ಬಿಜು ಪಟ್ನಾಯಕ್ ಕುರಿತು ಹೇಳಿಕೆ : ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ತೀವ್ರ ಆಕ್ರೋಶ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ಬಿಜೆಪಿ ಸಂಸದ ನಿಶಿಕಾಂತ್ ದುಬೆ ನೀಡಿರುವ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ದುಬೆ ನೇತೃತ್ವದ ಸಂವಹನ ಮತ್ತು ಐಟಿ ಕುರಿತ ಸಂಸದೀಯ ಸ್ಥಾಯಿ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ; ಆರ್‌ಎಸ್‌ಎಸ್ ನಾಯಕ ಸೇರಿದಂತೆ 30 ಜನರ ಬಂಧನ

ಮಾರ್ಚ್ 27 ರಂದು ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ನಡೆದ ರಾಮನವಮಿ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿದ ನಂತರ ಸುಮಾರು 30 ಜನರು ಗಾಯಗೊಂಡರು. ಈ ಘಟನೆಯು ವ್ಯಾಪಕ ಉದ್ವಿಗ್ನತೆಗೆ ಕಾರಣವಾಗಿದ್ದು, ಅಂಗಡಿ...

ದೆಹಲಿ ಗಲಭೆ ಪ್ರಕರಣ: ಮಧ್ಯಂತರ ಜಾಮೀನು ಅವಧಿ ಅಂತ್ಯ; ಇಂದು ತಿಹಾರ್ ಜೈಲಿಗೆ ಮರಳಲಿರುವ ಶಾರ್ಜೀಲ್ ಇಮಾಮ್

2020 ರ ಈಶಾನ್ಯ ದೆಹಲಿ ಗಲಭೆಯ ಹಿಂದಿನ ದೊಡ್ಡ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ನೀಡಿದ್ದ 10 ದಿನಗಳ ಮಧ್ಯಂತರ ಜಾಮೀನು ಅವಧಿ ಮುಗಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್...