Homeಅಂತರಾಷ್ಟ್ರೀಯವಿಡಿಯೋ: ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಇಟಲಿಗೆ ಬಂದಿಳಿದ ವೈದ್ಯರಿಗೆ ಭವ್ಯ ಸ್ವಾಗತ

ವಿಡಿಯೋ: ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಇಟಲಿಗೆ ಬಂದಿಳಿದ ವೈದ್ಯರಿಗೆ ಭವ್ಯ ಸ್ವಾಗತ

- Advertisement -
- Advertisement -

ಕೊರೊನ ವೈರಸ್‌ ಸೋಕಿನಿಂದಾಗಿ ನಾಲ್ಕು ಸಾವಿರಕ್ಕೂ ಹೆಚ್ಚು ಜನರು ಪ್ರಾಣ ತೆತ್ತಿರುವ ಇಟಲಿಯ ನೆರವಿಗೆ ದ್ವೀಪ ರಾಷ್ಟ್ರವಾದ ಕ್ಯೂಬಾದಿಂದ ಬಲಿಷ್ಠ ವೈದ್ಯರು ಮತ್ತು ದಾದಿಯರ ತಂಡ ಧಾವಿಸಿದ್ದು ಅವರಿಗೆ ಇಟಲಿಯ ಲೊಂಬಾರ್ಡ್‌ ವಿಮಾನ ನಿಲ್ದಾಣದಲ್ಲಿ ಭವ್ಯ ಸ್ವಾಗತ ಕೋರಲಾಯಿತು.

ಕ್ಯೂಬಾದ 52 ವೈದ್ಯರ ಬಲಿಷ್ಠ ತಂಡವು ವಿಶ್ವದ ಶ್ರೀಮಂತ ರಾಷ್ಟ್ರಗಳಲ್ಲಿ ಒಂದಾದ ಇಟಲಿಗೆ ತುರ್ತು ದಳವನ್ನು ಕಳುಹಿಸಿದ್ದು ಇದೇ ಮೊದಲಾಗಿದೆ. “ನಮಗೆಲ್ಲರಿಗೂ ಹೆದರಿಕೆಯಿದೆ. ಆದರೆ ನಮಗೆ ಒಂದು ಕ್ರಾಂತಿಕಾರಿ ಕರ್ತವ್ಯವಿದೆ, ಆದ್ದರಿಂದ ನಾವು ಭಯವನ್ನು ಬದಿಗೆ ಇಡುತ್ತೇವೆ” ಎಂದು 68 ವರ್ಷದ ತೀವ್ರ ನಿಗಾ ತಜ್ಞ ಲಿಯೊನಾರ್ಡೊ ಫರ್ನಾಂಡೀಸ್ ತಿಳಿಸಿದ್ದಾರೆ.

ವಿಡಿಯೋ ನೋಡಿ:

ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಇಟಲಿಗೆ ಬಂದಿಳಿದ ಕ್ಯೂಬಾದ ವೈದ್ಯರ ತಂಡಕ್ಕೆ ಅಭೂತಪೂರ್ವ ಸ್ವಾಗತ..

Posted by Naanu Gauri on Monday, March 23, 2020

ವಿದೇಶದಲ್ಲಿ ಹೊಸ ರೋಗ ಹರಡುವುದನ್ನು ಎದುರಿಸಲು ಕ್ಯೂಬಾ ಇತ್ತೀಚಿನ ದಿನಗಳಲ್ಲಿ ಕಳುಹಿಸಿದ ಆರನೇ ವೈದ್ಯಕೀಯ ತಂಡ ಇದಾಗಿದೆ. ಇದು ಸಮಾಜವಾದಿ ಮಿತ್ರರಾಷ್ಟ್ರಗಳಾದ ವೆನೆಜುವೆಲಾ, ನಿಕರಾಗುವಾ, ಜಮೈಕಾ, ಸುರಿನಾಮ್ ಮತ್ತು ಗ್ರೆನಡಾಗಳಿಗೆ ತನ್ನ ತುಕಡಿಗಳನ್ನು ಕಳುಹಿಸಿದೆ.

ತಂಡದ ಮುಖ್ಯಸ್ತರಾದ ಲಿಯೊನಾರ್ಡೊ ಫರ್ನಾಂಡೀಸ್ ತನ್ನ ತನ್ನ ತಂಡದ ನಿರ್ಗಮನಕ್ಕೆ ಮೊದಲು “ತಾನು ಹೆದರುವುದಿಲ್ಲ ಎಂದು ಹೇಳುವವನು ಸೂಪರ್ ಹೀರೋ, ಆದರೆ ನಾವು ಸೂಪರ್ ಹೀರೋಗಳಲ್ಲ, ಕ್ರಾಂತಿಕಾರಿ ವೈದ್ಯರು” ಎಂದು ಹೇಳಿದ್ದಾರೆ. ಎಬೊಲಾ ವಿರುದ್ಧದ ಹೋರಾಟದ ಸಮಯದಲ್ಲಿ ಲೈಬೀರಿಯಾ ಸೇರಿದಂತೆ ಇದು ಅವರ ಎಂಟನೇ ಅಂತರರಾಷ್ಟ್ರೀಯ ಮಿಷನ್ ಎಂದು ಫರ್ನಾಂಡೀಸ್ ಹೇಳಿದ್ದಾರೆ.

ಚೀನಾದಲ್ಲಿ ಹುಟ್ಟಿದ ಸಾಂಕ್ರಾಮಿಕ ವೈರಸ್‌ನಿಂದ ಹೆಚ್ಚು ಹಾನಿಗೊಳಗಾದ ದೇಶ ಇಟಲಿಯಗಿದೆ. ಅಲ್ಲಿ ಸಾವಿನ ಸಂಖ್ಯೆ ಶನಿವಾರ 546 ರಿಂದ 3,095 ಕ್ಕೆ ಏರಿದೆ ಎಂದು ತಿಳಿದುಬಂದಿದೆ.

ಬ್ರಿಟಿಷ್ ಕ್ರೂಸ್ ಹಡಗನ್ನು ದ್ವೀಪದಲ್ಲಿ ಕಟ್ಟಲು ಅನುಮತಿಸಿದ್ದಕ್ಕಾಗಿ ಮತ್ತು ವಿಮಾನದಲ್ಲಿ 600 ಕ್ಕೂ ಹೆಚ್ಚು ಪ್ರಯಾಣಿಕರನ್ನು ಸ್ಥಳಾಂತರಿಸಲು ಅನುವು ಮಾಡಿಕೊಟ್ಟಿದ್ದಕ್ಕಾಗಿ ಬ್ರಿಟನ್ ಕಳೆದ ವಾರ ಕ್ಯೂಬಾಗೆ ಧನ್ಯವಾದ ಅರ್ಪಿಸಿತ್ತು.

ವಿಪತ್ತು ಸನ್ನದ್ಧತೆಗೆ ಹೆಸರುವಾಸಿಯಾದ ಕ್ಯೂಬಾ, ಕೊರೊನಾ ವೈರಸ್ ಸಾಂಕ್ರಾಮಿಕ ರೋಗವನ್ನು ತಡೆಗಟ್ಟಲು ತನ್ನ ದೇಶದಲ್ಲಿಯೂ ಅಗತ್ಯ ಕ್ರಮಗಳನ್ನು ಹೆಚ್ಚಿಸುತ್ತಿದೆ. ಈವರೆಗೆ ಅಲ್ಲಿ ಇಪ್ಪತ್ತೈದು ಪ್ರಕರಣಗಳು ದೃಡಪಟ್ಟಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...