Homeಕರ್ನಾಟಕನಾಳೆ ಬೈಕ್ ಜಾಥಾಕ್ಕೆ ತೆರೆ, ಅದ್ದೂರಿ ಸ್ವಾಗತ: ಅವಿಸ್ಮರಣೀಯ ಕ್ಷಣಕ್ಕೆ ಸಾಕ್ಷಿಯಾಗೋಣ ಬನ್ನಿ; ತಾರಾ ರಾವ್

ನಾಳೆ ಬೈಕ್ ಜಾಥಾಕ್ಕೆ ತೆರೆ, ಅದ್ದೂರಿ ಸ್ವಾಗತ: ಅವಿಸ್ಮರಣೀಯ ಕ್ಷಣಕ್ಕೆ ಸಾಕ್ಷಿಯಾಗೋಣ ಬನ್ನಿ; ತಾರಾ ರಾವ್

- Advertisement -
- Advertisement -

ದಾವಣಗೆರೆ: ಏ.26ರಂದು ನಡೆಯುತ್ತಿರುವ ಸಂವಿಧಾನ ಸಂರಕ್ಷಕರ ಸಮಾವೇಶದ ಮಹತ್ವವನ್ನು ತಿಳಿಸುವುದಕ್ಕಾಗಿ ಏ.14ರಿಂದ ಪ್ರಾರಂಭವಾಗಿರುವ ದೇಶಪ್ರೇಮಿ ಯುವಾಂದೋಲನ ಬೈಕ್ ಜಾಥಾದ ಕೊನೆ ದಿನವಾದ ನಾಳೆ (ಏ.25) ದಾವಣಗೆರೆ ಪ್ರವೇಶಿಸಲಿದ್ದು, ಅಲ್ಲಿನ ಯುವಕ-ಯುವತಿಯರು ಅದ್ದೂರಿ ಸ್ವಾಗತ ಕೊರಲಿದ್ದಾರೆ ಎಂದು ಎದ್ದೇಳು ಕರ್ನಾಟಕದ  ಸೆಂಟ್ರಲ್ ವರ್ಕಿಂಗ್ ಕಮಿಟಿ ಸದಸ್ಯರಾದ ತಾರ ರಾವ್ ತಿಳಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಅವರು, ಏ.14ರಿಂದ ಈ ಜಾಥಾದಲ್ಲಿ ಭಾಗವಹಿಸಿದ ಯುವಕ-ಯುವತಿಯರ ಜೊತೆ ದಾವಣಗೆರೆಯ ಹಲವಾರು ಯುವಕ ಯುವತಿಯರು ಜೊತೆಗೂಡಿ ನಗರದಾದ್ಯಂತ ನಾಳೆ (ಏ.25) ಬೃಹತ್ ಬೈಕ್ ರ್ಯಾಲಿ ನಡೆಸಲಿದ್ದು 26ರಂದು ನಡೆಯುವ ಸಂವಿಧಾನ ಸಂರಕ್ಷಕರ ಸಮಾವೇಶದ ಕುರಿತು ಪ್ರಚಾರ ನಡೆಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಈ ಕಾರ್ಯಕ್ರಮಕ್ಕೆ ರಾಜ್ಯದ ವಿವಿಧ ಭಾಗದಿಂದ ಸುಮಾರು 10,000ಕ್ಕೂ ಹೆಚ್ಚು ಸಂವಿಧಾನ ಸಂರಕ್ಷಕ ಹೋರಾಟಗಾರರು ಭಾಗವಹಿಸಲಿದ್ದಾರೆ. ಈ ಸಮಾವೇಶದ ಕುರಿತು ಜನರಿಗೆ ಮಾಹಿತಿ ಮತ್ತು ಕಾರ್ಯಕ್ರಮಕ್ಕೆ ಆಹ್ವಾನ ನೀಡಲು ಇದೇ ಏ.14ರಿಂದ  ಬೈಕ್ ಯಾನವು  ಅಂಬೇಡ್ಕರ್ ಭೇಟಿ ನೀಡಿದ ಸ್ಥಳವಾದ ಗುಲ್ಬರ್ಗ ಜಿಲ್ಲೆಯ ವಾಡಿಯಿಂದ ಪ್ರಾರಂಭವಾಗಿದ್ದು ಅದೀಗ ಅದು ರಾಜ್ಯದ ಸುಮಾರು 20 ಜಿಲ್ಲೆಗಳ ಮೂಲಕ ಹಾದು, ಸರಿ ಸುಮಾರು 2000 ಕಿ.ಮೀ. ಕ್ರಮಿಸಿ ನಾಳೆ ದಾವಣಗೆರೆಗೆ ಆಗಮಿಸಲಿದೆ ಎಂದಿದ್ದಾರೆ.

ಜಾಥಾದಲ್ಲಿ ಹೇಮಂತ ಹಾಸನ, ಗೀತಾ ಗುಲ್ಬರ್ಗ, ಕೌಶಲ್ಯ ಮಂಡ್ಯ, ಸರೋವರ ಬೆಂಗಳೂರು, ಮರಿಸ್ವಾಮಿ ಕಟ್ಟಿಮನಿ ಬೆಂಗಳೂರು, ರವಿ ನವಲಹಳ್ಳಿ ರಾಯಚೂರು ಜಿಲ್ಲೆ, ಉಮೇಶ್ ಬಡಗಿ ಕೊಪ್ಪಳ, ಶರಣು ಈಳಿಗನೂರು (ಕೊಪ್ಪಳ), ಯಮುನಾ ಚಳ್ಳೂರು(ಕೊಪ್ಪಳ), ಯಮನೂರ ಈಳಿಗನೂರು(ಕೊಪ್ಪಳ), ದುರ್ಗೆಶ್ ಕೆ. ಬರಗೂರು(ಕೊಪ್ಪಳ), ರಾಜೇಂದ್ರ ರಾಜವಾಳ (ಗುಲ್ಬರ್ಗಾ), ಶಾಂತಾ ಗುಲ್ಬರ್ಗಾ, ಕೇಶವ್ ಕೋಲಾರ ಭಾಗವಹಿಸಿದ್ದು, ಇವರೆಲ್ಲರಿಗೂ ಎದ್ದೇಳು ಕರ್ನಾಟಕವು ಹೃದಯತುಂಬಿ ವಂದಿಸುತ್ತದೆ ಮತ್ತು ನಾಳಿನ ಅದ್ದೂರಿ ಸ್ವಾಗತ ಕಾರ್ಯಕ್ರಮದಲ್ಲಿ ನಾವು ಹಲವರು ಭಾಗಿಯಾಗಿ ಅವಿಸ್ಮರಣೀಯ ಕ್ಷಣಕ್ಕೆ ಸಾಕ್ಷಿಯಾಗುತ್ತೇವೆ ಎಂದು ಅವರು ತಿಳಿಸಿದರು.

ಜಾಥಾವು ದಾರಿಯುದ್ದಕ್ಕೂ ಕಾರ್ಯಕ್ರಮದ ಬಗ್ಗೆ ಮಾತ್ರ ಜನರಲ್ಲಿ ಜಾಗೃತಿ ಮೂಡಿಸಲಿಲ್ಲ, ಬದಲಾಗಿ ಇಂದಿನ ಯುವಕರು–ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಚರ್ಚಿಸಿತು ಮತ್ತು ಅದರ ಪರಿಹಾರಕ್ಕೆ ಹೋರಾಟವೊಂದೇ ದಾರಿ ಎಂದು ಜನರಿಗೆ ತಿಳಿಸಿತು. ಇಂದಿನ ಶಿಕ್ಷಣವು ಅನುಕೂಲಸ್ಥರಿಗೆ ಸಿಗುವ ಐಶಾರಿಮಿ ವಸ್ತುವಲ್ಲ, ಬದಲಿಗೆ ದೇಶದ ಎಲ್ಲರಿಗೂ ಸಿಗಬೇಕಾದ ಮೂಲಭೂತ ಹಕ್ಕು. ಆದರೆ ಈಗ ಶಿಕ್ಷಣದ ಕನಸು ಕಮರುತ್ತಿದೆ. ಸರಕಾರಿ ಶಾಲಾ ಕಾಲೇಜುಗಳು ಮುಚ್ಚುತ್ತಿವೆ. ಫೀಸು ಡೊನೇಷನ್ ಎಂಬ ಭೂತವು ಅಡ್ಡಾದಿಡ್ಡಿಯಾಗಿ ಕುಣಿಯುತ್ತಿದೆ. ಅದರ ಕಾಲ ಕೆಳಗೆ ಸಿಕ್ಕು ದಮನಿತರು ಬಡವರು ನರಳುತ್ತಿದ್ದಾರೆ ಎಂಬುದನ್ನು ಜಾಥಾವು ಜನರಿಗೆ ತಿಳಿಸಿತು ಎಂದು ತಾರಾ ರಾವ್ ಹೇಳಿದರು.

ಹಾಗೆಯೇ  ಶಿಕ್ಷಣದ ವ್ಯಾಪಾರದ ಚಕ್ರವ್ಯೂಹವನ್ನು ಬೇಧಿಸಿ, ವಿದ್ಯಾರ್ಥಿಗಳು ಉದ್ಯೋಗ ಸಿಗುತ್ತದೆಂಬ ಬಹುನಿರೀಕ್ಷೆಯಿಂದ ತಮ್ಮ ಪದವಿಯನ್ನು ಮುಗಿಸುತ್ತಿದ್ದಾರೆ. ಆದರೆ ಭಾರತದಲ್ಲಿ 45 ವರ್ಷದಲ್ಲೇ ಐತಿಹಾಸಿಕ ನಿರುದ್ಯೋಗ ಏರಿಕೆ ಕಂಡಿದೆ ಎಂದು ವರದಿಗಳು ಹೇಳುತ್ತಿವೆ. ಕೇವಲ 60 ಸಾವಿರ ಉದ್ಯೋಗ ನೇಮಕಾತಿಯ ಕರೆಗೆ 48 ಲಕ್ಷಕ್ಕೂ  ಹೆಚ್ಚು ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು ಇತ್ತೀಚೆಗೆ ದೊಡ್ಡ ಸುದ್ದಿಯಾಗಿತ್ತು. ಪ್ರಪಂಚದ ಅತ್ಯಂತ ಹೆಚ್ಚು ಯುವಜನರನ್ನು ಹೊಂದಿರುವ ಭಾರತದ ಯುವಜನರ ಕೌಶಲ್ಯ, ಶ್ರಮ ಮತ್ತು ಪ್ರತಿಭೆಗಳು ವ್ಯರ್ಥವಾಗುತ್ತಿದೆ. ಇದರ ಜೊತೆಗೆ ಸಮಾಜದಲ್ಲಿ ದ್ವೇಷಕ್ಕೆ ಬದಲಾಗಿ ಪ್ರೀತಿ ಹಂಚೋಣ ಎಂದು ಕರೆ ನೀಡಿತು. ನಾವು ಬರೀ ಮಾತನಾಡುತ್ತಿಲ್ಲ. ಉಚಿತ ಗುಣಮಟ್ಟದ ಶಿಕ್ಷಣಕ್ಕಾಗಿ, ಸುಭದ್ರ ಉದ್ಯೋಗ, ಸುಸ್ಥಿರ ಪರಿಸರಕ್ಕಾಗಿ ಪ್ರೀತಿ ಮತ್ತು ನೆಮ್ಮದಿ ತುಂಬಿದ ನಾಡಿಗಾಗಿ ರಚನಾತ್ಮಕ ಕೆಲಸವನ್ನು ಮಾಡುತ್ತಿದ್ದೇವೆ. ಇದು ಒಂದು ದಿನದ ಹೋರಾಟವಲ್ಲ, ಯುವಜನರ ಭವಿಷ್ಯಕ್ಕಾಗಿನ ಬದ್ಧತೆ ಇದಾಗಿದೆ. ನೀವು ನಮ್ಮೊಡನೆ ಸೇರಿದಾಗ ನಮ್ಮ ದನಿ ದೊಡ್ಡದಾಗುತ್ತದೆ. ನಾವು ಒಟ್ಟಿಗೆ ಕೂಗಿದಾಗ ದೇಶದ ಉದ್ದಗಲಕ್ಕೂ ದನಿ ಪ್ರತಿಧ್ವನಿಯಾಗುತ್ತದೆ ಎಂದು ಜನತೆಗೆ ಜಾಥಾವು ಕರೆ ಕೊಟ್ಟಿತು ಎಂದು ಅವರು ಹೇಳಿದರು.

26ರ ಸಂವಿಧಾನ ಸಂರಕ್ಷಕರ ಸಮಾವೇಶದ ವೇಳಾಪಟ್ಟಿ ಬಿಡುಗಡೆ ಮಾಡಿದ ಅಧ್ಯಕ್ಷೀಯ ಮಂಡಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...