Homeಕರ್ನಾಟಕನಾಳೆ ಬೈಕ್ ಜಾಥಾಕ್ಕೆ ತೆರೆ, ಅದ್ದೂರಿ ಸ್ವಾಗತ: ಅವಿಸ್ಮರಣೀಯ ಕ್ಷಣಕ್ಕೆ ಸಾಕ್ಷಿಯಾಗೋಣ ಬನ್ನಿ; ತಾರಾ ರಾವ್

ನಾಳೆ ಬೈಕ್ ಜಾಥಾಕ್ಕೆ ತೆರೆ, ಅದ್ದೂರಿ ಸ್ವಾಗತ: ಅವಿಸ್ಮರಣೀಯ ಕ್ಷಣಕ್ಕೆ ಸಾಕ್ಷಿಯಾಗೋಣ ಬನ್ನಿ; ತಾರಾ ರಾವ್

- Advertisement -
- Advertisement -

ದಾವಣಗೆರೆ: ಏ.26ರಂದು ನಡೆಯುತ್ತಿರುವ ಸಂವಿಧಾನ ಸಂರಕ್ಷಕರ ಸಮಾವೇಶದ ಮಹತ್ವವನ್ನು ತಿಳಿಸುವುದಕ್ಕಾಗಿ ಏ.14ರಿಂದ ಪ್ರಾರಂಭವಾಗಿರುವ ದೇಶಪ್ರೇಮಿ ಯುವಾಂದೋಲನ ಬೈಕ್ ಜಾಥಾದ ಕೊನೆ ದಿನವಾದ ನಾಳೆ (ಏ.25) ದಾವಣಗೆರೆ ಪ್ರವೇಶಿಸಲಿದ್ದು, ಅಲ್ಲಿನ ಯುವಕ-ಯುವತಿಯರು ಅದ್ದೂರಿ ಸ್ವಾಗತ ಕೊರಲಿದ್ದಾರೆ ಎಂದು ಎದ್ದೇಳು ಕರ್ನಾಟಕದ  ಸೆಂಟ್ರಲ್ ವರ್ಕಿಂಗ್ ಕಮಿಟಿ ಸದಸ್ಯರಾದ ತಾರ ರಾವ್ ತಿಳಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಅವರು, ಏ.14ರಿಂದ ಈ ಜಾಥಾದಲ್ಲಿ ಭಾಗವಹಿಸಿದ ಯುವಕ-ಯುವತಿಯರ ಜೊತೆ ದಾವಣಗೆರೆಯ ಹಲವಾರು ಯುವಕ ಯುವತಿಯರು ಜೊತೆಗೂಡಿ ನಗರದಾದ್ಯಂತ ನಾಳೆ (ಏ.25) ಬೃಹತ್ ಬೈಕ್ ರ್ಯಾಲಿ ನಡೆಸಲಿದ್ದು 26ರಂದು ನಡೆಯುವ ಸಂವಿಧಾನ ಸಂರಕ್ಷಕರ ಸಮಾವೇಶದ ಕುರಿತು ಪ್ರಚಾರ ನಡೆಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಈ ಕಾರ್ಯಕ್ರಮಕ್ಕೆ ರಾಜ್ಯದ ವಿವಿಧ ಭಾಗದಿಂದ ಸುಮಾರು 10,000ಕ್ಕೂ ಹೆಚ್ಚು ಸಂವಿಧಾನ ಸಂರಕ್ಷಕ ಹೋರಾಟಗಾರರು ಭಾಗವಹಿಸಲಿದ್ದಾರೆ. ಈ ಸಮಾವೇಶದ ಕುರಿತು ಜನರಿಗೆ ಮಾಹಿತಿ ಮತ್ತು ಕಾರ್ಯಕ್ರಮಕ್ಕೆ ಆಹ್ವಾನ ನೀಡಲು ಇದೇ ಏ.14ರಿಂದ  ಬೈಕ್ ಯಾನವು  ಅಂಬೇಡ್ಕರ್ ಭೇಟಿ ನೀಡಿದ ಸ್ಥಳವಾದ ಗುಲ್ಬರ್ಗ ಜಿಲ್ಲೆಯ ವಾಡಿಯಿಂದ ಪ್ರಾರಂಭವಾಗಿದ್ದು ಅದೀಗ ಅದು ರಾಜ್ಯದ ಸುಮಾರು 20 ಜಿಲ್ಲೆಗಳ ಮೂಲಕ ಹಾದು, ಸರಿ ಸುಮಾರು 2000 ಕಿ.ಮೀ. ಕ್ರಮಿಸಿ ನಾಳೆ ದಾವಣಗೆರೆಗೆ ಆಗಮಿಸಲಿದೆ ಎಂದಿದ್ದಾರೆ.

ಜಾಥಾದಲ್ಲಿ ಹೇಮಂತ ಹಾಸನ, ಗೀತಾ ಗುಲ್ಬರ್ಗ, ಕೌಶಲ್ಯ ಮಂಡ್ಯ, ಸರೋವರ ಬೆಂಗಳೂರು, ಮರಿಸ್ವಾಮಿ ಕಟ್ಟಿಮನಿ ಬೆಂಗಳೂರು, ರವಿ ನವಲಹಳ್ಳಿ ರಾಯಚೂರು ಜಿಲ್ಲೆ, ಉಮೇಶ್ ಬಡಗಿ ಕೊಪ್ಪಳ, ಶರಣು ಈಳಿಗನೂರು (ಕೊಪ್ಪಳ), ಯಮುನಾ ಚಳ್ಳೂರು(ಕೊಪ್ಪಳ), ಯಮನೂರ ಈಳಿಗನೂರು(ಕೊಪ್ಪಳ), ದುರ್ಗೆಶ್ ಕೆ. ಬರಗೂರು(ಕೊಪ್ಪಳ), ರಾಜೇಂದ್ರ ರಾಜವಾಳ (ಗುಲ್ಬರ್ಗಾ), ಶಾಂತಾ ಗುಲ್ಬರ್ಗಾ, ಕೇಶವ್ ಕೋಲಾರ ಭಾಗವಹಿಸಿದ್ದು, ಇವರೆಲ್ಲರಿಗೂ ಎದ್ದೇಳು ಕರ್ನಾಟಕವು ಹೃದಯತುಂಬಿ ವಂದಿಸುತ್ತದೆ ಮತ್ತು ನಾಳಿನ ಅದ್ದೂರಿ ಸ್ವಾಗತ ಕಾರ್ಯಕ್ರಮದಲ್ಲಿ ನಾವು ಹಲವರು ಭಾಗಿಯಾಗಿ ಅವಿಸ್ಮರಣೀಯ ಕ್ಷಣಕ್ಕೆ ಸಾಕ್ಷಿಯಾಗುತ್ತೇವೆ ಎಂದು ಅವರು ತಿಳಿಸಿದರು.

ಜಾಥಾವು ದಾರಿಯುದ್ದಕ್ಕೂ ಕಾರ್ಯಕ್ರಮದ ಬಗ್ಗೆ ಮಾತ್ರ ಜನರಲ್ಲಿ ಜಾಗೃತಿ ಮೂಡಿಸಲಿಲ್ಲ, ಬದಲಾಗಿ ಇಂದಿನ ಯುವಕರು–ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಚರ್ಚಿಸಿತು ಮತ್ತು ಅದರ ಪರಿಹಾರಕ್ಕೆ ಹೋರಾಟವೊಂದೇ ದಾರಿ ಎಂದು ಜನರಿಗೆ ತಿಳಿಸಿತು. ಇಂದಿನ ಶಿಕ್ಷಣವು ಅನುಕೂಲಸ್ಥರಿಗೆ ಸಿಗುವ ಐಶಾರಿಮಿ ವಸ್ತುವಲ್ಲ, ಬದಲಿಗೆ ದೇಶದ ಎಲ್ಲರಿಗೂ ಸಿಗಬೇಕಾದ ಮೂಲಭೂತ ಹಕ್ಕು. ಆದರೆ ಈಗ ಶಿಕ್ಷಣದ ಕನಸು ಕಮರುತ್ತಿದೆ. ಸರಕಾರಿ ಶಾಲಾ ಕಾಲೇಜುಗಳು ಮುಚ್ಚುತ್ತಿವೆ. ಫೀಸು ಡೊನೇಷನ್ ಎಂಬ ಭೂತವು ಅಡ್ಡಾದಿಡ್ಡಿಯಾಗಿ ಕುಣಿಯುತ್ತಿದೆ. ಅದರ ಕಾಲ ಕೆಳಗೆ ಸಿಕ್ಕು ದಮನಿತರು ಬಡವರು ನರಳುತ್ತಿದ್ದಾರೆ ಎಂಬುದನ್ನು ಜಾಥಾವು ಜನರಿಗೆ ತಿಳಿಸಿತು ಎಂದು ತಾರಾ ರಾವ್ ಹೇಳಿದರು.

ಹಾಗೆಯೇ  ಶಿಕ್ಷಣದ ವ್ಯಾಪಾರದ ಚಕ್ರವ್ಯೂಹವನ್ನು ಬೇಧಿಸಿ, ವಿದ್ಯಾರ್ಥಿಗಳು ಉದ್ಯೋಗ ಸಿಗುತ್ತದೆಂಬ ಬಹುನಿರೀಕ್ಷೆಯಿಂದ ತಮ್ಮ ಪದವಿಯನ್ನು ಮುಗಿಸುತ್ತಿದ್ದಾರೆ. ಆದರೆ ಭಾರತದಲ್ಲಿ 45 ವರ್ಷದಲ್ಲೇ ಐತಿಹಾಸಿಕ ನಿರುದ್ಯೋಗ ಏರಿಕೆ ಕಂಡಿದೆ ಎಂದು ವರದಿಗಳು ಹೇಳುತ್ತಿವೆ. ಕೇವಲ 60 ಸಾವಿರ ಉದ್ಯೋಗ ನೇಮಕಾತಿಯ ಕರೆಗೆ 48 ಲಕ್ಷಕ್ಕೂ  ಹೆಚ್ಚು ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು ಇತ್ತೀಚೆಗೆ ದೊಡ್ಡ ಸುದ್ದಿಯಾಗಿತ್ತು. ಪ್ರಪಂಚದ ಅತ್ಯಂತ ಹೆಚ್ಚು ಯುವಜನರನ್ನು ಹೊಂದಿರುವ ಭಾರತದ ಯುವಜನರ ಕೌಶಲ್ಯ, ಶ್ರಮ ಮತ್ತು ಪ್ರತಿಭೆಗಳು ವ್ಯರ್ಥವಾಗುತ್ತಿದೆ. ಇದರ ಜೊತೆಗೆ ಸಮಾಜದಲ್ಲಿ ದ್ವೇಷಕ್ಕೆ ಬದಲಾಗಿ ಪ್ರೀತಿ ಹಂಚೋಣ ಎಂದು ಕರೆ ನೀಡಿತು. ನಾವು ಬರೀ ಮಾತನಾಡುತ್ತಿಲ್ಲ. ಉಚಿತ ಗುಣಮಟ್ಟದ ಶಿಕ್ಷಣಕ್ಕಾಗಿ, ಸುಭದ್ರ ಉದ್ಯೋಗ, ಸುಸ್ಥಿರ ಪರಿಸರಕ್ಕಾಗಿ ಪ್ರೀತಿ ಮತ್ತು ನೆಮ್ಮದಿ ತುಂಬಿದ ನಾಡಿಗಾಗಿ ರಚನಾತ್ಮಕ ಕೆಲಸವನ್ನು ಮಾಡುತ್ತಿದ್ದೇವೆ. ಇದು ಒಂದು ದಿನದ ಹೋರಾಟವಲ್ಲ, ಯುವಜನರ ಭವಿಷ್ಯಕ್ಕಾಗಿನ ಬದ್ಧತೆ ಇದಾಗಿದೆ. ನೀವು ನಮ್ಮೊಡನೆ ಸೇರಿದಾಗ ನಮ್ಮ ದನಿ ದೊಡ್ಡದಾಗುತ್ತದೆ. ನಾವು ಒಟ್ಟಿಗೆ ಕೂಗಿದಾಗ ದೇಶದ ಉದ್ದಗಲಕ್ಕೂ ದನಿ ಪ್ರತಿಧ್ವನಿಯಾಗುತ್ತದೆ ಎಂದು ಜನತೆಗೆ ಜಾಥಾವು ಕರೆ ಕೊಟ್ಟಿತು ಎಂದು ಅವರು ಹೇಳಿದರು.

26ರ ಸಂವಿಧಾನ ಸಂರಕ್ಷಕರ ಸಮಾವೇಶದ ವೇಳಾಪಟ್ಟಿ ಬಿಡುಗಡೆ ಮಾಡಿದ ಅಧ್ಯಕ್ಷೀಯ ಮಂಡಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...