Homeಕರ್ನಾಟಕನಾಳೆ ಬೈಕ್ ಜಾಥಾಕ್ಕೆ ತೆರೆ, ಅದ್ದೂರಿ ಸ್ವಾಗತ: ಅವಿಸ್ಮರಣೀಯ ಕ್ಷಣಕ್ಕೆ ಸಾಕ್ಷಿಯಾಗೋಣ ಬನ್ನಿ; ತಾರಾ ರಾವ್

ನಾಳೆ ಬೈಕ್ ಜಾಥಾಕ್ಕೆ ತೆರೆ, ಅದ್ದೂರಿ ಸ್ವಾಗತ: ಅವಿಸ್ಮರಣೀಯ ಕ್ಷಣಕ್ಕೆ ಸಾಕ್ಷಿಯಾಗೋಣ ಬನ್ನಿ; ತಾರಾ ರಾವ್

- Advertisement -
- Advertisement -

ದಾವಣಗೆರೆ: ಏ.26ರಂದು ನಡೆಯುತ್ತಿರುವ ಸಂವಿಧಾನ ಸಂರಕ್ಷಕರ ಸಮಾವೇಶದ ಮಹತ್ವವನ್ನು ತಿಳಿಸುವುದಕ್ಕಾಗಿ ಏ.14ರಿಂದ ಪ್ರಾರಂಭವಾಗಿರುವ ದೇಶಪ್ರೇಮಿ ಯುವಾಂದೋಲನ ಬೈಕ್ ಜಾಥಾದ ಕೊನೆ ದಿನವಾದ ನಾಳೆ (ಏ.25) ದಾವಣಗೆರೆ ಪ್ರವೇಶಿಸಲಿದ್ದು, ಅಲ್ಲಿನ ಯುವಕ-ಯುವತಿಯರು ಅದ್ದೂರಿ ಸ್ವಾಗತ ಕೊರಲಿದ್ದಾರೆ ಎಂದು ಎದ್ದೇಳು ಕರ್ನಾಟಕದ  ಸೆಂಟ್ರಲ್ ವರ್ಕಿಂಗ್ ಕಮಿಟಿ ಸದಸ್ಯರಾದ ತಾರ ರಾವ್ ತಿಳಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಅವರು, ಏ.14ರಿಂದ ಈ ಜಾಥಾದಲ್ಲಿ ಭಾಗವಹಿಸಿದ ಯುವಕ-ಯುವತಿಯರ ಜೊತೆ ದಾವಣಗೆರೆಯ ಹಲವಾರು ಯುವಕ ಯುವತಿಯರು ಜೊತೆಗೂಡಿ ನಗರದಾದ್ಯಂತ ನಾಳೆ (ಏ.25) ಬೃಹತ್ ಬೈಕ್ ರ್ಯಾಲಿ ನಡೆಸಲಿದ್ದು 26ರಂದು ನಡೆಯುವ ಸಂವಿಧಾನ ಸಂರಕ್ಷಕರ ಸಮಾವೇಶದ ಕುರಿತು ಪ್ರಚಾರ ನಡೆಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಈ ಕಾರ್ಯಕ್ರಮಕ್ಕೆ ರಾಜ್ಯದ ವಿವಿಧ ಭಾಗದಿಂದ ಸುಮಾರು 10,000ಕ್ಕೂ ಹೆಚ್ಚು ಸಂವಿಧಾನ ಸಂರಕ್ಷಕ ಹೋರಾಟಗಾರರು ಭಾಗವಹಿಸಲಿದ್ದಾರೆ. ಈ ಸಮಾವೇಶದ ಕುರಿತು ಜನರಿಗೆ ಮಾಹಿತಿ ಮತ್ತು ಕಾರ್ಯಕ್ರಮಕ್ಕೆ ಆಹ್ವಾನ ನೀಡಲು ಇದೇ ಏ.14ರಿಂದ  ಬೈಕ್ ಯಾನವು  ಅಂಬೇಡ್ಕರ್ ಭೇಟಿ ನೀಡಿದ ಸ್ಥಳವಾದ ಗುಲ್ಬರ್ಗ ಜಿಲ್ಲೆಯ ವಾಡಿಯಿಂದ ಪ್ರಾರಂಭವಾಗಿದ್ದು ಅದೀಗ ಅದು ರಾಜ್ಯದ ಸುಮಾರು 20 ಜಿಲ್ಲೆಗಳ ಮೂಲಕ ಹಾದು, ಸರಿ ಸುಮಾರು 2000 ಕಿ.ಮೀ. ಕ್ರಮಿಸಿ ನಾಳೆ ದಾವಣಗೆರೆಗೆ ಆಗಮಿಸಲಿದೆ ಎಂದಿದ್ದಾರೆ.

ಜಾಥಾದಲ್ಲಿ ಹೇಮಂತ ಹಾಸನ, ಗೀತಾ ಗುಲ್ಬರ್ಗ, ಕೌಶಲ್ಯ ಮಂಡ್ಯ, ಸರೋವರ ಬೆಂಗಳೂರು, ಮರಿಸ್ವಾಮಿ ಕಟ್ಟಿಮನಿ ಬೆಂಗಳೂರು, ರವಿ ನವಲಹಳ್ಳಿ ರಾಯಚೂರು ಜಿಲ್ಲೆ, ಉಮೇಶ್ ಬಡಗಿ ಕೊಪ್ಪಳ, ಶರಣು ಈಳಿಗನೂರು (ಕೊಪ್ಪಳ), ಯಮುನಾ ಚಳ್ಳೂರು(ಕೊಪ್ಪಳ), ಯಮನೂರ ಈಳಿಗನೂರು(ಕೊಪ್ಪಳ), ದುರ್ಗೆಶ್ ಕೆ. ಬರಗೂರು(ಕೊಪ್ಪಳ), ರಾಜೇಂದ್ರ ರಾಜವಾಳ (ಗುಲ್ಬರ್ಗಾ), ಶಾಂತಾ ಗುಲ್ಬರ್ಗಾ, ಕೇಶವ್ ಕೋಲಾರ ಭಾಗವಹಿಸಿದ್ದು, ಇವರೆಲ್ಲರಿಗೂ ಎದ್ದೇಳು ಕರ್ನಾಟಕವು ಹೃದಯತುಂಬಿ ವಂದಿಸುತ್ತದೆ ಮತ್ತು ನಾಳಿನ ಅದ್ದೂರಿ ಸ್ವಾಗತ ಕಾರ್ಯಕ್ರಮದಲ್ಲಿ ನಾವು ಹಲವರು ಭಾಗಿಯಾಗಿ ಅವಿಸ್ಮರಣೀಯ ಕ್ಷಣಕ್ಕೆ ಸಾಕ್ಷಿಯಾಗುತ್ತೇವೆ ಎಂದು ಅವರು ತಿಳಿಸಿದರು.

ಜಾಥಾವು ದಾರಿಯುದ್ದಕ್ಕೂ ಕಾರ್ಯಕ್ರಮದ ಬಗ್ಗೆ ಮಾತ್ರ ಜನರಲ್ಲಿ ಜಾಗೃತಿ ಮೂಡಿಸಲಿಲ್ಲ, ಬದಲಾಗಿ ಇಂದಿನ ಯುವಕರು–ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಚರ್ಚಿಸಿತು ಮತ್ತು ಅದರ ಪರಿಹಾರಕ್ಕೆ ಹೋರಾಟವೊಂದೇ ದಾರಿ ಎಂದು ಜನರಿಗೆ ತಿಳಿಸಿತು. ಇಂದಿನ ಶಿಕ್ಷಣವು ಅನುಕೂಲಸ್ಥರಿಗೆ ಸಿಗುವ ಐಶಾರಿಮಿ ವಸ್ತುವಲ್ಲ, ಬದಲಿಗೆ ದೇಶದ ಎಲ್ಲರಿಗೂ ಸಿಗಬೇಕಾದ ಮೂಲಭೂತ ಹಕ್ಕು. ಆದರೆ ಈಗ ಶಿಕ್ಷಣದ ಕನಸು ಕಮರುತ್ತಿದೆ. ಸರಕಾರಿ ಶಾಲಾ ಕಾಲೇಜುಗಳು ಮುಚ್ಚುತ್ತಿವೆ. ಫೀಸು ಡೊನೇಷನ್ ಎಂಬ ಭೂತವು ಅಡ್ಡಾದಿಡ್ಡಿಯಾಗಿ ಕುಣಿಯುತ್ತಿದೆ. ಅದರ ಕಾಲ ಕೆಳಗೆ ಸಿಕ್ಕು ದಮನಿತರು ಬಡವರು ನರಳುತ್ತಿದ್ದಾರೆ ಎಂಬುದನ್ನು ಜಾಥಾವು ಜನರಿಗೆ ತಿಳಿಸಿತು ಎಂದು ತಾರಾ ರಾವ್ ಹೇಳಿದರು.

ಹಾಗೆಯೇ  ಶಿಕ್ಷಣದ ವ್ಯಾಪಾರದ ಚಕ್ರವ್ಯೂಹವನ್ನು ಬೇಧಿಸಿ, ವಿದ್ಯಾರ್ಥಿಗಳು ಉದ್ಯೋಗ ಸಿಗುತ್ತದೆಂಬ ಬಹುನಿರೀಕ್ಷೆಯಿಂದ ತಮ್ಮ ಪದವಿಯನ್ನು ಮುಗಿಸುತ್ತಿದ್ದಾರೆ. ಆದರೆ ಭಾರತದಲ್ಲಿ 45 ವರ್ಷದಲ್ಲೇ ಐತಿಹಾಸಿಕ ನಿರುದ್ಯೋಗ ಏರಿಕೆ ಕಂಡಿದೆ ಎಂದು ವರದಿಗಳು ಹೇಳುತ್ತಿವೆ. ಕೇವಲ 60 ಸಾವಿರ ಉದ್ಯೋಗ ನೇಮಕಾತಿಯ ಕರೆಗೆ 48 ಲಕ್ಷಕ್ಕೂ  ಹೆಚ್ಚು ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು ಇತ್ತೀಚೆಗೆ ದೊಡ್ಡ ಸುದ್ದಿಯಾಗಿತ್ತು. ಪ್ರಪಂಚದ ಅತ್ಯಂತ ಹೆಚ್ಚು ಯುವಜನರನ್ನು ಹೊಂದಿರುವ ಭಾರತದ ಯುವಜನರ ಕೌಶಲ್ಯ, ಶ್ರಮ ಮತ್ತು ಪ್ರತಿಭೆಗಳು ವ್ಯರ್ಥವಾಗುತ್ತಿದೆ. ಇದರ ಜೊತೆಗೆ ಸಮಾಜದಲ್ಲಿ ದ್ವೇಷಕ್ಕೆ ಬದಲಾಗಿ ಪ್ರೀತಿ ಹಂಚೋಣ ಎಂದು ಕರೆ ನೀಡಿತು. ನಾವು ಬರೀ ಮಾತನಾಡುತ್ತಿಲ್ಲ. ಉಚಿತ ಗುಣಮಟ್ಟದ ಶಿಕ್ಷಣಕ್ಕಾಗಿ, ಸುಭದ್ರ ಉದ್ಯೋಗ, ಸುಸ್ಥಿರ ಪರಿಸರಕ್ಕಾಗಿ ಪ್ರೀತಿ ಮತ್ತು ನೆಮ್ಮದಿ ತುಂಬಿದ ನಾಡಿಗಾಗಿ ರಚನಾತ್ಮಕ ಕೆಲಸವನ್ನು ಮಾಡುತ್ತಿದ್ದೇವೆ. ಇದು ಒಂದು ದಿನದ ಹೋರಾಟವಲ್ಲ, ಯುವಜನರ ಭವಿಷ್ಯಕ್ಕಾಗಿನ ಬದ್ಧತೆ ಇದಾಗಿದೆ. ನೀವು ನಮ್ಮೊಡನೆ ಸೇರಿದಾಗ ನಮ್ಮ ದನಿ ದೊಡ್ಡದಾಗುತ್ತದೆ. ನಾವು ಒಟ್ಟಿಗೆ ಕೂಗಿದಾಗ ದೇಶದ ಉದ್ದಗಲಕ್ಕೂ ದನಿ ಪ್ರತಿಧ್ವನಿಯಾಗುತ್ತದೆ ಎಂದು ಜನತೆಗೆ ಜಾಥಾವು ಕರೆ ಕೊಟ್ಟಿತು ಎಂದು ಅವರು ಹೇಳಿದರು.

26ರ ಸಂವಿಧಾನ ಸಂರಕ್ಷಕರ ಸಮಾವೇಶದ ವೇಳಾಪಟ್ಟಿ ಬಿಡುಗಡೆ ಮಾಡಿದ ಅಧ್ಯಕ್ಷೀಯ ಮಂಡಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...