Homeಕರ್ನಾಟಕನಾಳೆ ಬೈಕ್ ಜಾಥಾಕ್ಕೆ ತೆರೆ, ಅದ್ದೂರಿ ಸ್ವಾಗತ: ಅವಿಸ್ಮರಣೀಯ ಕ್ಷಣಕ್ಕೆ ಸಾಕ್ಷಿಯಾಗೋಣ ಬನ್ನಿ; ತಾರಾ ರಾವ್

ನಾಳೆ ಬೈಕ್ ಜಾಥಾಕ್ಕೆ ತೆರೆ, ಅದ್ದೂರಿ ಸ್ವಾಗತ: ಅವಿಸ್ಮರಣೀಯ ಕ್ಷಣಕ್ಕೆ ಸಾಕ್ಷಿಯಾಗೋಣ ಬನ್ನಿ; ತಾರಾ ರಾವ್

- Advertisement -
- Advertisement -

ದಾವಣಗೆರೆ: ಏ.26ರಂದು ನಡೆಯುತ್ತಿರುವ ಸಂವಿಧಾನ ಸಂರಕ್ಷಕರ ಸಮಾವೇಶದ ಮಹತ್ವವನ್ನು ತಿಳಿಸುವುದಕ್ಕಾಗಿ ಏ.14ರಿಂದ ಪ್ರಾರಂಭವಾಗಿರುವ ದೇಶಪ್ರೇಮಿ ಯುವಾಂದೋಲನ ಬೈಕ್ ಜಾಥಾದ ಕೊನೆ ದಿನವಾದ ನಾಳೆ (ಏ.25) ದಾವಣಗೆರೆ ಪ್ರವೇಶಿಸಲಿದ್ದು, ಅಲ್ಲಿನ ಯುವಕ-ಯುವತಿಯರು ಅದ್ದೂರಿ ಸ್ವಾಗತ ಕೊರಲಿದ್ದಾರೆ ಎಂದು ಎದ್ದೇಳು ಕರ್ನಾಟಕದ  ಸೆಂಟ್ರಲ್ ವರ್ಕಿಂಗ್ ಕಮಿಟಿ ಸದಸ್ಯರಾದ ತಾರ ರಾವ್ ತಿಳಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಅವರು, ಏ.14ರಿಂದ ಈ ಜಾಥಾದಲ್ಲಿ ಭಾಗವಹಿಸಿದ ಯುವಕ-ಯುವತಿಯರ ಜೊತೆ ದಾವಣಗೆರೆಯ ಹಲವಾರು ಯುವಕ ಯುವತಿಯರು ಜೊತೆಗೂಡಿ ನಗರದಾದ್ಯಂತ ನಾಳೆ (ಏ.25) ಬೃಹತ್ ಬೈಕ್ ರ್ಯಾಲಿ ನಡೆಸಲಿದ್ದು 26ರಂದು ನಡೆಯುವ ಸಂವಿಧಾನ ಸಂರಕ್ಷಕರ ಸಮಾವೇಶದ ಕುರಿತು ಪ್ರಚಾರ ನಡೆಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಈ ಕಾರ್ಯಕ್ರಮಕ್ಕೆ ರಾಜ್ಯದ ವಿವಿಧ ಭಾಗದಿಂದ ಸುಮಾರು 10,000ಕ್ಕೂ ಹೆಚ್ಚು ಸಂವಿಧಾನ ಸಂರಕ್ಷಕ ಹೋರಾಟಗಾರರು ಭಾಗವಹಿಸಲಿದ್ದಾರೆ. ಈ ಸಮಾವೇಶದ ಕುರಿತು ಜನರಿಗೆ ಮಾಹಿತಿ ಮತ್ತು ಕಾರ್ಯಕ್ರಮಕ್ಕೆ ಆಹ್ವಾನ ನೀಡಲು ಇದೇ ಏ.14ರಿಂದ  ಬೈಕ್ ಯಾನವು  ಅಂಬೇಡ್ಕರ್ ಭೇಟಿ ನೀಡಿದ ಸ್ಥಳವಾದ ಗುಲ್ಬರ್ಗ ಜಿಲ್ಲೆಯ ವಾಡಿಯಿಂದ ಪ್ರಾರಂಭವಾಗಿದ್ದು ಅದೀಗ ಅದು ರಾಜ್ಯದ ಸುಮಾರು 20 ಜಿಲ್ಲೆಗಳ ಮೂಲಕ ಹಾದು, ಸರಿ ಸುಮಾರು 2000 ಕಿ.ಮೀ. ಕ್ರಮಿಸಿ ನಾಳೆ ದಾವಣಗೆರೆಗೆ ಆಗಮಿಸಲಿದೆ ಎಂದಿದ್ದಾರೆ.

ಜಾಥಾದಲ್ಲಿ ಹೇಮಂತ ಹಾಸನ, ಗೀತಾ ಗುಲ್ಬರ್ಗ, ಕೌಶಲ್ಯ ಮಂಡ್ಯ, ಸರೋವರ ಬೆಂಗಳೂರು, ಮರಿಸ್ವಾಮಿ ಕಟ್ಟಿಮನಿ ಬೆಂಗಳೂರು, ರವಿ ನವಲಹಳ್ಳಿ ರಾಯಚೂರು ಜಿಲ್ಲೆ, ಉಮೇಶ್ ಬಡಗಿ ಕೊಪ್ಪಳ, ಶರಣು ಈಳಿಗನೂರು (ಕೊಪ್ಪಳ), ಯಮುನಾ ಚಳ್ಳೂರು(ಕೊಪ್ಪಳ), ಯಮನೂರ ಈಳಿಗನೂರು(ಕೊಪ್ಪಳ), ದುರ್ಗೆಶ್ ಕೆ. ಬರಗೂರು(ಕೊಪ್ಪಳ), ರಾಜೇಂದ್ರ ರಾಜವಾಳ (ಗುಲ್ಬರ್ಗಾ), ಶಾಂತಾ ಗುಲ್ಬರ್ಗಾ, ಕೇಶವ್ ಕೋಲಾರ ಭಾಗವಹಿಸಿದ್ದು, ಇವರೆಲ್ಲರಿಗೂ ಎದ್ದೇಳು ಕರ್ನಾಟಕವು ಹೃದಯತುಂಬಿ ವಂದಿಸುತ್ತದೆ ಮತ್ತು ನಾಳಿನ ಅದ್ದೂರಿ ಸ್ವಾಗತ ಕಾರ್ಯಕ್ರಮದಲ್ಲಿ ನಾವು ಹಲವರು ಭಾಗಿಯಾಗಿ ಅವಿಸ್ಮರಣೀಯ ಕ್ಷಣಕ್ಕೆ ಸಾಕ್ಷಿಯಾಗುತ್ತೇವೆ ಎಂದು ಅವರು ತಿಳಿಸಿದರು.

ಜಾಥಾವು ದಾರಿಯುದ್ದಕ್ಕೂ ಕಾರ್ಯಕ್ರಮದ ಬಗ್ಗೆ ಮಾತ್ರ ಜನರಲ್ಲಿ ಜಾಗೃತಿ ಮೂಡಿಸಲಿಲ್ಲ, ಬದಲಾಗಿ ಇಂದಿನ ಯುವಕರು–ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಚರ್ಚಿಸಿತು ಮತ್ತು ಅದರ ಪರಿಹಾರಕ್ಕೆ ಹೋರಾಟವೊಂದೇ ದಾರಿ ಎಂದು ಜನರಿಗೆ ತಿಳಿಸಿತು. ಇಂದಿನ ಶಿಕ್ಷಣವು ಅನುಕೂಲಸ್ಥರಿಗೆ ಸಿಗುವ ಐಶಾರಿಮಿ ವಸ್ತುವಲ್ಲ, ಬದಲಿಗೆ ದೇಶದ ಎಲ್ಲರಿಗೂ ಸಿಗಬೇಕಾದ ಮೂಲಭೂತ ಹಕ್ಕು. ಆದರೆ ಈಗ ಶಿಕ್ಷಣದ ಕನಸು ಕಮರುತ್ತಿದೆ. ಸರಕಾರಿ ಶಾಲಾ ಕಾಲೇಜುಗಳು ಮುಚ್ಚುತ್ತಿವೆ. ಫೀಸು ಡೊನೇಷನ್ ಎಂಬ ಭೂತವು ಅಡ್ಡಾದಿಡ್ಡಿಯಾಗಿ ಕುಣಿಯುತ್ತಿದೆ. ಅದರ ಕಾಲ ಕೆಳಗೆ ಸಿಕ್ಕು ದಮನಿತರು ಬಡವರು ನರಳುತ್ತಿದ್ದಾರೆ ಎಂಬುದನ್ನು ಜಾಥಾವು ಜನರಿಗೆ ತಿಳಿಸಿತು ಎಂದು ತಾರಾ ರಾವ್ ಹೇಳಿದರು.

ಹಾಗೆಯೇ  ಶಿಕ್ಷಣದ ವ್ಯಾಪಾರದ ಚಕ್ರವ್ಯೂಹವನ್ನು ಬೇಧಿಸಿ, ವಿದ್ಯಾರ್ಥಿಗಳು ಉದ್ಯೋಗ ಸಿಗುತ್ತದೆಂಬ ಬಹುನಿರೀಕ್ಷೆಯಿಂದ ತಮ್ಮ ಪದವಿಯನ್ನು ಮುಗಿಸುತ್ತಿದ್ದಾರೆ. ಆದರೆ ಭಾರತದಲ್ಲಿ 45 ವರ್ಷದಲ್ಲೇ ಐತಿಹಾಸಿಕ ನಿರುದ್ಯೋಗ ಏರಿಕೆ ಕಂಡಿದೆ ಎಂದು ವರದಿಗಳು ಹೇಳುತ್ತಿವೆ. ಕೇವಲ 60 ಸಾವಿರ ಉದ್ಯೋಗ ನೇಮಕಾತಿಯ ಕರೆಗೆ 48 ಲಕ್ಷಕ್ಕೂ  ಹೆಚ್ಚು ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು ಇತ್ತೀಚೆಗೆ ದೊಡ್ಡ ಸುದ್ದಿಯಾಗಿತ್ತು. ಪ್ರಪಂಚದ ಅತ್ಯಂತ ಹೆಚ್ಚು ಯುವಜನರನ್ನು ಹೊಂದಿರುವ ಭಾರತದ ಯುವಜನರ ಕೌಶಲ್ಯ, ಶ್ರಮ ಮತ್ತು ಪ್ರತಿಭೆಗಳು ವ್ಯರ್ಥವಾಗುತ್ತಿದೆ. ಇದರ ಜೊತೆಗೆ ಸಮಾಜದಲ್ಲಿ ದ್ವೇಷಕ್ಕೆ ಬದಲಾಗಿ ಪ್ರೀತಿ ಹಂಚೋಣ ಎಂದು ಕರೆ ನೀಡಿತು. ನಾವು ಬರೀ ಮಾತನಾಡುತ್ತಿಲ್ಲ. ಉಚಿತ ಗುಣಮಟ್ಟದ ಶಿಕ್ಷಣಕ್ಕಾಗಿ, ಸುಭದ್ರ ಉದ್ಯೋಗ, ಸುಸ್ಥಿರ ಪರಿಸರಕ್ಕಾಗಿ ಪ್ರೀತಿ ಮತ್ತು ನೆಮ್ಮದಿ ತುಂಬಿದ ನಾಡಿಗಾಗಿ ರಚನಾತ್ಮಕ ಕೆಲಸವನ್ನು ಮಾಡುತ್ತಿದ್ದೇವೆ. ಇದು ಒಂದು ದಿನದ ಹೋರಾಟವಲ್ಲ, ಯುವಜನರ ಭವಿಷ್ಯಕ್ಕಾಗಿನ ಬದ್ಧತೆ ಇದಾಗಿದೆ. ನೀವು ನಮ್ಮೊಡನೆ ಸೇರಿದಾಗ ನಮ್ಮ ದನಿ ದೊಡ್ಡದಾಗುತ್ತದೆ. ನಾವು ಒಟ್ಟಿಗೆ ಕೂಗಿದಾಗ ದೇಶದ ಉದ್ದಗಲಕ್ಕೂ ದನಿ ಪ್ರತಿಧ್ವನಿಯಾಗುತ್ತದೆ ಎಂದು ಜನತೆಗೆ ಜಾಥಾವು ಕರೆ ಕೊಟ್ಟಿತು ಎಂದು ಅವರು ಹೇಳಿದರು.

26ರ ಸಂವಿಧಾನ ಸಂರಕ್ಷಕರ ಸಮಾವೇಶದ ವೇಳಾಪಟ್ಟಿ ಬಿಡುಗಡೆ ಮಾಡಿದ ಅಧ್ಯಕ್ಷೀಯ ಮಂಡಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...