Homeಕರ್ನಾಟಕನಾಳೆ ಬೈಕ್ ಜಾಥಾಕ್ಕೆ ತೆರೆ, ಅದ್ದೂರಿ ಸ್ವಾಗತ: ಅವಿಸ್ಮರಣೀಯ ಕ್ಷಣಕ್ಕೆ ಸಾಕ್ಷಿಯಾಗೋಣ ಬನ್ನಿ; ತಾರಾ ರಾವ್

ನಾಳೆ ಬೈಕ್ ಜಾಥಾಕ್ಕೆ ತೆರೆ, ಅದ್ದೂರಿ ಸ್ವಾಗತ: ಅವಿಸ್ಮರಣೀಯ ಕ್ಷಣಕ್ಕೆ ಸಾಕ್ಷಿಯಾಗೋಣ ಬನ್ನಿ; ತಾರಾ ರಾವ್

- Advertisement -
- Advertisement -

ದಾವಣಗೆರೆ: ಏ.26ರಂದು ನಡೆಯುತ್ತಿರುವ ಸಂವಿಧಾನ ಸಂರಕ್ಷಕರ ಸಮಾವೇಶದ ಮಹತ್ವವನ್ನು ತಿಳಿಸುವುದಕ್ಕಾಗಿ ಏ.14ರಿಂದ ಪ್ರಾರಂಭವಾಗಿರುವ ದೇಶಪ್ರೇಮಿ ಯುವಾಂದೋಲನ ಬೈಕ್ ಜಾಥಾದ ಕೊನೆ ದಿನವಾದ ನಾಳೆ (ಏ.25) ದಾವಣಗೆರೆ ಪ್ರವೇಶಿಸಲಿದ್ದು, ಅಲ್ಲಿನ ಯುವಕ-ಯುವತಿಯರು ಅದ್ದೂರಿ ಸ್ವಾಗತ ಕೊರಲಿದ್ದಾರೆ ಎಂದು ಎದ್ದೇಳು ಕರ್ನಾಟಕದ  ಸೆಂಟ್ರಲ್ ವರ್ಕಿಂಗ್ ಕಮಿಟಿ ಸದಸ್ಯರಾದ ತಾರ ರಾವ್ ತಿಳಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಅವರು, ಏ.14ರಿಂದ ಈ ಜಾಥಾದಲ್ಲಿ ಭಾಗವಹಿಸಿದ ಯುವಕ-ಯುವತಿಯರ ಜೊತೆ ದಾವಣಗೆರೆಯ ಹಲವಾರು ಯುವಕ ಯುವತಿಯರು ಜೊತೆಗೂಡಿ ನಗರದಾದ್ಯಂತ ನಾಳೆ (ಏ.25) ಬೃಹತ್ ಬೈಕ್ ರ್ಯಾಲಿ ನಡೆಸಲಿದ್ದು 26ರಂದು ನಡೆಯುವ ಸಂವಿಧಾನ ಸಂರಕ್ಷಕರ ಸಮಾವೇಶದ ಕುರಿತು ಪ್ರಚಾರ ನಡೆಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಈ ಕಾರ್ಯಕ್ರಮಕ್ಕೆ ರಾಜ್ಯದ ವಿವಿಧ ಭಾಗದಿಂದ ಸುಮಾರು 10,000ಕ್ಕೂ ಹೆಚ್ಚು ಸಂವಿಧಾನ ಸಂರಕ್ಷಕ ಹೋರಾಟಗಾರರು ಭಾಗವಹಿಸಲಿದ್ದಾರೆ. ಈ ಸಮಾವೇಶದ ಕುರಿತು ಜನರಿಗೆ ಮಾಹಿತಿ ಮತ್ತು ಕಾರ್ಯಕ್ರಮಕ್ಕೆ ಆಹ್ವಾನ ನೀಡಲು ಇದೇ ಏ.14ರಿಂದ  ಬೈಕ್ ಯಾನವು  ಅಂಬೇಡ್ಕರ್ ಭೇಟಿ ನೀಡಿದ ಸ್ಥಳವಾದ ಗುಲ್ಬರ್ಗ ಜಿಲ್ಲೆಯ ವಾಡಿಯಿಂದ ಪ್ರಾರಂಭವಾಗಿದ್ದು ಅದೀಗ ಅದು ರಾಜ್ಯದ ಸುಮಾರು 20 ಜಿಲ್ಲೆಗಳ ಮೂಲಕ ಹಾದು, ಸರಿ ಸುಮಾರು 2000 ಕಿ.ಮೀ. ಕ್ರಮಿಸಿ ನಾಳೆ ದಾವಣಗೆರೆಗೆ ಆಗಮಿಸಲಿದೆ ಎಂದಿದ್ದಾರೆ.

ಜಾಥಾದಲ್ಲಿ ಹೇಮಂತ ಹಾಸನ, ಗೀತಾ ಗುಲ್ಬರ್ಗ, ಕೌಶಲ್ಯ ಮಂಡ್ಯ, ಸರೋವರ ಬೆಂಗಳೂರು, ಮರಿಸ್ವಾಮಿ ಕಟ್ಟಿಮನಿ ಬೆಂಗಳೂರು, ರವಿ ನವಲಹಳ್ಳಿ ರಾಯಚೂರು ಜಿಲ್ಲೆ, ಉಮೇಶ್ ಬಡಗಿ ಕೊಪ್ಪಳ, ಶರಣು ಈಳಿಗನೂರು (ಕೊಪ್ಪಳ), ಯಮುನಾ ಚಳ್ಳೂರು(ಕೊಪ್ಪಳ), ಯಮನೂರ ಈಳಿಗನೂರು(ಕೊಪ್ಪಳ), ದುರ್ಗೆಶ್ ಕೆ. ಬರಗೂರು(ಕೊಪ್ಪಳ), ರಾಜೇಂದ್ರ ರಾಜವಾಳ (ಗುಲ್ಬರ್ಗಾ), ಶಾಂತಾ ಗುಲ್ಬರ್ಗಾ, ಕೇಶವ್ ಕೋಲಾರ ಭಾಗವಹಿಸಿದ್ದು, ಇವರೆಲ್ಲರಿಗೂ ಎದ್ದೇಳು ಕರ್ನಾಟಕವು ಹೃದಯತುಂಬಿ ವಂದಿಸುತ್ತದೆ ಮತ್ತು ನಾಳಿನ ಅದ್ದೂರಿ ಸ್ವಾಗತ ಕಾರ್ಯಕ್ರಮದಲ್ಲಿ ನಾವು ಹಲವರು ಭಾಗಿಯಾಗಿ ಅವಿಸ್ಮರಣೀಯ ಕ್ಷಣಕ್ಕೆ ಸಾಕ್ಷಿಯಾಗುತ್ತೇವೆ ಎಂದು ಅವರು ತಿಳಿಸಿದರು.

ಜಾಥಾವು ದಾರಿಯುದ್ದಕ್ಕೂ ಕಾರ್ಯಕ್ರಮದ ಬಗ್ಗೆ ಮಾತ್ರ ಜನರಲ್ಲಿ ಜಾಗೃತಿ ಮೂಡಿಸಲಿಲ್ಲ, ಬದಲಾಗಿ ಇಂದಿನ ಯುವಕರು–ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಚರ್ಚಿಸಿತು ಮತ್ತು ಅದರ ಪರಿಹಾರಕ್ಕೆ ಹೋರಾಟವೊಂದೇ ದಾರಿ ಎಂದು ಜನರಿಗೆ ತಿಳಿಸಿತು. ಇಂದಿನ ಶಿಕ್ಷಣವು ಅನುಕೂಲಸ್ಥರಿಗೆ ಸಿಗುವ ಐಶಾರಿಮಿ ವಸ್ತುವಲ್ಲ, ಬದಲಿಗೆ ದೇಶದ ಎಲ್ಲರಿಗೂ ಸಿಗಬೇಕಾದ ಮೂಲಭೂತ ಹಕ್ಕು. ಆದರೆ ಈಗ ಶಿಕ್ಷಣದ ಕನಸು ಕಮರುತ್ತಿದೆ. ಸರಕಾರಿ ಶಾಲಾ ಕಾಲೇಜುಗಳು ಮುಚ್ಚುತ್ತಿವೆ. ಫೀಸು ಡೊನೇಷನ್ ಎಂಬ ಭೂತವು ಅಡ್ಡಾದಿಡ್ಡಿಯಾಗಿ ಕುಣಿಯುತ್ತಿದೆ. ಅದರ ಕಾಲ ಕೆಳಗೆ ಸಿಕ್ಕು ದಮನಿತರು ಬಡವರು ನರಳುತ್ತಿದ್ದಾರೆ ಎಂಬುದನ್ನು ಜಾಥಾವು ಜನರಿಗೆ ತಿಳಿಸಿತು ಎಂದು ತಾರಾ ರಾವ್ ಹೇಳಿದರು.

ಹಾಗೆಯೇ  ಶಿಕ್ಷಣದ ವ್ಯಾಪಾರದ ಚಕ್ರವ್ಯೂಹವನ್ನು ಬೇಧಿಸಿ, ವಿದ್ಯಾರ್ಥಿಗಳು ಉದ್ಯೋಗ ಸಿಗುತ್ತದೆಂಬ ಬಹುನಿರೀಕ್ಷೆಯಿಂದ ತಮ್ಮ ಪದವಿಯನ್ನು ಮುಗಿಸುತ್ತಿದ್ದಾರೆ. ಆದರೆ ಭಾರತದಲ್ಲಿ 45 ವರ್ಷದಲ್ಲೇ ಐತಿಹಾಸಿಕ ನಿರುದ್ಯೋಗ ಏರಿಕೆ ಕಂಡಿದೆ ಎಂದು ವರದಿಗಳು ಹೇಳುತ್ತಿವೆ. ಕೇವಲ 60 ಸಾವಿರ ಉದ್ಯೋಗ ನೇಮಕಾತಿಯ ಕರೆಗೆ 48 ಲಕ್ಷಕ್ಕೂ  ಹೆಚ್ಚು ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು ಇತ್ತೀಚೆಗೆ ದೊಡ್ಡ ಸುದ್ದಿಯಾಗಿತ್ತು. ಪ್ರಪಂಚದ ಅತ್ಯಂತ ಹೆಚ್ಚು ಯುವಜನರನ್ನು ಹೊಂದಿರುವ ಭಾರತದ ಯುವಜನರ ಕೌಶಲ್ಯ, ಶ್ರಮ ಮತ್ತು ಪ್ರತಿಭೆಗಳು ವ್ಯರ್ಥವಾಗುತ್ತಿದೆ. ಇದರ ಜೊತೆಗೆ ಸಮಾಜದಲ್ಲಿ ದ್ವೇಷಕ್ಕೆ ಬದಲಾಗಿ ಪ್ರೀತಿ ಹಂಚೋಣ ಎಂದು ಕರೆ ನೀಡಿತು. ನಾವು ಬರೀ ಮಾತನಾಡುತ್ತಿಲ್ಲ. ಉಚಿತ ಗುಣಮಟ್ಟದ ಶಿಕ್ಷಣಕ್ಕಾಗಿ, ಸುಭದ್ರ ಉದ್ಯೋಗ, ಸುಸ್ಥಿರ ಪರಿಸರಕ್ಕಾಗಿ ಪ್ರೀತಿ ಮತ್ತು ನೆಮ್ಮದಿ ತುಂಬಿದ ನಾಡಿಗಾಗಿ ರಚನಾತ್ಮಕ ಕೆಲಸವನ್ನು ಮಾಡುತ್ತಿದ್ದೇವೆ. ಇದು ಒಂದು ದಿನದ ಹೋರಾಟವಲ್ಲ, ಯುವಜನರ ಭವಿಷ್ಯಕ್ಕಾಗಿನ ಬದ್ಧತೆ ಇದಾಗಿದೆ. ನೀವು ನಮ್ಮೊಡನೆ ಸೇರಿದಾಗ ನಮ್ಮ ದನಿ ದೊಡ್ಡದಾಗುತ್ತದೆ. ನಾವು ಒಟ್ಟಿಗೆ ಕೂಗಿದಾಗ ದೇಶದ ಉದ್ದಗಲಕ್ಕೂ ದನಿ ಪ್ರತಿಧ್ವನಿಯಾಗುತ್ತದೆ ಎಂದು ಜನತೆಗೆ ಜಾಥಾವು ಕರೆ ಕೊಟ್ಟಿತು ಎಂದು ಅವರು ಹೇಳಿದರು.

26ರ ಸಂವಿಧಾನ ಸಂರಕ್ಷಕರ ಸಮಾವೇಶದ ವೇಳಾಪಟ್ಟಿ ಬಿಡುಗಡೆ ಮಾಡಿದ ಅಧ್ಯಕ್ಷೀಯ ಮಂಡಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...