Homeಕರ್ನಾಟಕನಾಳೆ ಬೈಕ್ ಜಾಥಾಕ್ಕೆ ತೆರೆ, ಅದ್ದೂರಿ ಸ್ವಾಗತ: ಅವಿಸ್ಮರಣೀಯ ಕ್ಷಣಕ್ಕೆ ಸಾಕ್ಷಿಯಾಗೋಣ ಬನ್ನಿ; ತಾರಾ ರಾವ್

ನಾಳೆ ಬೈಕ್ ಜಾಥಾಕ್ಕೆ ತೆರೆ, ಅದ್ದೂರಿ ಸ್ವಾಗತ: ಅವಿಸ್ಮರಣೀಯ ಕ್ಷಣಕ್ಕೆ ಸಾಕ್ಷಿಯಾಗೋಣ ಬನ್ನಿ; ತಾರಾ ರಾವ್

- Advertisement -
- Advertisement -

ದಾವಣಗೆರೆ: ಏ.26ರಂದು ನಡೆಯುತ್ತಿರುವ ಸಂವಿಧಾನ ಸಂರಕ್ಷಕರ ಸಮಾವೇಶದ ಮಹತ್ವವನ್ನು ತಿಳಿಸುವುದಕ್ಕಾಗಿ ಏ.14ರಿಂದ ಪ್ರಾರಂಭವಾಗಿರುವ ದೇಶಪ್ರೇಮಿ ಯುವಾಂದೋಲನ ಬೈಕ್ ಜಾಥಾದ ಕೊನೆ ದಿನವಾದ ನಾಳೆ (ಏ.25) ದಾವಣಗೆರೆ ಪ್ರವೇಶಿಸಲಿದ್ದು, ಅಲ್ಲಿನ ಯುವಕ-ಯುವತಿಯರು ಅದ್ದೂರಿ ಸ್ವಾಗತ ಕೊರಲಿದ್ದಾರೆ ಎಂದು ಎದ್ದೇಳು ಕರ್ನಾಟಕದ  ಸೆಂಟ್ರಲ್ ವರ್ಕಿಂಗ್ ಕಮಿಟಿ ಸದಸ್ಯರಾದ ತಾರ ರಾವ್ ತಿಳಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಅವರು, ಏ.14ರಿಂದ ಈ ಜಾಥಾದಲ್ಲಿ ಭಾಗವಹಿಸಿದ ಯುವಕ-ಯುವತಿಯರ ಜೊತೆ ದಾವಣಗೆರೆಯ ಹಲವಾರು ಯುವಕ ಯುವತಿಯರು ಜೊತೆಗೂಡಿ ನಗರದಾದ್ಯಂತ ನಾಳೆ (ಏ.25) ಬೃಹತ್ ಬೈಕ್ ರ್ಯಾಲಿ ನಡೆಸಲಿದ್ದು 26ರಂದು ನಡೆಯುವ ಸಂವಿಧಾನ ಸಂರಕ್ಷಕರ ಸಮಾವೇಶದ ಕುರಿತು ಪ್ರಚಾರ ನಡೆಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಈ ಕಾರ್ಯಕ್ರಮಕ್ಕೆ ರಾಜ್ಯದ ವಿವಿಧ ಭಾಗದಿಂದ ಸುಮಾರು 10,000ಕ್ಕೂ ಹೆಚ್ಚು ಸಂವಿಧಾನ ಸಂರಕ್ಷಕ ಹೋರಾಟಗಾರರು ಭಾಗವಹಿಸಲಿದ್ದಾರೆ. ಈ ಸಮಾವೇಶದ ಕುರಿತು ಜನರಿಗೆ ಮಾಹಿತಿ ಮತ್ತು ಕಾರ್ಯಕ್ರಮಕ್ಕೆ ಆಹ್ವಾನ ನೀಡಲು ಇದೇ ಏ.14ರಿಂದ  ಬೈಕ್ ಯಾನವು  ಅಂಬೇಡ್ಕರ್ ಭೇಟಿ ನೀಡಿದ ಸ್ಥಳವಾದ ಗುಲ್ಬರ್ಗ ಜಿಲ್ಲೆಯ ವಾಡಿಯಿಂದ ಪ್ರಾರಂಭವಾಗಿದ್ದು ಅದೀಗ ಅದು ರಾಜ್ಯದ ಸುಮಾರು 20 ಜಿಲ್ಲೆಗಳ ಮೂಲಕ ಹಾದು, ಸರಿ ಸುಮಾರು 2000 ಕಿ.ಮೀ. ಕ್ರಮಿಸಿ ನಾಳೆ ದಾವಣಗೆರೆಗೆ ಆಗಮಿಸಲಿದೆ ಎಂದಿದ್ದಾರೆ.

ಜಾಥಾದಲ್ಲಿ ಹೇಮಂತ ಹಾಸನ, ಗೀತಾ ಗುಲ್ಬರ್ಗ, ಕೌಶಲ್ಯ ಮಂಡ್ಯ, ಸರೋವರ ಬೆಂಗಳೂರು, ಮರಿಸ್ವಾಮಿ ಕಟ್ಟಿಮನಿ ಬೆಂಗಳೂರು, ರವಿ ನವಲಹಳ್ಳಿ ರಾಯಚೂರು ಜಿಲ್ಲೆ, ಉಮೇಶ್ ಬಡಗಿ ಕೊಪ್ಪಳ, ಶರಣು ಈಳಿಗನೂರು (ಕೊಪ್ಪಳ), ಯಮುನಾ ಚಳ್ಳೂರು(ಕೊಪ್ಪಳ), ಯಮನೂರ ಈಳಿಗನೂರು(ಕೊಪ್ಪಳ), ದುರ್ಗೆಶ್ ಕೆ. ಬರಗೂರು(ಕೊಪ್ಪಳ), ರಾಜೇಂದ್ರ ರಾಜವಾಳ (ಗುಲ್ಬರ್ಗಾ), ಶಾಂತಾ ಗುಲ್ಬರ್ಗಾ, ಕೇಶವ್ ಕೋಲಾರ ಭಾಗವಹಿಸಿದ್ದು, ಇವರೆಲ್ಲರಿಗೂ ಎದ್ದೇಳು ಕರ್ನಾಟಕವು ಹೃದಯತುಂಬಿ ವಂದಿಸುತ್ತದೆ ಮತ್ತು ನಾಳಿನ ಅದ್ದೂರಿ ಸ್ವಾಗತ ಕಾರ್ಯಕ್ರಮದಲ್ಲಿ ನಾವು ಹಲವರು ಭಾಗಿಯಾಗಿ ಅವಿಸ್ಮರಣೀಯ ಕ್ಷಣಕ್ಕೆ ಸಾಕ್ಷಿಯಾಗುತ್ತೇವೆ ಎಂದು ಅವರು ತಿಳಿಸಿದರು.

ಜಾಥಾವು ದಾರಿಯುದ್ದಕ್ಕೂ ಕಾರ್ಯಕ್ರಮದ ಬಗ್ಗೆ ಮಾತ್ರ ಜನರಲ್ಲಿ ಜಾಗೃತಿ ಮೂಡಿಸಲಿಲ್ಲ, ಬದಲಾಗಿ ಇಂದಿನ ಯುವಕರು–ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಚರ್ಚಿಸಿತು ಮತ್ತು ಅದರ ಪರಿಹಾರಕ್ಕೆ ಹೋರಾಟವೊಂದೇ ದಾರಿ ಎಂದು ಜನರಿಗೆ ತಿಳಿಸಿತು. ಇಂದಿನ ಶಿಕ್ಷಣವು ಅನುಕೂಲಸ್ಥರಿಗೆ ಸಿಗುವ ಐಶಾರಿಮಿ ವಸ್ತುವಲ್ಲ, ಬದಲಿಗೆ ದೇಶದ ಎಲ್ಲರಿಗೂ ಸಿಗಬೇಕಾದ ಮೂಲಭೂತ ಹಕ್ಕು. ಆದರೆ ಈಗ ಶಿಕ್ಷಣದ ಕನಸು ಕಮರುತ್ತಿದೆ. ಸರಕಾರಿ ಶಾಲಾ ಕಾಲೇಜುಗಳು ಮುಚ್ಚುತ್ತಿವೆ. ಫೀಸು ಡೊನೇಷನ್ ಎಂಬ ಭೂತವು ಅಡ್ಡಾದಿಡ್ಡಿಯಾಗಿ ಕುಣಿಯುತ್ತಿದೆ. ಅದರ ಕಾಲ ಕೆಳಗೆ ಸಿಕ್ಕು ದಮನಿತರು ಬಡವರು ನರಳುತ್ತಿದ್ದಾರೆ ಎಂಬುದನ್ನು ಜಾಥಾವು ಜನರಿಗೆ ತಿಳಿಸಿತು ಎಂದು ತಾರಾ ರಾವ್ ಹೇಳಿದರು.

ಹಾಗೆಯೇ  ಶಿಕ್ಷಣದ ವ್ಯಾಪಾರದ ಚಕ್ರವ್ಯೂಹವನ್ನು ಬೇಧಿಸಿ, ವಿದ್ಯಾರ್ಥಿಗಳು ಉದ್ಯೋಗ ಸಿಗುತ್ತದೆಂಬ ಬಹುನಿರೀಕ್ಷೆಯಿಂದ ತಮ್ಮ ಪದವಿಯನ್ನು ಮುಗಿಸುತ್ತಿದ್ದಾರೆ. ಆದರೆ ಭಾರತದಲ್ಲಿ 45 ವರ್ಷದಲ್ಲೇ ಐತಿಹಾಸಿಕ ನಿರುದ್ಯೋಗ ಏರಿಕೆ ಕಂಡಿದೆ ಎಂದು ವರದಿಗಳು ಹೇಳುತ್ತಿವೆ. ಕೇವಲ 60 ಸಾವಿರ ಉದ್ಯೋಗ ನೇಮಕಾತಿಯ ಕರೆಗೆ 48 ಲಕ್ಷಕ್ಕೂ  ಹೆಚ್ಚು ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು ಇತ್ತೀಚೆಗೆ ದೊಡ್ಡ ಸುದ್ದಿಯಾಗಿತ್ತು. ಪ್ರಪಂಚದ ಅತ್ಯಂತ ಹೆಚ್ಚು ಯುವಜನರನ್ನು ಹೊಂದಿರುವ ಭಾರತದ ಯುವಜನರ ಕೌಶಲ್ಯ, ಶ್ರಮ ಮತ್ತು ಪ್ರತಿಭೆಗಳು ವ್ಯರ್ಥವಾಗುತ್ತಿದೆ. ಇದರ ಜೊತೆಗೆ ಸಮಾಜದಲ್ಲಿ ದ್ವೇಷಕ್ಕೆ ಬದಲಾಗಿ ಪ್ರೀತಿ ಹಂಚೋಣ ಎಂದು ಕರೆ ನೀಡಿತು. ನಾವು ಬರೀ ಮಾತನಾಡುತ್ತಿಲ್ಲ. ಉಚಿತ ಗುಣಮಟ್ಟದ ಶಿಕ್ಷಣಕ್ಕಾಗಿ, ಸುಭದ್ರ ಉದ್ಯೋಗ, ಸುಸ್ಥಿರ ಪರಿಸರಕ್ಕಾಗಿ ಪ್ರೀತಿ ಮತ್ತು ನೆಮ್ಮದಿ ತುಂಬಿದ ನಾಡಿಗಾಗಿ ರಚನಾತ್ಮಕ ಕೆಲಸವನ್ನು ಮಾಡುತ್ತಿದ್ದೇವೆ. ಇದು ಒಂದು ದಿನದ ಹೋರಾಟವಲ್ಲ, ಯುವಜನರ ಭವಿಷ್ಯಕ್ಕಾಗಿನ ಬದ್ಧತೆ ಇದಾಗಿದೆ. ನೀವು ನಮ್ಮೊಡನೆ ಸೇರಿದಾಗ ನಮ್ಮ ದನಿ ದೊಡ್ಡದಾಗುತ್ತದೆ. ನಾವು ಒಟ್ಟಿಗೆ ಕೂಗಿದಾಗ ದೇಶದ ಉದ್ದಗಲಕ್ಕೂ ದನಿ ಪ್ರತಿಧ್ವನಿಯಾಗುತ್ತದೆ ಎಂದು ಜನತೆಗೆ ಜಾಥಾವು ಕರೆ ಕೊಟ್ಟಿತು ಎಂದು ಅವರು ಹೇಳಿದರು.

26ರ ಸಂವಿಧಾನ ಸಂರಕ್ಷಕರ ಸಮಾವೇಶದ ವೇಳಾಪಟ್ಟಿ ಬಿಡುಗಡೆ ಮಾಡಿದ ಅಧ್ಯಕ್ಷೀಯ ಮಂಡಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...