Homeಕರ್ನಾಟಕನಾಳೆ ಬೈಕ್ ಜಾಥಾಕ್ಕೆ ತೆರೆ, ಅದ್ದೂರಿ ಸ್ವಾಗತ: ಅವಿಸ್ಮರಣೀಯ ಕ್ಷಣಕ್ಕೆ ಸಾಕ್ಷಿಯಾಗೋಣ ಬನ್ನಿ; ತಾರಾ ರಾವ್

ನಾಳೆ ಬೈಕ್ ಜಾಥಾಕ್ಕೆ ತೆರೆ, ಅದ್ದೂರಿ ಸ್ವಾಗತ: ಅವಿಸ್ಮರಣೀಯ ಕ್ಷಣಕ್ಕೆ ಸಾಕ್ಷಿಯಾಗೋಣ ಬನ್ನಿ; ತಾರಾ ರಾವ್

- Advertisement -
- Advertisement -

ದಾವಣಗೆರೆ: ಏ.26ರಂದು ನಡೆಯುತ್ತಿರುವ ಸಂವಿಧಾನ ಸಂರಕ್ಷಕರ ಸಮಾವೇಶದ ಮಹತ್ವವನ್ನು ತಿಳಿಸುವುದಕ್ಕಾಗಿ ಏ.14ರಿಂದ ಪ್ರಾರಂಭವಾಗಿರುವ ದೇಶಪ್ರೇಮಿ ಯುವಾಂದೋಲನ ಬೈಕ್ ಜಾಥಾದ ಕೊನೆ ದಿನವಾದ ನಾಳೆ (ಏ.25) ದಾವಣಗೆರೆ ಪ್ರವೇಶಿಸಲಿದ್ದು, ಅಲ್ಲಿನ ಯುವಕ-ಯುವತಿಯರು ಅದ್ದೂರಿ ಸ್ವಾಗತ ಕೊರಲಿದ್ದಾರೆ ಎಂದು ಎದ್ದೇಳು ಕರ್ನಾಟಕದ  ಸೆಂಟ್ರಲ್ ವರ್ಕಿಂಗ್ ಕಮಿಟಿ ಸದಸ್ಯರಾದ ತಾರ ರಾವ್ ತಿಳಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಅವರು, ಏ.14ರಿಂದ ಈ ಜಾಥಾದಲ್ಲಿ ಭಾಗವಹಿಸಿದ ಯುವಕ-ಯುವತಿಯರ ಜೊತೆ ದಾವಣಗೆರೆಯ ಹಲವಾರು ಯುವಕ ಯುವತಿಯರು ಜೊತೆಗೂಡಿ ನಗರದಾದ್ಯಂತ ನಾಳೆ (ಏ.25) ಬೃಹತ್ ಬೈಕ್ ರ್ಯಾಲಿ ನಡೆಸಲಿದ್ದು 26ರಂದು ನಡೆಯುವ ಸಂವಿಧಾನ ಸಂರಕ್ಷಕರ ಸಮಾವೇಶದ ಕುರಿತು ಪ್ರಚಾರ ನಡೆಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಈ ಕಾರ್ಯಕ್ರಮಕ್ಕೆ ರಾಜ್ಯದ ವಿವಿಧ ಭಾಗದಿಂದ ಸುಮಾರು 10,000ಕ್ಕೂ ಹೆಚ್ಚು ಸಂವಿಧಾನ ಸಂರಕ್ಷಕ ಹೋರಾಟಗಾರರು ಭಾಗವಹಿಸಲಿದ್ದಾರೆ. ಈ ಸಮಾವೇಶದ ಕುರಿತು ಜನರಿಗೆ ಮಾಹಿತಿ ಮತ್ತು ಕಾರ್ಯಕ್ರಮಕ್ಕೆ ಆಹ್ವಾನ ನೀಡಲು ಇದೇ ಏ.14ರಿಂದ  ಬೈಕ್ ಯಾನವು  ಅಂಬೇಡ್ಕರ್ ಭೇಟಿ ನೀಡಿದ ಸ್ಥಳವಾದ ಗುಲ್ಬರ್ಗ ಜಿಲ್ಲೆಯ ವಾಡಿಯಿಂದ ಪ್ರಾರಂಭವಾಗಿದ್ದು ಅದೀಗ ಅದು ರಾಜ್ಯದ ಸುಮಾರು 20 ಜಿಲ್ಲೆಗಳ ಮೂಲಕ ಹಾದು, ಸರಿ ಸುಮಾರು 2000 ಕಿ.ಮೀ. ಕ್ರಮಿಸಿ ನಾಳೆ ದಾವಣಗೆರೆಗೆ ಆಗಮಿಸಲಿದೆ ಎಂದಿದ್ದಾರೆ.

ಜಾಥಾದಲ್ಲಿ ಹೇಮಂತ ಹಾಸನ, ಗೀತಾ ಗುಲ್ಬರ್ಗ, ಕೌಶಲ್ಯ ಮಂಡ್ಯ, ಸರೋವರ ಬೆಂಗಳೂರು, ಮರಿಸ್ವಾಮಿ ಕಟ್ಟಿಮನಿ ಬೆಂಗಳೂರು, ರವಿ ನವಲಹಳ್ಳಿ ರಾಯಚೂರು ಜಿಲ್ಲೆ, ಉಮೇಶ್ ಬಡಗಿ ಕೊಪ್ಪಳ, ಶರಣು ಈಳಿಗನೂರು (ಕೊಪ್ಪಳ), ಯಮುನಾ ಚಳ್ಳೂರು(ಕೊಪ್ಪಳ), ಯಮನೂರ ಈಳಿಗನೂರು(ಕೊಪ್ಪಳ), ದುರ್ಗೆಶ್ ಕೆ. ಬರಗೂರು(ಕೊಪ್ಪಳ), ರಾಜೇಂದ್ರ ರಾಜವಾಳ (ಗುಲ್ಬರ್ಗಾ), ಶಾಂತಾ ಗುಲ್ಬರ್ಗಾ, ಕೇಶವ್ ಕೋಲಾರ ಭಾಗವಹಿಸಿದ್ದು, ಇವರೆಲ್ಲರಿಗೂ ಎದ್ದೇಳು ಕರ್ನಾಟಕವು ಹೃದಯತುಂಬಿ ವಂದಿಸುತ್ತದೆ ಮತ್ತು ನಾಳಿನ ಅದ್ದೂರಿ ಸ್ವಾಗತ ಕಾರ್ಯಕ್ರಮದಲ್ಲಿ ನಾವು ಹಲವರು ಭಾಗಿಯಾಗಿ ಅವಿಸ್ಮರಣೀಯ ಕ್ಷಣಕ್ಕೆ ಸಾಕ್ಷಿಯಾಗುತ್ತೇವೆ ಎಂದು ಅವರು ತಿಳಿಸಿದರು.

ಜಾಥಾವು ದಾರಿಯುದ್ದಕ್ಕೂ ಕಾರ್ಯಕ್ರಮದ ಬಗ್ಗೆ ಮಾತ್ರ ಜನರಲ್ಲಿ ಜಾಗೃತಿ ಮೂಡಿಸಲಿಲ್ಲ, ಬದಲಾಗಿ ಇಂದಿನ ಯುವಕರು–ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಚರ್ಚಿಸಿತು ಮತ್ತು ಅದರ ಪರಿಹಾರಕ್ಕೆ ಹೋರಾಟವೊಂದೇ ದಾರಿ ಎಂದು ಜನರಿಗೆ ತಿಳಿಸಿತು. ಇಂದಿನ ಶಿಕ್ಷಣವು ಅನುಕೂಲಸ್ಥರಿಗೆ ಸಿಗುವ ಐಶಾರಿಮಿ ವಸ್ತುವಲ್ಲ, ಬದಲಿಗೆ ದೇಶದ ಎಲ್ಲರಿಗೂ ಸಿಗಬೇಕಾದ ಮೂಲಭೂತ ಹಕ್ಕು. ಆದರೆ ಈಗ ಶಿಕ್ಷಣದ ಕನಸು ಕಮರುತ್ತಿದೆ. ಸರಕಾರಿ ಶಾಲಾ ಕಾಲೇಜುಗಳು ಮುಚ್ಚುತ್ತಿವೆ. ಫೀಸು ಡೊನೇಷನ್ ಎಂಬ ಭೂತವು ಅಡ್ಡಾದಿಡ್ಡಿಯಾಗಿ ಕುಣಿಯುತ್ತಿದೆ. ಅದರ ಕಾಲ ಕೆಳಗೆ ಸಿಕ್ಕು ದಮನಿತರು ಬಡವರು ನರಳುತ್ತಿದ್ದಾರೆ ಎಂಬುದನ್ನು ಜಾಥಾವು ಜನರಿಗೆ ತಿಳಿಸಿತು ಎಂದು ತಾರಾ ರಾವ್ ಹೇಳಿದರು.

ಹಾಗೆಯೇ  ಶಿಕ್ಷಣದ ವ್ಯಾಪಾರದ ಚಕ್ರವ್ಯೂಹವನ್ನು ಬೇಧಿಸಿ, ವಿದ್ಯಾರ್ಥಿಗಳು ಉದ್ಯೋಗ ಸಿಗುತ್ತದೆಂಬ ಬಹುನಿರೀಕ್ಷೆಯಿಂದ ತಮ್ಮ ಪದವಿಯನ್ನು ಮುಗಿಸುತ್ತಿದ್ದಾರೆ. ಆದರೆ ಭಾರತದಲ್ಲಿ 45 ವರ್ಷದಲ್ಲೇ ಐತಿಹಾಸಿಕ ನಿರುದ್ಯೋಗ ಏರಿಕೆ ಕಂಡಿದೆ ಎಂದು ವರದಿಗಳು ಹೇಳುತ್ತಿವೆ. ಕೇವಲ 60 ಸಾವಿರ ಉದ್ಯೋಗ ನೇಮಕಾತಿಯ ಕರೆಗೆ 48 ಲಕ್ಷಕ್ಕೂ  ಹೆಚ್ಚು ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು ಇತ್ತೀಚೆಗೆ ದೊಡ್ಡ ಸುದ್ದಿಯಾಗಿತ್ತು. ಪ್ರಪಂಚದ ಅತ್ಯಂತ ಹೆಚ್ಚು ಯುವಜನರನ್ನು ಹೊಂದಿರುವ ಭಾರತದ ಯುವಜನರ ಕೌಶಲ್ಯ, ಶ್ರಮ ಮತ್ತು ಪ್ರತಿಭೆಗಳು ವ್ಯರ್ಥವಾಗುತ್ತಿದೆ. ಇದರ ಜೊತೆಗೆ ಸಮಾಜದಲ್ಲಿ ದ್ವೇಷಕ್ಕೆ ಬದಲಾಗಿ ಪ್ರೀತಿ ಹಂಚೋಣ ಎಂದು ಕರೆ ನೀಡಿತು. ನಾವು ಬರೀ ಮಾತನಾಡುತ್ತಿಲ್ಲ. ಉಚಿತ ಗುಣಮಟ್ಟದ ಶಿಕ್ಷಣಕ್ಕಾಗಿ, ಸುಭದ್ರ ಉದ್ಯೋಗ, ಸುಸ್ಥಿರ ಪರಿಸರಕ್ಕಾಗಿ ಪ್ರೀತಿ ಮತ್ತು ನೆಮ್ಮದಿ ತುಂಬಿದ ನಾಡಿಗಾಗಿ ರಚನಾತ್ಮಕ ಕೆಲಸವನ್ನು ಮಾಡುತ್ತಿದ್ದೇವೆ. ಇದು ಒಂದು ದಿನದ ಹೋರಾಟವಲ್ಲ, ಯುವಜನರ ಭವಿಷ್ಯಕ್ಕಾಗಿನ ಬದ್ಧತೆ ಇದಾಗಿದೆ. ನೀವು ನಮ್ಮೊಡನೆ ಸೇರಿದಾಗ ನಮ್ಮ ದನಿ ದೊಡ್ಡದಾಗುತ್ತದೆ. ನಾವು ಒಟ್ಟಿಗೆ ಕೂಗಿದಾಗ ದೇಶದ ಉದ್ದಗಲಕ್ಕೂ ದನಿ ಪ್ರತಿಧ್ವನಿಯಾಗುತ್ತದೆ ಎಂದು ಜನತೆಗೆ ಜಾಥಾವು ಕರೆ ಕೊಟ್ಟಿತು ಎಂದು ಅವರು ಹೇಳಿದರು.

26ರ ಸಂವಿಧಾನ ಸಂರಕ್ಷಕರ ಸಮಾವೇಶದ ವೇಳಾಪಟ್ಟಿ ಬಿಡುಗಡೆ ಮಾಡಿದ ಅಧ್ಯಕ್ಷೀಯ ಮಂಡಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾವ ಸಂಘಗಳೇ ಆಗಲಿ ಸಂವಿಧಾನದ ಮುಂದೆ ಯಾರೂ ದೊಡ್ಡವರಲ್ಲ’: ಪ್ರಿಯಾಂಕ್ ಖರ್ಗೆ

ಬೆಂಗಳೂರು: ‘ಯಾವ ಸಂಘಗಳೇ ಆಗಲಿ ಸಂವಿಧಾನದ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ನಿಯಮಗಳಿಗೆ ಅತೀತರಲ್ಲ’ ಎಂದು ಆರ್.ಎಸ್.ಎಸ್ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಮತ್ತೆ ಗುಡುಗಿದ್ದಾರೆ.  ರಾಜ್ಯದ ಗಮನ‌ ಸೆಳೆದಿದ್ದ ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ...

“ಮಾಸ್ಕ್ ಧರಿಸಿದರೂ ಪ್ರಯೋಜನವಿಲ್ಲ”: ದೆಹಲಿ ವಾಯುಮಾಲಿನ್ಯದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್

ದೆಹಲಿಯ ವಾಯುಮಾಲಿನ್ಯ 'ಗಂಭೀರ ಮಟ್ಟ' ತಲುಪಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಮಾಸ್ಕ್‌ ಧರಿಸಿದರೂ ಯಾವುದೇ ಪ್ರಯೋಜನವಿಲ್ಲದಂತಾಗಿದೆ. ವಕೀಲರು ವರ್ಚುವಲ್ ಮೂಲಕ ನ್ಯಾಯಾಲಯಕ್ಕೆ ಹಾಜರಾದರೆ ಸಾಕು ಎಂದು ಹೇಳಿದೆ. ವಿವಿಧ ಪ್ರಕರಣಗಳಲ್ಲಿ...

ಛತ್ತೀಸ್‌ಗಢ| ಇಬ್ಬರು ಉನ್ನತ ಕಮಾಂಡರ್‌ಗಳು ಸೇರಿದಂತೆ ಆರು ಜನ ಮಾವೋವಾದಿಗಳ ಎನ್‌ಕೌಂಟರ್‌

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ನವೆಂಬರ್ 11 ರಂದು ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಕೊಲ್ಲಲ್ಪಟ್ಟ ಆರು ಮಾವೋವಾದಿಗಳಲ್ಲಿ ಮಾವೋವಾದಿ ನಾಯಕಿ, ಹಿರಿಯ ಕಾರ್ಯಕರ್ತ ಪಾಪಾ ರಾವ್ ಅವರ ಪತ್ನಿ ಊರ್ಮಿಳಾ ಮತ್ತು ಬುಚಣ್ಣ...

ಗ್ರೆನೇಡ್ ದಾಳಿಗೆ ಸಂಚು ರೂಪಿಸಿದ್ದ, ಪಾಕ್ ಐಎಸ್ಐ ಬೆಂಬಲಿತ ಗುಂಪು: ವಿದೇಶಿ ಮೂಲದ 10 ಹ್ಯಾಂಡ್ಲರ್‌ಗಳ ಬಂಧನ

ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಮಹತ್ವದ ಪ್ರಗತಿ ಸಾಧಿಸಿರುವ ಲುಧಿಯಾನ ಕಮಿಷನರೇಟ್ ಪೊಲೀಸರು, ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಬೆಂಬಲಿತ ಗ್ರೆನೇಡ್ ದಾಳಿ ಘಟಕದ 10 ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಅವರಿಂದ ಸ್ಪೋಟಕಗಳನ್ನು ವಶಕ್ಕೆ ಪಡೆದಿದ್ದಾರೆ.  ನವೆಂಬರ್...

ಗಾಜಾದಲ್ಲಿ ಮುಂದುವರೆದ ಪ್ಯಾಲೆಸ್ತೀನಿಯನ್ ಮಕ್ಕಳ ಕಾಣೆ ಪ್ರಕರಣ: ಮಕ್ಕಳ ಹಕ್ಕುಗಳ ಗುಂಪು

ಬುಧವಾರ ಪ್ಯಾಲೆಸ್ತೀನಿಯನ್ ಹಕ್ಕುಗಳ ಗುಂಪಿನ ವರದಿಯ ಪ್ರಕಾರ, ಇತ್ತೀಚಿನ ತಿಂಗಳುಗಳಲ್ಲಿ ಗಾಜಾದಿಂದ ಕನಿಷ್ಠ ಆರು ಮಕ್ಕಳು ಕಣ್ಮರೆಯಾಗಿದ್ದಾರೆ ಎಂದು 'ಮಕ್ತೂಬ್‌ ಮೀಡಿಯಾ' ವರದಿ ಮಾಡಿದೆ. ಕಾಣೆಯಾದ ಮಕ್ಕಳ ಕುಟುಂಬಗಳು ಈ ಪ್ರದೇಶದಲ್ಲಿನ ತನ್ನ ಮಿಲಿಟರಿ...

ರೂ. 15 ಲಕ್ಷ ಲಂಚ ಪಡೆದ ಪ್ರಕರಣ : ನ್ಯಾಯಾಧೀಶನ ಮೇಲೆ ಕೇಸ್, ಕೋರ್ಟ್ ಗುಮಾಸ್ತ ಅರೆಸ್ಟ್

ವಾಣಿಜ್ಯ ಮೊಕದ್ದಮೆಯೊಂದರಲ್ಲಿ ಅನುಕೂಲಕರ ಆದೇಶವನ್ನು ಪಡೆಯಲು 15 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಸ್ವೀಕರಿಸಿದ ಆರೋಪದ ಮೇಲೆ ಮುಂಬೈ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಮಜಗಾಂವ್ ಸಿವಿಲ್ ಮತ್ತು ಸೆಷನ್ಸ್...

ಅಲಿಘರ್| ಶಾಲೆಯಲ್ಲಿ ‘ವಂದೇ ಮಾತರಂ’ ಹಾಡುವುದಕ್ಕೆ ಆಕ್ಷೇಪಿಸಿದ ಶಿಕ್ಷಕನ ಅಮಾನತು

ಉತ್ತರ ಪ್ರದೇಶದ ಶಾಹಪುರ್ ಕುತುಬ್‌ನ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ 'ವಂದೇ ಮಾತರಂ' ಹಾಡುವುದನ್ನು ಆಕ್ಷೇಪಿಸಿದ ಆರೋಪದ ಮೇಲೆ ಸರ್ಕಾರಿ ಶಾಲಾ ಶಿಕ್ಷಕನನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ರಾಷ್ಟ್ರಗೀತೆಯ ನಂತರ ವಂದೇಮಾತರಂ...

ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಷರತ್ತುಬದ್ಧ ಅನುಮತಿ ನೀಡಿದ ಹೈಕೋರ್ಟ್

ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಆರ್‌ಎಸ್ಎಸ್ ಪಥಸಂಚಲನಕ್ಕೆ ಕರ್ನಾಟಕ ಹೈಕೋರ್ಟ್ ನ ಕಲಬುರಗಿ ಪೀಠ ಷರತ್ತುಬದ್ಧ ಅನುಮತಿ ನೀಡಿದೆ. ಇದರಿಂದ ತೀವ್ರ ಪ್ರತಿಷ್ಠೆಯ ವಿಷಯವಾಗಿದ್ದ ಚಿತ್ತಾಪುರ ಆರ್‌ಎಸ್‌ಎಸ್ ಪಥಸಂಚಲನಕ್ಕೆ ದಿನಾಂಕ ನಿಗದಿಯಾಗಿದೆ. ನವೆಂಬರ್ 16ರ‌ ಭಾನುವಾರ...

ಯಡಿಯೂರಪ್ಪ ವಿರುದ್ದದ ಪೋಕ್ಸೋ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಕಾರ

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ. ಈ ಮೂಲಕ ನ್ಯಾಯಮೂರ್ತಿ ಎಂ.ಐ ಅರುಣ್ ಅವರು, ವಿಚಾರಣಾ ನ್ಯಾಯಾಲಯ ಸಂಜ್ಞೇ (cognisance)ಪರಿಗಣಿಸಿ ಯಡಿಯೂರಪ್ಪ ಅವರಿಗೆ ಸಮನ್ಸ್ ಜಾರಿ...

ಗುಜರಾತ್| ಗೋಹತ್ಯೆ ಮಾಡಿದ್ದಕ್ಕಾಗಿ ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ; ರೂ.18 ಲಕ್ಷ ದಂಡ

ಗುಜರಾತ್‌ನ ಅಮ್ರೇಲಿಯಲ್ಲಿರುವ ಸೆಷನ್ಸ್ ನ್ಯಾಯಾಲಯವು, ಗುಜರಾತ್ ಪ್ರಾಣಿ ಸಂರಕ್ಷಣಾ ಕಾಯ್ದೆಯಡಿ ಗೋಹತ್ಯೆ ಮಾಡಿದ್ದಕ್ಕಾಗಿ ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಜ್ಯದಲ್ಲಿ ಗೋ ಕುಟುಂಬಕ್ಕೆ ಸೇರಿದ ಪ್ರಾಣಿಗಳ ಹತ್ಯೆಯನ್ನು ಕಾನೂನು...