Homeಕರ್ನಾಟಕನಾಳೆ ಬೈಕ್ ಜಾಥಾಕ್ಕೆ ತೆರೆ, ಅದ್ದೂರಿ ಸ್ವಾಗತ: ಅವಿಸ್ಮರಣೀಯ ಕ್ಷಣಕ್ಕೆ ಸಾಕ್ಷಿಯಾಗೋಣ ಬನ್ನಿ; ತಾರಾ ರಾವ್

ನಾಳೆ ಬೈಕ್ ಜಾಥಾಕ್ಕೆ ತೆರೆ, ಅದ್ದೂರಿ ಸ್ವಾಗತ: ಅವಿಸ್ಮರಣೀಯ ಕ್ಷಣಕ್ಕೆ ಸಾಕ್ಷಿಯಾಗೋಣ ಬನ್ನಿ; ತಾರಾ ರಾವ್

- Advertisement -
- Advertisement -

ದಾವಣಗೆರೆ: ಏ.26ರಂದು ನಡೆಯುತ್ತಿರುವ ಸಂವಿಧಾನ ಸಂರಕ್ಷಕರ ಸಮಾವೇಶದ ಮಹತ್ವವನ್ನು ತಿಳಿಸುವುದಕ್ಕಾಗಿ ಏ.14ರಿಂದ ಪ್ರಾರಂಭವಾಗಿರುವ ದೇಶಪ್ರೇಮಿ ಯುವಾಂದೋಲನ ಬೈಕ್ ಜಾಥಾದ ಕೊನೆ ದಿನವಾದ ನಾಳೆ (ಏ.25) ದಾವಣಗೆರೆ ಪ್ರವೇಶಿಸಲಿದ್ದು, ಅಲ್ಲಿನ ಯುವಕ-ಯುವತಿಯರು ಅದ್ದೂರಿ ಸ್ವಾಗತ ಕೊರಲಿದ್ದಾರೆ ಎಂದು ಎದ್ದೇಳು ಕರ್ನಾಟಕದ  ಸೆಂಟ್ರಲ್ ವರ್ಕಿಂಗ್ ಕಮಿಟಿ ಸದಸ್ಯರಾದ ತಾರ ರಾವ್ ತಿಳಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಅವರು, ಏ.14ರಿಂದ ಈ ಜಾಥಾದಲ್ಲಿ ಭಾಗವಹಿಸಿದ ಯುವಕ-ಯುವತಿಯರ ಜೊತೆ ದಾವಣಗೆರೆಯ ಹಲವಾರು ಯುವಕ ಯುವತಿಯರು ಜೊತೆಗೂಡಿ ನಗರದಾದ್ಯಂತ ನಾಳೆ (ಏ.25) ಬೃಹತ್ ಬೈಕ್ ರ್ಯಾಲಿ ನಡೆಸಲಿದ್ದು 26ರಂದು ನಡೆಯುವ ಸಂವಿಧಾನ ಸಂರಕ್ಷಕರ ಸಮಾವೇಶದ ಕುರಿತು ಪ್ರಚಾರ ನಡೆಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಈ ಕಾರ್ಯಕ್ರಮಕ್ಕೆ ರಾಜ್ಯದ ವಿವಿಧ ಭಾಗದಿಂದ ಸುಮಾರು 10,000ಕ್ಕೂ ಹೆಚ್ಚು ಸಂವಿಧಾನ ಸಂರಕ್ಷಕ ಹೋರಾಟಗಾರರು ಭಾಗವಹಿಸಲಿದ್ದಾರೆ. ಈ ಸಮಾವೇಶದ ಕುರಿತು ಜನರಿಗೆ ಮಾಹಿತಿ ಮತ್ತು ಕಾರ್ಯಕ್ರಮಕ್ಕೆ ಆಹ್ವಾನ ನೀಡಲು ಇದೇ ಏ.14ರಿಂದ  ಬೈಕ್ ಯಾನವು  ಅಂಬೇಡ್ಕರ್ ಭೇಟಿ ನೀಡಿದ ಸ್ಥಳವಾದ ಗುಲ್ಬರ್ಗ ಜಿಲ್ಲೆಯ ವಾಡಿಯಿಂದ ಪ್ರಾರಂಭವಾಗಿದ್ದು ಅದೀಗ ಅದು ರಾಜ್ಯದ ಸುಮಾರು 20 ಜಿಲ್ಲೆಗಳ ಮೂಲಕ ಹಾದು, ಸರಿ ಸುಮಾರು 2000 ಕಿ.ಮೀ. ಕ್ರಮಿಸಿ ನಾಳೆ ದಾವಣಗೆರೆಗೆ ಆಗಮಿಸಲಿದೆ ಎಂದಿದ್ದಾರೆ.

ಜಾಥಾದಲ್ಲಿ ಹೇಮಂತ ಹಾಸನ, ಗೀತಾ ಗುಲ್ಬರ್ಗ, ಕೌಶಲ್ಯ ಮಂಡ್ಯ, ಸರೋವರ ಬೆಂಗಳೂರು, ಮರಿಸ್ವಾಮಿ ಕಟ್ಟಿಮನಿ ಬೆಂಗಳೂರು, ರವಿ ನವಲಹಳ್ಳಿ ರಾಯಚೂರು ಜಿಲ್ಲೆ, ಉಮೇಶ್ ಬಡಗಿ ಕೊಪ್ಪಳ, ಶರಣು ಈಳಿಗನೂರು (ಕೊಪ್ಪಳ), ಯಮುನಾ ಚಳ್ಳೂರು(ಕೊಪ್ಪಳ), ಯಮನೂರ ಈಳಿಗನೂರು(ಕೊಪ್ಪಳ), ದುರ್ಗೆಶ್ ಕೆ. ಬರಗೂರು(ಕೊಪ್ಪಳ), ರಾಜೇಂದ್ರ ರಾಜವಾಳ (ಗುಲ್ಬರ್ಗಾ), ಶಾಂತಾ ಗುಲ್ಬರ್ಗಾ, ಕೇಶವ್ ಕೋಲಾರ ಭಾಗವಹಿಸಿದ್ದು, ಇವರೆಲ್ಲರಿಗೂ ಎದ್ದೇಳು ಕರ್ನಾಟಕವು ಹೃದಯತುಂಬಿ ವಂದಿಸುತ್ತದೆ ಮತ್ತು ನಾಳಿನ ಅದ್ದೂರಿ ಸ್ವಾಗತ ಕಾರ್ಯಕ್ರಮದಲ್ಲಿ ನಾವು ಹಲವರು ಭಾಗಿಯಾಗಿ ಅವಿಸ್ಮರಣೀಯ ಕ್ಷಣಕ್ಕೆ ಸಾಕ್ಷಿಯಾಗುತ್ತೇವೆ ಎಂದು ಅವರು ತಿಳಿಸಿದರು.

ಜಾಥಾವು ದಾರಿಯುದ್ದಕ್ಕೂ ಕಾರ್ಯಕ್ರಮದ ಬಗ್ಗೆ ಮಾತ್ರ ಜನರಲ್ಲಿ ಜಾಗೃತಿ ಮೂಡಿಸಲಿಲ್ಲ, ಬದಲಾಗಿ ಇಂದಿನ ಯುವಕರು–ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಚರ್ಚಿಸಿತು ಮತ್ತು ಅದರ ಪರಿಹಾರಕ್ಕೆ ಹೋರಾಟವೊಂದೇ ದಾರಿ ಎಂದು ಜನರಿಗೆ ತಿಳಿಸಿತು. ಇಂದಿನ ಶಿಕ್ಷಣವು ಅನುಕೂಲಸ್ಥರಿಗೆ ಸಿಗುವ ಐಶಾರಿಮಿ ವಸ್ತುವಲ್ಲ, ಬದಲಿಗೆ ದೇಶದ ಎಲ್ಲರಿಗೂ ಸಿಗಬೇಕಾದ ಮೂಲಭೂತ ಹಕ್ಕು. ಆದರೆ ಈಗ ಶಿಕ್ಷಣದ ಕನಸು ಕಮರುತ್ತಿದೆ. ಸರಕಾರಿ ಶಾಲಾ ಕಾಲೇಜುಗಳು ಮುಚ್ಚುತ್ತಿವೆ. ಫೀಸು ಡೊನೇಷನ್ ಎಂಬ ಭೂತವು ಅಡ್ಡಾದಿಡ್ಡಿಯಾಗಿ ಕುಣಿಯುತ್ತಿದೆ. ಅದರ ಕಾಲ ಕೆಳಗೆ ಸಿಕ್ಕು ದಮನಿತರು ಬಡವರು ನರಳುತ್ತಿದ್ದಾರೆ ಎಂಬುದನ್ನು ಜಾಥಾವು ಜನರಿಗೆ ತಿಳಿಸಿತು ಎಂದು ತಾರಾ ರಾವ್ ಹೇಳಿದರು.

ಹಾಗೆಯೇ  ಶಿಕ್ಷಣದ ವ್ಯಾಪಾರದ ಚಕ್ರವ್ಯೂಹವನ್ನು ಬೇಧಿಸಿ, ವಿದ್ಯಾರ್ಥಿಗಳು ಉದ್ಯೋಗ ಸಿಗುತ್ತದೆಂಬ ಬಹುನಿರೀಕ್ಷೆಯಿಂದ ತಮ್ಮ ಪದವಿಯನ್ನು ಮುಗಿಸುತ್ತಿದ್ದಾರೆ. ಆದರೆ ಭಾರತದಲ್ಲಿ 45 ವರ್ಷದಲ್ಲೇ ಐತಿಹಾಸಿಕ ನಿರುದ್ಯೋಗ ಏರಿಕೆ ಕಂಡಿದೆ ಎಂದು ವರದಿಗಳು ಹೇಳುತ್ತಿವೆ. ಕೇವಲ 60 ಸಾವಿರ ಉದ್ಯೋಗ ನೇಮಕಾತಿಯ ಕರೆಗೆ 48 ಲಕ್ಷಕ್ಕೂ  ಹೆಚ್ಚು ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು ಇತ್ತೀಚೆಗೆ ದೊಡ್ಡ ಸುದ್ದಿಯಾಗಿತ್ತು. ಪ್ರಪಂಚದ ಅತ್ಯಂತ ಹೆಚ್ಚು ಯುವಜನರನ್ನು ಹೊಂದಿರುವ ಭಾರತದ ಯುವಜನರ ಕೌಶಲ್ಯ, ಶ್ರಮ ಮತ್ತು ಪ್ರತಿಭೆಗಳು ವ್ಯರ್ಥವಾಗುತ್ತಿದೆ. ಇದರ ಜೊತೆಗೆ ಸಮಾಜದಲ್ಲಿ ದ್ವೇಷಕ್ಕೆ ಬದಲಾಗಿ ಪ್ರೀತಿ ಹಂಚೋಣ ಎಂದು ಕರೆ ನೀಡಿತು. ನಾವು ಬರೀ ಮಾತನಾಡುತ್ತಿಲ್ಲ. ಉಚಿತ ಗುಣಮಟ್ಟದ ಶಿಕ್ಷಣಕ್ಕಾಗಿ, ಸುಭದ್ರ ಉದ್ಯೋಗ, ಸುಸ್ಥಿರ ಪರಿಸರಕ್ಕಾಗಿ ಪ್ರೀತಿ ಮತ್ತು ನೆಮ್ಮದಿ ತುಂಬಿದ ನಾಡಿಗಾಗಿ ರಚನಾತ್ಮಕ ಕೆಲಸವನ್ನು ಮಾಡುತ್ತಿದ್ದೇವೆ. ಇದು ಒಂದು ದಿನದ ಹೋರಾಟವಲ್ಲ, ಯುವಜನರ ಭವಿಷ್ಯಕ್ಕಾಗಿನ ಬದ್ಧತೆ ಇದಾಗಿದೆ. ನೀವು ನಮ್ಮೊಡನೆ ಸೇರಿದಾಗ ನಮ್ಮ ದನಿ ದೊಡ್ಡದಾಗುತ್ತದೆ. ನಾವು ಒಟ್ಟಿಗೆ ಕೂಗಿದಾಗ ದೇಶದ ಉದ್ದಗಲಕ್ಕೂ ದನಿ ಪ್ರತಿಧ್ವನಿಯಾಗುತ್ತದೆ ಎಂದು ಜನತೆಗೆ ಜಾಥಾವು ಕರೆ ಕೊಟ್ಟಿತು ಎಂದು ಅವರು ಹೇಳಿದರು.

26ರ ಸಂವಿಧಾನ ಸಂರಕ್ಷಕರ ಸಮಾವೇಶದ ವೇಳಾಪಟ್ಟಿ ಬಿಡುಗಡೆ ಮಾಡಿದ ಅಧ್ಯಕ್ಷೀಯ ಮಂಡಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...