Homeಕರ್ನಾಟಕನಾಳೆ ಬೈಕ್ ಜಾಥಾಕ್ಕೆ ತೆರೆ, ಅದ್ದೂರಿ ಸ್ವಾಗತ: ಅವಿಸ್ಮರಣೀಯ ಕ್ಷಣಕ್ಕೆ ಸಾಕ್ಷಿಯಾಗೋಣ ಬನ್ನಿ; ತಾರಾ ರಾವ್

ನಾಳೆ ಬೈಕ್ ಜಾಥಾಕ್ಕೆ ತೆರೆ, ಅದ್ದೂರಿ ಸ್ವಾಗತ: ಅವಿಸ್ಮರಣೀಯ ಕ್ಷಣಕ್ಕೆ ಸಾಕ್ಷಿಯಾಗೋಣ ಬನ್ನಿ; ತಾರಾ ರಾವ್

- Advertisement -
- Advertisement -

ದಾವಣಗೆರೆ: ಏ.26ರಂದು ನಡೆಯುತ್ತಿರುವ ಸಂವಿಧಾನ ಸಂರಕ್ಷಕರ ಸಮಾವೇಶದ ಮಹತ್ವವನ್ನು ತಿಳಿಸುವುದಕ್ಕಾಗಿ ಏ.14ರಿಂದ ಪ್ರಾರಂಭವಾಗಿರುವ ದೇಶಪ್ರೇಮಿ ಯುವಾಂದೋಲನ ಬೈಕ್ ಜಾಥಾದ ಕೊನೆ ದಿನವಾದ ನಾಳೆ (ಏ.25) ದಾವಣಗೆರೆ ಪ್ರವೇಶಿಸಲಿದ್ದು, ಅಲ್ಲಿನ ಯುವಕ-ಯುವತಿಯರು ಅದ್ದೂರಿ ಸ್ವಾಗತ ಕೊರಲಿದ್ದಾರೆ ಎಂದು ಎದ್ದೇಳು ಕರ್ನಾಟಕದ  ಸೆಂಟ್ರಲ್ ವರ್ಕಿಂಗ್ ಕಮಿಟಿ ಸದಸ್ಯರಾದ ತಾರ ರಾವ್ ತಿಳಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಅವರು, ಏ.14ರಿಂದ ಈ ಜಾಥಾದಲ್ಲಿ ಭಾಗವಹಿಸಿದ ಯುವಕ-ಯುವತಿಯರ ಜೊತೆ ದಾವಣಗೆರೆಯ ಹಲವಾರು ಯುವಕ ಯುವತಿಯರು ಜೊತೆಗೂಡಿ ನಗರದಾದ್ಯಂತ ನಾಳೆ (ಏ.25) ಬೃಹತ್ ಬೈಕ್ ರ್ಯಾಲಿ ನಡೆಸಲಿದ್ದು 26ರಂದು ನಡೆಯುವ ಸಂವಿಧಾನ ಸಂರಕ್ಷಕರ ಸಮಾವೇಶದ ಕುರಿತು ಪ್ರಚಾರ ನಡೆಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಈ ಕಾರ್ಯಕ್ರಮಕ್ಕೆ ರಾಜ್ಯದ ವಿವಿಧ ಭಾಗದಿಂದ ಸುಮಾರು 10,000ಕ್ಕೂ ಹೆಚ್ಚು ಸಂವಿಧಾನ ಸಂರಕ್ಷಕ ಹೋರಾಟಗಾರರು ಭಾಗವಹಿಸಲಿದ್ದಾರೆ. ಈ ಸಮಾವೇಶದ ಕುರಿತು ಜನರಿಗೆ ಮಾಹಿತಿ ಮತ್ತು ಕಾರ್ಯಕ್ರಮಕ್ಕೆ ಆಹ್ವಾನ ನೀಡಲು ಇದೇ ಏ.14ರಿಂದ  ಬೈಕ್ ಯಾನವು  ಅಂಬೇಡ್ಕರ್ ಭೇಟಿ ನೀಡಿದ ಸ್ಥಳವಾದ ಗುಲ್ಬರ್ಗ ಜಿಲ್ಲೆಯ ವಾಡಿಯಿಂದ ಪ್ರಾರಂಭವಾಗಿದ್ದು ಅದೀಗ ಅದು ರಾಜ್ಯದ ಸುಮಾರು 20 ಜಿಲ್ಲೆಗಳ ಮೂಲಕ ಹಾದು, ಸರಿ ಸುಮಾರು 2000 ಕಿ.ಮೀ. ಕ್ರಮಿಸಿ ನಾಳೆ ದಾವಣಗೆರೆಗೆ ಆಗಮಿಸಲಿದೆ ಎಂದಿದ್ದಾರೆ.

ಜಾಥಾದಲ್ಲಿ ಹೇಮಂತ ಹಾಸನ, ಗೀತಾ ಗುಲ್ಬರ್ಗ, ಕೌಶಲ್ಯ ಮಂಡ್ಯ, ಸರೋವರ ಬೆಂಗಳೂರು, ಮರಿಸ್ವಾಮಿ ಕಟ್ಟಿಮನಿ ಬೆಂಗಳೂರು, ರವಿ ನವಲಹಳ್ಳಿ ರಾಯಚೂರು ಜಿಲ್ಲೆ, ಉಮೇಶ್ ಬಡಗಿ ಕೊಪ್ಪಳ, ಶರಣು ಈಳಿಗನೂರು (ಕೊಪ್ಪಳ), ಯಮುನಾ ಚಳ್ಳೂರು(ಕೊಪ್ಪಳ), ಯಮನೂರ ಈಳಿಗನೂರು(ಕೊಪ್ಪಳ), ದುರ್ಗೆಶ್ ಕೆ. ಬರಗೂರು(ಕೊಪ್ಪಳ), ರಾಜೇಂದ್ರ ರಾಜವಾಳ (ಗುಲ್ಬರ್ಗಾ), ಶಾಂತಾ ಗುಲ್ಬರ್ಗಾ, ಕೇಶವ್ ಕೋಲಾರ ಭಾಗವಹಿಸಿದ್ದು, ಇವರೆಲ್ಲರಿಗೂ ಎದ್ದೇಳು ಕರ್ನಾಟಕವು ಹೃದಯತುಂಬಿ ವಂದಿಸುತ್ತದೆ ಮತ್ತು ನಾಳಿನ ಅದ್ದೂರಿ ಸ್ವಾಗತ ಕಾರ್ಯಕ್ರಮದಲ್ಲಿ ನಾವು ಹಲವರು ಭಾಗಿಯಾಗಿ ಅವಿಸ್ಮರಣೀಯ ಕ್ಷಣಕ್ಕೆ ಸಾಕ್ಷಿಯಾಗುತ್ತೇವೆ ಎಂದು ಅವರು ತಿಳಿಸಿದರು.

ಜಾಥಾವು ದಾರಿಯುದ್ದಕ್ಕೂ ಕಾರ್ಯಕ್ರಮದ ಬಗ್ಗೆ ಮಾತ್ರ ಜನರಲ್ಲಿ ಜಾಗೃತಿ ಮೂಡಿಸಲಿಲ್ಲ, ಬದಲಾಗಿ ಇಂದಿನ ಯುವಕರು–ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಚರ್ಚಿಸಿತು ಮತ್ತು ಅದರ ಪರಿಹಾರಕ್ಕೆ ಹೋರಾಟವೊಂದೇ ದಾರಿ ಎಂದು ಜನರಿಗೆ ತಿಳಿಸಿತು. ಇಂದಿನ ಶಿಕ್ಷಣವು ಅನುಕೂಲಸ್ಥರಿಗೆ ಸಿಗುವ ಐಶಾರಿಮಿ ವಸ್ತುವಲ್ಲ, ಬದಲಿಗೆ ದೇಶದ ಎಲ್ಲರಿಗೂ ಸಿಗಬೇಕಾದ ಮೂಲಭೂತ ಹಕ್ಕು. ಆದರೆ ಈಗ ಶಿಕ್ಷಣದ ಕನಸು ಕಮರುತ್ತಿದೆ. ಸರಕಾರಿ ಶಾಲಾ ಕಾಲೇಜುಗಳು ಮುಚ್ಚುತ್ತಿವೆ. ಫೀಸು ಡೊನೇಷನ್ ಎಂಬ ಭೂತವು ಅಡ್ಡಾದಿಡ್ಡಿಯಾಗಿ ಕುಣಿಯುತ್ತಿದೆ. ಅದರ ಕಾಲ ಕೆಳಗೆ ಸಿಕ್ಕು ದಮನಿತರು ಬಡವರು ನರಳುತ್ತಿದ್ದಾರೆ ಎಂಬುದನ್ನು ಜಾಥಾವು ಜನರಿಗೆ ತಿಳಿಸಿತು ಎಂದು ತಾರಾ ರಾವ್ ಹೇಳಿದರು.

ಹಾಗೆಯೇ  ಶಿಕ್ಷಣದ ವ್ಯಾಪಾರದ ಚಕ್ರವ್ಯೂಹವನ್ನು ಬೇಧಿಸಿ, ವಿದ್ಯಾರ್ಥಿಗಳು ಉದ್ಯೋಗ ಸಿಗುತ್ತದೆಂಬ ಬಹುನಿರೀಕ್ಷೆಯಿಂದ ತಮ್ಮ ಪದವಿಯನ್ನು ಮುಗಿಸುತ್ತಿದ್ದಾರೆ. ಆದರೆ ಭಾರತದಲ್ಲಿ 45 ವರ್ಷದಲ್ಲೇ ಐತಿಹಾಸಿಕ ನಿರುದ್ಯೋಗ ಏರಿಕೆ ಕಂಡಿದೆ ಎಂದು ವರದಿಗಳು ಹೇಳುತ್ತಿವೆ. ಕೇವಲ 60 ಸಾವಿರ ಉದ್ಯೋಗ ನೇಮಕಾತಿಯ ಕರೆಗೆ 48 ಲಕ್ಷಕ್ಕೂ  ಹೆಚ್ಚು ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು ಇತ್ತೀಚೆಗೆ ದೊಡ್ಡ ಸುದ್ದಿಯಾಗಿತ್ತು. ಪ್ರಪಂಚದ ಅತ್ಯಂತ ಹೆಚ್ಚು ಯುವಜನರನ್ನು ಹೊಂದಿರುವ ಭಾರತದ ಯುವಜನರ ಕೌಶಲ್ಯ, ಶ್ರಮ ಮತ್ತು ಪ್ರತಿಭೆಗಳು ವ್ಯರ್ಥವಾಗುತ್ತಿದೆ. ಇದರ ಜೊತೆಗೆ ಸಮಾಜದಲ್ಲಿ ದ್ವೇಷಕ್ಕೆ ಬದಲಾಗಿ ಪ್ರೀತಿ ಹಂಚೋಣ ಎಂದು ಕರೆ ನೀಡಿತು. ನಾವು ಬರೀ ಮಾತನಾಡುತ್ತಿಲ್ಲ. ಉಚಿತ ಗುಣಮಟ್ಟದ ಶಿಕ್ಷಣಕ್ಕಾಗಿ, ಸುಭದ್ರ ಉದ್ಯೋಗ, ಸುಸ್ಥಿರ ಪರಿಸರಕ್ಕಾಗಿ ಪ್ರೀತಿ ಮತ್ತು ನೆಮ್ಮದಿ ತುಂಬಿದ ನಾಡಿಗಾಗಿ ರಚನಾತ್ಮಕ ಕೆಲಸವನ್ನು ಮಾಡುತ್ತಿದ್ದೇವೆ. ಇದು ಒಂದು ದಿನದ ಹೋರಾಟವಲ್ಲ, ಯುವಜನರ ಭವಿಷ್ಯಕ್ಕಾಗಿನ ಬದ್ಧತೆ ಇದಾಗಿದೆ. ನೀವು ನಮ್ಮೊಡನೆ ಸೇರಿದಾಗ ನಮ್ಮ ದನಿ ದೊಡ್ಡದಾಗುತ್ತದೆ. ನಾವು ಒಟ್ಟಿಗೆ ಕೂಗಿದಾಗ ದೇಶದ ಉದ್ದಗಲಕ್ಕೂ ದನಿ ಪ್ರತಿಧ್ವನಿಯಾಗುತ್ತದೆ ಎಂದು ಜನತೆಗೆ ಜಾಥಾವು ಕರೆ ಕೊಟ್ಟಿತು ಎಂದು ಅವರು ಹೇಳಿದರು.

26ರ ಸಂವಿಧಾನ ಸಂರಕ್ಷಕರ ಸಮಾವೇಶದ ವೇಳಾಪಟ್ಟಿ ಬಿಡುಗಡೆ ಮಾಡಿದ ಅಧ್ಯಕ್ಷೀಯ ಮಂಡಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ...

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...

3ನೇ ಹಂತದ ‘SIR’ ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ ಹೆಸರು ಕೈಬಿಟ್ಟ ಆಯೋಗ, ಇನ್ನು ಕರ್ನಾಟಕ ಬಾಕಿ

3ನೇ ಹಂತದದಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜುಲೈನಿಂದ ನಡೆಸಲಾದ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಬಳಿಕ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳು...

ದಾರುಲ್ ಉಲೂಮ್ ದಿಯೋಬಂದ್ ಆವರಣದಲ್ಲಿ ಶಿವಲಿಂಗವಿದೆ ಎಂದ ಹಿಂದುತ್ವ ಸಂಘಟನೆ : ಆ.11ರಂದು ಗಂಗಾಜಲ ಅರ್ಪಿಸುವುದಾಗಿ ಘೋಷಣೆ

ಉತ್ತರ ಪ್ರದೇಶದ ದಿಯೋಬಂದ್‌ನಲ್ಲಿರುವ ಪ್ರಸಿದ್ದ ಮುಸ್ಲಿಂ ಶಿಕ್ಷಣ ಸಂಸ್ಥೆ ದಾರುಲ್ ಉಲೂಮ್ ಆವರಣದಲ್ಲಿ ಶಿವಲಿಂಗವಿದೆ ಎಂದು ಪ್ರತಿಪಾದಿಸಿರುವ ಹಿಂದೂ ರಕ್ಷಾ ದಳ ಸಂಘಟನೆ, ಆಗಸ್ಟ್ 11 ರಂದು ಸಂಸ್ಥೆಗೆ ಭೇಟಿ ನೀಡಿ ಗಂಗಾಜಲ...

‘ಮೋದಿ ನಮ್ಮನ್ನು ಗುಂಡಿಕ್ಕಿ ಕೊಂದರೂ ಈ ಜೀವಿತಾವಧಿಯಲ್ಲಿ ವಂದೇ ಮಾತರಂ ಪೂರ್ಣ ಆವೃತ್ತಿ ಹಾಡುವುದಿಲ್ಲ’: ಕೇರಳ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತ್ತಾನ್

ಕಾಸರಗೋಡು (ಕೇರಳ): ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ 'ಹರ್ ಘರ್ ತಿರಂಗಾ' ಅಭಿಯಾನದ ಸಮಯದಲ್ಲಿ ರಾಷ್ಟ್ರಗೀತೆ 'ವಂದೇ ಮಾತರಂ'ನ ಸಂಪೂರ್ಣ ವಾಗ್ವಾದ/ಆವೃತ್ತಿಯನ್ನು ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಸಂವಹನದ ಸುತ್ತ ಭಾರಿ ವಿವಾದ...

ಮೊಜ್ತಬಾ ಖಾಮಿನೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದ ಇಸ್ರೇಲ್ ಮಾಧ್ಯಮಗಳು : ವಿಡಿಯೋ ಬಿಡುಗಡೆ ಮಾಡಿ ಕೌಂಟರ್ ಕೊಟ್ಟ ಇರಾನ್

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಾಮಿನೈ ಅವರ ಆರೋಗ್ಯ ಸ್ಥಿತಿ 'ಅತ್ಯಂತ ಗಂಭೀರವಾಗಿದೆ' ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ, ಅವರು ಉತ್ತಮ ಆರೋಗ್ಯದಿಂದ ಇರುವಂತೆ ಕಾಣಿಸುವ ದಿನಾಂಕವಿಲ್ಲದ ವಿಡಿಯೋ ಒಂದನ್ನು...

‘ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್’ ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಮತ್ತು ಕುಂಬಳೆ ಉಪಜಿಲ್ಲೆಗಳ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕ್ವಿಜ್‌ನಲ್ಲಿ ವಿ ವಿನಾಯಕ ದಾಮೋದರ ಸಾವರ್ಕರ್ ಕುರಿತಾದ ಪ್ರಶ್ನೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ....