Homeಅಂತರಾಷ್ಟ್ರೀಯಭಾರತೀಯ ರೈತರ ಪರ ಧ್ವನಿಯೆತ್ತಿದ ಅಮೆರಿಕ ಸಂಸದರ ಗುಂಪು

ಭಾರತೀಯ ರೈತರ ಪರ ಧ್ವನಿಯೆತ್ತಿದ ಅಮೆರಿಕ ಸಂಸದರ ಗುಂಪು

ರೈತರ ಶಾಂತಿಯುತ ಪ್ರತಿಭಟನೆಯನ್ನು ಅನುಮತಿಸಿ, ಇಂಟರ್ನೆಟ್ ಮರುಸ್ಥಾಪಿಸಿ ಎಂದು ಅಮೆರಿಕಾ ಕಾಂಗ್ರೆಸ್‌ನ ಭಾರತ ಸಮಿತಿ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.

- Advertisement -
- Advertisement -

ಅಮೆರಿಕ ಸಂಸತ್ತಿನ ಇಂಡಿಯಾ ಕಾಕಸ್‌ನ ಸಹ-ಅಧ್ಯಕ್ಷ, ಸಂಸದ ಬ್ರಾಡ್ ಶೆರ್ಮನ್ ಅವರು ಭಾರತೀಯ ರೈತರ ಪ್ರತಿಭಟನೆ ಕುರಿತಂತೆ ಚರ್ಚೆ ಮಾಡಲು ಒಂದು ಸಭೆ ಕರೆದಿದ್ದಾರೆ. ಅವರು ರಿಪಬ್ಲಿಕನ್ ಪಕ್ಷದ ಸಹ-ಅಧ್ಯಕ್ಷ, ಸಂಸದ ಸ್ಟೀವ್ ಚಬೊಟ್ ಮತ್ತು ಉಪಾಧ್ಯಕ್ಷ, ಸಂಸದ ರೋ ಖನ್ನಾ ಅವರೊಂದಿಗೆ ರೈತರ ಪ್ರತಿಭಟನೆಗಳ ಕುರಿತು ಅಮೆರಿಕದ ಭಾರತದ ರಾಯಭಾರಿ ತಾರಂಜಿತ್ ಸಿಂಗ್ ಸಂಧು ಅವರೊಂದಿಗೆ ಮಾತನಾಡಲು ಈ ಸಭೆ ಕರೆದಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದು ’ಭಾರತದ ಹೌಸ್ ಆಫ್ ಕಾಂಗ್ರೆಸ್ ಸಮಿತಿ’ ನಡೆಸಲಿರುವ ಮಹತ್ಚದ ಸಭೆಯಾಗಿದೆ. ಇಂಡಿಯಾ ಕಾಕಸ್‌ನ ಸಹ-ಅಧ್ಯಕ್ಷರಾಗಿರುವ ಸಂಸದ ಬ್ರಾಡ್ ಶೆರ್ಮನ್ ಭಾರತ ಸರ್ಕಾರಕ್ಕೆ ಈ ಪ್ರಶ್ನೆಗಳನ್ನು ಕಳಿಸಿದ್ದಾರೆ.

ಇದನ್ನೂ ಓದಿ: ರಾಜ್ಯಾದ್ಯಂತ ಯಶಸ್ವಿಯಾಗಿ ಜರುಗಿದ ಸಂಚಾರ ಸ್ಥಗಿತ ಹೋರಾಟ: ಹೆದ್ದಾರಿ ಬಂದ್ ಚಿತ್ರಗಳು

“ಪ್ರಜಾಪ್ರಭುತ್ವದ ಬೇರುಗಳನ್ನು ಕಾಪಾಡಿಕೊಳ್ಳಲಾಗಿದೆಯೇ? ಪ್ರತಿಭಟನಾಕಾರರಿಗೆ ಶಾಂತಿಯುತವಾಗಿ ಪ್ರತಿಭಟಿಸಲು ಅವಕಾಶ ನೀಡಲಾಗಿದೆಯೇ? ಪ್ರತಿಭಟನಾಕಾರರಿಗೆ ಇಂಟರ್ನೆಟ್ ಲಭ್ಯವಿದೆಯೇ ಮತ್ತು ಪ್ರತಿಭಟನಾಕಾರರು ಪತ್ರಕರ್ತರನ್ನು ಭೇಟಿ ಮಾಡಲು ಅವಕಾಶ ಕಲ್ಪಿಸಲಾಗಿದೆಯೇ ಎಂಬುದನ್ನು ಖಚಿತಪಡಿಸಬೇಕು” ಎಂದು ಬ್ರಾಡ್ ಶೆರ್ಮನ್ ಹೇಳಿದ್ದಾರೆ.  ಭಾರತದ ಎಲ್ಲ ಮಿತ್ರ ದೇಶಗಳೂ, ರೈತರು ಮತ್ತು ಸರ್ಕಾರದ ನಡುವೆ ಒಂದು ಸರ್ವಸಮ್ಮತ ಒಪ್ಪಂದ ಏರ್ಪಡಬಹುದು ಎಂದು ಆಶಾಭಾವನೆ ಹೊಂದಿವೆ ಎಂದು ಶೆರ್ಮನ್ ಹೇಳಿದ್ದಾರೆ.

ಇದನ್ನೂ ಓದಿ: ಸ್ವಾರ್ಥ, ಹೇಡಿತನದಲ್ಲಿ ಚಿತ್ರನಟರನ್ನು ಮೀರಿಸಿದ ಕ್ರಿಕೆಟಿಗರು: ನಟ ಚೇತನ್ ಆಕ್ರೋಶ

ಮೂರು ಕೇಂದ್ರ ಕೃಷಿ ಕಾನೂನುಗಳನ್ನು ಸಂಪೂರ್ಣವಾಗಿ ರದ್ದುಗೊಳಿಸುವಂತೆ ಒತ್ತಾಯಿಸಿ ಲಕ್ಷಾಂತರ ರೈತರು, ಮೂರು ದೆಹಲಿ ಗಡಿಗಳಾದ ಸಿಂಘು, ಟಿಕ್ರಿ ಮತ್ತು ಗಾಜಿಪುರಗಳಲ್ಲಿ 73 ದಿನಗಳಿಂದ ನಿರಂತರ ಪ್ರತಿಭಟನೆ ಮಾಡುತ್ತಿದ್ದಾರೆ. ಸರ್ಕಾರ ಮತ್ತು ರೈತ ಸಂಘಗಳ ನಡುವೆ 11 ಸುತ್ತಿನ ಮಾತುಕತೆಗಳು ಫಲಪ್ರದವಾಗಿಲ್ಲ.

ಕೃಷಿ ಕಾನೂನುಗಳ ವಿರುದ್ದ ಪ್ರತಿಭಟಿಸುತ್ತಿರುವ ರೈತ ಸಂಘಗಳ ಪ್ರಾತಿನಿಧಿಕ ಸಂಸ್ಥೆಯಾದ ಸಂಯುಕ್ತ್ ಕಿಸಾನ್ ಮೋರ್ಚಾ (ಎಸ್‌ಕೆಎಂ) ಕರೆ ಮೇರೆಗೆ ಈಗ ದೇಶಾದ್ಯಂತ ರಸ್ತೆ ತಡೆ ನಡೆದಿದೆ.

ಭಾರತದ ಪ್ರಜಾಪ್ರಭುತ್ವದ ನೀತಿಗಳು ಮತ್ತು ರಾಜಕೀಯದ ಹಿನ್ನೆಲೆಯಲ್ಲಿ ಯಾವುದೇ ಪ್ರತಿಭಟನೆಗಳನ್ನು ನೋಡಬೇಕು ಮತ್ತು ಬಿಕ್ಕಟ್ಟನ್ನು ಪರಿಹರಿಸಲು ಸರ್ಕಾರ ಮತ್ತು ಸಂಬಂಧಪಟ್ಟ ರೈತ ಗುಂಪುಗಳು ನಡೆಸುತ್ತಿರುವ ಪ್ರಯತ್ನಗಳನ್ನು ಗಮನಿಸಬೇಕು ಎಂದು ವಿದೇಶಾಂಗ ಸಚಿವಾಲಯ ಮೊನ್ನೆ ಹೇಳಿತ್ತು. ಆದರೆ ದೆಹಲಿ ಗಡಿಗಳಲ್ಲಿನ ರೈತ ಪ್ರತಿಭಟನೆ ಬೆಂಬಲಿಸಿ ಪಾಪ್ ಗಾಯಕಿ ರಿಹಾನ್ನಾ, ಪರಿಸರವಾದಿ ಗ್ರೆಟಾ ಥನ್‌ಬರ್ಗ್ ಸೇರಿದಂತೆ ಹಲವರು ಟ್ವೀಟ್ ಮಾಡಿದ ನಂತರ ಅಮೆರಿಕಾ ಆಡಳಿತ ಪ್ರತಿಕ್ರಿಯೆ ನೀಡಲು ಆರಂಭಿಸಿದೆ.

ಇದನ್ನೂ ಓದಿ: ಸ್ವಾರ್ಥ, ಹೇಡಿತನದಲ್ಲಿ ಚಿತ್ರನಟರನ್ನು ಮೀರಿಸಿದ ಕ್ರಿಕೆಟಿಗರು: ನಟ ಚೇತನ್ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...