Homeಅಂತರಾಷ್ಟ್ರೀಯಭಾರತೀಯ ರೈತರ ಪರ ಧ್ವನಿಯೆತ್ತಿದ ಅಮೆರಿಕ ಸಂಸದರ ಗುಂಪು

ಭಾರತೀಯ ರೈತರ ಪರ ಧ್ವನಿಯೆತ್ತಿದ ಅಮೆರಿಕ ಸಂಸದರ ಗುಂಪು

ರೈತರ ಶಾಂತಿಯುತ ಪ್ರತಿಭಟನೆಯನ್ನು ಅನುಮತಿಸಿ, ಇಂಟರ್ನೆಟ್ ಮರುಸ್ಥಾಪಿಸಿ ಎಂದು ಅಮೆರಿಕಾ ಕಾಂಗ್ರೆಸ್‌ನ ಭಾರತ ಸಮಿತಿ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.

- Advertisement -
- Advertisement -

ಅಮೆರಿಕ ಸಂಸತ್ತಿನ ಇಂಡಿಯಾ ಕಾಕಸ್‌ನ ಸಹ-ಅಧ್ಯಕ್ಷ, ಸಂಸದ ಬ್ರಾಡ್ ಶೆರ್ಮನ್ ಅವರು ಭಾರತೀಯ ರೈತರ ಪ್ರತಿಭಟನೆ ಕುರಿತಂತೆ ಚರ್ಚೆ ಮಾಡಲು ಒಂದು ಸಭೆ ಕರೆದಿದ್ದಾರೆ. ಅವರು ರಿಪಬ್ಲಿಕನ್ ಪಕ್ಷದ ಸಹ-ಅಧ್ಯಕ್ಷ, ಸಂಸದ ಸ್ಟೀವ್ ಚಬೊಟ್ ಮತ್ತು ಉಪಾಧ್ಯಕ್ಷ, ಸಂಸದ ರೋ ಖನ್ನಾ ಅವರೊಂದಿಗೆ ರೈತರ ಪ್ರತಿಭಟನೆಗಳ ಕುರಿತು ಅಮೆರಿಕದ ಭಾರತದ ರಾಯಭಾರಿ ತಾರಂಜಿತ್ ಸಿಂಗ್ ಸಂಧು ಅವರೊಂದಿಗೆ ಮಾತನಾಡಲು ಈ ಸಭೆ ಕರೆದಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದು ’ಭಾರತದ ಹೌಸ್ ಆಫ್ ಕಾಂಗ್ರೆಸ್ ಸಮಿತಿ’ ನಡೆಸಲಿರುವ ಮಹತ್ಚದ ಸಭೆಯಾಗಿದೆ. ಇಂಡಿಯಾ ಕಾಕಸ್‌ನ ಸಹ-ಅಧ್ಯಕ್ಷರಾಗಿರುವ ಸಂಸದ ಬ್ರಾಡ್ ಶೆರ್ಮನ್ ಭಾರತ ಸರ್ಕಾರಕ್ಕೆ ಈ ಪ್ರಶ್ನೆಗಳನ್ನು ಕಳಿಸಿದ್ದಾರೆ.

ಇದನ್ನೂ ಓದಿ: ರಾಜ್ಯಾದ್ಯಂತ ಯಶಸ್ವಿಯಾಗಿ ಜರುಗಿದ ಸಂಚಾರ ಸ್ಥಗಿತ ಹೋರಾಟ: ಹೆದ್ದಾರಿ ಬಂದ್ ಚಿತ್ರಗಳು

“ಪ್ರಜಾಪ್ರಭುತ್ವದ ಬೇರುಗಳನ್ನು ಕಾಪಾಡಿಕೊಳ್ಳಲಾಗಿದೆಯೇ? ಪ್ರತಿಭಟನಾಕಾರರಿಗೆ ಶಾಂತಿಯುತವಾಗಿ ಪ್ರತಿಭಟಿಸಲು ಅವಕಾಶ ನೀಡಲಾಗಿದೆಯೇ? ಪ್ರತಿಭಟನಾಕಾರರಿಗೆ ಇಂಟರ್ನೆಟ್ ಲಭ್ಯವಿದೆಯೇ ಮತ್ತು ಪ್ರತಿಭಟನಾಕಾರರು ಪತ್ರಕರ್ತರನ್ನು ಭೇಟಿ ಮಾಡಲು ಅವಕಾಶ ಕಲ್ಪಿಸಲಾಗಿದೆಯೇ ಎಂಬುದನ್ನು ಖಚಿತಪಡಿಸಬೇಕು” ಎಂದು ಬ್ರಾಡ್ ಶೆರ್ಮನ್ ಹೇಳಿದ್ದಾರೆ.  ಭಾರತದ ಎಲ್ಲ ಮಿತ್ರ ದೇಶಗಳೂ, ರೈತರು ಮತ್ತು ಸರ್ಕಾರದ ನಡುವೆ ಒಂದು ಸರ್ವಸಮ್ಮತ ಒಪ್ಪಂದ ಏರ್ಪಡಬಹುದು ಎಂದು ಆಶಾಭಾವನೆ ಹೊಂದಿವೆ ಎಂದು ಶೆರ್ಮನ್ ಹೇಳಿದ್ದಾರೆ.

ಇದನ್ನೂ ಓದಿ: ಸ್ವಾರ್ಥ, ಹೇಡಿತನದಲ್ಲಿ ಚಿತ್ರನಟರನ್ನು ಮೀರಿಸಿದ ಕ್ರಿಕೆಟಿಗರು: ನಟ ಚೇತನ್ ಆಕ್ರೋಶ

ಮೂರು ಕೇಂದ್ರ ಕೃಷಿ ಕಾನೂನುಗಳನ್ನು ಸಂಪೂರ್ಣವಾಗಿ ರದ್ದುಗೊಳಿಸುವಂತೆ ಒತ್ತಾಯಿಸಿ ಲಕ್ಷಾಂತರ ರೈತರು, ಮೂರು ದೆಹಲಿ ಗಡಿಗಳಾದ ಸಿಂಘು, ಟಿಕ್ರಿ ಮತ್ತು ಗಾಜಿಪುರಗಳಲ್ಲಿ 73 ದಿನಗಳಿಂದ ನಿರಂತರ ಪ್ರತಿಭಟನೆ ಮಾಡುತ್ತಿದ್ದಾರೆ. ಸರ್ಕಾರ ಮತ್ತು ರೈತ ಸಂಘಗಳ ನಡುವೆ 11 ಸುತ್ತಿನ ಮಾತುಕತೆಗಳು ಫಲಪ್ರದವಾಗಿಲ್ಲ.

ಕೃಷಿ ಕಾನೂನುಗಳ ವಿರುದ್ದ ಪ್ರತಿಭಟಿಸುತ್ತಿರುವ ರೈತ ಸಂಘಗಳ ಪ್ರಾತಿನಿಧಿಕ ಸಂಸ್ಥೆಯಾದ ಸಂಯುಕ್ತ್ ಕಿಸಾನ್ ಮೋರ್ಚಾ (ಎಸ್‌ಕೆಎಂ) ಕರೆ ಮೇರೆಗೆ ಈಗ ದೇಶಾದ್ಯಂತ ರಸ್ತೆ ತಡೆ ನಡೆದಿದೆ.

ಭಾರತದ ಪ್ರಜಾಪ್ರಭುತ್ವದ ನೀತಿಗಳು ಮತ್ತು ರಾಜಕೀಯದ ಹಿನ್ನೆಲೆಯಲ್ಲಿ ಯಾವುದೇ ಪ್ರತಿಭಟನೆಗಳನ್ನು ನೋಡಬೇಕು ಮತ್ತು ಬಿಕ್ಕಟ್ಟನ್ನು ಪರಿಹರಿಸಲು ಸರ್ಕಾರ ಮತ್ತು ಸಂಬಂಧಪಟ್ಟ ರೈತ ಗುಂಪುಗಳು ನಡೆಸುತ್ತಿರುವ ಪ್ರಯತ್ನಗಳನ್ನು ಗಮನಿಸಬೇಕು ಎಂದು ವಿದೇಶಾಂಗ ಸಚಿವಾಲಯ ಮೊನ್ನೆ ಹೇಳಿತ್ತು. ಆದರೆ ದೆಹಲಿ ಗಡಿಗಳಲ್ಲಿನ ರೈತ ಪ್ರತಿಭಟನೆ ಬೆಂಬಲಿಸಿ ಪಾಪ್ ಗಾಯಕಿ ರಿಹಾನ್ನಾ, ಪರಿಸರವಾದಿ ಗ್ರೆಟಾ ಥನ್‌ಬರ್ಗ್ ಸೇರಿದಂತೆ ಹಲವರು ಟ್ವೀಟ್ ಮಾಡಿದ ನಂತರ ಅಮೆರಿಕಾ ಆಡಳಿತ ಪ್ರತಿಕ್ರಿಯೆ ನೀಡಲು ಆರಂಭಿಸಿದೆ.

ಇದನ್ನೂ ಓದಿ: ಸ್ವಾರ್ಥ, ಹೇಡಿತನದಲ್ಲಿ ಚಿತ್ರನಟರನ್ನು ಮೀರಿಸಿದ ಕ್ರಿಕೆಟಿಗರು: ನಟ ಚೇತನ್ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...