Homeಅಂತರಾಷ್ಟ್ರೀಯಭಾರತೀಯ ರೈತರ ಪರ ಧ್ವನಿಯೆತ್ತಿದ ಅಮೆರಿಕ ಸಂಸದರ ಗುಂಪು

ಭಾರತೀಯ ರೈತರ ಪರ ಧ್ವನಿಯೆತ್ತಿದ ಅಮೆರಿಕ ಸಂಸದರ ಗುಂಪು

ರೈತರ ಶಾಂತಿಯುತ ಪ್ರತಿಭಟನೆಯನ್ನು ಅನುಮತಿಸಿ, ಇಂಟರ್ನೆಟ್ ಮರುಸ್ಥಾಪಿಸಿ ಎಂದು ಅಮೆರಿಕಾ ಕಾಂಗ್ರೆಸ್‌ನ ಭಾರತ ಸಮಿತಿ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.

- Advertisement -
- Advertisement -

ಅಮೆರಿಕ ಸಂಸತ್ತಿನ ಇಂಡಿಯಾ ಕಾಕಸ್‌ನ ಸಹ-ಅಧ್ಯಕ್ಷ, ಸಂಸದ ಬ್ರಾಡ್ ಶೆರ್ಮನ್ ಅವರು ಭಾರತೀಯ ರೈತರ ಪ್ರತಿಭಟನೆ ಕುರಿತಂತೆ ಚರ್ಚೆ ಮಾಡಲು ಒಂದು ಸಭೆ ಕರೆದಿದ್ದಾರೆ. ಅವರು ರಿಪಬ್ಲಿಕನ್ ಪಕ್ಷದ ಸಹ-ಅಧ್ಯಕ್ಷ, ಸಂಸದ ಸ್ಟೀವ್ ಚಬೊಟ್ ಮತ್ತು ಉಪಾಧ್ಯಕ್ಷ, ಸಂಸದ ರೋ ಖನ್ನಾ ಅವರೊಂದಿಗೆ ರೈತರ ಪ್ರತಿಭಟನೆಗಳ ಕುರಿತು ಅಮೆರಿಕದ ಭಾರತದ ರಾಯಭಾರಿ ತಾರಂಜಿತ್ ಸಿಂಗ್ ಸಂಧು ಅವರೊಂದಿಗೆ ಮಾತನಾಡಲು ಈ ಸಭೆ ಕರೆದಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದು ’ಭಾರತದ ಹೌಸ್ ಆಫ್ ಕಾಂಗ್ರೆಸ್ ಸಮಿತಿ’ ನಡೆಸಲಿರುವ ಮಹತ್ಚದ ಸಭೆಯಾಗಿದೆ. ಇಂಡಿಯಾ ಕಾಕಸ್‌ನ ಸಹ-ಅಧ್ಯಕ್ಷರಾಗಿರುವ ಸಂಸದ ಬ್ರಾಡ್ ಶೆರ್ಮನ್ ಭಾರತ ಸರ್ಕಾರಕ್ಕೆ ಈ ಪ್ರಶ್ನೆಗಳನ್ನು ಕಳಿಸಿದ್ದಾರೆ.

ಇದನ್ನೂ ಓದಿ: ರಾಜ್ಯಾದ್ಯಂತ ಯಶಸ್ವಿಯಾಗಿ ಜರುಗಿದ ಸಂಚಾರ ಸ್ಥಗಿತ ಹೋರಾಟ: ಹೆದ್ದಾರಿ ಬಂದ್ ಚಿತ್ರಗಳು

“ಪ್ರಜಾಪ್ರಭುತ್ವದ ಬೇರುಗಳನ್ನು ಕಾಪಾಡಿಕೊಳ್ಳಲಾಗಿದೆಯೇ? ಪ್ರತಿಭಟನಾಕಾರರಿಗೆ ಶಾಂತಿಯುತವಾಗಿ ಪ್ರತಿಭಟಿಸಲು ಅವಕಾಶ ನೀಡಲಾಗಿದೆಯೇ? ಪ್ರತಿಭಟನಾಕಾರರಿಗೆ ಇಂಟರ್ನೆಟ್ ಲಭ್ಯವಿದೆಯೇ ಮತ್ತು ಪ್ರತಿಭಟನಾಕಾರರು ಪತ್ರಕರ್ತರನ್ನು ಭೇಟಿ ಮಾಡಲು ಅವಕಾಶ ಕಲ್ಪಿಸಲಾಗಿದೆಯೇ ಎಂಬುದನ್ನು ಖಚಿತಪಡಿಸಬೇಕು” ಎಂದು ಬ್ರಾಡ್ ಶೆರ್ಮನ್ ಹೇಳಿದ್ದಾರೆ.  ಭಾರತದ ಎಲ್ಲ ಮಿತ್ರ ದೇಶಗಳೂ, ರೈತರು ಮತ್ತು ಸರ್ಕಾರದ ನಡುವೆ ಒಂದು ಸರ್ವಸಮ್ಮತ ಒಪ್ಪಂದ ಏರ್ಪಡಬಹುದು ಎಂದು ಆಶಾಭಾವನೆ ಹೊಂದಿವೆ ಎಂದು ಶೆರ್ಮನ್ ಹೇಳಿದ್ದಾರೆ.

ಇದನ್ನೂ ಓದಿ: ಸ್ವಾರ್ಥ, ಹೇಡಿತನದಲ್ಲಿ ಚಿತ್ರನಟರನ್ನು ಮೀರಿಸಿದ ಕ್ರಿಕೆಟಿಗರು: ನಟ ಚೇತನ್ ಆಕ್ರೋಶ

ಮೂರು ಕೇಂದ್ರ ಕೃಷಿ ಕಾನೂನುಗಳನ್ನು ಸಂಪೂರ್ಣವಾಗಿ ರದ್ದುಗೊಳಿಸುವಂತೆ ಒತ್ತಾಯಿಸಿ ಲಕ್ಷಾಂತರ ರೈತರು, ಮೂರು ದೆಹಲಿ ಗಡಿಗಳಾದ ಸಿಂಘು, ಟಿಕ್ರಿ ಮತ್ತು ಗಾಜಿಪುರಗಳಲ್ಲಿ 73 ದಿನಗಳಿಂದ ನಿರಂತರ ಪ್ರತಿಭಟನೆ ಮಾಡುತ್ತಿದ್ದಾರೆ. ಸರ್ಕಾರ ಮತ್ತು ರೈತ ಸಂಘಗಳ ನಡುವೆ 11 ಸುತ್ತಿನ ಮಾತುಕತೆಗಳು ಫಲಪ್ರದವಾಗಿಲ್ಲ.

ಕೃಷಿ ಕಾನೂನುಗಳ ವಿರುದ್ದ ಪ್ರತಿಭಟಿಸುತ್ತಿರುವ ರೈತ ಸಂಘಗಳ ಪ್ರಾತಿನಿಧಿಕ ಸಂಸ್ಥೆಯಾದ ಸಂಯುಕ್ತ್ ಕಿಸಾನ್ ಮೋರ್ಚಾ (ಎಸ್‌ಕೆಎಂ) ಕರೆ ಮೇರೆಗೆ ಈಗ ದೇಶಾದ್ಯಂತ ರಸ್ತೆ ತಡೆ ನಡೆದಿದೆ.

ಭಾರತದ ಪ್ರಜಾಪ್ರಭುತ್ವದ ನೀತಿಗಳು ಮತ್ತು ರಾಜಕೀಯದ ಹಿನ್ನೆಲೆಯಲ್ಲಿ ಯಾವುದೇ ಪ್ರತಿಭಟನೆಗಳನ್ನು ನೋಡಬೇಕು ಮತ್ತು ಬಿಕ್ಕಟ್ಟನ್ನು ಪರಿಹರಿಸಲು ಸರ್ಕಾರ ಮತ್ತು ಸಂಬಂಧಪಟ್ಟ ರೈತ ಗುಂಪುಗಳು ನಡೆಸುತ್ತಿರುವ ಪ್ರಯತ್ನಗಳನ್ನು ಗಮನಿಸಬೇಕು ಎಂದು ವಿದೇಶಾಂಗ ಸಚಿವಾಲಯ ಮೊನ್ನೆ ಹೇಳಿತ್ತು. ಆದರೆ ದೆಹಲಿ ಗಡಿಗಳಲ್ಲಿನ ರೈತ ಪ್ರತಿಭಟನೆ ಬೆಂಬಲಿಸಿ ಪಾಪ್ ಗಾಯಕಿ ರಿಹಾನ್ನಾ, ಪರಿಸರವಾದಿ ಗ್ರೆಟಾ ಥನ್‌ಬರ್ಗ್ ಸೇರಿದಂತೆ ಹಲವರು ಟ್ವೀಟ್ ಮಾಡಿದ ನಂತರ ಅಮೆರಿಕಾ ಆಡಳಿತ ಪ್ರತಿಕ್ರಿಯೆ ನೀಡಲು ಆರಂಭಿಸಿದೆ.

ಇದನ್ನೂ ಓದಿ: ಸ್ವಾರ್ಥ, ಹೇಡಿತನದಲ್ಲಿ ಚಿತ್ರನಟರನ್ನು ಮೀರಿಸಿದ ಕ್ರಿಕೆಟಿಗರು: ನಟ ಚೇತನ್ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...