Homeಮುಖಪುಟ‘ನೂರು ಜನರ ಗುಂಪು ಹಲ್ಲೆ ಮಾಡಿತು; ಜೈ ಶ್ರೀರಾಮ್‌ ಎಂದಿತು, ಊರು ಬಿಡುವಂತೆ ಸೂಚಿಸಿತು’

‘ನೂರು ಜನರ ಗುಂಪು ಹಲ್ಲೆ ಮಾಡಿತು; ಜೈ ಶ್ರೀರಾಮ್‌ ಎಂದಿತು, ಊರು ಬಿಡುವಂತೆ ಸೂಚಿಸಿತು’

- Advertisement -
- Advertisement -

“ನೂರು ಜನರ ಗುಂಪು ಹಲ್ಲೆ ಮಾಡಿತು, ಜೈ ಶ್ರೀರಾಮ್‌ ಎಂದಿತು, ಊರು ಬಿಡುವಂತೆ ಎಚ್ಚರಿಸಿತು” – ಹೀಗೆ ಮಧ್ಯಪ್ರದೇಶದ ಮುಸ್ಲಿಂ ಕುಟುಂಬವೊಂದು ಆರೋಪಿಸಿದೆ.

ಮಧ್ಯಪ್ರದೇಶದ ಇಂದೋರ್‌ ಸಮೀಪದ ಕಂಪೆಲ್‌ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ವಾಸವಿರುವ ಏಳು ಜನರಿರುವ ಮುಸ್ಲಿಂ ಕುಟುಂಬದ ಮೇಲೆ ಶನಿವಾರ ರಾತ್ರಿ 8.30ರ ವೇಳೆಗೆ ಸುಮಾರು ನೂರು ಜನರಿದ್ದ ಕೇಸರಿಪಡೆ ಹಲ್ಲೆ ನಡೆಸಿದೆ. ಅಲ್ಲದೆ ಮನೆ ಖಾಲಿ ಮಾಡಿ, ಊರು ಬಿಡುವಂತೆ ಹಲ್ಲೆಕೋರ ಗುಂಪು ಮುಸ್ಲಿಂ ಕುಟುಂಬಕ್ಕೆ ಧಮ್ಕಿ ಹಾಕಿದೆ.

ಒಂದು ತಿಂಗಳ ಹಿಂದೆಯೇ ಊರು ಬಿಡುವಂತೆ ಈ ಹಲ್ಲೆಕೋರ ಗುಂಪು ಎಚ್ಚರಿಸಿತ್ತು. ಶನಿವಾರದೊಳಗೆ ಮನೆ ಖಾಲಿ ಮಾಡುವಂತೆ ಎಚ್ಚರಿಸಿತ್ತು. ಕುಟುಂಬ ಊರು ಬಿಟ್ಟು ಹೋಗಲಿಲ್ಲವೆಂದು ಶನಿವಾರ ದಾಳಿ ಮಾಡಿರುವ ಹಲ್ಲೆಕೋರರು, `ಜೈಶ್ರೀರಾಮ್‌’ ಎಂದು ಘೋಷಣೆ ಕೂಗಿದ್ದಾರೆ ಎಂದು ದಾಳಿಗೊಳಗಾದ ಕುಟುಂಬ ಆರೋಪಿಸಿದೆ. ಆದರೆ, “ಎರಡು ಗುಂಪುಗಳ ನಡುವೆ ಹಣದ ವಿಚಾರವಾಗಿ ಜಗಳವಾಗಿದೆ. ಎರಡು ಗುಂಪುಗಳಿಂದಲೂ ದೂರುಗಳು ಬಂದಿವೆ” ಎಂದು ಪೊಲೀಸರು ಹೇಳಿದ್ದಾರೆ.

ಈ ಕುಟುಂಬವು ಎರಡು ವರ್ಷಗಳ ಹಿಂದೆ ನೀಮಾರ್‌ನಿಂದ ಕಂಪೇಲ್‌ಗೆ ಬಂದು ನೆಲೆಸಿತ್ತು. ಜೀವನೋಪಾಯಕ್ಕಾಗಿ ಟ್ರಾಲಿಗಳು ಹಾಗೂ ಇತರ ಕೃಷಿ ಉಪಕರಣಗಳನ್ನು ತಯಾರಿಸಿ ಮಾರುತ್ತಿತ್ತು ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಇದನ್ನೂ ಓದಿರಿ: ಮೋರಲ್‌ ಪೊಲೀಸಿಂಗ್‌‌: ಕರಾವಳಿ ಕರ್ನಾಟಕದಲ್ಲಿ ಆಗುತ್ತಿರುವ ನಷ್ಟವೆಷ್ಟು?

ಹಲ್ಲೆಗೊಳಗಾದ 46 ವರ್ಷದ ಫಾರುಕ್‌ ಲೋಹರ್‌ ಅವರ ಪುತ್ರ ಶಾರುಖ್‌ ಲೋಹರ್‌‌ ಅವರು ‘ದಿ ಇಂಡಿಯನ್‌ ಎಕ್ಸ್‌ಪ್ರೆಸ್‌ಗೆ ಪ್ರತಿಕ್ರಿಯಿಸಿದ್ದು, “ಅವರು ಒಳಗೆ ನುಗ್ಗಿ ರಾಡ್‌ಗಳನ್ನು ಬಳಸಿ ನಮ್ಮನ್ನು ಹೊಡೆಯಲು ಪ್ರಾರಂಭಿಸಿದರು. ಅವರು ನನ್ನ ತಂದೆಯನ್ನು ಪದೇ ಪದೇ ಹೊಡೆಯಲು ಪ್ರಾರಂಭಿಸಿದರು. ನನ್ನ ಚಿಕ್ಕಪ್ಪ ಮಧ್ಯಪ್ರವೇಶಿಸಿದಾಗ ಅವರನ್ನೂ ಹೊಡೆದರು. ‘ನಾವು ನಿಮಗೆ ಖಾಲಿ ಮಾಡುವಂತೆ ಹೇಳಿದ್ದೆವು, ಇಲ್ಲದಿದ್ದರೆ ಭೀಕರ ಪರಿಣಾಮಗಳನ್ನು ಎದುರಿಸಬೇಕೆಂದು ಎಚ್ಚರಿಸಿದ್ದೆವು’ ಎಂಬುದಾಗಿ ಹೇಳಿದರು” ಎಂದು ಶಾರುಖ್‌ ಆರೋಪಿಸಿದ್ದಾರೆ.

ಕುಟುಂಬವನ್ನು ನೋಡಲು ಬಂದಿದ್ದ ಶಾರುಖ್‌ ಅವರ ಸಹೋದರಿ ಫೌಸಿಯಾ ಕೂಡ ಘಟನೆ ವೇಳೆ ಸ್ಥಳದಲ್ಲಿದ್ದು, ಅವರು ಕೂಡ ಪತ್ರಿಕೆಯೊಂದಿಗೆ ಮಾತನಾಡಿದ್ದಾರೆ. “ಕಾರಿನಲ್ಲಿ ಬಂದ ಈ ಜನರ ಕೈಯಲ್ಲಿ ರಾಡುಗಳು ಇದ್ದವು. ಈ ಘಟನೆಯ ಚಿತ್ರೀಕರಣ ಮಾಡಲು ನಾನು ಮೊಬೈಲ್‌ ತೆಗೆದುಕೊಂಡಾಗ ನನ್ನ ಕೈ ಹಿಡಿದು ಎಳೆದು ಮೊಬೈಲ್‌ ಕಿತ್ತುಕೊಂಡು ಪುಡಿಪುಡಿ ಮಾಡಿದರು” ಎಂದು ಆಪಾದಿಸಿದ್ದಾರೆ.

ಸುಮಾರು 25 ನಿಮಿಷಗಳ ಕಾಲ ಘಟನೆ ನಡೆದಿದೆ. ನಂತರ ಕುಟುಂಬವು ಖುಡೆಲ್ ಪೊಲೀಸ್ ಠಾಣೆಗೆ ಧಾವಿಸಿದೆ, ಅಲ್ಲಿಂದ ಅವರನ್ನು ವೈದ್ಯಕೀಯ ಪರೀಕ್ಷೆಗಾಗಿ ಇಂದೋರ್‌ನ ಮಹಾರಾಜ ಯಶವಂತರಾವ್ ಆಸ್ಪತ್ರೆಗೆ ಕಳುಹಿಸಲಾಯಿತು. ನಂತರ ಅವರ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.

“ಕಳೆದ ತಿಂಗಳು ಅದೇ ಯುವಕರು ಬಂದು ಊರು ಬಿಟ್ಟು ಹೋಗುವಂತೆ ನಮಗೆ ಸೂಚಿಸಿದ್ದರು. ನಾವು ನಮ್ಮ ಮನೆಯ ಹತ್ತಿರ ನಿವೇಶನ ಖರೀದಿಸಲಿದ್ದೇವೆ ಎಂದು ಅವರಿಗೆ ತಿಳಿದಿತ್ತು. ಅವರು ಅದನ್ನು ಇಷ್ಟಪಡಲಿಲ್ಲ. ನಾವು ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರಿಂದ, ಮನೆಯ ಹತ್ತಿರದಲ್ಲಿ ಒಂದು ನಿವೇಶನ ಖರೀದಿಸಬೇಕೆಂದಿದ್ದೆವು. ಆದರೆ ಅವರ ಬೆದರಿಕೆಯ ನಂತರ, ನಾವು ಭೂ ಒಪ್ಪಂದವನ್ನು ರದ್ದುಗೊಳಿಸಿದೆವು. ಪ್ಲಾಟ್ ಅನ್ನು ಖರೀದಿಸಲಿಲ್ಲ. ಆದರೆ ಸರ್ಪಂಚ್ ಅವರು ಬಂದು -ಆ ಹುಡುಗರು ಕೇವಲ ಬಿಸಿ ರಕ್ತದವರು. ಚಿಂತೆ ಮಾಡಬೇಡಿ- ಎಂದು ಹೇಳಿದ್ದರಿಂದ ನಾವು ಮನೆ ಖಾಲಿ ಮಾಡಲಿಲ್ಲ” ಎಂದು ಶಾರುಖ್ ಹೇಳಿಕೆ ನೀಡಿದ್ದಾರೆ.

ಲೋಹರ್‌ ಕುಟುಂಬದ ದೂರಿನ ಅನ್ವಯ ಖುದೀಲ್‌‌ ಪೊಲೀಸರು 9 ಮಂದಿಯ ಮೇಲೆ ಎಫ್‌ಐಆರ್‌ ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್‌ 323, 506 , 29, 427, 147, 148 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸಬ್ ಇನ್ಸ್‌ಪೆಕ್ಟರ್ ವಿಶ್ವಜೀತ್ ತೋಮರ್ ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಪ್ರತಿಕ್ರಿಯಿಸಿದ್ದು, “ಲೋಹರ್ ಕುಟುಂಬಕ್ಕೆ ಟ್ರಾಲಿ ನಿರ್ಮಿಸಲು ಇತರ ಗುಂಪಿನಿಂದ ಸ್ವಲ್ಪ ಹಣವನ್ನು ನೀಡಲಾಗಿತ್ತು. ಆದರೆ ಅವರು ಟ್ರಾಲಿಯನ್ನು ತಯಾರಿಸಲಿಲ್ಲ ಅಥವಾ ಹಣವನ್ನು ಹಿಂದಿರುಗಿಸಲಿಲ್ಲ, ಅದು ಘಟನೆಯನ್ನು ಪ್ರಚೋದಿಸಿದಂತೆ ತೋರುತ್ತದೆ. ಎರಡು ಗುಂಪುಗಳು ಜಗಳವಾಡಿಕೊಂಡಿವೆ. ಹಳ್ಳಿಯ ಬಳಿ ವಾಸಿಸುತ್ತಿರುವ ವಿಕಾಸ್ ಪಟೇಲ್ ದೂರಿನ ಆಧಾರದ ಮೇಲೆ ಪ್ರತಿದೂರು ದಾಖಲಿಸಲಾಗಿದೆ” ಎಂದಿದ್ದಾರೆ.

“ಈ ಹಲ್ಲೆಕೋರರು ಆರ್‌ಎಸ್‌ಎಸ್‌ಗೆ ಸೇರಿದವರು ಮತ್ತು ಒಂದು ತಿಂಗಳ ಹಿಂದೆ ಗ್ರಾಮವನ್ನು ತೊರೆಯುವಂತೆ ಬೆದರಿಕೆ ಹಾಕಿದ್ದಾರೆ” ಎಂದು ಕುಟುಂಬದ ಆರೋಪದ ಬಗ್ಗೆ ಕೇಳಿದಾಗ ಇನ್‌ಸ್ಪೆಕ್ಟರ್‌ ತೋಮರ, “ಅಂತಹ ಯಾವುದೇ ಮಾಹಿತಿ ನಮಗೆ ದೊರೆತ್ತಿಲ್ಲ. ಎಫ್‌ಐಆರ್ ನೋಂದಾಯಿಸುವಾಗ ಈ ಮಾಹಿತಿಯನ್ನು ನಮಗೆ ನೀಡಲಾಗಿಲ್ಲ. ನಮಗೆ ಅದರ ಅರಿವಿಲ್ಲ” ಎಂದಿದ್ದಾರೆ.

ಇದನ್ನೂ ಓದಿರಿ: ಮುಸ್ಲಿಂ ಮತಗಳು ಬೇಕಾಗಿಲ್ಲ; ಅದಕ್ಕಾಗಿ ಅವರ ಬಳಿ ಹೋಗುವುದಿಲ್ಲ: ಅಸ್ಸಾಂ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮುಸ್ಲಿಂ ಕುಟುಂಬದ ಮೇಲೆ ಹಲ್ಲೆ ಮಾಡಿ, ಅವರನ್ನು ಊರು ಬಿಡುವಂತೆ ಬೆದರಿಕೆ ಹಾಕಿರುವ ಈ ದುರ್ಘಟನೆ ಖಂಡನಾರ್ಹ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...