Homeಮುಖಪುಟ‘ನೂರು ಜನರ ಗುಂಪು ಹಲ್ಲೆ ಮಾಡಿತು; ಜೈ ಶ್ರೀರಾಮ್‌ ಎಂದಿತು, ಊರು ಬಿಡುವಂತೆ ಸೂಚಿಸಿತು’

‘ನೂರು ಜನರ ಗುಂಪು ಹಲ್ಲೆ ಮಾಡಿತು; ಜೈ ಶ್ರೀರಾಮ್‌ ಎಂದಿತು, ಊರು ಬಿಡುವಂತೆ ಸೂಚಿಸಿತು’

- Advertisement -
- Advertisement -

“ನೂರು ಜನರ ಗುಂಪು ಹಲ್ಲೆ ಮಾಡಿತು, ಜೈ ಶ್ರೀರಾಮ್‌ ಎಂದಿತು, ಊರು ಬಿಡುವಂತೆ ಎಚ್ಚರಿಸಿತು” – ಹೀಗೆ ಮಧ್ಯಪ್ರದೇಶದ ಮುಸ್ಲಿಂ ಕುಟುಂಬವೊಂದು ಆರೋಪಿಸಿದೆ.

ಮಧ್ಯಪ್ರದೇಶದ ಇಂದೋರ್‌ ಸಮೀಪದ ಕಂಪೆಲ್‌ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ವಾಸವಿರುವ ಏಳು ಜನರಿರುವ ಮುಸ್ಲಿಂ ಕುಟುಂಬದ ಮೇಲೆ ಶನಿವಾರ ರಾತ್ರಿ 8.30ರ ವೇಳೆಗೆ ಸುಮಾರು ನೂರು ಜನರಿದ್ದ ಕೇಸರಿಪಡೆ ಹಲ್ಲೆ ನಡೆಸಿದೆ. ಅಲ್ಲದೆ ಮನೆ ಖಾಲಿ ಮಾಡಿ, ಊರು ಬಿಡುವಂತೆ ಹಲ್ಲೆಕೋರ ಗುಂಪು ಮುಸ್ಲಿಂ ಕುಟುಂಬಕ್ಕೆ ಧಮ್ಕಿ ಹಾಕಿದೆ.

ಒಂದು ತಿಂಗಳ ಹಿಂದೆಯೇ ಊರು ಬಿಡುವಂತೆ ಈ ಹಲ್ಲೆಕೋರ ಗುಂಪು ಎಚ್ಚರಿಸಿತ್ತು. ಶನಿವಾರದೊಳಗೆ ಮನೆ ಖಾಲಿ ಮಾಡುವಂತೆ ಎಚ್ಚರಿಸಿತ್ತು. ಕುಟುಂಬ ಊರು ಬಿಟ್ಟು ಹೋಗಲಿಲ್ಲವೆಂದು ಶನಿವಾರ ದಾಳಿ ಮಾಡಿರುವ ಹಲ್ಲೆಕೋರರು, `ಜೈಶ್ರೀರಾಮ್‌’ ಎಂದು ಘೋಷಣೆ ಕೂಗಿದ್ದಾರೆ ಎಂದು ದಾಳಿಗೊಳಗಾದ ಕುಟುಂಬ ಆರೋಪಿಸಿದೆ. ಆದರೆ, “ಎರಡು ಗುಂಪುಗಳ ನಡುವೆ ಹಣದ ವಿಚಾರವಾಗಿ ಜಗಳವಾಗಿದೆ. ಎರಡು ಗುಂಪುಗಳಿಂದಲೂ ದೂರುಗಳು ಬಂದಿವೆ” ಎಂದು ಪೊಲೀಸರು ಹೇಳಿದ್ದಾರೆ.

ಈ ಕುಟುಂಬವು ಎರಡು ವರ್ಷಗಳ ಹಿಂದೆ ನೀಮಾರ್‌ನಿಂದ ಕಂಪೇಲ್‌ಗೆ ಬಂದು ನೆಲೆಸಿತ್ತು. ಜೀವನೋಪಾಯಕ್ಕಾಗಿ ಟ್ರಾಲಿಗಳು ಹಾಗೂ ಇತರ ಕೃಷಿ ಉಪಕರಣಗಳನ್ನು ತಯಾರಿಸಿ ಮಾರುತ್ತಿತ್ತು ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಇದನ್ನೂ ಓದಿರಿ: ಮೋರಲ್‌ ಪೊಲೀಸಿಂಗ್‌‌: ಕರಾವಳಿ ಕರ್ನಾಟಕದಲ್ಲಿ ಆಗುತ್ತಿರುವ ನಷ್ಟವೆಷ್ಟು?

ಹಲ್ಲೆಗೊಳಗಾದ 46 ವರ್ಷದ ಫಾರುಕ್‌ ಲೋಹರ್‌ ಅವರ ಪುತ್ರ ಶಾರುಖ್‌ ಲೋಹರ್‌‌ ಅವರು ‘ದಿ ಇಂಡಿಯನ್‌ ಎಕ್ಸ್‌ಪ್ರೆಸ್‌ಗೆ ಪ್ರತಿಕ್ರಿಯಿಸಿದ್ದು, “ಅವರು ಒಳಗೆ ನುಗ್ಗಿ ರಾಡ್‌ಗಳನ್ನು ಬಳಸಿ ನಮ್ಮನ್ನು ಹೊಡೆಯಲು ಪ್ರಾರಂಭಿಸಿದರು. ಅವರು ನನ್ನ ತಂದೆಯನ್ನು ಪದೇ ಪದೇ ಹೊಡೆಯಲು ಪ್ರಾರಂಭಿಸಿದರು. ನನ್ನ ಚಿಕ್ಕಪ್ಪ ಮಧ್ಯಪ್ರವೇಶಿಸಿದಾಗ ಅವರನ್ನೂ ಹೊಡೆದರು. ‘ನಾವು ನಿಮಗೆ ಖಾಲಿ ಮಾಡುವಂತೆ ಹೇಳಿದ್ದೆವು, ಇಲ್ಲದಿದ್ದರೆ ಭೀಕರ ಪರಿಣಾಮಗಳನ್ನು ಎದುರಿಸಬೇಕೆಂದು ಎಚ್ಚರಿಸಿದ್ದೆವು’ ಎಂಬುದಾಗಿ ಹೇಳಿದರು” ಎಂದು ಶಾರುಖ್‌ ಆರೋಪಿಸಿದ್ದಾರೆ.

ಕುಟುಂಬವನ್ನು ನೋಡಲು ಬಂದಿದ್ದ ಶಾರುಖ್‌ ಅವರ ಸಹೋದರಿ ಫೌಸಿಯಾ ಕೂಡ ಘಟನೆ ವೇಳೆ ಸ್ಥಳದಲ್ಲಿದ್ದು, ಅವರು ಕೂಡ ಪತ್ರಿಕೆಯೊಂದಿಗೆ ಮಾತನಾಡಿದ್ದಾರೆ. “ಕಾರಿನಲ್ಲಿ ಬಂದ ಈ ಜನರ ಕೈಯಲ್ಲಿ ರಾಡುಗಳು ಇದ್ದವು. ಈ ಘಟನೆಯ ಚಿತ್ರೀಕರಣ ಮಾಡಲು ನಾನು ಮೊಬೈಲ್‌ ತೆಗೆದುಕೊಂಡಾಗ ನನ್ನ ಕೈ ಹಿಡಿದು ಎಳೆದು ಮೊಬೈಲ್‌ ಕಿತ್ತುಕೊಂಡು ಪುಡಿಪುಡಿ ಮಾಡಿದರು” ಎಂದು ಆಪಾದಿಸಿದ್ದಾರೆ.

ಸುಮಾರು 25 ನಿಮಿಷಗಳ ಕಾಲ ಘಟನೆ ನಡೆದಿದೆ. ನಂತರ ಕುಟುಂಬವು ಖುಡೆಲ್ ಪೊಲೀಸ್ ಠಾಣೆಗೆ ಧಾವಿಸಿದೆ, ಅಲ್ಲಿಂದ ಅವರನ್ನು ವೈದ್ಯಕೀಯ ಪರೀಕ್ಷೆಗಾಗಿ ಇಂದೋರ್‌ನ ಮಹಾರಾಜ ಯಶವಂತರಾವ್ ಆಸ್ಪತ್ರೆಗೆ ಕಳುಹಿಸಲಾಯಿತು. ನಂತರ ಅವರ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.

“ಕಳೆದ ತಿಂಗಳು ಅದೇ ಯುವಕರು ಬಂದು ಊರು ಬಿಟ್ಟು ಹೋಗುವಂತೆ ನಮಗೆ ಸೂಚಿಸಿದ್ದರು. ನಾವು ನಮ್ಮ ಮನೆಯ ಹತ್ತಿರ ನಿವೇಶನ ಖರೀದಿಸಲಿದ್ದೇವೆ ಎಂದು ಅವರಿಗೆ ತಿಳಿದಿತ್ತು. ಅವರು ಅದನ್ನು ಇಷ್ಟಪಡಲಿಲ್ಲ. ನಾವು ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರಿಂದ, ಮನೆಯ ಹತ್ತಿರದಲ್ಲಿ ಒಂದು ನಿವೇಶನ ಖರೀದಿಸಬೇಕೆಂದಿದ್ದೆವು. ಆದರೆ ಅವರ ಬೆದರಿಕೆಯ ನಂತರ, ನಾವು ಭೂ ಒಪ್ಪಂದವನ್ನು ರದ್ದುಗೊಳಿಸಿದೆವು. ಪ್ಲಾಟ್ ಅನ್ನು ಖರೀದಿಸಲಿಲ್ಲ. ಆದರೆ ಸರ್ಪಂಚ್ ಅವರು ಬಂದು -ಆ ಹುಡುಗರು ಕೇವಲ ಬಿಸಿ ರಕ್ತದವರು. ಚಿಂತೆ ಮಾಡಬೇಡಿ- ಎಂದು ಹೇಳಿದ್ದರಿಂದ ನಾವು ಮನೆ ಖಾಲಿ ಮಾಡಲಿಲ್ಲ” ಎಂದು ಶಾರುಖ್ ಹೇಳಿಕೆ ನೀಡಿದ್ದಾರೆ.

ಲೋಹರ್‌ ಕುಟುಂಬದ ದೂರಿನ ಅನ್ವಯ ಖುದೀಲ್‌‌ ಪೊಲೀಸರು 9 ಮಂದಿಯ ಮೇಲೆ ಎಫ್‌ಐಆರ್‌ ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್‌ 323, 506 , 29, 427, 147, 148 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸಬ್ ಇನ್ಸ್‌ಪೆಕ್ಟರ್ ವಿಶ್ವಜೀತ್ ತೋಮರ್ ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಪ್ರತಿಕ್ರಿಯಿಸಿದ್ದು, “ಲೋಹರ್ ಕುಟುಂಬಕ್ಕೆ ಟ್ರಾಲಿ ನಿರ್ಮಿಸಲು ಇತರ ಗುಂಪಿನಿಂದ ಸ್ವಲ್ಪ ಹಣವನ್ನು ನೀಡಲಾಗಿತ್ತು. ಆದರೆ ಅವರು ಟ್ರಾಲಿಯನ್ನು ತಯಾರಿಸಲಿಲ್ಲ ಅಥವಾ ಹಣವನ್ನು ಹಿಂದಿರುಗಿಸಲಿಲ್ಲ, ಅದು ಘಟನೆಯನ್ನು ಪ್ರಚೋದಿಸಿದಂತೆ ತೋರುತ್ತದೆ. ಎರಡು ಗುಂಪುಗಳು ಜಗಳವಾಡಿಕೊಂಡಿವೆ. ಹಳ್ಳಿಯ ಬಳಿ ವಾಸಿಸುತ್ತಿರುವ ವಿಕಾಸ್ ಪಟೇಲ್ ದೂರಿನ ಆಧಾರದ ಮೇಲೆ ಪ್ರತಿದೂರು ದಾಖಲಿಸಲಾಗಿದೆ” ಎಂದಿದ್ದಾರೆ.

“ಈ ಹಲ್ಲೆಕೋರರು ಆರ್‌ಎಸ್‌ಎಸ್‌ಗೆ ಸೇರಿದವರು ಮತ್ತು ಒಂದು ತಿಂಗಳ ಹಿಂದೆ ಗ್ರಾಮವನ್ನು ತೊರೆಯುವಂತೆ ಬೆದರಿಕೆ ಹಾಕಿದ್ದಾರೆ” ಎಂದು ಕುಟುಂಬದ ಆರೋಪದ ಬಗ್ಗೆ ಕೇಳಿದಾಗ ಇನ್‌ಸ್ಪೆಕ್ಟರ್‌ ತೋಮರ, “ಅಂತಹ ಯಾವುದೇ ಮಾಹಿತಿ ನಮಗೆ ದೊರೆತ್ತಿಲ್ಲ. ಎಫ್‌ಐಆರ್ ನೋಂದಾಯಿಸುವಾಗ ಈ ಮಾಹಿತಿಯನ್ನು ನಮಗೆ ನೀಡಲಾಗಿಲ್ಲ. ನಮಗೆ ಅದರ ಅರಿವಿಲ್ಲ” ಎಂದಿದ್ದಾರೆ.

ಇದನ್ನೂ ಓದಿರಿ: ಮುಸ್ಲಿಂ ಮತಗಳು ಬೇಕಾಗಿಲ್ಲ; ಅದಕ್ಕಾಗಿ ಅವರ ಬಳಿ ಹೋಗುವುದಿಲ್ಲ: ಅಸ್ಸಾಂ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮುಸ್ಲಿಂ ಕುಟುಂಬದ ಮೇಲೆ ಹಲ್ಲೆ ಮಾಡಿ, ಅವರನ್ನು ಊರು ಬಿಡುವಂತೆ ಬೆದರಿಕೆ ಹಾಕಿರುವ ಈ ದುರ್ಘಟನೆ ಖಂಡನಾರ್ಹ.

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...