Homeಮುಖಪುಟ‘ನೂರು ಜನರ ಗುಂಪು ಹಲ್ಲೆ ಮಾಡಿತು; ಜೈ ಶ್ರೀರಾಮ್‌ ಎಂದಿತು, ಊರು ಬಿಡುವಂತೆ ಸೂಚಿಸಿತು’

‘ನೂರು ಜನರ ಗುಂಪು ಹಲ್ಲೆ ಮಾಡಿತು; ಜೈ ಶ್ರೀರಾಮ್‌ ಎಂದಿತು, ಊರು ಬಿಡುವಂತೆ ಸೂಚಿಸಿತು’

- Advertisement -
- Advertisement -

“ನೂರು ಜನರ ಗುಂಪು ಹಲ್ಲೆ ಮಾಡಿತು, ಜೈ ಶ್ರೀರಾಮ್‌ ಎಂದಿತು, ಊರು ಬಿಡುವಂತೆ ಎಚ್ಚರಿಸಿತು” – ಹೀಗೆ ಮಧ್ಯಪ್ರದೇಶದ ಮುಸ್ಲಿಂ ಕುಟುಂಬವೊಂದು ಆರೋಪಿಸಿದೆ.

ಮಧ್ಯಪ್ರದೇಶದ ಇಂದೋರ್‌ ಸಮೀಪದ ಕಂಪೆಲ್‌ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ವಾಸವಿರುವ ಏಳು ಜನರಿರುವ ಮುಸ್ಲಿಂ ಕುಟುಂಬದ ಮೇಲೆ ಶನಿವಾರ ರಾತ್ರಿ 8.30ರ ವೇಳೆಗೆ ಸುಮಾರು ನೂರು ಜನರಿದ್ದ ಕೇಸರಿಪಡೆ ಹಲ್ಲೆ ನಡೆಸಿದೆ. ಅಲ್ಲದೆ ಮನೆ ಖಾಲಿ ಮಾಡಿ, ಊರು ಬಿಡುವಂತೆ ಹಲ್ಲೆಕೋರ ಗುಂಪು ಮುಸ್ಲಿಂ ಕುಟುಂಬಕ್ಕೆ ಧಮ್ಕಿ ಹಾಕಿದೆ.

ಒಂದು ತಿಂಗಳ ಹಿಂದೆಯೇ ಊರು ಬಿಡುವಂತೆ ಈ ಹಲ್ಲೆಕೋರ ಗುಂಪು ಎಚ್ಚರಿಸಿತ್ತು. ಶನಿವಾರದೊಳಗೆ ಮನೆ ಖಾಲಿ ಮಾಡುವಂತೆ ಎಚ್ಚರಿಸಿತ್ತು. ಕುಟುಂಬ ಊರು ಬಿಟ್ಟು ಹೋಗಲಿಲ್ಲವೆಂದು ಶನಿವಾರ ದಾಳಿ ಮಾಡಿರುವ ಹಲ್ಲೆಕೋರರು, `ಜೈಶ್ರೀರಾಮ್‌’ ಎಂದು ಘೋಷಣೆ ಕೂಗಿದ್ದಾರೆ ಎಂದು ದಾಳಿಗೊಳಗಾದ ಕುಟುಂಬ ಆರೋಪಿಸಿದೆ. ಆದರೆ, “ಎರಡು ಗುಂಪುಗಳ ನಡುವೆ ಹಣದ ವಿಚಾರವಾಗಿ ಜಗಳವಾಗಿದೆ. ಎರಡು ಗುಂಪುಗಳಿಂದಲೂ ದೂರುಗಳು ಬಂದಿವೆ” ಎಂದು ಪೊಲೀಸರು ಹೇಳಿದ್ದಾರೆ.

ಈ ಕುಟುಂಬವು ಎರಡು ವರ್ಷಗಳ ಹಿಂದೆ ನೀಮಾರ್‌ನಿಂದ ಕಂಪೇಲ್‌ಗೆ ಬಂದು ನೆಲೆಸಿತ್ತು. ಜೀವನೋಪಾಯಕ್ಕಾಗಿ ಟ್ರಾಲಿಗಳು ಹಾಗೂ ಇತರ ಕೃಷಿ ಉಪಕರಣಗಳನ್ನು ತಯಾರಿಸಿ ಮಾರುತ್ತಿತ್ತು ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಇದನ್ನೂ ಓದಿರಿ: ಮೋರಲ್‌ ಪೊಲೀಸಿಂಗ್‌‌: ಕರಾವಳಿ ಕರ್ನಾಟಕದಲ್ಲಿ ಆಗುತ್ತಿರುವ ನಷ್ಟವೆಷ್ಟು?

ಹಲ್ಲೆಗೊಳಗಾದ 46 ವರ್ಷದ ಫಾರುಕ್‌ ಲೋಹರ್‌ ಅವರ ಪುತ್ರ ಶಾರುಖ್‌ ಲೋಹರ್‌‌ ಅವರು ‘ದಿ ಇಂಡಿಯನ್‌ ಎಕ್ಸ್‌ಪ್ರೆಸ್‌ಗೆ ಪ್ರತಿಕ್ರಿಯಿಸಿದ್ದು, “ಅವರು ಒಳಗೆ ನುಗ್ಗಿ ರಾಡ್‌ಗಳನ್ನು ಬಳಸಿ ನಮ್ಮನ್ನು ಹೊಡೆಯಲು ಪ್ರಾರಂಭಿಸಿದರು. ಅವರು ನನ್ನ ತಂದೆಯನ್ನು ಪದೇ ಪದೇ ಹೊಡೆಯಲು ಪ್ರಾರಂಭಿಸಿದರು. ನನ್ನ ಚಿಕ್ಕಪ್ಪ ಮಧ್ಯಪ್ರವೇಶಿಸಿದಾಗ ಅವರನ್ನೂ ಹೊಡೆದರು. ‘ನಾವು ನಿಮಗೆ ಖಾಲಿ ಮಾಡುವಂತೆ ಹೇಳಿದ್ದೆವು, ಇಲ್ಲದಿದ್ದರೆ ಭೀಕರ ಪರಿಣಾಮಗಳನ್ನು ಎದುರಿಸಬೇಕೆಂದು ಎಚ್ಚರಿಸಿದ್ದೆವು’ ಎಂಬುದಾಗಿ ಹೇಳಿದರು” ಎಂದು ಶಾರುಖ್‌ ಆರೋಪಿಸಿದ್ದಾರೆ.

ಕುಟುಂಬವನ್ನು ನೋಡಲು ಬಂದಿದ್ದ ಶಾರುಖ್‌ ಅವರ ಸಹೋದರಿ ಫೌಸಿಯಾ ಕೂಡ ಘಟನೆ ವೇಳೆ ಸ್ಥಳದಲ್ಲಿದ್ದು, ಅವರು ಕೂಡ ಪತ್ರಿಕೆಯೊಂದಿಗೆ ಮಾತನಾಡಿದ್ದಾರೆ. “ಕಾರಿನಲ್ಲಿ ಬಂದ ಈ ಜನರ ಕೈಯಲ್ಲಿ ರಾಡುಗಳು ಇದ್ದವು. ಈ ಘಟನೆಯ ಚಿತ್ರೀಕರಣ ಮಾಡಲು ನಾನು ಮೊಬೈಲ್‌ ತೆಗೆದುಕೊಂಡಾಗ ನನ್ನ ಕೈ ಹಿಡಿದು ಎಳೆದು ಮೊಬೈಲ್‌ ಕಿತ್ತುಕೊಂಡು ಪುಡಿಪುಡಿ ಮಾಡಿದರು” ಎಂದು ಆಪಾದಿಸಿದ್ದಾರೆ.

ಸುಮಾರು 25 ನಿಮಿಷಗಳ ಕಾಲ ಘಟನೆ ನಡೆದಿದೆ. ನಂತರ ಕುಟುಂಬವು ಖುಡೆಲ್ ಪೊಲೀಸ್ ಠಾಣೆಗೆ ಧಾವಿಸಿದೆ, ಅಲ್ಲಿಂದ ಅವರನ್ನು ವೈದ್ಯಕೀಯ ಪರೀಕ್ಷೆಗಾಗಿ ಇಂದೋರ್‌ನ ಮಹಾರಾಜ ಯಶವಂತರಾವ್ ಆಸ್ಪತ್ರೆಗೆ ಕಳುಹಿಸಲಾಯಿತು. ನಂತರ ಅವರ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.

“ಕಳೆದ ತಿಂಗಳು ಅದೇ ಯುವಕರು ಬಂದು ಊರು ಬಿಟ್ಟು ಹೋಗುವಂತೆ ನಮಗೆ ಸೂಚಿಸಿದ್ದರು. ನಾವು ನಮ್ಮ ಮನೆಯ ಹತ್ತಿರ ನಿವೇಶನ ಖರೀದಿಸಲಿದ್ದೇವೆ ಎಂದು ಅವರಿಗೆ ತಿಳಿದಿತ್ತು. ಅವರು ಅದನ್ನು ಇಷ್ಟಪಡಲಿಲ್ಲ. ನಾವು ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರಿಂದ, ಮನೆಯ ಹತ್ತಿರದಲ್ಲಿ ಒಂದು ನಿವೇಶನ ಖರೀದಿಸಬೇಕೆಂದಿದ್ದೆವು. ಆದರೆ ಅವರ ಬೆದರಿಕೆಯ ನಂತರ, ನಾವು ಭೂ ಒಪ್ಪಂದವನ್ನು ರದ್ದುಗೊಳಿಸಿದೆವು. ಪ್ಲಾಟ್ ಅನ್ನು ಖರೀದಿಸಲಿಲ್ಲ. ಆದರೆ ಸರ್ಪಂಚ್ ಅವರು ಬಂದು -ಆ ಹುಡುಗರು ಕೇವಲ ಬಿಸಿ ರಕ್ತದವರು. ಚಿಂತೆ ಮಾಡಬೇಡಿ- ಎಂದು ಹೇಳಿದ್ದರಿಂದ ನಾವು ಮನೆ ಖಾಲಿ ಮಾಡಲಿಲ್ಲ” ಎಂದು ಶಾರುಖ್ ಹೇಳಿಕೆ ನೀಡಿದ್ದಾರೆ.

ಲೋಹರ್‌ ಕುಟುಂಬದ ದೂರಿನ ಅನ್ವಯ ಖುದೀಲ್‌‌ ಪೊಲೀಸರು 9 ಮಂದಿಯ ಮೇಲೆ ಎಫ್‌ಐಆರ್‌ ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್‌ 323, 506 , 29, 427, 147, 148 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸಬ್ ಇನ್ಸ್‌ಪೆಕ್ಟರ್ ವಿಶ್ವಜೀತ್ ತೋಮರ್ ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಪ್ರತಿಕ್ರಿಯಿಸಿದ್ದು, “ಲೋಹರ್ ಕುಟುಂಬಕ್ಕೆ ಟ್ರಾಲಿ ನಿರ್ಮಿಸಲು ಇತರ ಗುಂಪಿನಿಂದ ಸ್ವಲ್ಪ ಹಣವನ್ನು ನೀಡಲಾಗಿತ್ತು. ಆದರೆ ಅವರು ಟ್ರಾಲಿಯನ್ನು ತಯಾರಿಸಲಿಲ್ಲ ಅಥವಾ ಹಣವನ್ನು ಹಿಂದಿರುಗಿಸಲಿಲ್ಲ, ಅದು ಘಟನೆಯನ್ನು ಪ್ರಚೋದಿಸಿದಂತೆ ತೋರುತ್ತದೆ. ಎರಡು ಗುಂಪುಗಳು ಜಗಳವಾಡಿಕೊಂಡಿವೆ. ಹಳ್ಳಿಯ ಬಳಿ ವಾಸಿಸುತ್ತಿರುವ ವಿಕಾಸ್ ಪಟೇಲ್ ದೂರಿನ ಆಧಾರದ ಮೇಲೆ ಪ್ರತಿದೂರು ದಾಖಲಿಸಲಾಗಿದೆ” ಎಂದಿದ್ದಾರೆ.

“ಈ ಹಲ್ಲೆಕೋರರು ಆರ್‌ಎಸ್‌ಎಸ್‌ಗೆ ಸೇರಿದವರು ಮತ್ತು ಒಂದು ತಿಂಗಳ ಹಿಂದೆ ಗ್ರಾಮವನ್ನು ತೊರೆಯುವಂತೆ ಬೆದರಿಕೆ ಹಾಕಿದ್ದಾರೆ” ಎಂದು ಕುಟುಂಬದ ಆರೋಪದ ಬಗ್ಗೆ ಕೇಳಿದಾಗ ಇನ್‌ಸ್ಪೆಕ್ಟರ್‌ ತೋಮರ, “ಅಂತಹ ಯಾವುದೇ ಮಾಹಿತಿ ನಮಗೆ ದೊರೆತ್ತಿಲ್ಲ. ಎಫ್‌ಐಆರ್ ನೋಂದಾಯಿಸುವಾಗ ಈ ಮಾಹಿತಿಯನ್ನು ನಮಗೆ ನೀಡಲಾಗಿಲ್ಲ. ನಮಗೆ ಅದರ ಅರಿವಿಲ್ಲ” ಎಂದಿದ್ದಾರೆ.

ಇದನ್ನೂ ಓದಿರಿ: ಮುಸ್ಲಿಂ ಮತಗಳು ಬೇಕಾಗಿಲ್ಲ; ಅದಕ್ಕಾಗಿ ಅವರ ಬಳಿ ಹೋಗುವುದಿಲ್ಲ: ಅಸ್ಸಾಂ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮುಸ್ಲಿಂ ಕುಟುಂಬದ ಮೇಲೆ ಹಲ್ಲೆ ಮಾಡಿ, ಅವರನ್ನು ಊರು ಬಿಡುವಂತೆ ಬೆದರಿಕೆ ಹಾಕಿರುವ ಈ ದುರ್ಘಟನೆ ಖಂಡನಾರ್ಹ.

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...