Homeಮುಖಪುಟ‘ನೂರು ಜನರ ಗುಂಪು ಹಲ್ಲೆ ಮಾಡಿತು; ಜೈ ಶ್ರೀರಾಮ್‌ ಎಂದಿತು, ಊರು ಬಿಡುವಂತೆ ಸೂಚಿಸಿತು’

‘ನೂರು ಜನರ ಗುಂಪು ಹಲ್ಲೆ ಮಾಡಿತು; ಜೈ ಶ್ರೀರಾಮ್‌ ಎಂದಿತು, ಊರು ಬಿಡುವಂತೆ ಸೂಚಿಸಿತು’

- Advertisement -
- Advertisement -

“ನೂರು ಜನರ ಗುಂಪು ಹಲ್ಲೆ ಮಾಡಿತು, ಜೈ ಶ್ರೀರಾಮ್‌ ಎಂದಿತು, ಊರು ಬಿಡುವಂತೆ ಎಚ್ಚರಿಸಿತು” – ಹೀಗೆ ಮಧ್ಯಪ್ರದೇಶದ ಮುಸ್ಲಿಂ ಕುಟುಂಬವೊಂದು ಆರೋಪಿಸಿದೆ.

ಮಧ್ಯಪ್ರದೇಶದ ಇಂದೋರ್‌ ಸಮೀಪದ ಕಂಪೆಲ್‌ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ವಾಸವಿರುವ ಏಳು ಜನರಿರುವ ಮುಸ್ಲಿಂ ಕುಟುಂಬದ ಮೇಲೆ ಶನಿವಾರ ರಾತ್ರಿ 8.30ರ ವೇಳೆಗೆ ಸುಮಾರು ನೂರು ಜನರಿದ್ದ ಕೇಸರಿಪಡೆ ಹಲ್ಲೆ ನಡೆಸಿದೆ. ಅಲ್ಲದೆ ಮನೆ ಖಾಲಿ ಮಾಡಿ, ಊರು ಬಿಡುವಂತೆ ಹಲ್ಲೆಕೋರ ಗುಂಪು ಮುಸ್ಲಿಂ ಕುಟುಂಬಕ್ಕೆ ಧಮ್ಕಿ ಹಾಕಿದೆ.

ಒಂದು ತಿಂಗಳ ಹಿಂದೆಯೇ ಊರು ಬಿಡುವಂತೆ ಈ ಹಲ್ಲೆಕೋರ ಗುಂಪು ಎಚ್ಚರಿಸಿತ್ತು. ಶನಿವಾರದೊಳಗೆ ಮನೆ ಖಾಲಿ ಮಾಡುವಂತೆ ಎಚ್ಚರಿಸಿತ್ತು. ಕುಟುಂಬ ಊರು ಬಿಟ್ಟು ಹೋಗಲಿಲ್ಲವೆಂದು ಶನಿವಾರ ದಾಳಿ ಮಾಡಿರುವ ಹಲ್ಲೆಕೋರರು, `ಜೈಶ್ರೀರಾಮ್‌’ ಎಂದು ಘೋಷಣೆ ಕೂಗಿದ್ದಾರೆ ಎಂದು ದಾಳಿಗೊಳಗಾದ ಕುಟುಂಬ ಆರೋಪಿಸಿದೆ. ಆದರೆ, “ಎರಡು ಗುಂಪುಗಳ ನಡುವೆ ಹಣದ ವಿಚಾರವಾಗಿ ಜಗಳವಾಗಿದೆ. ಎರಡು ಗುಂಪುಗಳಿಂದಲೂ ದೂರುಗಳು ಬಂದಿವೆ” ಎಂದು ಪೊಲೀಸರು ಹೇಳಿದ್ದಾರೆ.

ಈ ಕುಟುಂಬವು ಎರಡು ವರ್ಷಗಳ ಹಿಂದೆ ನೀಮಾರ್‌ನಿಂದ ಕಂಪೇಲ್‌ಗೆ ಬಂದು ನೆಲೆಸಿತ್ತು. ಜೀವನೋಪಾಯಕ್ಕಾಗಿ ಟ್ರಾಲಿಗಳು ಹಾಗೂ ಇತರ ಕೃಷಿ ಉಪಕರಣಗಳನ್ನು ತಯಾರಿಸಿ ಮಾರುತ್ತಿತ್ತು ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಇದನ್ನೂ ಓದಿರಿ: ಮೋರಲ್‌ ಪೊಲೀಸಿಂಗ್‌‌: ಕರಾವಳಿ ಕರ್ನಾಟಕದಲ್ಲಿ ಆಗುತ್ತಿರುವ ನಷ್ಟವೆಷ್ಟು?

ಹಲ್ಲೆಗೊಳಗಾದ 46 ವರ್ಷದ ಫಾರುಕ್‌ ಲೋಹರ್‌ ಅವರ ಪುತ್ರ ಶಾರುಖ್‌ ಲೋಹರ್‌‌ ಅವರು ‘ದಿ ಇಂಡಿಯನ್‌ ಎಕ್ಸ್‌ಪ್ರೆಸ್‌ಗೆ ಪ್ರತಿಕ್ರಿಯಿಸಿದ್ದು, “ಅವರು ಒಳಗೆ ನುಗ್ಗಿ ರಾಡ್‌ಗಳನ್ನು ಬಳಸಿ ನಮ್ಮನ್ನು ಹೊಡೆಯಲು ಪ್ರಾರಂಭಿಸಿದರು. ಅವರು ನನ್ನ ತಂದೆಯನ್ನು ಪದೇ ಪದೇ ಹೊಡೆಯಲು ಪ್ರಾರಂಭಿಸಿದರು. ನನ್ನ ಚಿಕ್ಕಪ್ಪ ಮಧ್ಯಪ್ರವೇಶಿಸಿದಾಗ ಅವರನ್ನೂ ಹೊಡೆದರು. ‘ನಾವು ನಿಮಗೆ ಖಾಲಿ ಮಾಡುವಂತೆ ಹೇಳಿದ್ದೆವು, ಇಲ್ಲದಿದ್ದರೆ ಭೀಕರ ಪರಿಣಾಮಗಳನ್ನು ಎದುರಿಸಬೇಕೆಂದು ಎಚ್ಚರಿಸಿದ್ದೆವು’ ಎಂಬುದಾಗಿ ಹೇಳಿದರು” ಎಂದು ಶಾರುಖ್‌ ಆರೋಪಿಸಿದ್ದಾರೆ.

ಕುಟುಂಬವನ್ನು ನೋಡಲು ಬಂದಿದ್ದ ಶಾರುಖ್‌ ಅವರ ಸಹೋದರಿ ಫೌಸಿಯಾ ಕೂಡ ಘಟನೆ ವೇಳೆ ಸ್ಥಳದಲ್ಲಿದ್ದು, ಅವರು ಕೂಡ ಪತ್ರಿಕೆಯೊಂದಿಗೆ ಮಾತನಾಡಿದ್ದಾರೆ. “ಕಾರಿನಲ್ಲಿ ಬಂದ ಈ ಜನರ ಕೈಯಲ್ಲಿ ರಾಡುಗಳು ಇದ್ದವು. ಈ ಘಟನೆಯ ಚಿತ್ರೀಕರಣ ಮಾಡಲು ನಾನು ಮೊಬೈಲ್‌ ತೆಗೆದುಕೊಂಡಾಗ ನನ್ನ ಕೈ ಹಿಡಿದು ಎಳೆದು ಮೊಬೈಲ್‌ ಕಿತ್ತುಕೊಂಡು ಪುಡಿಪುಡಿ ಮಾಡಿದರು” ಎಂದು ಆಪಾದಿಸಿದ್ದಾರೆ.

ಸುಮಾರು 25 ನಿಮಿಷಗಳ ಕಾಲ ಘಟನೆ ನಡೆದಿದೆ. ನಂತರ ಕುಟುಂಬವು ಖುಡೆಲ್ ಪೊಲೀಸ್ ಠಾಣೆಗೆ ಧಾವಿಸಿದೆ, ಅಲ್ಲಿಂದ ಅವರನ್ನು ವೈದ್ಯಕೀಯ ಪರೀಕ್ಷೆಗಾಗಿ ಇಂದೋರ್‌ನ ಮಹಾರಾಜ ಯಶವಂತರಾವ್ ಆಸ್ಪತ್ರೆಗೆ ಕಳುಹಿಸಲಾಯಿತು. ನಂತರ ಅವರ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.

“ಕಳೆದ ತಿಂಗಳು ಅದೇ ಯುವಕರು ಬಂದು ಊರು ಬಿಟ್ಟು ಹೋಗುವಂತೆ ನಮಗೆ ಸೂಚಿಸಿದ್ದರು. ನಾವು ನಮ್ಮ ಮನೆಯ ಹತ್ತಿರ ನಿವೇಶನ ಖರೀದಿಸಲಿದ್ದೇವೆ ಎಂದು ಅವರಿಗೆ ತಿಳಿದಿತ್ತು. ಅವರು ಅದನ್ನು ಇಷ್ಟಪಡಲಿಲ್ಲ. ನಾವು ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರಿಂದ, ಮನೆಯ ಹತ್ತಿರದಲ್ಲಿ ಒಂದು ನಿವೇಶನ ಖರೀದಿಸಬೇಕೆಂದಿದ್ದೆವು. ಆದರೆ ಅವರ ಬೆದರಿಕೆಯ ನಂತರ, ನಾವು ಭೂ ಒಪ್ಪಂದವನ್ನು ರದ್ದುಗೊಳಿಸಿದೆವು. ಪ್ಲಾಟ್ ಅನ್ನು ಖರೀದಿಸಲಿಲ್ಲ. ಆದರೆ ಸರ್ಪಂಚ್ ಅವರು ಬಂದು -ಆ ಹುಡುಗರು ಕೇವಲ ಬಿಸಿ ರಕ್ತದವರು. ಚಿಂತೆ ಮಾಡಬೇಡಿ- ಎಂದು ಹೇಳಿದ್ದರಿಂದ ನಾವು ಮನೆ ಖಾಲಿ ಮಾಡಲಿಲ್ಲ” ಎಂದು ಶಾರುಖ್ ಹೇಳಿಕೆ ನೀಡಿದ್ದಾರೆ.

ಲೋಹರ್‌ ಕುಟುಂಬದ ದೂರಿನ ಅನ್ವಯ ಖುದೀಲ್‌‌ ಪೊಲೀಸರು 9 ಮಂದಿಯ ಮೇಲೆ ಎಫ್‌ಐಆರ್‌ ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್‌ 323, 506 , 29, 427, 147, 148 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸಬ್ ಇನ್ಸ್‌ಪೆಕ್ಟರ್ ವಿಶ್ವಜೀತ್ ತೋಮರ್ ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಪ್ರತಿಕ್ರಿಯಿಸಿದ್ದು, “ಲೋಹರ್ ಕುಟುಂಬಕ್ಕೆ ಟ್ರಾಲಿ ನಿರ್ಮಿಸಲು ಇತರ ಗುಂಪಿನಿಂದ ಸ್ವಲ್ಪ ಹಣವನ್ನು ನೀಡಲಾಗಿತ್ತು. ಆದರೆ ಅವರು ಟ್ರಾಲಿಯನ್ನು ತಯಾರಿಸಲಿಲ್ಲ ಅಥವಾ ಹಣವನ್ನು ಹಿಂದಿರುಗಿಸಲಿಲ್ಲ, ಅದು ಘಟನೆಯನ್ನು ಪ್ರಚೋದಿಸಿದಂತೆ ತೋರುತ್ತದೆ. ಎರಡು ಗುಂಪುಗಳು ಜಗಳವಾಡಿಕೊಂಡಿವೆ. ಹಳ್ಳಿಯ ಬಳಿ ವಾಸಿಸುತ್ತಿರುವ ವಿಕಾಸ್ ಪಟೇಲ್ ದೂರಿನ ಆಧಾರದ ಮೇಲೆ ಪ್ರತಿದೂರು ದಾಖಲಿಸಲಾಗಿದೆ” ಎಂದಿದ್ದಾರೆ.

“ಈ ಹಲ್ಲೆಕೋರರು ಆರ್‌ಎಸ್‌ಎಸ್‌ಗೆ ಸೇರಿದವರು ಮತ್ತು ಒಂದು ತಿಂಗಳ ಹಿಂದೆ ಗ್ರಾಮವನ್ನು ತೊರೆಯುವಂತೆ ಬೆದರಿಕೆ ಹಾಕಿದ್ದಾರೆ” ಎಂದು ಕುಟುಂಬದ ಆರೋಪದ ಬಗ್ಗೆ ಕೇಳಿದಾಗ ಇನ್‌ಸ್ಪೆಕ್ಟರ್‌ ತೋಮರ, “ಅಂತಹ ಯಾವುದೇ ಮಾಹಿತಿ ನಮಗೆ ದೊರೆತ್ತಿಲ್ಲ. ಎಫ್‌ಐಆರ್ ನೋಂದಾಯಿಸುವಾಗ ಈ ಮಾಹಿತಿಯನ್ನು ನಮಗೆ ನೀಡಲಾಗಿಲ್ಲ. ನಮಗೆ ಅದರ ಅರಿವಿಲ್ಲ” ಎಂದಿದ್ದಾರೆ.

ಇದನ್ನೂ ಓದಿರಿ: ಮುಸ್ಲಿಂ ಮತಗಳು ಬೇಕಾಗಿಲ್ಲ; ಅದಕ್ಕಾಗಿ ಅವರ ಬಳಿ ಹೋಗುವುದಿಲ್ಲ: ಅಸ್ಸಾಂ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮುಸ್ಲಿಂ ಕುಟುಂಬದ ಮೇಲೆ ಹಲ್ಲೆ ಮಾಡಿ, ಅವರನ್ನು ಊರು ಬಿಡುವಂತೆ ಬೆದರಿಕೆ ಹಾಕಿರುವ ಈ ದುರ್ಘಟನೆ ಖಂಡನಾರ್ಹ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...