Homeಮುಖಪುಟ‘ನೂರು ಜನರ ಗುಂಪು ಹಲ್ಲೆ ಮಾಡಿತು; ಜೈ ಶ್ರೀರಾಮ್‌ ಎಂದಿತು, ಊರು ಬಿಡುವಂತೆ ಸೂಚಿಸಿತು’

‘ನೂರು ಜನರ ಗುಂಪು ಹಲ್ಲೆ ಮಾಡಿತು; ಜೈ ಶ್ರೀರಾಮ್‌ ಎಂದಿತು, ಊರು ಬಿಡುವಂತೆ ಸೂಚಿಸಿತು’

- Advertisement -
- Advertisement -

“ನೂರು ಜನರ ಗುಂಪು ಹಲ್ಲೆ ಮಾಡಿತು, ಜೈ ಶ್ರೀರಾಮ್‌ ಎಂದಿತು, ಊರು ಬಿಡುವಂತೆ ಎಚ್ಚರಿಸಿತು” – ಹೀಗೆ ಮಧ್ಯಪ್ರದೇಶದ ಮುಸ್ಲಿಂ ಕುಟುಂಬವೊಂದು ಆರೋಪಿಸಿದೆ.

ಮಧ್ಯಪ್ರದೇಶದ ಇಂದೋರ್‌ ಸಮೀಪದ ಕಂಪೆಲ್‌ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ವಾಸವಿರುವ ಏಳು ಜನರಿರುವ ಮುಸ್ಲಿಂ ಕುಟುಂಬದ ಮೇಲೆ ಶನಿವಾರ ರಾತ್ರಿ 8.30ರ ವೇಳೆಗೆ ಸುಮಾರು ನೂರು ಜನರಿದ್ದ ಕೇಸರಿಪಡೆ ಹಲ್ಲೆ ನಡೆಸಿದೆ. ಅಲ್ಲದೆ ಮನೆ ಖಾಲಿ ಮಾಡಿ, ಊರು ಬಿಡುವಂತೆ ಹಲ್ಲೆಕೋರ ಗುಂಪು ಮುಸ್ಲಿಂ ಕುಟುಂಬಕ್ಕೆ ಧಮ್ಕಿ ಹಾಕಿದೆ.

ಒಂದು ತಿಂಗಳ ಹಿಂದೆಯೇ ಊರು ಬಿಡುವಂತೆ ಈ ಹಲ್ಲೆಕೋರ ಗುಂಪು ಎಚ್ಚರಿಸಿತ್ತು. ಶನಿವಾರದೊಳಗೆ ಮನೆ ಖಾಲಿ ಮಾಡುವಂತೆ ಎಚ್ಚರಿಸಿತ್ತು. ಕುಟುಂಬ ಊರು ಬಿಟ್ಟು ಹೋಗಲಿಲ್ಲವೆಂದು ಶನಿವಾರ ದಾಳಿ ಮಾಡಿರುವ ಹಲ್ಲೆಕೋರರು, `ಜೈಶ್ರೀರಾಮ್‌’ ಎಂದು ಘೋಷಣೆ ಕೂಗಿದ್ದಾರೆ ಎಂದು ದಾಳಿಗೊಳಗಾದ ಕುಟುಂಬ ಆರೋಪಿಸಿದೆ. ಆದರೆ, “ಎರಡು ಗುಂಪುಗಳ ನಡುವೆ ಹಣದ ವಿಚಾರವಾಗಿ ಜಗಳವಾಗಿದೆ. ಎರಡು ಗುಂಪುಗಳಿಂದಲೂ ದೂರುಗಳು ಬಂದಿವೆ” ಎಂದು ಪೊಲೀಸರು ಹೇಳಿದ್ದಾರೆ.

ಈ ಕುಟುಂಬವು ಎರಡು ವರ್ಷಗಳ ಹಿಂದೆ ನೀಮಾರ್‌ನಿಂದ ಕಂಪೇಲ್‌ಗೆ ಬಂದು ನೆಲೆಸಿತ್ತು. ಜೀವನೋಪಾಯಕ್ಕಾಗಿ ಟ್ರಾಲಿಗಳು ಹಾಗೂ ಇತರ ಕೃಷಿ ಉಪಕರಣಗಳನ್ನು ತಯಾರಿಸಿ ಮಾರುತ್ತಿತ್ತು ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಇದನ್ನೂ ಓದಿರಿ: ಮೋರಲ್‌ ಪೊಲೀಸಿಂಗ್‌‌: ಕರಾವಳಿ ಕರ್ನಾಟಕದಲ್ಲಿ ಆಗುತ್ತಿರುವ ನಷ್ಟವೆಷ್ಟು?

ಹಲ್ಲೆಗೊಳಗಾದ 46 ವರ್ಷದ ಫಾರುಕ್‌ ಲೋಹರ್‌ ಅವರ ಪುತ್ರ ಶಾರುಖ್‌ ಲೋಹರ್‌‌ ಅವರು ‘ದಿ ಇಂಡಿಯನ್‌ ಎಕ್ಸ್‌ಪ್ರೆಸ್‌ಗೆ ಪ್ರತಿಕ್ರಿಯಿಸಿದ್ದು, “ಅವರು ಒಳಗೆ ನುಗ್ಗಿ ರಾಡ್‌ಗಳನ್ನು ಬಳಸಿ ನಮ್ಮನ್ನು ಹೊಡೆಯಲು ಪ್ರಾರಂಭಿಸಿದರು. ಅವರು ನನ್ನ ತಂದೆಯನ್ನು ಪದೇ ಪದೇ ಹೊಡೆಯಲು ಪ್ರಾರಂಭಿಸಿದರು. ನನ್ನ ಚಿಕ್ಕಪ್ಪ ಮಧ್ಯಪ್ರವೇಶಿಸಿದಾಗ ಅವರನ್ನೂ ಹೊಡೆದರು. ‘ನಾವು ನಿಮಗೆ ಖಾಲಿ ಮಾಡುವಂತೆ ಹೇಳಿದ್ದೆವು, ಇಲ್ಲದಿದ್ದರೆ ಭೀಕರ ಪರಿಣಾಮಗಳನ್ನು ಎದುರಿಸಬೇಕೆಂದು ಎಚ್ಚರಿಸಿದ್ದೆವು’ ಎಂಬುದಾಗಿ ಹೇಳಿದರು” ಎಂದು ಶಾರುಖ್‌ ಆರೋಪಿಸಿದ್ದಾರೆ.

ಕುಟುಂಬವನ್ನು ನೋಡಲು ಬಂದಿದ್ದ ಶಾರುಖ್‌ ಅವರ ಸಹೋದರಿ ಫೌಸಿಯಾ ಕೂಡ ಘಟನೆ ವೇಳೆ ಸ್ಥಳದಲ್ಲಿದ್ದು, ಅವರು ಕೂಡ ಪತ್ರಿಕೆಯೊಂದಿಗೆ ಮಾತನಾಡಿದ್ದಾರೆ. “ಕಾರಿನಲ್ಲಿ ಬಂದ ಈ ಜನರ ಕೈಯಲ್ಲಿ ರಾಡುಗಳು ಇದ್ದವು. ಈ ಘಟನೆಯ ಚಿತ್ರೀಕರಣ ಮಾಡಲು ನಾನು ಮೊಬೈಲ್‌ ತೆಗೆದುಕೊಂಡಾಗ ನನ್ನ ಕೈ ಹಿಡಿದು ಎಳೆದು ಮೊಬೈಲ್‌ ಕಿತ್ತುಕೊಂಡು ಪುಡಿಪುಡಿ ಮಾಡಿದರು” ಎಂದು ಆಪಾದಿಸಿದ್ದಾರೆ.

ಸುಮಾರು 25 ನಿಮಿಷಗಳ ಕಾಲ ಘಟನೆ ನಡೆದಿದೆ. ನಂತರ ಕುಟುಂಬವು ಖುಡೆಲ್ ಪೊಲೀಸ್ ಠಾಣೆಗೆ ಧಾವಿಸಿದೆ, ಅಲ್ಲಿಂದ ಅವರನ್ನು ವೈದ್ಯಕೀಯ ಪರೀಕ್ಷೆಗಾಗಿ ಇಂದೋರ್‌ನ ಮಹಾರಾಜ ಯಶವಂತರಾವ್ ಆಸ್ಪತ್ರೆಗೆ ಕಳುಹಿಸಲಾಯಿತು. ನಂತರ ಅವರ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.

“ಕಳೆದ ತಿಂಗಳು ಅದೇ ಯುವಕರು ಬಂದು ಊರು ಬಿಟ್ಟು ಹೋಗುವಂತೆ ನಮಗೆ ಸೂಚಿಸಿದ್ದರು. ನಾವು ನಮ್ಮ ಮನೆಯ ಹತ್ತಿರ ನಿವೇಶನ ಖರೀದಿಸಲಿದ್ದೇವೆ ಎಂದು ಅವರಿಗೆ ತಿಳಿದಿತ್ತು. ಅವರು ಅದನ್ನು ಇಷ್ಟಪಡಲಿಲ್ಲ. ನಾವು ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರಿಂದ, ಮನೆಯ ಹತ್ತಿರದಲ್ಲಿ ಒಂದು ನಿವೇಶನ ಖರೀದಿಸಬೇಕೆಂದಿದ್ದೆವು. ಆದರೆ ಅವರ ಬೆದರಿಕೆಯ ನಂತರ, ನಾವು ಭೂ ಒಪ್ಪಂದವನ್ನು ರದ್ದುಗೊಳಿಸಿದೆವು. ಪ್ಲಾಟ್ ಅನ್ನು ಖರೀದಿಸಲಿಲ್ಲ. ಆದರೆ ಸರ್ಪಂಚ್ ಅವರು ಬಂದು -ಆ ಹುಡುಗರು ಕೇವಲ ಬಿಸಿ ರಕ್ತದವರು. ಚಿಂತೆ ಮಾಡಬೇಡಿ- ಎಂದು ಹೇಳಿದ್ದರಿಂದ ನಾವು ಮನೆ ಖಾಲಿ ಮಾಡಲಿಲ್ಲ” ಎಂದು ಶಾರುಖ್ ಹೇಳಿಕೆ ನೀಡಿದ್ದಾರೆ.

ಲೋಹರ್‌ ಕುಟುಂಬದ ದೂರಿನ ಅನ್ವಯ ಖುದೀಲ್‌‌ ಪೊಲೀಸರು 9 ಮಂದಿಯ ಮೇಲೆ ಎಫ್‌ಐಆರ್‌ ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್‌ 323, 506 , 29, 427, 147, 148 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸಬ್ ಇನ್ಸ್‌ಪೆಕ್ಟರ್ ವಿಶ್ವಜೀತ್ ತೋಮರ್ ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಪ್ರತಿಕ್ರಿಯಿಸಿದ್ದು, “ಲೋಹರ್ ಕುಟುಂಬಕ್ಕೆ ಟ್ರಾಲಿ ನಿರ್ಮಿಸಲು ಇತರ ಗುಂಪಿನಿಂದ ಸ್ವಲ್ಪ ಹಣವನ್ನು ನೀಡಲಾಗಿತ್ತು. ಆದರೆ ಅವರು ಟ್ರಾಲಿಯನ್ನು ತಯಾರಿಸಲಿಲ್ಲ ಅಥವಾ ಹಣವನ್ನು ಹಿಂದಿರುಗಿಸಲಿಲ್ಲ, ಅದು ಘಟನೆಯನ್ನು ಪ್ರಚೋದಿಸಿದಂತೆ ತೋರುತ್ತದೆ. ಎರಡು ಗುಂಪುಗಳು ಜಗಳವಾಡಿಕೊಂಡಿವೆ. ಹಳ್ಳಿಯ ಬಳಿ ವಾಸಿಸುತ್ತಿರುವ ವಿಕಾಸ್ ಪಟೇಲ್ ದೂರಿನ ಆಧಾರದ ಮೇಲೆ ಪ್ರತಿದೂರು ದಾಖಲಿಸಲಾಗಿದೆ” ಎಂದಿದ್ದಾರೆ.

“ಈ ಹಲ್ಲೆಕೋರರು ಆರ್‌ಎಸ್‌ಎಸ್‌ಗೆ ಸೇರಿದವರು ಮತ್ತು ಒಂದು ತಿಂಗಳ ಹಿಂದೆ ಗ್ರಾಮವನ್ನು ತೊರೆಯುವಂತೆ ಬೆದರಿಕೆ ಹಾಕಿದ್ದಾರೆ” ಎಂದು ಕುಟುಂಬದ ಆರೋಪದ ಬಗ್ಗೆ ಕೇಳಿದಾಗ ಇನ್‌ಸ್ಪೆಕ್ಟರ್‌ ತೋಮರ, “ಅಂತಹ ಯಾವುದೇ ಮಾಹಿತಿ ನಮಗೆ ದೊರೆತ್ತಿಲ್ಲ. ಎಫ್‌ಐಆರ್ ನೋಂದಾಯಿಸುವಾಗ ಈ ಮಾಹಿತಿಯನ್ನು ನಮಗೆ ನೀಡಲಾಗಿಲ್ಲ. ನಮಗೆ ಅದರ ಅರಿವಿಲ್ಲ” ಎಂದಿದ್ದಾರೆ.

ಇದನ್ನೂ ಓದಿರಿ: ಮುಸ್ಲಿಂ ಮತಗಳು ಬೇಕಾಗಿಲ್ಲ; ಅದಕ್ಕಾಗಿ ಅವರ ಬಳಿ ಹೋಗುವುದಿಲ್ಲ: ಅಸ್ಸಾಂ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮುಸ್ಲಿಂ ಕುಟುಂಬದ ಮೇಲೆ ಹಲ್ಲೆ ಮಾಡಿ, ಅವರನ್ನು ಊರು ಬಿಡುವಂತೆ ಬೆದರಿಕೆ ಹಾಕಿರುವ ಈ ದುರ್ಘಟನೆ ಖಂಡನಾರ್ಹ.

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....