Homeಮುಖಪುಟ‘ನೂರು ಜನರ ಗುಂಪು ಹಲ್ಲೆ ಮಾಡಿತು; ಜೈ ಶ್ರೀರಾಮ್‌ ಎಂದಿತು, ಊರು ಬಿಡುವಂತೆ ಸೂಚಿಸಿತು’

‘ನೂರು ಜನರ ಗುಂಪು ಹಲ್ಲೆ ಮಾಡಿತು; ಜೈ ಶ್ರೀರಾಮ್‌ ಎಂದಿತು, ಊರು ಬಿಡುವಂತೆ ಸೂಚಿಸಿತು’

- Advertisement -
- Advertisement -

“ನೂರು ಜನರ ಗುಂಪು ಹಲ್ಲೆ ಮಾಡಿತು, ಜೈ ಶ್ರೀರಾಮ್‌ ಎಂದಿತು, ಊರು ಬಿಡುವಂತೆ ಎಚ್ಚರಿಸಿತು” – ಹೀಗೆ ಮಧ್ಯಪ್ರದೇಶದ ಮುಸ್ಲಿಂ ಕುಟುಂಬವೊಂದು ಆರೋಪಿಸಿದೆ.

ಮಧ್ಯಪ್ರದೇಶದ ಇಂದೋರ್‌ ಸಮೀಪದ ಕಂಪೆಲ್‌ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ವಾಸವಿರುವ ಏಳು ಜನರಿರುವ ಮುಸ್ಲಿಂ ಕುಟುಂಬದ ಮೇಲೆ ಶನಿವಾರ ರಾತ್ರಿ 8.30ರ ವೇಳೆಗೆ ಸುಮಾರು ನೂರು ಜನರಿದ್ದ ಕೇಸರಿಪಡೆ ಹಲ್ಲೆ ನಡೆಸಿದೆ. ಅಲ್ಲದೆ ಮನೆ ಖಾಲಿ ಮಾಡಿ, ಊರು ಬಿಡುವಂತೆ ಹಲ್ಲೆಕೋರ ಗುಂಪು ಮುಸ್ಲಿಂ ಕುಟುಂಬಕ್ಕೆ ಧಮ್ಕಿ ಹಾಕಿದೆ.

ಒಂದು ತಿಂಗಳ ಹಿಂದೆಯೇ ಊರು ಬಿಡುವಂತೆ ಈ ಹಲ್ಲೆಕೋರ ಗುಂಪು ಎಚ್ಚರಿಸಿತ್ತು. ಶನಿವಾರದೊಳಗೆ ಮನೆ ಖಾಲಿ ಮಾಡುವಂತೆ ಎಚ್ಚರಿಸಿತ್ತು. ಕುಟುಂಬ ಊರು ಬಿಟ್ಟು ಹೋಗಲಿಲ್ಲವೆಂದು ಶನಿವಾರ ದಾಳಿ ಮಾಡಿರುವ ಹಲ್ಲೆಕೋರರು, `ಜೈಶ್ರೀರಾಮ್‌’ ಎಂದು ಘೋಷಣೆ ಕೂಗಿದ್ದಾರೆ ಎಂದು ದಾಳಿಗೊಳಗಾದ ಕುಟುಂಬ ಆರೋಪಿಸಿದೆ. ಆದರೆ, “ಎರಡು ಗುಂಪುಗಳ ನಡುವೆ ಹಣದ ವಿಚಾರವಾಗಿ ಜಗಳವಾಗಿದೆ. ಎರಡು ಗುಂಪುಗಳಿಂದಲೂ ದೂರುಗಳು ಬಂದಿವೆ” ಎಂದು ಪೊಲೀಸರು ಹೇಳಿದ್ದಾರೆ.

ಈ ಕುಟುಂಬವು ಎರಡು ವರ್ಷಗಳ ಹಿಂದೆ ನೀಮಾರ್‌ನಿಂದ ಕಂಪೇಲ್‌ಗೆ ಬಂದು ನೆಲೆಸಿತ್ತು. ಜೀವನೋಪಾಯಕ್ಕಾಗಿ ಟ್ರಾಲಿಗಳು ಹಾಗೂ ಇತರ ಕೃಷಿ ಉಪಕರಣಗಳನ್ನು ತಯಾರಿಸಿ ಮಾರುತ್ತಿತ್ತು ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಇದನ್ನೂ ಓದಿರಿ: ಮೋರಲ್‌ ಪೊಲೀಸಿಂಗ್‌‌: ಕರಾವಳಿ ಕರ್ನಾಟಕದಲ್ಲಿ ಆಗುತ್ತಿರುವ ನಷ್ಟವೆಷ್ಟು?

ಹಲ್ಲೆಗೊಳಗಾದ 46 ವರ್ಷದ ಫಾರುಕ್‌ ಲೋಹರ್‌ ಅವರ ಪುತ್ರ ಶಾರುಖ್‌ ಲೋಹರ್‌‌ ಅವರು ‘ದಿ ಇಂಡಿಯನ್‌ ಎಕ್ಸ್‌ಪ್ರೆಸ್‌ಗೆ ಪ್ರತಿಕ್ರಿಯಿಸಿದ್ದು, “ಅವರು ಒಳಗೆ ನುಗ್ಗಿ ರಾಡ್‌ಗಳನ್ನು ಬಳಸಿ ನಮ್ಮನ್ನು ಹೊಡೆಯಲು ಪ್ರಾರಂಭಿಸಿದರು. ಅವರು ನನ್ನ ತಂದೆಯನ್ನು ಪದೇ ಪದೇ ಹೊಡೆಯಲು ಪ್ರಾರಂಭಿಸಿದರು. ನನ್ನ ಚಿಕ್ಕಪ್ಪ ಮಧ್ಯಪ್ರವೇಶಿಸಿದಾಗ ಅವರನ್ನೂ ಹೊಡೆದರು. ‘ನಾವು ನಿಮಗೆ ಖಾಲಿ ಮಾಡುವಂತೆ ಹೇಳಿದ್ದೆವು, ಇಲ್ಲದಿದ್ದರೆ ಭೀಕರ ಪರಿಣಾಮಗಳನ್ನು ಎದುರಿಸಬೇಕೆಂದು ಎಚ್ಚರಿಸಿದ್ದೆವು’ ಎಂಬುದಾಗಿ ಹೇಳಿದರು” ಎಂದು ಶಾರುಖ್‌ ಆರೋಪಿಸಿದ್ದಾರೆ.

ಕುಟುಂಬವನ್ನು ನೋಡಲು ಬಂದಿದ್ದ ಶಾರುಖ್‌ ಅವರ ಸಹೋದರಿ ಫೌಸಿಯಾ ಕೂಡ ಘಟನೆ ವೇಳೆ ಸ್ಥಳದಲ್ಲಿದ್ದು, ಅವರು ಕೂಡ ಪತ್ರಿಕೆಯೊಂದಿಗೆ ಮಾತನಾಡಿದ್ದಾರೆ. “ಕಾರಿನಲ್ಲಿ ಬಂದ ಈ ಜನರ ಕೈಯಲ್ಲಿ ರಾಡುಗಳು ಇದ್ದವು. ಈ ಘಟನೆಯ ಚಿತ್ರೀಕರಣ ಮಾಡಲು ನಾನು ಮೊಬೈಲ್‌ ತೆಗೆದುಕೊಂಡಾಗ ನನ್ನ ಕೈ ಹಿಡಿದು ಎಳೆದು ಮೊಬೈಲ್‌ ಕಿತ್ತುಕೊಂಡು ಪುಡಿಪುಡಿ ಮಾಡಿದರು” ಎಂದು ಆಪಾದಿಸಿದ್ದಾರೆ.

ಸುಮಾರು 25 ನಿಮಿಷಗಳ ಕಾಲ ಘಟನೆ ನಡೆದಿದೆ. ನಂತರ ಕುಟುಂಬವು ಖುಡೆಲ್ ಪೊಲೀಸ್ ಠಾಣೆಗೆ ಧಾವಿಸಿದೆ, ಅಲ್ಲಿಂದ ಅವರನ್ನು ವೈದ್ಯಕೀಯ ಪರೀಕ್ಷೆಗಾಗಿ ಇಂದೋರ್‌ನ ಮಹಾರಾಜ ಯಶವಂತರಾವ್ ಆಸ್ಪತ್ರೆಗೆ ಕಳುಹಿಸಲಾಯಿತು. ನಂತರ ಅವರ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.

“ಕಳೆದ ತಿಂಗಳು ಅದೇ ಯುವಕರು ಬಂದು ಊರು ಬಿಟ್ಟು ಹೋಗುವಂತೆ ನಮಗೆ ಸೂಚಿಸಿದ್ದರು. ನಾವು ನಮ್ಮ ಮನೆಯ ಹತ್ತಿರ ನಿವೇಶನ ಖರೀದಿಸಲಿದ್ದೇವೆ ಎಂದು ಅವರಿಗೆ ತಿಳಿದಿತ್ತು. ಅವರು ಅದನ್ನು ಇಷ್ಟಪಡಲಿಲ್ಲ. ನಾವು ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರಿಂದ, ಮನೆಯ ಹತ್ತಿರದಲ್ಲಿ ಒಂದು ನಿವೇಶನ ಖರೀದಿಸಬೇಕೆಂದಿದ್ದೆವು. ಆದರೆ ಅವರ ಬೆದರಿಕೆಯ ನಂತರ, ನಾವು ಭೂ ಒಪ್ಪಂದವನ್ನು ರದ್ದುಗೊಳಿಸಿದೆವು. ಪ್ಲಾಟ್ ಅನ್ನು ಖರೀದಿಸಲಿಲ್ಲ. ಆದರೆ ಸರ್ಪಂಚ್ ಅವರು ಬಂದು -ಆ ಹುಡುಗರು ಕೇವಲ ಬಿಸಿ ರಕ್ತದವರು. ಚಿಂತೆ ಮಾಡಬೇಡಿ- ಎಂದು ಹೇಳಿದ್ದರಿಂದ ನಾವು ಮನೆ ಖಾಲಿ ಮಾಡಲಿಲ್ಲ” ಎಂದು ಶಾರುಖ್ ಹೇಳಿಕೆ ನೀಡಿದ್ದಾರೆ.

ಲೋಹರ್‌ ಕುಟುಂಬದ ದೂರಿನ ಅನ್ವಯ ಖುದೀಲ್‌‌ ಪೊಲೀಸರು 9 ಮಂದಿಯ ಮೇಲೆ ಎಫ್‌ಐಆರ್‌ ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್‌ 323, 506 , 29, 427, 147, 148 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸಬ್ ಇನ್ಸ್‌ಪೆಕ್ಟರ್ ವಿಶ್ವಜೀತ್ ತೋಮರ್ ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಪ್ರತಿಕ್ರಿಯಿಸಿದ್ದು, “ಲೋಹರ್ ಕುಟುಂಬಕ್ಕೆ ಟ್ರಾಲಿ ನಿರ್ಮಿಸಲು ಇತರ ಗುಂಪಿನಿಂದ ಸ್ವಲ್ಪ ಹಣವನ್ನು ನೀಡಲಾಗಿತ್ತು. ಆದರೆ ಅವರು ಟ್ರಾಲಿಯನ್ನು ತಯಾರಿಸಲಿಲ್ಲ ಅಥವಾ ಹಣವನ್ನು ಹಿಂದಿರುಗಿಸಲಿಲ್ಲ, ಅದು ಘಟನೆಯನ್ನು ಪ್ರಚೋದಿಸಿದಂತೆ ತೋರುತ್ತದೆ. ಎರಡು ಗುಂಪುಗಳು ಜಗಳವಾಡಿಕೊಂಡಿವೆ. ಹಳ್ಳಿಯ ಬಳಿ ವಾಸಿಸುತ್ತಿರುವ ವಿಕಾಸ್ ಪಟೇಲ್ ದೂರಿನ ಆಧಾರದ ಮೇಲೆ ಪ್ರತಿದೂರು ದಾಖಲಿಸಲಾಗಿದೆ” ಎಂದಿದ್ದಾರೆ.

“ಈ ಹಲ್ಲೆಕೋರರು ಆರ್‌ಎಸ್‌ಎಸ್‌ಗೆ ಸೇರಿದವರು ಮತ್ತು ಒಂದು ತಿಂಗಳ ಹಿಂದೆ ಗ್ರಾಮವನ್ನು ತೊರೆಯುವಂತೆ ಬೆದರಿಕೆ ಹಾಕಿದ್ದಾರೆ” ಎಂದು ಕುಟುಂಬದ ಆರೋಪದ ಬಗ್ಗೆ ಕೇಳಿದಾಗ ಇನ್‌ಸ್ಪೆಕ್ಟರ್‌ ತೋಮರ, “ಅಂತಹ ಯಾವುದೇ ಮಾಹಿತಿ ನಮಗೆ ದೊರೆತ್ತಿಲ್ಲ. ಎಫ್‌ಐಆರ್ ನೋಂದಾಯಿಸುವಾಗ ಈ ಮಾಹಿತಿಯನ್ನು ನಮಗೆ ನೀಡಲಾಗಿಲ್ಲ. ನಮಗೆ ಅದರ ಅರಿವಿಲ್ಲ” ಎಂದಿದ್ದಾರೆ.

ಇದನ್ನೂ ಓದಿರಿ: ಮುಸ್ಲಿಂ ಮತಗಳು ಬೇಕಾಗಿಲ್ಲ; ಅದಕ್ಕಾಗಿ ಅವರ ಬಳಿ ಹೋಗುವುದಿಲ್ಲ: ಅಸ್ಸಾಂ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮುಸ್ಲಿಂ ಕುಟುಂಬದ ಮೇಲೆ ಹಲ್ಲೆ ಮಾಡಿ, ಅವರನ್ನು ಊರು ಬಿಡುವಂತೆ ಬೆದರಿಕೆ ಹಾಕಿರುವ ಈ ದುರ್ಘಟನೆ ಖಂಡನಾರ್ಹ.

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...