Homeಮುಖಪುಟ‘ನೂರು ಜನರ ಗುಂಪು ಹಲ್ಲೆ ಮಾಡಿತು; ಜೈ ಶ್ರೀರಾಮ್‌ ಎಂದಿತು, ಊರು ಬಿಡುವಂತೆ ಸೂಚಿಸಿತು’

‘ನೂರು ಜನರ ಗುಂಪು ಹಲ್ಲೆ ಮಾಡಿತು; ಜೈ ಶ್ರೀರಾಮ್‌ ಎಂದಿತು, ಊರು ಬಿಡುವಂತೆ ಸೂಚಿಸಿತು’

- Advertisement -
- Advertisement -

“ನೂರು ಜನರ ಗುಂಪು ಹಲ್ಲೆ ಮಾಡಿತು, ಜೈ ಶ್ರೀರಾಮ್‌ ಎಂದಿತು, ಊರು ಬಿಡುವಂತೆ ಎಚ್ಚರಿಸಿತು” – ಹೀಗೆ ಮಧ್ಯಪ್ರದೇಶದ ಮುಸ್ಲಿಂ ಕುಟುಂಬವೊಂದು ಆರೋಪಿಸಿದೆ.

ಮಧ್ಯಪ್ರದೇಶದ ಇಂದೋರ್‌ ಸಮೀಪದ ಕಂಪೆಲ್‌ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ವಾಸವಿರುವ ಏಳು ಜನರಿರುವ ಮುಸ್ಲಿಂ ಕುಟುಂಬದ ಮೇಲೆ ಶನಿವಾರ ರಾತ್ರಿ 8.30ರ ವೇಳೆಗೆ ಸುಮಾರು ನೂರು ಜನರಿದ್ದ ಕೇಸರಿಪಡೆ ಹಲ್ಲೆ ನಡೆಸಿದೆ. ಅಲ್ಲದೆ ಮನೆ ಖಾಲಿ ಮಾಡಿ, ಊರು ಬಿಡುವಂತೆ ಹಲ್ಲೆಕೋರ ಗುಂಪು ಮುಸ್ಲಿಂ ಕುಟುಂಬಕ್ಕೆ ಧಮ್ಕಿ ಹಾಕಿದೆ.

ಒಂದು ತಿಂಗಳ ಹಿಂದೆಯೇ ಊರು ಬಿಡುವಂತೆ ಈ ಹಲ್ಲೆಕೋರ ಗುಂಪು ಎಚ್ಚರಿಸಿತ್ತು. ಶನಿವಾರದೊಳಗೆ ಮನೆ ಖಾಲಿ ಮಾಡುವಂತೆ ಎಚ್ಚರಿಸಿತ್ತು. ಕುಟುಂಬ ಊರು ಬಿಟ್ಟು ಹೋಗಲಿಲ್ಲವೆಂದು ಶನಿವಾರ ದಾಳಿ ಮಾಡಿರುವ ಹಲ್ಲೆಕೋರರು, `ಜೈಶ್ರೀರಾಮ್‌’ ಎಂದು ಘೋಷಣೆ ಕೂಗಿದ್ದಾರೆ ಎಂದು ದಾಳಿಗೊಳಗಾದ ಕುಟುಂಬ ಆರೋಪಿಸಿದೆ. ಆದರೆ, “ಎರಡು ಗುಂಪುಗಳ ನಡುವೆ ಹಣದ ವಿಚಾರವಾಗಿ ಜಗಳವಾಗಿದೆ. ಎರಡು ಗುಂಪುಗಳಿಂದಲೂ ದೂರುಗಳು ಬಂದಿವೆ” ಎಂದು ಪೊಲೀಸರು ಹೇಳಿದ್ದಾರೆ.

ಈ ಕುಟುಂಬವು ಎರಡು ವರ್ಷಗಳ ಹಿಂದೆ ನೀಮಾರ್‌ನಿಂದ ಕಂಪೇಲ್‌ಗೆ ಬಂದು ನೆಲೆಸಿತ್ತು. ಜೀವನೋಪಾಯಕ್ಕಾಗಿ ಟ್ರಾಲಿಗಳು ಹಾಗೂ ಇತರ ಕೃಷಿ ಉಪಕರಣಗಳನ್ನು ತಯಾರಿಸಿ ಮಾರುತ್ತಿತ್ತು ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಇದನ್ನೂ ಓದಿರಿ: ಮೋರಲ್‌ ಪೊಲೀಸಿಂಗ್‌‌: ಕರಾವಳಿ ಕರ್ನಾಟಕದಲ್ಲಿ ಆಗುತ್ತಿರುವ ನಷ್ಟವೆಷ್ಟು?

ಹಲ್ಲೆಗೊಳಗಾದ 46 ವರ್ಷದ ಫಾರುಕ್‌ ಲೋಹರ್‌ ಅವರ ಪುತ್ರ ಶಾರುಖ್‌ ಲೋಹರ್‌‌ ಅವರು ‘ದಿ ಇಂಡಿಯನ್‌ ಎಕ್ಸ್‌ಪ್ರೆಸ್‌ಗೆ ಪ್ರತಿಕ್ರಿಯಿಸಿದ್ದು, “ಅವರು ಒಳಗೆ ನುಗ್ಗಿ ರಾಡ್‌ಗಳನ್ನು ಬಳಸಿ ನಮ್ಮನ್ನು ಹೊಡೆಯಲು ಪ್ರಾರಂಭಿಸಿದರು. ಅವರು ನನ್ನ ತಂದೆಯನ್ನು ಪದೇ ಪದೇ ಹೊಡೆಯಲು ಪ್ರಾರಂಭಿಸಿದರು. ನನ್ನ ಚಿಕ್ಕಪ್ಪ ಮಧ್ಯಪ್ರವೇಶಿಸಿದಾಗ ಅವರನ್ನೂ ಹೊಡೆದರು. ‘ನಾವು ನಿಮಗೆ ಖಾಲಿ ಮಾಡುವಂತೆ ಹೇಳಿದ್ದೆವು, ಇಲ್ಲದಿದ್ದರೆ ಭೀಕರ ಪರಿಣಾಮಗಳನ್ನು ಎದುರಿಸಬೇಕೆಂದು ಎಚ್ಚರಿಸಿದ್ದೆವು’ ಎಂಬುದಾಗಿ ಹೇಳಿದರು” ಎಂದು ಶಾರುಖ್‌ ಆರೋಪಿಸಿದ್ದಾರೆ.

ಕುಟುಂಬವನ್ನು ನೋಡಲು ಬಂದಿದ್ದ ಶಾರುಖ್‌ ಅವರ ಸಹೋದರಿ ಫೌಸಿಯಾ ಕೂಡ ಘಟನೆ ವೇಳೆ ಸ್ಥಳದಲ್ಲಿದ್ದು, ಅವರು ಕೂಡ ಪತ್ರಿಕೆಯೊಂದಿಗೆ ಮಾತನಾಡಿದ್ದಾರೆ. “ಕಾರಿನಲ್ಲಿ ಬಂದ ಈ ಜನರ ಕೈಯಲ್ಲಿ ರಾಡುಗಳು ಇದ್ದವು. ಈ ಘಟನೆಯ ಚಿತ್ರೀಕರಣ ಮಾಡಲು ನಾನು ಮೊಬೈಲ್‌ ತೆಗೆದುಕೊಂಡಾಗ ನನ್ನ ಕೈ ಹಿಡಿದು ಎಳೆದು ಮೊಬೈಲ್‌ ಕಿತ್ತುಕೊಂಡು ಪುಡಿಪುಡಿ ಮಾಡಿದರು” ಎಂದು ಆಪಾದಿಸಿದ್ದಾರೆ.

ಸುಮಾರು 25 ನಿಮಿಷಗಳ ಕಾಲ ಘಟನೆ ನಡೆದಿದೆ. ನಂತರ ಕುಟುಂಬವು ಖುಡೆಲ್ ಪೊಲೀಸ್ ಠಾಣೆಗೆ ಧಾವಿಸಿದೆ, ಅಲ್ಲಿಂದ ಅವರನ್ನು ವೈದ್ಯಕೀಯ ಪರೀಕ್ಷೆಗಾಗಿ ಇಂದೋರ್‌ನ ಮಹಾರಾಜ ಯಶವಂತರಾವ್ ಆಸ್ಪತ್ರೆಗೆ ಕಳುಹಿಸಲಾಯಿತು. ನಂತರ ಅವರ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.

“ಕಳೆದ ತಿಂಗಳು ಅದೇ ಯುವಕರು ಬಂದು ಊರು ಬಿಟ್ಟು ಹೋಗುವಂತೆ ನಮಗೆ ಸೂಚಿಸಿದ್ದರು. ನಾವು ನಮ್ಮ ಮನೆಯ ಹತ್ತಿರ ನಿವೇಶನ ಖರೀದಿಸಲಿದ್ದೇವೆ ಎಂದು ಅವರಿಗೆ ತಿಳಿದಿತ್ತು. ಅವರು ಅದನ್ನು ಇಷ್ಟಪಡಲಿಲ್ಲ. ನಾವು ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರಿಂದ, ಮನೆಯ ಹತ್ತಿರದಲ್ಲಿ ಒಂದು ನಿವೇಶನ ಖರೀದಿಸಬೇಕೆಂದಿದ್ದೆವು. ಆದರೆ ಅವರ ಬೆದರಿಕೆಯ ನಂತರ, ನಾವು ಭೂ ಒಪ್ಪಂದವನ್ನು ರದ್ದುಗೊಳಿಸಿದೆವು. ಪ್ಲಾಟ್ ಅನ್ನು ಖರೀದಿಸಲಿಲ್ಲ. ಆದರೆ ಸರ್ಪಂಚ್ ಅವರು ಬಂದು -ಆ ಹುಡುಗರು ಕೇವಲ ಬಿಸಿ ರಕ್ತದವರು. ಚಿಂತೆ ಮಾಡಬೇಡಿ- ಎಂದು ಹೇಳಿದ್ದರಿಂದ ನಾವು ಮನೆ ಖಾಲಿ ಮಾಡಲಿಲ್ಲ” ಎಂದು ಶಾರುಖ್ ಹೇಳಿಕೆ ನೀಡಿದ್ದಾರೆ.

ಲೋಹರ್‌ ಕುಟುಂಬದ ದೂರಿನ ಅನ್ವಯ ಖುದೀಲ್‌‌ ಪೊಲೀಸರು 9 ಮಂದಿಯ ಮೇಲೆ ಎಫ್‌ಐಆರ್‌ ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್‌ 323, 506 , 29, 427, 147, 148 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸಬ್ ಇನ್ಸ್‌ಪೆಕ್ಟರ್ ವಿಶ್ವಜೀತ್ ತೋಮರ್ ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಪ್ರತಿಕ್ರಿಯಿಸಿದ್ದು, “ಲೋಹರ್ ಕುಟುಂಬಕ್ಕೆ ಟ್ರಾಲಿ ನಿರ್ಮಿಸಲು ಇತರ ಗುಂಪಿನಿಂದ ಸ್ವಲ್ಪ ಹಣವನ್ನು ನೀಡಲಾಗಿತ್ತು. ಆದರೆ ಅವರು ಟ್ರಾಲಿಯನ್ನು ತಯಾರಿಸಲಿಲ್ಲ ಅಥವಾ ಹಣವನ್ನು ಹಿಂದಿರುಗಿಸಲಿಲ್ಲ, ಅದು ಘಟನೆಯನ್ನು ಪ್ರಚೋದಿಸಿದಂತೆ ತೋರುತ್ತದೆ. ಎರಡು ಗುಂಪುಗಳು ಜಗಳವಾಡಿಕೊಂಡಿವೆ. ಹಳ್ಳಿಯ ಬಳಿ ವಾಸಿಸುತ್ತಿರುವ ವಿಕಾಸ್ ಪಟೇಲ್ ದೂರಿನ ಆಧಾರದ ಮೇಲೆ ಪ್ರತಿದೂರು ದಾಖಲಿಸಲಾಗಿದೆ” ಎಂದಿದ್ದಾರೆ.

“ಈ ಹಲ್ಲೆಕೋರರು ಆರ್‌ಎಸ್‌ಎಸ್‌ಗೆ ಸೇರಿದವರು ಮತ್ತು ಒಂದು ತಿಂಗಳ ಹಿಂದೆ ಗ್ರಾಮವನ್ನು ತೊರೆಯುವಂತೆ ಬೆದರಿಕೆ ಹಾಕಿದ್ದಾರೆ” ಎಂದು ಕುಟುಂಬದ ಆರೋಪದ ಬಗ್ಗೆ ಕೇಳಿದಾಗ ಇನ್‌ಸ್ಪೆಕ್ಟರ್‌ ತೋಮರ, “ಅಂತಹ ಯಾವುದೇ ಮಾಹಿತಿ ನಮಗೆ ದೊರೆತ್ತಿಲ್ಲ. ಎಫ್‌ಐಆರ್ ನೋಂದಾಯಿಸುವಾಗ ಈ ಮಾಹಿತಿಯನ್ನು ನಮಗೆ ನೀಡಲಾಗಿಲ್ಲ. ನಮಗೆ ಅದರ ಅರಿವಿಲ್ಲ” ಎಂದಿದ್ದಾರೆ.

ಇದನ್ನೂ ಓದಿರಿ: ಮುಸ್ಲಿಂ ಮತಗಳು ಬೇಕಾಗಿಲ್ಲ; ಅದಕ್ಕಾಗಿ ಅವರ ಬಳಿ ಹೋಗುವುದಿಲ್ಲ: ಅಸ್ಸಾಂ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮುಸ್ಲಿಂ ಕುಟುಂಬದ ಮೇಲೆ ಹಲ್ಲೆ ಮಾಡಿ, ಅವರನ್ನು ಊರು ಬಿಡುವಂತೆ ಬೆದರಿಕೆ ಹಾಕಿರುವ ಈ ದುರ್ಘಟನೆ ಖಂಡನಾರ್ಹ.

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...